ದಕ್ಷಿಣ ಕನ್ನಡ

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

ಸುಹಾಸ್‌ ಶೆಟ್ಟಿ ಕೊಲೆಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಮಂಗಳೂರಲ್ಲಿ ವಾಹನ ಸಂಚಾರ ಬಹುತೇಕ ಬಂದ್‌ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಮಂಗಳೂರಿನಲ್ಲಿ ಸಂಚಾರ ಆರಂಭಿಸಿದ ಬಸ್‌ಗೆ ಕಲ್ಲು ತೂರಲಾಗಿದೆ. ಗುಂಪೊಂದು ಹಂಪನಕಟ್ಟೆ ಬಳಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ […]

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ Read More »

ಸುಹಾಸ್‍ ಶೆಟ್ಟಿ ಹತ್ಯೆ  ಖಂಡನೆ : ಇಂದು ವಿಎಚ್‍ಪಿಯಿಂದ  ದ.ಕ. ಜಿಲ್ಲೆ ಬಂದ್‍ ಗೆ ಕರೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಎಚ್‍ ಪಿ  ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು.

ಸುಹಾಸ್‍ ಶೆಟ್ಟಿ ಹತ್ಯೆ  ಖಂಡನೆ : ಇಂದು ವಿಎಚ್‍ಪಿಯಿಂದ  ದ.ಕ. ಜಿಲ್ಲೆ ಬಂದ್‍ ಗೆ ಕರೆ Read More »

ರೌಡಿ ಶೀಟರ್ ಸುಹಾಸ್‍ ಶೆಟ್ಟಿ ಬರ್ಬರ ಹತ್ಯೆ

ಮಂಗಳೂರು: ರೌಡಿ ಶೀಟರ್ ಒಬ್ಬನನ್ನು ತಲವಾರಿನಿಂದ ಹತ್ಯೆ ಮಾಡಿದ ಘಟನೆ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ. ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆಯಾದ ವ್ಯಕ್ತಿ. ಈತ ಸುರತ್ಕಲ್‌ನ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ತಂಡವೊಂದು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಸುಹಾಸ್ ಶೆಟ್ಟಿ ವಿರುದ್ಧ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಬಜ್ಪೆ ಪೊಲೀಸ್

ರೌಡಿ ಶೀಟರ್ ಸುಹಾಸ್‍ ಶೆಟ್ಟಿ ಬರ್ಬರ ಹತ್ಯೆ Read More »

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ

ಗುರುವಾರ ರಾತ್ರಿ ಬಜಪೆ ಸಮೀಪ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ತಲವಾರುಗಳಿಂದ ಕೊಚ್ಚಿ ಭೀಕರ ಹತ್ಯೆ ಮಂಗಳೂರು: ಬಜಪೆಯ ಕಿನ್ನಿಪದವುನಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಮೂಲತಃ ಬೆಳ್ತಂಗಡಿಯ ನಿವಾಸಿ ಸುಹಾಸ್ ಶೆಟ್ಟಿ (32) ಎಂಬವನನ್ನು ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಬರ್ಬರ ಘಟನೆ ಹಿನ್ನೆಲೆ ಇಂದು ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸರು ಹೈ ಅಲರ್ಟ್‌ ಘೋಷಿಸಿದ್ದಾರೆ. ಬೆಳಗ್ಗಿನಿಂದಲೇ ಮಂಗಳೂರಿನಲ್ಲಿ ಬಂದ್‌ ಮಾದರಿಯ ವಾತಾವರಣ ಕಂಡುಬರುತ್ತಿದೆ. ಬಸ್‌ಗಳು ಓಡಾಟ ನಡೆಸುತ್ತಿಲ್ಲ. ಕೆಲವೇ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ Read More »

ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆ ಹಾನಿ

ಸುಳ್ಯ: ಭಾರೀ ಗಾಳಿ ಮಳೆಗೆ ತಾಲೂಕಿನ ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ಗೌಡರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಮನೆಯ ಹಂಚು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಮನೆಯೊಳಗೆ ನೀರು ಬಂದಿದ್ದು, ಇದರಿಂದ ಮನೆಯೊಳಗೆ ಇದ್ದ ವಸ್ತುಗಳಿಗೆ ಹಾನಿಯಾಗಿದೆ. ಕಂದಾಯ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಲಾಗಿದೆ.

ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆ ಹಾನಿ Read More »

ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಶಂಕೆ | ಉಡುಪಿಯಲ್ಲಿ ಬೋಟ್​ಗಳ ತೀವ್ರ ಶೋಧ

ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಂತರ ಕರ್ನಾಟಕ ಕರಾವಳಿಯಲ್ಲಿ ಕರಾವಳಿ ಕಾವಲು ಪೊಲೀಸರ ಕಟ್ಟೆಚ್ಚರ ವಹಿಸಿದೆ. ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆಯ ಅನುಮಾನದ ಕಾರಣ ಕರಾವಳಿ ಕಾವಲು ಪೊಲೀಸರು ಕಣ್ಗಾವಲು ಹೆಚ್ಚಿಸಿದ್ದಾರೆ. ಸಮುದ್ರ ಮಾರ್ಗದ ಮೂಲಕ ಶತ್ರುಗಳು ಒಳ ನುಗ್ಗದಂತೆ ತಡೆಯಲು ಬೋಟ್​​ಗಳ ತಪಾಸಣೆ ತೀವ್ರಗೊಳಿಸಲಾಗಿದೆ. ಉಡುಪಿ ಕರಾವಳಿ ಪೊಲೀಸ್ ಎಸ್. ಪಿ ಮಿಥುನ್ ಸೂಚನೆಯ ನಂತರ ಪೊಲೀಸರು ತಪಾಸಣೆ ಹೆಚ್ಚಿಸಿದ್ದಾರೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಕರಾವಳಿ ಪೊಲೀಸರಿಂದ ಆಳ ಸಮುದ್ರದಲ್ಲಿ ಗಸ್ತು ಕಾರ್ಯಚರಣೆ

ಸಮುದ್ರ ಮಾರ್ಗದಲ್ಲಿ ಶತ್ರುಗಳು ನುಸುಳುವ ಶಂಕೆ | ಉಡುಪಿಯಲ್ಲಿ ಬೋಟ್​ಗಳ ತೀವ್ರ ಶೋಧ Read More »

ಅಕ್ರಮವಾಗಿ ಸಂಗ್ರಹವಾಗಿದ್ದ 500 ಕ್ವಿಂಟಾಲ್ ಅಕ್ಕಿ ವಶ

ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿರುವ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು 500 ಕ್ವಿಂಟಾಲ್ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ, ಇಲಾಖೆಯ ಉಪ ನಿರ್ದೇಶಕಿ ಅನಿತಾ ವಿ. ಮತ್ತೂರು ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. “ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ರೈಸ್ ಮತ್ತು ತೌಡು ಅಕ್ಕಿ ಸೇರಿದಂತೆ ವಿವಿಧ ಬ್ರಾಂಡ್‌ಗಳ ಅಕ್ಕಿ ಚೀಲಗಳಿದ್ದವು. ಇದರ ಜೊತೆಗೆ, ಯಾವುದೇ ಬ್ರಾಂಡಿಂಗ್ ಇಲ್ಲದ ಬಿಳಿ

ಅಕ್ರಮವಾಗಿ ಸಂಗ್ರಹವಾಗಿದ್ದ 500 ಕ್ವಿಂಟಾಲ್ ಅಕ್ಕಿ ವಶ Read More »

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ

ಮಂಗಳೂರು: ಆಂತರಿಕ ಮೀಸಲಾತಿ ಮ್ಯಾಟ್ರಿಕ್ಸ್ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಮೇ 5ರಿಂದ 17ರವರೆಗೆ ಎಲ್ಲ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ಎಸ್‌ಸಿ ವರ್ಗದ ಅಡಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯು ವಿವರವಾದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಸಮೀಕ್ಷೆಯ ಸುಗಮ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, 2,047 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಮತ್ತು ಗೊತ್ತುಪಡಿಸಿದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿರ್ದಿಷ್ಟ ಪ್ರದೇಶಗಳಿಗೆ ನಿಯೋಜಿಸಲಾಗಿದೆ. ಇದಲ್ಲದೆ ಸಮೀಕ್ಷೆಯ ಪ್ರಕ್ರಿಯೆಯನ್ನು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳ ಸಮಗ್ರ ಸಮೀಕ್ಷೆ Read More »

ಹೊಳೆಗೆ ಬಿದ್ದು ಮಹಿಳೆ ಮೃತ್ಯು

ಸುಳ್ಯ : ಸುಳ್ಯದ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಹೊಳೆಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಏ.29 ರಂದು ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60) ಎಂದು ಗುರುತಿಸಲಾಗಿದೆ. ಯಶೋದ ಅವರು ಕೆಲವು ವರ್ಷಗಳ ಹಿಂದೆ ಸ್ಪೋಕ್ ಮತ್ತು ಹೃದಯ ಖಾಯಿಲೆಯಿಂದ  ಬಳಲುತ್ತಿದ್ದು,  ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಅಪರೇಶನ್ ಮಾಡಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಪುತ್ರನಲ್ಲಿ ಅಡುಗೆ ಮಾಡಲು ಕೋಳಿ ತರಲು ಹೇಳಿದ್ದರೆನ್ನಲಾಗಿದ್ದು,

ಹೊಳೆಗೆ ಬಿದ್ದು ಮಹಿಳೆ ಮೃತ್ಯು Read More »

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ

ಅನ್ನಭಾಗ್ಯದ ಅಕ್ಕಿಯನ್ನು ಪಾಲಿಷ್‌ ಮಾಡಿ ಮಾರಾಟ ಮಾಡುತ್ತಿರುವ ಶಂಕೆ ಮಂಗಳೂರು: ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್​​ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಸುಮಾರು 500 ಕ್ವಿಂಟಾಲ್‌ ಅಕ್ಕಿ ಅಕ್ರಮ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಇದು ಅನ್ನಭಾಗ್ಯದ ಅಕ್ಕಿಯಾಗಿರಬಹುದು ಎಂಬ ಶಂಕೆ

ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್‌ ಅಕ್ಕಿಪತ್ತೆ Read More »

error: Content is protected !!
Scroll to Top