ದಕ್ಷಿಣ ಕನ್ನಡ

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ

ಆರೋಪಿಯೊಬ್ಬನ ಸಂಬಂಧಿಕ ಮಹಿಳೆಯರು ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡುವಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರು ಕಾರಿನ ಸಮೀಪ ಬಂದಿದ್ದರು. ಈ ಪೈಕಿ ಓರ್ವ ಮಹಿಳೆ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಆರೋಪಿಯೊಬ್ಬನ ಸಮೀಪ ಸಾಗಿ ಬಂದಿದ್ದಳು. ಈ ಹಿನ್ನೆಲೆಯಲ್ಲಿ ಕೊಲೆಯಲ್ಲಿ ಇವರ ಪಾತ್ರವಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ […]

ಹತ್ಯೆ ನಡೆದ ಸ್ಥಳದಲ್ಲಿದ್ದ ಇಬ್ಬರು ಮಹಿಳೆಯರ ವಿಚಾರಣೆ Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ

ಆಯುಧ ಇಟ್ಟುಕೊಳ್ಳದಂತೆ ಮಾಡಿ ಹಂತಕರಿಗೆ ಓಡಾಟದ ಸುಳಿವು ನೀಡಿದ್ದಾರೆಂದು ಗುಮಾನಿ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಒಬ್ಬರ ಕೈವಾಡ ಇದೆ ಎಂಬ ಗಂಭೀರವಾದ ಆರೋಪ ಕೇಳಿ ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ ಹುಟ್ಟುತ್ತಲೇ ಇದೆ. ಮೊದಲಿಗೆ ಸೇಡು ತೀರಿಸಲು ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಹೇಳಲಾಗಿತ್ತು. ಬಳಿಕ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿತ್ತು.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಹೆಡ್‌ಕಾನ್‌ಸ್ಟೆಬಲ್‌ ಮೇಲೆ ಅನುಮಾನದ ದೃಷ್ಟಿ Read More »

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ

ಕೊಲೆಗಡುಕರಿಗೆ ಪೊಲೀಸರ ಪೂರ್ಣ ಸಹಕಾರ ಇತ್ತು ಎಂದ ಶಾಸಕ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ. ಹೀಗಾಗಿ ಅವರು ನಡೆಸುವ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ. ಎನ್‌ಐಎ ತನಿಖೆಯಾದರೆ ಮಾತ್ರ ಪೂರ್ಣ ಸತ್ಯ ಹೊರಬರಬಹುದು ಎಂದು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಹಾಸ್ ಶೆಟ್ಟಿ ಕೊಲೆಗೆ, ಕೊಲೆಗಡುಕರಿಗೆ ಪೊಲೀಸರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಅಪಾದಿಸಿದರು. ಕೊಲೆ ವ್ಯವಸ್ಥಿತ ರೀತಿಯಲ್ಲಿ ನಡೆದಿದೆ.

ಸುಹಾಸ್‌ ಶೆಟ್ಟಿಯಲ್ಲಿ ಹತ್ಯೆಯಲ್ಲಿ ಪೊಲೀಸರು ಭಾಗಿ : ಉಮಾನಾಥ್‌ ಕೋಟ್ಯಾನ್‌ ಗಂಭೀರ ಆರೋಪ Read More »

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ : ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಗಂಡಸಿನ ಮೃತದೇಹ ಇದಾಗಿದೆ. ಈ ಬಗ್ಗೆ ತಲಪಾಡಿ ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಬುಧವಾರ ಕೆಲಸಕ್ಕೆ ರಜೆ ಇದ್ದುದರಿಂದ ಮಂಗಳವಾರ ಸಂಜೆ ವೇಳೆ ಬಿ ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌

ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ವಾಟ್ಸಾಪ್‌ ಗ್ರೂಪ್‌ನಲ್ಲಿ ಪೋಸ್ಟ್‌ ಮಂಗಳೂರು: ಬಜ್ಪೆ ಸಮೀಪ ಕಿನ್ನಿಪದವು ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್‌ನಲ್ಲಿ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವ ಪೋಸ್ಟ್ ಮಾಡಿದ ಪುತ್ತೂರಿನ ಯುವಕನ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರಿನ ಮನೀಷ್ ಎಂಬಾತ ವಾಟ್ಸಾಪ್ ಗ್ರೂಪ್‌ನಲ್ಲಿ ಮಹೇಶ್ ಎಸ್. ಎಂಬ ಹೆಸರಿನಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ. ಆತನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗಿದೆ. ಮನೀಷ್

ಪ್ರಚೋದನಕಾರಿ ಪೋಸ್ಟ್‌ : ಪುತ್ತೂರಿನ ಯುವಕನ ವಿರುದ್ಧ ಕೇಸ್‌ Read More »

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ ಪಾತಾಳ ಯಕ್ಷಪ್ರತಿಷ್ಠಾನದ  ಕಲಾಮಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಪಾತಾಳದ ಪೂರ್ಣ ಶ್ರೀ ಗೃಹದಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ, ಕಲಾಪೋಷಕ ಶ್ರೀಪತಿ ಭಟ್ ಮೂಡಬಿದ್ರೆ, ಜನಾರ್ಧನ ಹಂದೆ ಮಂಗಳೂರು ಮುಖ್ಯ ಅಭ್ಯಾಗತರಾಗಿ ಶುಭ ಹಾರೈಸಿದರು. ಅಶ್ವತ್ಥಾಮ ಖ್ಯಾತಿಯ ಕಲಾವಿದ ಗುಂಡಿ ಮಜಲು ಗೋಪಾಲಕೃಷ್ಣ ಭಟ್ ಮತ್ತು ಕಟೀಲು ಮೇಳದ ಕಲಾವಿದ,

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ Read More »

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್‌ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ

ಮಂಗಳೂರು: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ Read More »

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ

ಕಳಸದ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿರುವ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿರುವ ಫೋಟೊ ಬಹಿರಂಗವಾಗಿದೆ. ಕಳಸದ ರೆಸಾರ್ಟ್ ಒಂದರಲ್ಲಿ ಏ.2ರಂದು ಆರೋಪಿಗಳು ನೈಟ್‌ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ಈ ಪಾರ್ಟಿಯಲ್ಲೇ ಹತ್ಯೆಯ ಸ್ಕೆಚ್‌ ಫೈನಲ್‌ ಮಾಡಿರುವ ಅನುಮಾನ ಇದೆ. ಸುಹಾಸ್‌ ಶೆಟ್ಟಿ ಹತ್ಯೆಯ ಆರೋಪಿಗಳಾದ ಮುಝಮ್ಮಿಲ್, ನಿಯಾಜ್ ಹಾಗೂ ಚಿಕ್ಕಮಗಳೂರು ಮೂಲದ ರಂಜಿತ್ ಕ್ಯಾಂಪ್ ಫೈರ್ ಹಾಕಿ ಪಾರ್ಟಿ ಮಾಡಿದ್ದಾರೆ. ಈ ಮೂವರ ಜೊತೆ ಇನ್ನೂ

ಸುಹಾಸ್‌ ಶೆಟ್ಟಿ ಹತ್ಯೆಗೂ ಮೊದಲು ಆರೋಪಿಗಳಿಂದ ಭರ್ಜರಿ ಪಾರ್ಟಿ Read More »

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌

ಬೆಳ್ತಂಗಡಿ : ಕೋಮು ಸೌಹಾರ್ದ ಕದಡುವ ಉದ್ದೇಶದಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಬಳಿಯ ತಣ್ಣೀರುಪಂಥದ ಯುವಕನೊಬ್ಬನ ಮೇಲೆ ಕೇಸ್‌ ದಾಖಲಾಗಿದೆ. ಬೆಳ್ತಂಗಡಿಯ ಧನುಷ್ ಎಂದು ಗುರುತಿಸಲಾದ ಯುವಕ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ವಿಷಯವನ್ನು ಪ್ರಸಾರ ಮಾಡಿದ್ದಾನೆ ಎಂದು ಆರೋಪಿಸಿ ಭಾನುವಾರ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಪ್ರಚೋದನಕಾರಿ

ಪ್ರಚೋದನಕಾರಿ ವೀಡಿಯೊ ಅಪ್‌ಲೋಡ್ : ಯುವಕನ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ

ವಿದೇಶದಿಂದಲೂ ಬಂದಿದೆ ಹಣ; ಸ್ಥಳೀಯ ಪ್ರಭಾವಿಗಳಿಂದ ಹಣಕಾಸಿನ ನೆರವು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗಾಗಿ ಲಕ್ಷಾಂತರ ರೂಪಾಯಿ ಫಂಡಿಂಗ್‌ ಆಗಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಪ್ರತೀಕಾರಕ್ಕೆ ನಡೆದ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ತಿಳಿದುಬಂದಿದೆ. ಸುರತ್ಕಲ್‌ ಕಾಟಿಪಳ್ಳದ ಫಾಝಿಲ್ ಹತ್ಯೆಯ ಪ್ರತೀಕಾರಕ್ಕಾಗಿ ಸುಹಾಸ್‌ ಶೆಟ್ಟಿಯನ್ನು ಗುರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಕೆಲವು ಪ್ರಭಾವಿ ಮುಸ್ಲಿಮರು

ಸುಹಾಸ್‌ ಶೆಟ್ಟಿ ಹತ್ಯೆಗೆ ಆಗಿದೆ ಲಕ್ಷ ಲಕ್ಷ ಫಂಡಿಂಗ್‌ : ತನಿಖೆಯಲ್ಲಿ ತಿಳಿದು ಬಂದ ಸ್ಫೋಟಕ ಮಾಹಿತಿ Read More »

error: Content is protected !!
Scroll to Top