ದಕ್ಷಿಣ ಕನ್ನಡ

ಉಪ್ಪಿನಂಗಡಿ ಕಾಳಿಕಾಂಬಾ ಸಂಘದಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ

ಸಸಿಹಿತ್ತಿಲು ದೊಡ್ಡಮನೆ ಶ್ರೀಧರ ಅಮೀನ್ ಗೃಹಪ್ರವೇಶದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ವತಿಯಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ನಿತೇಶ್ ಕುಮಾರ್. ವೈ, ಸಂತೋಷ್ ಕುಮಾರ್ ಹರಿಹರ, ಹಿಮ್ಮೇಳದಲ್ಲಿ ದೇವಿಪ್ರಸಾದ್ ಕಟೀಲು, ಎಸ್‌ ಎನ್ ಭಟ್ ಬಾಯಾರು, ರಘುಪತಿ ಭಟ್ ಸಸಿಹಿತ್ತಿಲು, ಅರ್ಥದಾರಿಗಳಾಗಿ  ಗುಡ್ಡಪ್ಪ ಬಲ್ಯ, ಗೀತಾ ಕರಾಯ (ವಿಕ್ರಮಾದಿತ್ಯ,) ದಿವಾಕರ ಆಚಾರ್ಯ ಗೇರುಕಟ್ಟೆ (ವಿಭಾಕರ), ಹರೀಶ ಆಚಾರ್ಯ ಬಾರ್ಯ(ಆಸ್ಥಾನ ವಿದ್ವಾಂಸ), ಆಶಾಲತಾ […]

ಉಪ್ಪಿನಂಗಡಿ ಕಾಳಿಕಾಂಬಾ ಸಂಘದಿಂದ ಶ್ರೀ ಶನೀಶ್ವರ ಮಹಾತ್ಮೆ ತಾಳಮದ್ದಳೆ Read More »

ಕಾರು- ಮಿನಿ ಲಾರಿ ಡಿಕ್ಕಿ | ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ನೆಲ್ಯಾಡಿ: ಕಾರು ಮತ್ತು ಮಿನಿ ಲಾರಿ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕಾರು ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು, ಬೆಂಗಳೂರು ಕಡೆಯಿಂದ ಬರುವ ಮಿನಿ ಲಾರಿ ಎನ್ನಲಾಗಿದೆ. ಕಾರಿನಲ್ಲಿ ಮೃತಪಟ್ಟ ಅಬ್ದುಲ್ ಅವರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ

ಕಾರು- ಮಿನಿ ಲಾರಿ ಡಿಕ್ಕಿ | ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ Read More »

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ

ಬೆಳ್ತಂಗಡಿ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಹಾಗೂ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಡೆನ್ನಿಸ್ ಪಿಂಟೋ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಕೊಲೆಗೈದವ ಸ್ಥಳೀಯ ನಿವಾಸಿ ಶೀನ ಎಂಬವರು ಆರೋಪಿಯಾಗಿದ್ದಾನೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ.26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಆರೋಪಿ ಶೀನ ಎಂಬಾತ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶೀನ

ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ Read More »

ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ : ಕೊಲೆ ಶಂಕೆ

ಕ್ರಿಕೆಟ್‌ ವಿಚಾರದಲ್ಲಿ ನಡೆದ ಹಲ್ಲೆಯಿಂದ ಸಾವಿಗೀಡಾದ ಅನುಮಾನ ಮಂಗಳೂರು : ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೈಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಇಲ್ಲೆ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ. ಕುಡುಪು ಕಟ್ಟೆ ಸಮೀಪದ

ನಿರ್ಜನ ಸ್ಥಳದಲ್ಲಿ ಯುವಕನ ಶವ ಪತ್ತೆ : ಕೊಲೆ ಶಂಕೆ Read More »

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಸಂತಾಪ ಮತ್ತು ಖಂಡನಾ ಸಭೆ | ತಿಬಿಲೆ ದೀಪದ ಬೆಳಕಿನಲ್ಲಿ ಮೌನ‌ ಮೆರೆವಣಿಗೆ, ನುಡಿ ನಮನ | ಭಯೋತ್ಪಾದನ ಚಟುವಟಿಕೆ ನಿರ್ನಾಮ ಆಗುವ ತನಕ ವಿರಮಿಸಬಾರದು : ರಾಮಚಂದ್ರ ಕೋಡಿಬೈಲು | ಎಲ್ಲಕ್ಕಿಂತಲೂ ದೇಶ ನಮಗೆ ಮೊದಲು : ಜಗನ್ನಾಥ ಪೂಜಾರಿ ಮುಕ್ಕೂರು

ಮುಕ್ಕೂರು: ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಆ ಪ್ರದೇಶದಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಭಾರತೀಯರ ಮೇಲೆ ಗುಂಡಿಕ್ಕಿ 26 ಮಂದಿಯನ್ನು ಕೊಂದಿರುವ ಘಟನೆಯನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ. ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಗ್ರರಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಪ್ರಗತಿಪರ ಕೃಷಿಕ ರಾಮಚಂದ್ರ ಕೋಡಿಬೈಲು ಹೇಳಿದರು. ಮುಕ್ಕೂರು ವಾರ್ಡ್ ನಾಗರಿಕ ವೇದಿಕೆಯ ಆಶ್ರಯದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಾರತೀಯರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಮುಕ್ಕೂರು ಬಸ್ ಪ್ರಯಾಣಿಕರ ತಂಗುದಾಣದ ಬಳಿ ಎ.26 ರಂದು

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಸಂತಾಪ ಮತ್ತು ಖಂಡನಾ ಸಭೆ | ತಿಬಿಲೆ ದೀಪದ ಬೆಳಕಿನಲ್ಲಿ ಮೌನ‌ ಮೆರೆವಣಿಗೆ, ನುಡಿ ನಮನ | ಭಯೋತ್ಪಾದನ ಚಟುವಟಿಕೆ ನಿರ್ನಾಮ ಆಗುವ ತನಕ ವಿರಮಿಸಬಾರದು : ರಾಮಚಂದ್ರ ಕೋಡಿಬೈಲು | ಎಲ್ಲಕ್ಕಿಂತಲೂ ದೇಶ ನಮಗೆ ಮೊದಲು : ಜಗನ್ನಾಥ ಪೂಜಾರಿ ಮುಕ್ಕೂರು Read More »

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಎನ್.ಎಸ್.ಎಸ್ ಘಟಕ ಮತ್ತು ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ  ಕಛೇರಿ ಜಂಟಿಯಾಗಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವನ್ನು ಏ.25 ಶುಕ್ರವಾರದಂದು  ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯಾದ ಡಾ. ತ್ರಿಮೂರ್ತಿ ಅವರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ  ಶಿಕ್ಷಣ ಅಧಿಕಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಲೇರಿಯಾ ರೋಗವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಹೆಲ್ತ್ ಇನ್ಸ್‍ಪೆಕ್ಟರ್ ಉಮರ್ ಖಾನ್ ಮತ್ತು

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಗೆ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ನೇಮಕ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಯಲ್ಲಿ ಕಳೆದ 1 ವರ್ಷಗಳಿಂದ ಕರ್ತವ್ಯ ಸಲ್ಲಿಸಿರುವ  ಯೋಜನಾಧಿಕಾರಿ ರಮೇಶ್ ರವರು  ಬೆಳ್ತಂಗಡಿ ಸಿ ಆರ್ ಇ ಗೆ ಪ್ರಾಂಶುಪಾಲರಾಗಿ ವರ್ಗಾವಣೆಗೊಂಡಿದ್ದಾರೆ. ಮುಂದಕ್ಕೆ ನೂತನ ಯೋಜನಾಧಿಕಾರಿ ಯಾಗಿ ನೇಮಕಗೊಂಡ ಸುರೇಶ್ ಗೌಡ ರವರಿಗೆ  ವಿಟ್ಲ ಯೋಜನಾ  ಕಚೇರಿಯಲ್ಲಿ  ಅಧಿಕಾರ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಯೋಜನಾ  ಕಛೇರಿಗೆ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ನೇಮಕ Read More »

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ

ಬಂಟ್ವಾಳ: ತಾಲೂಕಿನ ಬರಿಮಾರು ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ ಶುಕ್ರವಾರ ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶುಕ್ರವಾರ ಬೆಳಿಗ್ಗೆ ಗಣಹೋಮ, ನಾಗತಂಬಿಲ, ಮುಡಿಪು ಕಟ್ಟುವುದು, ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ಸಂಜೆ 5 ಗಂಟೆಗೆ ಭಂಡಾರ ಇಳಿದು ರಾತ್ರಿ ಅನ್ನಸಂತರ್ಪಣೆ ಜರಗಿತು. ಬಳಿಕ ಸತ್ಯದೇವತೆ ಕಲ್ಲುರ್ಟಿ ಪಂಜುರ್ಲಿ, ಚಾಮುಂಡಿ-ಗುಳಿಗ ರಾಹು-ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರು, ಸ್ಥಳೀಯರು ಉಪಸ್ಥಿತರಿದ್ದರು. ಇಂದು ರಾತ್ರಿ ದೈವಗಳಿಗೆ ವರ್ಷಾವಧಿ ಅಗೇಲು

ಕರ್ತಕೋಡಿ ಧನ್ಯತಾ ಸಾಲ್ಯಾನ್‍ ಕುಟುಂಬಸ್ಥರ ದೈವಗಳ ಗಗ್ಗರ ಸೇವೆ Read More »

ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ | ಡಿಕ್ಕಿಹೊಡೆದು ಲಾರಿ ಚಾಲಕ ಪರಾರಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನರ್ಸರಿ ಬಳಿ ಲಾರಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಎ. 24ರಂದು ಸುಲ್ಕೇರಿ ನರ್ಸರಿ ಬಳಿ ನಡೆದಿದೆ. ಲಾರಿ ಚಾಲಕನ ದುಡುಕುತನದಿಂದ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ನಾರಾವಿ ಕಡೆಯಿಂದ ಬರುತ್ತಿದ್ದ ಕಾಯರ್ತಡ್ಕ ಗ್ರಾಮದ ಕಳಂಜ ಮರಕಡ ನಿವಾಸಿ ಗಣೇಶ್ ಗೌಡ (49ವ)ರವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಅಪಘಾತದಿಂದ ಗಣೇಶ್ ಗೌಡರ ವಾಹನ ಜಖಂಗೊಂಡಿದರ ಜೊತೆಗೆ ಗಾಯವಾಗಿದೆ ಎನ್ನಲಾಗಿದೆ. ಉಜಿರೆಯ ಖಾಸಗಿ

ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ | ಡಿಕ್ಕಿಹೊಡೆದು ಲಾರಿ ಚಾಲಕ ಪರಾರಿ Read More »

ಕಾಶ್ಮೀರದ ಪಹಲ್ಗಾಮಾದಲ್ಲಿ ನಡೆದ ಹಿಂದೂಗಳ ಹತ್ಯೆ ಪ್ರಕರಣ ಖಂಡಿಸಿ ಬೆಳ್ಳಾರೆಯಲ್ಲಿ ಬೃಹತ್‍ ಪ್ರತಿಭಟನಾ ಮೆರವಣಿಗೆ | ಬೆಳ್ಳಾರೆ, ನಿಂತಿಕಲ್ಲು ಅಂಗಡಿ ಮಾಲಕರು, ಎಲ್ಲಾ ವಾಹನ ಚಾಲಕರು ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿ

ಬೆಳ್ಳಾರೆ: ದೇಶಭಕ್ತ ನಾಗರಿಕರು ಬೆಳ್ಳಾರೆ ವಲಯದಿಂದ ಕಾಶ್ಮೀರದ ಪಹಲ್ಗಾಮಾದಲ್ಲಿ ಉಗ್ರಗಾಮಿಗಳಿಂದ ಹತರಾದ ಹಿಂದೂ ಬಾಂಧವರಿಗೆ ಶ್ರದ್ಧಾಂಜಲಿ ಸಭೆ ಹಾಗೂ ಘಟನೆಯನ್ನು ಖಂಡಿಸಿ ಬೃಹತ್‍ ಪ್ರತಿಭಟನಾ ಮೆರವಣಿಗೆ ಬೆಳ್ಳಾರೆಯಲ್ಲಿ ಶುಕ್ರವಾರ ಸಂಜೆ ನಡೆಯಿತು. ಬೆಳ್ಳಾರೆ ಕೆಳಗಿನ ಪೇಟೆಯ ಶ್ರೀ ವೆಂಕಟ್ರಮಣ ದೇವಸ್ಥಾನದಿಂದ ಬಸ್‍ ನಿಲ್ದಾಣದ ವರೆಗೆ ನಾಗರಿಕರು ದೀಪ ಹಿಡಿದುಕೊಂಡು ಪ್ರತಿಭಟನಾ ಮೆರವಣಿಗೆ ನಡೆಸಿದರು.   ಸಾಮಾಜಿಕ ಕಾರ್ಯಕತ‍್ ಮೋಹನ್‍ ದಾಸ್‍ ಬಲ್ಕಾಡಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಬೆಳ್ಳಾರೆ ಮತ್ತು ನಿಂತಿಕಲ್ಲಿನ ಎಲ್ಲಾ ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು

ಕಾಶ್ಮೀರದ ಪಹಲ್ಗಾಮಾದಲ್ಲಿ ನಡೆದ ಹಿಂದೂಗಳ ಹತ್ಯೆ ಪ್ರಕರಣ ಖಂಡಿಸಿ ಬೆಳ್ಳಾರೆಯಲ್ಲಿ ಬೃಹತ್‍ ಪ್ರತಿಭಟನಾ ಮೆರವಣಿಗೆ | ಬೆಳ್ಳಾರೆ, ನಿಂತಿಕಲ್ಲು ಅಂಗಡಿ ಮಾಲಕರು, ಎಲ್ಲಾ ವಾಹನ ಚಾಲಕರು ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿ Read More »

error: Content is protected !!
Scroll to Top