ದಕ್ಷಿಣ ಕನ್ನಡ

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ

ಮಂಗಳೂರು: ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಇಂದು ಮಧ್ಯಾಹ್ನ ಕೈದಿಗಳ ಮಧ್ಯೆ ಮತ್ತೆ ಹೊಡೆದಾಟ ನಡೆದಿರುವ ಕುರಿತು ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಜೈಲಿಗೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ Read More »

ಗೇರುಕಟ್ಟೆಯ  ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ  ಶತ ದಿನದ  ಕಾರ್ಯಕ್ರಮ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ ಕೇಂದ್ರ ಸಮಿತಿ ತುಮಕೂರು ನೇತ್ರಾವತಿ ವಲಯ ಮಂಗಳೂರು ವತಿಯಿಂದ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನದಲ್ಲಿ ಜರಗುತ್ತಿರುವ ಉಚಿತ ಯೋಗ ಶಿಕ್ಷಣ ತರಬೇತಿಯ ನೂರನೇ ದಿನದ ಕಾರ್ಯಕ್ರಮವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಜರಗಿತು. ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್  ಕಳಿಯ ಮಾತನಾಡಿ, ಶಾಖೆಯು ನಿರಂತರವಾಗಿ ಮುಂದುವರಿಯಬೇಕು.  ಯೋಗ ಬಂಧುಗಳು ಪ್ರತಿದಿನವು ಹಾಜರಾಗಿ ಮುಂದಕ್ಕೆ ಜರಗುವ ಪ್ರಶಿಕ್ಷಣ ತರಬೇತಿಯಲ್ಲಿ ಭಾಗವಹಿಸಿ  ಬೇರೆ

ಗೇರುಕಟ್ಟೆಯ  ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ  ಶತ ದಿನದ  ಕಾರ್ಯಕ್ರಮ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದಿಂದ “ಹಿಂದೂ ರುದ್ರಭೂಮಿ ಅಭಿವೃದ್ಧಿ” ಅನುದಾನದ ಮಂಜೂರಾತಿ ಪತ್ರ ವಿತರಣೆ

ಪೆರ್ನೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದ ಪೆರ್ನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಾಜೆ “ಹಿಂದೂ ರುದ್ರಭೂಮಿ ಅಭಿವೃದ್ಧಿ”ಗೆ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ.2,50,000/- ಅನುದಾನದ ಮಂಜೂರಾತಿ ಪತ್ರವನ್ನು ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ರವರು ಸಮಿತಿ ಸದಸ್ಯರಿಗೆ ವಿತರಿಸಿದ ಬಳಿಕ ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಜನಜಾಗೃತಿ ವೇದಿಕೆಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ವಿಟ್ಲ , ಪೆರ್ನೆ ವಲಯದಿಂದ “ಹಿಂದೂ ರುದ್ರಭೂಮಿ ಅಭಿವೃದ್ಧಿ” ಅನುದಾನದ ಮಂಜೂರಾತಿ ಪತ್ರ ವಿತರಣೆ Read More »

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು

ವಿದೇಶದಲ್ಲಿ ನೌಕರಿ ಕೊಡಿಸುವ ಆಮಿಷದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಕೋಟಿಗಟ್ಟಲೆ ರೂಪಾಯಿ ಪಂಗನಾಮ ಹಾಕಿರುವ ಕಂಪನಿಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ ತನಿಖೆ ಮಾಡದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ವಂಚನೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ನಕಲಿ ಸಂಸ್ಥೆಯ ಬಗ್ಗೆ ಆಫೀಸ್ ಪ್ರೊಟೆಕ್ಟರ್

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು Read More »

ಕರಾವಳಿಯಲ್ಲಿ ಬೇಸಿಗೆಯಲ್ಲೇ ಮಳೆಗಾಲದ ಪರಿಸ್ಥಿತಿ: ಎಲ್ಲೆಡೆ ಧಾರಾಕಾರ ಮಳೆ

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ನಿನ್ನೆಯಿಂದೀಚೆಗೆ ಕರಾವಳಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಭಾರಿ ಮಳೆಯಿಂದಾಗಿ ಅಲ್ಲಲ್ಲಿ ಅನಾಹುತಗಳು ಸಂಭವಿಸಿವೆ. ಹಲವೆಡೆ ನೀರು ಜಮೆಯಾಗಿ ಜನರು ಸಮಕಷ್ಟಕ್ಕೀಡಾದರು. ಮೇ 20ರಿಂದ 22ರ ತನಕ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನಲೆ ಭಾರತ

ಕರಾವಳಿಯಲ್ಲಿ ಬೇಸಿಗೆಯಲ್ಲೇ ಮಳೆಗಾಲದ ಪರಿಸ್ಥಿತಿ: ಎಲ್ಲೆಡೆ ಧಾರಾಕಾರ ಮಳೆ Read More »

ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ : ಓರ್ವನಿಗೆ ಗಾಯ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡ ವಿಚಾರಣಾಧೀನ ಕೈದಿಗಳು ಮಂಗಳೂರು : ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಿನ್ನೆ ಕೊಲೆ ಆರೋಪಿ ಚೊಟ್ಟೆ ನೌಷದ್‌ ಮೇಲೆ ಹಲ್ಲೆಯಾದ ಬೆನ್ನಿಗೆ ಕೈದಿಗಳ ನಡುವೆ ಹೊಡೆದಾಟ ನಡೆದ ಘಟನೆ ಸಂಭವಿಸಿದೆ. ಸಂಜೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ವಾಗ್ವಾದ ನಡೆದಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಾರಾಮಾರಿಯಲ್ಲಿ ಓರ್ವ ಒಬ್ಬ ಕೈದಿಗೆ ಗಾಯವಾಗಿದೆ. ಜೈಲಿನ ಅದಿಕಾರಿಗಳು ಗಲಭೆ ಕುರಿತು ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.ಸಂಜೆ 6.40ರ ಸುಮಾರಿಗೆ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿ ಮಾರಾಮಾರಿ

ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ : ಓರ್ವನಿಗೆ ಗಾಯ Read More »

ಸುಹಾಸ್‌ ಶೆಟ್ಟಿ ಹತ್ಯೆ ಆರೋಪಿ ನೌಷದ್‌ ಮೇಲೆ ಜೈಲಿನಲ್ಲಿ ಹಲ್ಲೆ

ಪೊಲೀಸರ ಎದುರೇ ಕಲ್ಲು ಎಸೆದ ದಾಳಿ ಮಾಡಿದ ಕೈದಿಗಳು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ಎದುರೇ ಇತರ ಕೈದಿಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವನನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಸೆಂಟ್ರಲ್‌ ಜೈಲಿನ ಬಿ ಬ್ಯಾರಕ್‌ನ ಹಲವು ಸಹಕೈದಿಗಳು ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ.ಚೊಟ್ಟೆ ನೌಷಾದ್‌ನ

ಸುಹಾಸ್‌ ಶೆಟ್ಟಿ ಹತ್ಯೆ ಆರೋಪಿ ನೌಷದ್‌ ಮೇಲೆ ಜೈಲಿನಲ್ಲಿ ಹಲ್ಲೆ Read More »

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ

ಗುಂಡ್ಯ:  ಕೆಎಸ್‌ಆರ್‌ಟಿಸಿ ಬಸ್‍ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಿನ್ನೆ ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ. ಬಸ್ಸು ಚಾಲಕ  ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ತಾಕಿಬೆಟ್ಟು ನಿವಾಸಿ, ಪ್ರಣಯ್ ಮತ್ತು ಶನಕಪುರ ನಿವಾಸಿ ಮಂಜುನಾಥ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಕರೆದುಕೊಂಡು

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ Read More »

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ  ಶ್ರೀ ಮಹಾಭಾರತ ಸರಣಿ ಯಲ್ಲಿ 76ನೇ ಕಾರ್ಯಕ್ರಮವಾಗಿ ಕವಿ ಶ್ರೀ ಶ್ರೀಧರ ಡಿ. ಯಸ್  ರಚಿತ    ಯಕ್ಷಪ್ರಶ್ನೆ    ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.           ಭಾಗವತರಾಗಿ ಪದ್ಮನಾಭ ಕುಲಾಲ್,  ಸುರೇಶ್ ರಾವ್. ಬಿ,  ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪರೀಕ್ಷಿತ್. ಯಚ್, ಅರ್ಥಧಾರಿಗಳಾಗಿ    ಪಾತಾಳ ಅಂಬಾಪ್ರಸಾದ್ (ಧರ್ಮರಾಯ, ಕೃತ್ಯ )ದಿವಾಕರ ಆಚಾರ್ಯ ಗೇರುಕಟ್ಟೆ(ಶಕುನಿ, ಯಕ್ಷ), ಜಿನೇಂದ್ರ ಜೈನ್ ಬಳ್ಳಮಂಜ(ಮಂತ್ರವಾದಿ), ರವೀಂದ್ರ ದರ್ಬೆ

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ Read More »

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು

ಮಂಗಳೂರು : ರೈಲಿನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಹೃದಯಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‍ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ. ತಕ್ಷಣ  ಆರ್‍ಪಿಎಫ್‍ ಇನ್ಸ್‍ಪೆಕ್ಟರ್‍ ಮನೋಜ್‍ ಕುಮಾರ್‍ ಯಾದವ್‍ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್‍ ಕೊಡಿಸಿ ಸರ್ಕಾರಿ ವೆನ್ಲಾಕ್‍ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ  ಸ್ಪಂದಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು Read More »

error: Content is protected !!
Scroll to Top