ದಕ್ಷಿಣ ಕನ್ನಡ

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ

ಇನ್‌ಸ್ಪೆಕ್ಟರ್‌ ವಿರುದ್ಧ ಕರ್ತವ್ಯ ಲೋಪ ಆರೋಪ – ಉನ್ನತ ತನಿಖೆಗೆ ಒತ್ತಾಯ ಮಂಗಳೂರು: ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾಣದ ಸಮೀಪ ಕೊಲೆಯಾದ ಕೇರಳದ ಯುವಕನ ಶವವನ್ನು ಆತನ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲಪಳ್ಳಿ ನಿವಾಸಿಯಾಗಿದ್ದ ಯುವಕ ಅಶ್ರಫ್‌ ಎಂಬಾತ ಏ.27ರಂದು ಯುವಕರ ಗುಂಪಿನ ಹೊಡೆತಕ್ಕೆ ಸಿಕ್ಕಿ ಸಾವಿಗೀಡಾಗಿದ್ದಾನೆ. ಮಂಗಳೂರಿನ ವೆನ್‌ಲಾಕ್ ಶವಾಗಾರದಲ್ಲಿದ್ದ ಅಶ್ರಫ್‌ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ ಪೊಲೀಸರಿಂದ ಪಡೆದುಕೊಂಡಿದ್ದಾರೆ. ಮಧ್ಯರಾತ್ರಿ ಕೇರಳದಿಂದ […]

ಕುಡುಪು ಕೊಲೆ ಪ್ರಕರಣ : ಯುವಕನ ಶವ ಹಸ್ತಾಂತರ Read More »

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ

ಕೊನೆಗೂ ಕುಡುಪು ಕೊಲೆ ರಹಸ್ಯ ಬೇಧಿಸಿದ ಪೊಲೀಸರು ಮಂಗಳೂರು : ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನ ಸಮೀಪ ಅಪರಿಚಿತ ಯುವಕನ್ನು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ 20 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿರುವಾಗ ಈ ವ್ಯಕ್ತಿ ಮಧ್ಯೆ ಬಂದು ಕಿರಿಕ್‌ ಮಾಡಿದಾಗ ಯುವಕರ ಗುಂಪು ಕೆರಳಿ ಅವನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಈ ಹೊಡೆತಗಳಿಂದ ಸಾವು ಸಂಭವಿಸಿದೆ ಎಂದು ವಿಧಿವಿಜ್ಞಾನ ವರದಿ ದೃಢಪಡಿಸಿದೆ. ಏ.27ರಂದು ಸಂಜೆ ನಿರ್ಜನ ಸ್ಥಳದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ

ಕ್ರಿಕೆಟ್‌ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ Read More »

ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ

ಸುಳ್ಯ; ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ ಹೊಂದಿರುವ ಘಟನೆ ಕನಕಮಜಲಿನಲ್ಲಿ ನಡೆದಿದೆ. ಕನಕಮಜಲು ಗ್ರಾಮದ ನೆಡಿಲು ಸೋಮಪ್ಪ ಗೌಡರು ಏ.17 ರಂದು ನಿಧನ ಹೊಂದಿದ್ದರು. ಹನ್ನೊಂದನೇ ದಿನದ ಕಾರ್ಯಕ್ರಮ ಏ. 28 ರಂದು ನಡೆಯುತ್ತಿತ್ತು. ಕಾರ್ಯಕ್ರಮ ನಡೆಯುತ್ತಿರುವಾಗಲೇ ಮಧ್ಯಾಹ್ನದ ವೇಳೆಗೆ ಪತ್ನಿ ಸುಬ್ಬಕ್ಕೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ, ಕೂಡಲೇ ಸುಳ್ಯ ಆಸ್ಪತ್ರೆಗೆ ಕರೆತಂದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪತಿಯ ತಿಥಿಯ ದಿನವೇ ಪತ್ನಿ ಅಸ್ವಸ್ಥಗೊಂಡು ನಿಧನ Read More »

ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!!

ಕಡಬ : ಚಲಿಸುತ್ತಿದ್ದ ಕಾರಿನಲ್ಲಿ ಬಾಗಿಲು ಹಾಗೂ  ಕಾರಿನ ಮೇಲ್ಬಾಗದಲ್ಲಿ ಕುಳಿತು ಹರಸಾಹಸವನ್ನು ಮಾಡುತ್ತಾ ಚಲಿಸುತ್ತಿದ್ದ ಇತರ ವಾಹನಗಳ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಎ. 27 ಭಾನುವಾರದಂದು ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಡಬದಿಂದ ಅಲಂಕಾರು ತನಕ 15 ಕಿ.ಮೀ. ದೂರ ಹಲವು ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಕರ್ಕಶವಾಗಿ ನಿರಂತರ ಹಾರ್ನ್ ಹಾಕುತ್ತಾ ಸಂಚಾರ ನಿಯಮವನ್ನು  ಉಲ್ಲಂಘಿಸಿ ವಾಹನ ಚಲಾಯಿಸಿರುವಂತಹ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿದೆ. ಇದಕ್ಕೆ ಪೂರಕ

ಚಲಿಸುತ್ತಿದ್ದ ಕಾರಿನಲ್ಲಿ ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!! Read More »

ಮಂಗಳೂರು : ಹೊತ್ತಿ ಉರಿದ ಲಾರಿ | ಚಾಲಕ  ಪ್ರಾಣಪಾಯದಿಂದ ಪಾರು

ಮಂಗಳೂರು: ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ ಲಾರಿಯಲ್ಲಿ ದಿಡೀ‌ರ್ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳದವರು, ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಮಂಗಳೂರು : ಹೊತ್ತಿ ಉರಿದ ಲಾರಿ | ಚಾಲಕ  ಪ್ರಾಣಪಾಯದಿಂದ ಪಾರು Read More »

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರಿನ ಬಳ್ಳಾಲ್ ಬಾಗ್ ಹೋಟೆಲ್ ಪತ್ತುಮುಡಿ ಸಭಾಭವನದಲ್ಲಿ  ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಹವ್ಯಾಸಿ ಕಲಾವಿದರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಉಪಾಧ್ಯಕ್ಷರಾಗಿ ತೋನ್ಸೇ ಪುಷ್ಕಳ ಕುಮಾರ್ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ, ಸಹ ಕಾರ್ಯದರ್ಶಿಗಳಾಗಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ Read More »

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ

ಕೋಮು ವೈಷಮ್ಯಕ್ಕೆ ಎಡೆಮಾಡಿಕೊಡದಂತೆ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮನವಿ ಮಂಗಳೂರು : ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಮಾತಿನ ಚಕಮಕಿ ನಡೆದು, ಯುವಕನ ಮೇಲೆ

ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ Read More »

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌

ನೌಕರಿಯಿಂದ ವಜಾಗೊಳಿಸಿದ ಹೈಲ್ಯಾಂಡ್‌ ಆಸ್ಪತ್ರೆ ಮಂಗಳೂರು : ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ವಿವಾದಾತ್ಮಕ ಪೋಸ್ಟ್‌ ಒಂದನ್ನು ಹಾಕಿದ್ದ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ವೈದ್ಯೆಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಡಾ.ಅಫೀಫ ಫಾತಿಮಾ ಎಂಬಾಕೆ ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ಥಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ʼಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಸೋಷಿಯಲ್‌

ಹಿಂದೂ ದ್ವೇಷದ ಪೋಸ್ಟ್‌ ಹಾಕಿದ ಮಂಗಳೂರಿನ ವೈದ್ಯೆ ವಿರುದ್ಧ ಎಫ್‌ಐಆರ್‌ Read More »

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ

ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ  ಇಂದ್ರಜಿತು ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ ಆಚಾರ್ಯ ಹಳೆನೇರೆಂಕಿ ಹಿಮ್ಮೇಳದಲ್ಲಿ  ಮುರಳೀಧರ ಕಲ್ಲೂರಾಯ,  ಚಂದ್ರ ದೇವಾಡಿಗ ನಗ್ರಿ ಅರ್ಥದಾರಿಗಳಾಗಿ (ರಾಮ1)  ಜಯರಾಮ ಗೌಡ ಬಲ್ಯ (ಇಂದ್ರಜಿತು), ಜಬ್ಬಾರ್ ಸಮೋ ಸಂಪಾಜೆ(ಹನುಮಂತ), ದಿವಾಕರ ಆಚಾರ್ಯ ಹಳೆನೇರೆಂಕಿ (ಮಾಯಾ ಸೀತೆ 1),  ಗುರು ಪ್ರಸಾದ್ ಆಲಂಕಾರು (ಮಾಯಾ ಸೀತೆ 2), ರಾಘವೇಂದ್ರ ಭಟ್ ತೋಟಂತಿಲ (ವಿಭೀಷಣ), ರಾಮ್

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ Read More »

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ  ಅಚಲ್ ಬಿಳಿನೆಲೆ ಆಯ್ಕೆ.

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ “ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್” ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು  ಹಿಂದಿನ ಕಾಲದ ಗುರುಕುಲ ಶಿಕ್ಷಣ  ಸಂಪ್ರದಾಯದ ಅನುಭವ ಪಡೆಯುವ  ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು  ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ತಮ್ಮ ಕಲಾ ಕ್ಷೇತ್ರದ  ಗುರುವಿನೊಂದಿಗಿದ್ದು ಅಭ್ಯಾಸ ಮಾಡುವ  ವಿಭಿನ್ನ  ಅವಕಾಶವನ್ನು ಒದಗಿಸುತ್ತದೆ. ಸುಮಾರು

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ  ಅಚಲ್ ಬಿಳಿನೆಲೆ ಆಯ್ಕೆ. Read More »

error: Content is protected !!
Scroll to Top