ದಕ್ಷಿಣ ಕನ್ನಡ

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಜಾನವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿವುದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಗೂಡ್ಸ್‌ ವಾಹನದ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ತಲುಪಿಸುತ್ತಿದ್ದೆ ಏಂದು ಜಯಂತ್ ಗೌಡ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಜಾನುವಾರ ಸಾಗಾಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, […]

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ Read More »

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌

ತೆಕ್ಕಾರು ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆಯಲ್ಲಿ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪ ಉಪ್ಪಿನಂಗಡಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕುರಿತು ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆದಿದ್ದು, ಇದರ ಧಾರ್ಮಿಕ ಸಭೆಯಲ್ಲಿ ಹರೀಶ್‌ ಪೂಂಜ ಮುಸ್ಲಿಮರನ್ನು ತೆಗಳಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಹರೀಶ್‌ ಪೂಂಜ ಮಾಡಿದ ಪ್ರಚೋದನಕಾರಿ ಭಾಷಣದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ

ಪ್ರಚೋದನಕಾರಿ ಭಾಷಣ ಆರೋಪ : ಶಾಸಕ ಹರೀಶ್‌ ಪೂಂಜ ವಿರುದ್ಧ ಎಫ್‌ಐಆರ್‌ Read More »

ಮೇ 14 : ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

ಕಡಬ: ತಾಲೂಕಿನ ಸವಣೂರು ಗ್ರಾಮದ ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್‍ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮೇ 14 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮೇ 12 ಸೋಮವಾರ ಬೆಳಿಗ್ಗೆ 9.30 ಕ್ಕೆ ಹಸಿರುಹೊರೆಕಾಣಿಕೆ ಸಮರ್ಪಣೆ, ಉಪಾಹಾರ, ಅಲಂಕಾರ ಸೇವೆ, ಸ್ವಚ್ಛತೆ, ಸಂಜೆ 5 ಕ್ಕೆ ತಂತ್ರಿಗಳ ಆಗಮನ, ರಾತ್ರಿ 7 ಕ್ಕೆ ಸಾರ್ವಜನಿಕ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಪುಣ್ಯಾಹ ಪ್ರಾಸಾದ ಶುದ್ಧಿ,

ಮೇ 14 : ಅರೇಲ್ತಡಿ ಉಳ್ಳಾಕ್ಲು, ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ Read More »

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ

ಮೇ 5ರಂದು ನಿನ್ನ ಸ್ಥಳಕ್ಕೆ ಬಂದು ಸಾಯಿಸುತ್ತೇವೆ ಎಂದು ಟಾರ್ಗೆಟ್‌ ಫಿಕ್ಸ್‌ ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಿಗೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲು ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಬಂದು ಕೊಲೆ ಮಾಡುತ್ತೇವೆ ಎಂದು ಭರತ್‌ ಕುಮ್ಡೇಲು ಫೋಟೊ ಸಹಿತ ಸೋಷಿಯಲ್‌ ಮೀಡಿಯಾದಲಿ ಪೋಸ್ಟ್‌ ಮಾಡಲಾಗಿದೆ. ಸುಹಾಸ್‌ ಶೆಟ್ಟಿ

ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲುಗೆ ಜೀವ ಬೆದರಿಕೆ Read More »

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ

ಮುಸ್ಲಿಂ ಮುಖಂಡರು ಅವರಾಗಿಯೇ ಬಂದು ಭೇಟಿ ಮಾಡಿದರು ಎಂದು ಸಮಜಾಯಿಷಿ ಬೆಂಗಳೂರು: ಶನಿವಾರ ಮಂಗಳೂರಿಗೆ ಬಂದಿದ್ದರೂ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮನೆಗೆ ಹೋಗಿ ತಂದೆ ತಾಯಿಗೆ ಸಾಂತ್ವನ ಹೇಳದ ಕುರಿತು ಇಂದು ಬೆಂಗಳೂರಿನಲ್ಲಿ ಸ್ಪಷ್ಟೀಕರಣ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌, ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸುಗಳಿದ್ದ ಕಾರಣ ಮನೆಗೆ ಹೋಗಿಲ್ಲ ಎಂದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ.

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗು ರೌಡಿ ಶೀಟರ್ ಆಗಿದ್ದ ಸುಹಾಸ್‍ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಂಗಳೂರು ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಹಿಂದೂ ಸಂಘಟನೆಯ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ಸುಹಾಸ್ ಶೆಟ್ಟಿಯ ಕೊಲೆ ದಕ್ಷಿಣಕನ್ನಡದಲ್ಲಿ ಸಂಚಲನ ಮೂಡಿಸಿತ್ತು. ತಡರಾತ್ರಿ ನಡೆದ ಈ ಬರ್ಬರ ಕೃತ್ಯದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ Read More »

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು

ಮಂಗಳೂರು : ರೌಡಿ ಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಎರಡು ಕಡೆಗಳಲ್ಲಿ ದುಷ್ಕರ್ಮಿಗಳು ಸಾರ್ವಜನಿಕರಿಬ್ಬರಿಗೆ ತಲವಾರು ತೋರಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ತಿಳಿದು ಬಂದಿದೆ. ಪಂಜಿಮೊಗರು ಸಮೀಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಂಜಿಮೊಗರು ನಿವಾಸಿ ಮೊಯ್ಲಿನಬ್ಬ (37) ಮತ್ತು ಶಾಂತಿನಗರದ ನಾಸಿರ್ (38) ಎಂಬವರಿಗೆ ತಲವಾರು ತೋರಿಸಿ, ಬೆದರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‍ ಧರಿಸಿಕೊಂಡಿದ್ದ ಇಬ್ಬರು ದುಷ್ಕರ್ಮಿಗಳು ತಲವಾರಿನೊಂದಿಗೆ ಸಂಚರಿಸುತ್ತಾ

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು Read More »

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಮೇಲೆ ತೀವ್ರ ನಿಗಾ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಿನ್ನೆ ಬಂದ್‌ ಆಗಿದ್ದ ಮಂಗಳೂರು ನಗರ ಇಂದು ಸಹಜ ಸ್ಥಿತಿಗೆ ಮರಳಿದೆ. ನಿನ್ನೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರತಿಭಟಿಸಿ ವಿಶ್ವ ಹಿಂದೂ ಪರಿಷತ್‌ ನೀಡಿದ ಕರೆಯನ್ವಯ ಬಂದ್‌ ಆಚರಿಸಲಾಗಿತ್ತು. ಬಂದ್‌ ಆಚರಿಸಲು ಒಪ್ಪದೆ ರಸ್ತೆಗಿಳಿದ ಕೆಲವು ಬಸ್‌ಗಳಿಗೆ ಕಲ್ಲುತೂರಿದ ಘಟನೆ ಮಂಗಳೂರು, ಮೂಲ್ಕಿ, ಕಾರ್ಕಳ ಮತ್ತಿತರೆಡೆಗಳಲ್ಲಿ ಸಂಭವಿಸಿತ್ತು. ನಿನ್ನೆಯಿಡೀ ಮಂಗಳೂರು ಸುತ್ತಮುತ್ತ ಬಿಗುವಿನ ಪರಿಸ್ಥಿಯಿತ್ತು. ಪುತ್ತೂರು, ಕಡಬ, ಬೆಳ್ತಂಗಡಿ

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು Read More »

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ

ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳಲ್ಲಿ ಬಾರ್‌, ಮದ್ಯದಂಗಡಿಗಳು ಬಂದ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಲ್ಲದೆ ಮಂಗಳೂರು ಆಯುಕ್ತರ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 4ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ರೌಡಿ ಶೀಟರ್ ಮತ್ತು ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಿದ

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ Read More »

ಹತ್ಯೆಯಾದ ಸುಹಾಸ್‍ ಶೆಟ್ಟಿ ಮನೆಗೆ ಬಿ.ವೈ.ವಿಜಯೇಂದ್ರ, ಆರ್.ಅಶೋಕ್‍ ಭೇಟಿ | 25 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ಬಜ್ಜೆಯಲ್ಲಿ ಕೊಲೆಯಾದ ರೌಡಿ ಶೀಟರ್ ಸುಹಾಶ್ ಶೆಟ್ಟಿ ಮನೆಗೆ ಶುಕ್ರವಾರ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಹಾಸ್ ಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ನಡೆದ ಈ ಘಟನೆ ಖಂಡನಾರ್ಹ. ಬಿಜೆಪಿಯು ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಸುಹಾಸ್ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ಇಲ್ಲದಿರುವುದು ಪೊಲೀಸರ ವೈಫಲ್ಯ,

ಹತ್ಯೆಯಾದ ಸುಹಾಸ್‍ ಶೆಟ್ಟಿ ಮನೆಗೆ ಬಿ.ವೈ.ವಿಜಯೇಂದ್ರ, ಆರ್.ಅಶೋಕ್‍ ಭೇಟಿ | 25 ಲಕ್ಷ ರೂ. ಪರಿಹಾರ ಘೋಷಣೆ Read More »

error: Content is protected !!
Scroll to Top