ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೆ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಭೇಟಿ | 25 ಲಕ್ಷ ರೂ. ಪರಿಹಾರ ಘೋಷಣೆ
ಮಂಗಳೂರು: ಬಜ್ಜೆಯಲ್ಲಿ ಕೊಲೆಯಾದ ರೌಡಿ ಶೀಟರ್ ಸುಹಾಶ್ ಶೆಟ್ಟಿ ಮನೆಗೆ ಶುಕ್ರವಾರ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಹಾಸ್ ಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ನಡೆದ ಈ ಘಟನೆ ಖಂಡನಾರ್ಹ. ಬಿಜೆಪಿಯು ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಸುಹಾಸ್ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ಇಲ್ಲದಿರುವುದು ಪೊಲೀಸರ ವೈಫಲ್ಯ, […]










