ದಕ್ಷಿಣ ಕನ್ನಡ

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ

ಗಂಭೀರ ಗಾಯಗೊಂಡ ಪೈಂಟರ್‌ ಆಸ್ಪತ್ರೆಗೆ ದಾಖಲು ಬಂಟ್ವಾಳ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಕೃತ್ಯದಿಂದ ಉದ್ವಿಗ್ನಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಇನ್ನೊಂದು ಹತ್ಯಾ ಯತ್ನ ನಡೆದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರುಗಳಿಂದ ದಾಳಿ ಮಾಡಲಾಗಿದೆ. ಅಕ್ಕರಂಗಡಿ ನಿವಾಸಿ ಹಮೀದ್ (38) ಎಂಬವರಿಗೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಅಕ್ಕರಂಗಡಿಯ ಪೈಂಟಿಂಗ್ ಕೆಲಸ […]

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ Read More »

ಇಂದು (ಮೇ 17) : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ

ಕಡಬ:  ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಇಂದು (ಮೇ 17)  ಹೊಸಮಠ ಒಕ್ಕಲಿಗ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ. ಬೆಳಿಗ್ಗೆ 9.30 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಎಲ್ಲಾ ಸಮುದಾಯದ  ಪ್ರಸ್ತುತ ಸಾಲಿನ ಪ್ರೌಢ ಶಿಕ್ಷಣದಲ್ಲಿ 9 ನೇ ತರಗತಿ, 10 ನೇ ತರಗತಿ ಮತ್ತು 10 ನೇ ತರಗತಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ  ಹಾಗೂ ದ್ವಿತೀಯ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.  ಮುಂದಿನ ಶಿಕ್ಷಣ ಮತ್ತು ಉದ್ಯೋಗವಕಾಶಗಳು, ಉದ್ಯಮಶೀಲತೆ & ಕೌಶಲ್ಯಾಭಿವೃದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು (ಮೇ 17) : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ  ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ Read More »

ಪಾಣೆಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ

ಬಂಟ್ವಾಳ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸದಲ್ಲಿರುವ ಸಂದರ್ಭದಲ್ಲಿಯೇ ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ಚಾಕು ಇರಿತ ನಡೆದಿದೆ. ಪೈಂಟಿಂಗ್ ವೃತ್ತಿಯಲ್ಲಿದ್ದ  ಹಮೀದ್ ಯಾನೆ ಎಂಬಾತನಿಗೆ ಇರಿತವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ 9ರ ಸುಮಾರಿಗೆ ಬಿ.ಸಿ. ರೋಡ್ ಬಳಿಯ ಹಳೆಯ ಸೇತುವೆ ಬಳಿಯಲ್ಲಿ ಹಮೀದ್ ತನ್ನ ರಿಕ್ಷಾದಲ್ಲಿ ಕುಳಿತುಕೊಂಡಿದ್ದಾಗ ಅಲ್ಲಿಗೆ ಬಂದ ಕಿರಾತಕರು ಆತನ ಕೈಗೆ ಇರಿದಿದ್ದರು. ಮುಖ ಮುಚ್ಚಿಕೊಂಡಿದ್ದ ದಾಳಿಕೋರರ ಗುರುತು ಪತ್ತೆ ಸಾಧ್ಯವಾಗಿಲ್ಲ. ಪೊಲೀಸರ

ಪಾಣೆಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ Read More »

ಕೆಎಸ್ಎಸ್ ಕಾಲೇಜಿನಲ್ಲಿ  ತರಗತಿವಾರು ಕ್ರಿಕೆಟ್  ಪಂದ್ಯಾಟ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ   ಮತ್ತು ಆಂತರಿಕ‌ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಿದ್ಯಾರ್ಥಿ ಪರಿಷತ್ ವತಿಯಿಂದ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ಮೇ 13 ರಂದು ನಡೆಸಲಾಯಿತು. ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ತೆಂಗಿನ ಕಾಯಿ ಒಡೆಯುವುದರ ಮೂಲಕ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು. ಒಟ್ಟು 10 ತಂಡಗಳು ಭಾಗವಹಿಸಿದ್ದವು . ಪಂದ್ಯಾಟದ ತೀರ್ಪುಗಾರರಾಗಿ ಕಾರ್ತಿಕ್ ಬಿಳಿನೆಲೆ ಸಹಕರಿಸಿದರು.   ಪಂದ್ಯದಲ್ಲಿ ದ್ವಿತೀಯ ಬಿಕಾಂ (ಎ) ತಂಡವು ಪ್ರಥಮ ಸ್ಥಾನ, ದ್ವಿತೀಯ

ಕೆಎಸ್ಎಸ್ ಕಾಲೇಜಿನಲ್ಲಿ  ತರಗತಿವಾರು ಕ್ರಿಕೆಟ್  ಪಂದ್ಯಾಟ Read More »

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು

ಬಂಟ್ವಾಳ : ಲಾರಿಗಳ ನಡುವೆ ಭೀಕರ ಅಪಘಾತ ನಡೆದರಿಂದ ಲಾರಿಯಲ್ಲಿದ್ದ ಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ದುರಂತ ಘಟನೆ ಸಜೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಲೀನರ್‍ ಯೂಸುಫ್‍ ಎಂಬಾತನ ಕೈಕಾಲುಗಳ ಮೇಲೆಯೂ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್‍ ಹಾಗೂ ಅಲ್ಪಾಸ್‍ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಚಿನಡ್ಕಪದವು ಕಡೆಯಿಂದ ಸಜೀಪನಡು

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು Read More »

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ

ತನಿಖೆಯನ್ನು ಎನ್‌ಐಎಗೊಪ್ಪಿಸಿ ಇನ್ನಷ್ಟು ಕೊಲೆಗಳನ್ನು ತಡೆಯಲು ಒತ್ತಾಯ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ Read More »

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ

ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಬಂಧಿತ ಆರೋಪಿ. ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ ಬಸ್ಸಿನಲ್ಲಿ ಮಡಿಕೇರಿಗೆ ತೆರಳಲು ಮನೆಯವರೊಂದಿಗೆ ಅಪ್ರಾಪ್ತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಆರೋಪಿ ಅಬ್ದುಲ್ಲಾ ಅಪ್ರಾಪ್ತೆ ಬಾಲಕಿಯ ಮೈಗೆ ಕೈ ಹಾಕಿ, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು

ಬಸ್ಸಿನಲ್ಲಿ ಅಪ್ರಾಪ್ತೆಗೆ ಕಿರುಕುಳ : ಆರೋಪಿ ಬಂಧನ Read More »

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ

ಜಿಲ್ಲೆಯ ಬಹುಕಾಲದ ಕನಸು ನನಸು- ಸಿಎಂ ಸಿದ್ದರಾಮಯ್ಯನವರಿಂದ ಲೋಕಾರ್ಪಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊನೆಗೂ ಹೊಸ ಜಿಲ್ಲಾಧಿಕಾರಿ ಕಾರ್ಯಾಲಯ ಸಿಗುವ ಕಾಲಕೂಡಿಬಂದಿದೆ. ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಉದ್ಘಾಟನೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕಚೇರಿಗಳನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಈಗಾಗಲೇ ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೊಠಡಿಗಳಿಂದ ವಿವಿಧ ಇಲಾಖೆಗಳು ಕಡತಗಳೊಂದಿಗೆ ನೂತನ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ Read More »

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ

ಇಂದು ಮಂಗಳೂರಿಗೆ ಅಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಪ್ರಶ್ನೆಗಳ ಬಾಣ ಎಸೆದ ಸಂಸದ ಮಂಗಳೂರು: ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಸಹಿತ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಕೇವಲ ಬಲಿಪಶುವೇ? ಮಂಗಳೂರು ಕೇವಲ ಕಾಂಗ್ರೆಸ್‌ನ ರಾಜಕೀಯ ದಾಳವೇ? ಹೂಡಿಕೆ, ಅಭಿವೃದ್ಧಿಯನ್ನು ಕುಂಠಿತಗೊಳಿಸಿ ಇಲ್ಲಿನ ಶಾಂತಿ ಕದಡಿ, ಚುನಾವಣಾ ಲಾಭಕ್ಕಾಗಿ ಕಮ್ಯೂನಲ್ ಹಣೆಪಟ್ಟಿ ಹಚ್ಚಲು ಈ ಪ್ರದೇಶವನ್ನು ಬಳಸಲಾಗುತ್ತಿದೆಯೇ?

ಕಾಂಗ್ರೆಸ್ಸಿನ ರಾಜಕೀಯ ನಾಟಕದಲ್ಲಿ ಮಂಗಳೂರು ಬಲಿಪಶುವೇ? : ಕ್ಯಾ.ಬ್ರಿಜೇಶ್‌ ಚೌಟ Read More »

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸುವುದರ ಜತೆಗೆ ಮಾರಾಟ ಮಾಡುವ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಬಂಟ್ವಾಳ ಪೊಲೀಸರು ಬಂಧಿಸಿ, ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ಮಿಯಾಜ್, ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಟ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ 5 ಸಾವಿರ ಮೌಲ್ಯದ ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ., ಖಾಲಿ 5 ಪ್ಲಾಸ್ಟಿಕ್

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ Read More »

error: Content is protected !!
Scroll to Top