ದಕ್ಷಿಣ ಕನ್ನಡ

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ

ಮಂಗಳೂರು : ಅನೇಕ ಕಡೆಗಳಲ್ಲಿ ಗೋ ಹತ್ಯೆ, ಗೋ ಸಾಗಾಟದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಅಂತಹದ್ದೇ ಗೋ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ರಸ್ತೆಯಲ್ಲಿ ಅಕ್ರಮ ದನ ಸಾಗಾಟ ಮಾಡಲು  ಪ್ರಯತ್ನಿಸುತ್ತಿದ್ದ ಯುವಕರು ಪೊಲೀಸರ ವಶವಾದ ಘಟನೆ ನಿನ್ನೆ (ಏ.24) ತಡರಾತ್ರಿ ನಡೆದಿದೆ. ಯುವಕರು ಮೂರು ದನಗಳಿಗೆ ಆಹಾರ ನೀಡುತ್ತಾ ಅದನ್ನು ಹಿಡಿದು ವಾಹನದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಸಂಶಯಗೊಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದಾರೆ. ಬಳಿಕ […]

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ Read More »

ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ

ಕಡಬ: ಅತ್ಯುತ್ತಮ ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನರಾದರು. ಇತ್ತೀಚೆಗೆ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು ಧಾನಿಗಳು ಆರ್ಥಿಕ ಸಹಾಯವನ್ನು ನೀಡಿದ್ದರು. ಕೋಕಿಲಾನಂದ ಅವರು ಕಡಬ ನಿವಾಸಿಯಾಗಿದ್ದು, ಕೇವಲ ಕಬಡ್ಡಿ ಆಟ ಮಾತ್ರವಲ್ಲದೆ ಊರಿನ ಕೆಲವೊಂದು ಸಮಸ್ಯೆಗೆ ಹೋರಾಟ ಕೂಡಾ ನಡೆಸಿದ್ದರು. ಕಡಬದಲ್ಲಿ ಆನೆ ದಾಳಿಯ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳ

ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ Read More »

ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ

ಕುಕ್ಕೆ  ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ  ಪೂರ್ವ ವಿದ್ಯಾರ್ಥಿ  ಸಂಘ ಬೆಂಗಳೂರು ಚಾಪ್ಟರ್ ವತಿಯಿಂದ ದತ್ತಿನಿಧಿ ಸ್ಥಾಪನೆ ಕಾರ್ಯಕ್ರಮವನ್ನು ಏ.21ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ .ಟಿ ವಹಿಸಿದರು. ಕಾರ್ಯಕ್ರಮದಲ್ಲಿ, ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಘಟಕವನ್ನು ಹುಟ್ಟು ಹಾಕಿದ ಕೆ ಎಸ್ ಎಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ ಕೆ ರಂಗಯ್ಯ ಶೆಟ್ಟಿಗಾರ್ ಅವರು ಈ ಘಟಕವು ಸಂಸ್ಥೆಯ ಹಲವಾರು ವಿದ್ಯಾರ್ಥಿಗಳಿಗೆ  ಉದ್ಯೋಗವನ್ನು,

ಕೆ ಎಸ್ ಎಸ್ ಕಾಲೇಜಿನಲ್ಲಿ ಪೂರ್ವ ವಿದ್ಯಾರ್ಥಿ ಸಂಘ ಬೆಂಗಳೂರು ಚಾಪ್ಟರ್ ನಿಂದ ದತ್ತಿ ನಿಧಿ ಸ್ಥಾಪನೆ Read More »

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌

ಕೊಣಾಜೆಯ ವ್ಯಕ್ತಿಗಾಗಿ ಪೊಲೀಸರ ಶೋಧ ಮಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್‌ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು

ಫೇಸ್‌ಬುಕ್‌ನಲ್ಲಿ ಪಹಲ್ಗಾಮ್‌ ದಾಳಿ ಸಮರ್ಥಿಸಿ ಪೋಸ್ಟ್‌ Read More »

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ **ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಏ. 25 ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ.  ಇದನ್ನು ಮಂಗಳೂರು ಆಕಾಶವಾಣಿಯ  100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ Read More »

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಆಲಂಕಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

ಅಲಂಕಾರು : ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಇಂದು ಆಲಂಕಾರಿನಲ್ಲಿ ನಡೆಯಿತು. ಈ ವೇಳೆ ನವೀನ್‍ ನೆರಿಯ ಹಾಗೂ ಆಲಂಕಾರಿನ ಎಲ್ಲಾ ಹಿಂದೂ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ದಾಳಿ | ಆಲಂಕಾರಿನಲ್ಲಿ ಬೃಹತ್ ಪ್ರತಿಭಟನಾ ಸಭೆ Read More »

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌

ವೀಡಿಯೊ ವೈರಲ್‌ ಆದ ಬಳಿಕ ನಿರ್ವಾಹಕನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮಂಗಳೂರು: ಮುಡಿಪು -ಸ್ಟೇಟ್‌ ಬ್ಯಾಂಕ್‌ ಮಧ್ಯೆ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್‌ ನಿರ್ವಹಕ ಚಲಿಸುತ್ತಿರುವ ಬಸ್ಸಿನಲ್ಲೇ ಯುವತಿಗೆ ಕಿರುಕುಳ ನೀಡಿದ ಘಟನೆ ಸಂಭವಿಸಿದೆ. ನಿದ್ರಿಸುತ್ತಿದ್ದ ಯುವತಿಗೆ ನಿರ್ವಾಹಕ ಕಿರುಕುಳ ನೀಡಿದ್ದು, ಪ್ರಯಾಣಿಕರೊಬ್ಬರು ಇದನ್ನು ವೀಡಿಯೊ ಮಾಡಿದ್ದರು. ಈ ವೀಡಿಯೊ ವೈರಲ್‌ ಆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್‌ (40) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 22ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ

ಬಸ್‌ನಲ್ಲಿ ಯುವತಿಗೆ ಕಿರುಕುಳ ನೀಡಿದ ಕಂಡಕ್ಟರ್‌ Read More »

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.24 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ ನಿವಾಸಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾರವರ ಪತಿ ವಿನೋದ್ (48) ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣು Read More »

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು

ಉಪ್ಪಿನಂಗಡಿ: ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ ಒಟ್ಟು 12 ಗ್ರಾಂ ತೂಕವಿರುವ 3 ಉಂಗುರ, ಹಾಗೂ 6 ಗ್ರಾಂ ತೂಕವಿರುವ 4 ಉಂಗುರ ಮತ್ತು 3 ಸಾವಿರ ನಗದು ಹಣ ಕದ್ದೊಯ್ದಿದ್ದಾನೆ. ಇದೇ ಗ್ರಾಮದ ಕೋಡಿ

ಎರಡು ಮನೆಗಳಿಗೆ ನುಗ್ಗಿದ ಕಳ್ಳ |  ಬೆಲೆಬಾಳುವ ನಗ- ನಗದು ಕಳವು Read More »

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ

28.58 ಕೋ. ರೂ. ವೆಚ್ಚದ ದುರಸ್ತಿ ಕಾಮಗಾರಿಗೆ ಇಂದು ಸಂಸದರಿಂದ ಚಾಲನೆ ಮಂಗಳೂರು : ನವಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌-ಬಿ.ಸಿ.ರೋಡ್‌ವರೆಗಿನ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಕೊನೆಗೂ ಕಾಲಕೂಡಿ ಬಂದಿದೆ. ಸುಮಾರು 28 ಕೋ. ರೂ. ವೆಚ್ಚದಲ್ಲಿ ಹೆದ್ದಾರಿಯ ಮರುಡಾಂಬರೀಕರಣ ಮತ್ತು ದುರಸ್ತಿ ನಡೆಯಲಿದ್ದು, ಸಂಸದ ಕ್ಯಾ.ಬ್ರಿಜೇಶ್‌ ಚೌಟ ಇಂದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸುರತ್ಕಲ್‌ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ.

ಕೊನೆಗೂ ಸುರತ್ಕಲ್‌-ಬಿ.ಸಿ.ರೋಡ್‌ ಹೆದ್ದಾರಿಗೆ ದುರಸ್ತಿ ಭಾಗ್ಯ Read More »

error: Content is protected !!
Scroll to Top