ದಕ್ಷಿಣ ಕನ್ನಡ

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ

ಗುಂಡ್ಯ:  ಕೆಎಸ್‌ಆರ್‌ಟಿಸಿ ಬಸ್‍ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಿನ್ನೆ ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ. ಬಸ್ಸು ಚಾಲಕ  ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ತಾಕಿಬೆಟ್ಟು ನಿವಾಸಿ, ಪ್ರಣಯ್ ಮತ್ತು ಶನಕಪುರ ನಿವಾಸಿ ಮಂಜುನಾಥ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಕರೆದುಕೊಂಡು […]

ಕೆಎಸ್‌ಆರ್‌ಟಿಸಿ ಬಸ್‍ – ಲಾರಿಯ ನಡುವೆ ಭೀಕರ ಅಪಘಾತ | ಬಸ್‍ ಚಾಲಕ ಸೇರಿ ನಾಲ್ವರಿಗೆ ಗಾಯ Read More »

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ  ಶ್ರೀ ಮಹಾಭಾರತ ಸರಣಿ ಯಲ್ಲಿ 76ನೇ ಕಾರ್ಯಕ್ರಮವಾಗಿ ಕವಿ ಶ್ರೀ ಶ್ರೀಧರ ಡಿ. ಯಸ್  ರಚಿತ    ಯಕ್ಷಪ್ರಶ್ನೆ    ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.           ಭಾಗವತರಾಗಿ ಪದ್ಮನಾಭ ಕುಲಾಲ್,  ಸುರೇಶ್ ರಾವ್. ಬಿ,  ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪರೀಕ್ಷಿತ್. ಯಚ್, ಅರ್ಥಧಾರಿಗಳಾಗಿ    ಪಾತಾಳ ಅಂಬಾಪ್ರಸಾದ್ (ಧರ್ಮರಾಯ, ಕೃತ್ಯ )ದಿವಾಕರ ಆಚಾರ್ಯ ಗೇರುಕಟ್ಟೆ(ಶಕುನಿ, ಯಕ್ಷ), ಜಿನೇಂದ್ರ ಜೈನ್ ಬಳ್ಳಮಂಜ(ಮಂತ್ರವಾದಿ), ರವೀಂದ್ರ ದರ್ಬೆ

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ Read More »

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು

ಮಂಗಳೂರು : ರೈಲಿನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಹೃದಯಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‍ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ. ತಕ್ಷಣ  ಆರ್‍ಪಿಎಫ್‍ ಇನ್ಸ್‍ಪೆಕ್ಟರ್‍ ಮನೋಜ್‍ ಕುಮಾರ್‍ ಯಾದವ್‍ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್‍ ಕೊಡಿಸಿ ಸರ್ಕಾರಿ ವೆನ್ಲಾಕ್‍ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ  ಸ್ಪಂದಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು Read More »

ಸರಕಾರಿ ಬಸ್‍ ಸ್ಕೂಟರ್ ಗೆ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ : ಸರಕಾರಿ ಬಸ್‍ ಓವರ್ ಟೇಕ್‍ ಮಾಡುವ ಭರದಲ್ಲಿ ಸ್ಕೂಟರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ  ಪಾಣೆಮಂಗಳೂರಿನ ನೆಹರೂನಗರದಲ್ಲಿ ನಡೆದಿದೆ. ಮಂಗಳೂರು ನಿವಾಸಿ ಅಲಿಸ್ಮರ್ ಡಿಸೋಜ (24) ಅಪಘಾತದಿಂದ ಮೃತಪಟ್ಟವರು. ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್‍ ಮಾಡುವ ಭರದಲ್ಲಿ,

ಸರಕಾರಿ ಬಸ್‍ ಸ್ಕೂಟರ್ ಗೆ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

ಧರ್ಮಸ್ಥಳದ ಯುವತಿಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌

ಕೊಲೆಯಲ್ಲ ಆತ್ಮಹತ್ಯೆ ಎಂದ ಪೊಲೀಸರು ಮಂಗಳೂರು: ಪಂಜಾಬಿನಲ್ಲಿ ಧರ್ಮಸ್ಥಳದ ಯುವತಿಯ ಸಾವು ಆತ್ಮಹತ್ಯೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಧರ್ಮಸ್ಥಳದ ಏರೋನಾಟಿಕ್ಸ್ ಇಂಜಿನಿಯರ್ ಯುವತಿ ಆಕಾಂಕ್ಷಾ ನಾಯರ್‌ ಎಂಬವರು ಪಂಜಾಬಿನಲ್ಲಿ ನಿಗೂಢವಾಗಿ ಸಾವಿಘಿಡಾಗಿರುವುದು ಸಾಕಷ್ಟು ಅನುಮಾನಗಳನ್ನು ಸೃಷ್ಟಿಸಿತ್ತು.ಯುವತಿ ಆಕಾಂಕ್ಷಾ ಎಸ್ ನಾಯರ್ (22) ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಂಜಾಬ್‌ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್. ನಾಯರ್

ಧರ್ಮಸ್ಥಳದ ಯುವತಿಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಅಧ್ಯಕ್ಷರ ಮೇಲಿನ ಇಲ್ಲಸಲ್ಲದ ಆರೋಪ ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ಲಾಕ್‍ ಕಾಂಗ್ರೆಸ್‍ ಹಾಗೂ ಸುಬ್ರಹ್ಮಣ್ಯ ಗ್ರಾಮ ಸಮಿತಿ ಹೇಳಿಕೆ | ಹೋರಾಟದ ಎಚ್ಚರಿಕೆ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಈಗಾಗಲೇ ನೂತನ ಆಡಳಿತ ಮಂಡಳಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧ್ಯಕ್ಷರಾದ ಹರೀಶ್‍ ಇಂಜಾಡಿಯವರು ರೌಶಿಡೀಟರ್‍ ಎಂಬ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ರವಾನೆಯಾಗುತ್ತಿದ್ದು, ಇದು ಸತ್ಯಕ್ಕೆ ದೂರವಾಗಿ. ಮುಂದಿನ ದಿನಗಳಲ್ಲಿ ಈ ಕುರಿತು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನೆಯಾದರೆ ನಾವು ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಕಡಬ ಬ್ಲಾಕ್‍ ಕಾಂಗ್ರೆಸ್‍ ಅಧ್ಯಕ್ಷ ಅಭಿಲಾಷ್‍, ಸರಕಾರದ ಗ್ಯಾರಂಟಿ ಅನುಷ್ಠಾನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಅಧ್ಯಕ್ಷರ ಮೇಲಿನ ಇಲ್ಲಸಲ್ಲದ ಆರೋಪ ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ಲಾಕ್‍ ಕಾಂಗ್ರೆಸ್‍ ಹಾಗೂ ಸುಬ್ರಹ್ಮಣ್ಯ ಗ್ರಾಮ ಸಮಿತಿ ಹೇಳಿಕೆ | ಹೋರಾಟದ ಎಚ್ಚರಿಕೆ Read More »

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬ ತಾಲೂಕಿನ ಎಲ್ಲಾ ಸಮುದಾಯದ 8ನೇ, 10ನೇ ತರಗತಿ ಮತ್ತು  ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಹೊಸಮಠ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆಯಿತು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ Read More »

ಸುಳ್ಯ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ

ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ ಶನಿವಾರ ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶವನ್ನು ಉದ್ಘಾಟಿಸಿದರು. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಹಿರಿಯ ಸಹಕಾರಿ, ಕ್ಯಾಂಪೋ ಮಾಜಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ಎ. ವಿ. ವಿಕ್ರಮ್ ಅಡಂಗಾಯ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿನಯ

ಸುಳ್ಯ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ Read More »

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು

ತಾಯಿಯ ಜೊತೆ ನಿದ್ದೆ ಮಾತ್ರೆ ಸೇವಿಸಿದ್ದ ರಾಜ್ಯಮಟ್ಟದ ಕಲಾವಿದ ಬೆಳ್ತಂಗಡಿ : ತಾಯಿಯ ಜೊತೆಗೆ ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಚಿತ್ರ ಕಲಾ ಶಿಕ್ಷಕ, ರಾಜ್ಯಮಟ್ಟದ ಕಲಾವಿದ ಜಯರಾಮ್ ಕೆ (58) ಶುಕ್ರವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕೊನೆಯುಸಿರೆಳೆದಿದ್ದಾರೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಮೇ 10ರಂದು ಹಿಂದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಪತ್ರ ಬರೆದಿಟ್ಟು ತಾಯಿಯ ಒಡಗೂಡಿ ಅಪರಿಮಿತ

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು Read More »

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ

ವಿಟ್ಲ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತವಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಕಾಂತಡ್ಕದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಿಂದ ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನ್ ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು   ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ಪ್ರಯಾಣಿಕರನ್ನು ದಾಖಲಿಸಲಾಗಿದೆ.

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ Read More »

error: Content is protected !!
Scroll to Top