ದಕ್ಷಿಣ ಕನ್ನಡ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಾಗೂ ನೇಮೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಗುರುವಾರ ಹಾಗೂ ಶುಕ್ರವಾರ ನಡೆಯಿತು. ಗುರುವಾರ ಬೆಳಿಗ್ಗೆ 8 ಕ್ಕೆ ಕವಾಟೋದ್ಘಾಟನೆ, 9 ಕ್ಕೆ ಗಣಹೋಮ, ಕಲಶ ಪೂಜೆ, 10 ಕ್ಕೆ ಪಂಚಾಮೃತಾಭಿಷೇಕ, ಕಲಶಾಭಿಷೇಕ, 11 ಕ್ಕೆ ಬ್ರಹ್ಮರ ಮೂಲಸ್ಥಾನದಲ್ಲಿ ಪೂಜೆ, 11.30 ಕ್ಕೆ ಮೂಲ ನಾಗದ ಕಟ್ಟೆಯಲ್ಲಿ ತಂಬಿಲ ಸೇವೆ, 12 ಕ್ಕೆ ಪರಿವಾರ ದೈವಗಳಿಗೆ ತಂಬಿಲ ಸೇವೆ, 12.30 ಕ್ಕೆ ನಾಗಬ್ರಹ್ಮ ದೇವರ ಪೂಜೆ, ಮಧ್ಯಾಹ್ನ 1 ಕ್ಕೆ […]

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ, ಶ್ರೀ ಉಳ್ಳಾಕುಲು ನೇಮೋತ್ಸವ Read More »

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಮತ್ತು ವಿದ್ಯಾಭಿಮಾನಿ ಸಂಘಗಳ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾ ಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಡಿಸಿ ಸದಸ್ಯ ವೆಂಕಟೇಶ್‍ ಭಟ್‍ ಕೊಯಕುಡೆ ಶ್ರೀವಿದ್ಯಾಳ ಸಾಧನೆಯನ್ನು ವಿವರಿಸಿ, ನಮ್ಮ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮ ಸ್ಪೂರ್ತಿ ನೀಡಲಿ ಎಂದರು. ಸಿಡಿಸಿ ಸದಸ್ಯ ಪ್ರವೀಣ್‍ ಕುಮಾರ್ ಕೆಡೆಂಜಿ ಮಾತನಾಡಿ, ಒಂದನೇ ತರಗತಿಯಿಂದ ಪಿಯುಸಿ ವರೆಗೆ ಸರಕಾರಿ ಶಾಲೆಗಳಲ್ಲಿ ಓದಿ ರಾಂಕ್

ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ 5 ನೇ ರಾಂಕ್ ಪಡೆದ ಶ್ರೀವಿದ್ಯಾಳಿಗೆ ಸನ್ಮಾನ Read More »

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ

ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿ ಬಾವಿಯೊಳಗಿದೆ ಶವ- ಕೊಲೆ ಶಂಕೆ ಮೂಲ್ಕಿ‌: ಕಳೆದ ಬುಧವಾರದಿಂದ ನಾಪತ್ತೆಯಾಗಿದ್ದ ಮೂಲ್ಕಿಯ ಆಟೋ ಚಾಲಕನ ಮೃತದೇಹ ಕಾಸರಗೋಡಿನ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿ ನಿರ್ಜನ ಪ್ರದೇಶದ ಬಾವಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಶಂಕಿಸಲಾಗಿದೆ. ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ (52) ಮೃತಪಟ್ಟವರು. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು.ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕಕ್ಕೆ ಸಿಗದ

ಮೂಲ್ಕಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಮೃತದೇಹ ಬಾವಿಯಲ್ಲಿ ಪತ್ತೆ Read More »

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ

ಪಲಾಯನ ಮಾಡಲೆತ್ನಿಸಿದ ಕಾರನ್ನು8 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಕಾಸರಗೋಡು: ಕಾರೊಂದನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಾಗ ಭಾರಿ ಪ್ರಮಾಣದ ಚಿನ್ನಾಭರಣ, ನಗದು ಮತ್ತು ಮಾರಕಾಯುಧಗಳು ಪತ್ತೆಯಾದ ಘಟನೆ ಕೇರಳ-ಕರ್ನಾಟಕ ಗಡಿಯ ಆದೂರು ಚೆಕ್‌ಪೋಸ್ಟ್‌ ಸಮೀಪ ನಡೆದಿದೆ. ವಾಹನ ತಪಾಸಣೆ ಸಂದರ್ಭದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಚಿನ್ನಾಭರಣ , ಬೆಳ್ಳಿ ಹಾಗೂ ಇನ್ನಿತರ ವಸ್ತುಗಳ ಜೊತೆಗೆ ಮಾರಕಾಯುಧಗಳು ಮತ್ತು ಕಳ್ಳತನಕ್ಕೆ ಬಳಸುವ ಪರಿಕರಗಳು ಸಿಕ್ಕಿವೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಅಬಕಾರಿ

ಕಾರಿನಲ್ಲಿ ಚಿನ್ನ, ನಗದು, ಮಾರಕಾಯುಧ ಪತ್ತೆ Read More »

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ

ಮೂಡುಬಿದಿರೆ: ಚಿರತೆಯೊಂದು ಬಾವಿಗೆ ಬಿದ್ದಿದ್ದರಿಂದ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ ಘಟನೆ ಮಡುಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಚಿರತೆಯು ಅಯತಪ್ಪಿ ಬಿದ್ದಿದೆ.  ಇದನ್ನು ರಕ್ಷಿಸಲೆಂದು ಅರಣ್ಯಾಧಿಕಾರಿಗಳು ಮನೆಗೆ ಬಂದಿದ್ದರು. ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್‍ ರವರ ನಿರ್ದೇಶನದಂತೆ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಕಾವ್ಯಾ ಆರ್., ರಾಘವೇಂದ್ರ ಶೆಟ್ಟಿ, ಬಸಪ್ಪ

ಬಾವಿಗೆ ಬಿದ್ದ ಚಿರತೆ | ಅರಣ್ಯಾಧಿಕಾರಿಗಳಿಂದ ರಕ್ಷಣೆ Read More »

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಿಗೆ ನಿನ್ನೆ ಸಂಜೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದ್ದು, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ನಿನ್ನೆ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು.  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಹವಮಾನ ಇಲಾಖೆ ಮುನ್ಸೂಚನೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು, ನಾಳೆ ಎಲ್ಲೋ ಅಲರ್ಟ್ Read More »

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಪ್ರವೇಶ ಕಾರ್ಯಕ್ರಮವು ನೆಲ್ಲಿಕಟ್ಟೆಯ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಪ್ರಧಾನ ಕಚೇರಿಯ ಪಕ್ಕದ ಕಟ್ಟಡದ ನೆಲಮಹಡಿಯ ಡೋರ್ ನಂಬರ್ 2-842/ ‘ಎ’ಯಲ್ಲಿ ನಡೆಯಿತು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಅಧ್ಯಕ್ಷರಾದ ಕಳುವಾಜೆ ವೆಂಕಟ್ರಮಣ ಗೌಡರು ದೀಪ ಪ್ರಜ್ವಲಿಸಿ ಉದ್ಘಾಟನೆಗೈದು ಸಂಸ್ಥೆಯ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದರು. ಸಂಸ್ಥೆಯ ಮುಖ್ಯ ಪ್ರವರ್ತಕ ಎ. ವಿ. ನಾರಾಯಣ, ಪ್ರವರ್ತಕರುಗಳಾದ ಉಮೇಶ್ ಮಳುವೇಲು, ಸೀತಾರಾಮ ಕೇವಳ,

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ Read More »

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು

11 ವರ್ಷದ ಹಿಂದೆ ಮಂಗಳೂರಿನ ಬಾಡಿಗೆ ಮನೆಯಲ್ಲಿ ಇಬ್ಬರನ್ನು ಮಲಗಿದ್ದಲ್ಲೇ ಇರಿದು ಸಾಯಿಸಿದ ಪ್ರಕರಣ ಮಂಗಳೂರು: ವಿದೇಶದಿಂದ ಅಕ್ರಮವಾಗಿ ತಂದ ಚಿನ್ನದ ಗಟ್ಟಿ ಮಾರಾಟದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಇಬ್ಬರನ್ನು ಉಪಾಯದಿಂದ ಮಂಗಳೂರಿನ ಅತ್ತಾವರಕ್ಕೆ ಕರೆಸಿ ಮಲಗಿದಲ್ಲೇ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು Read More »

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ

ಸವಣೂರು : ಈ ಬಾರಿ ಮಾರ್ಚ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಿಂದ ಹಾಜರಾಗಿದ್ದ ಎಲ್ಲಾ 23 ವಿದ್ಯಾರ್ಥಿಗಳು ತೆರ್ಗಡೆಯಾಗಿದ್ದು ಲಿಖಿತ್ ರಾಜ್  (510/600) ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದ ಎಲ್ಲಾ 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಅಪೇಕ್ಷಾ ಜಿ. (575/600), ಅಮೀನಾಥ್ ಐಫಾ (562/600), ಶೈಬಾ (544/600), ನೂರುನ್ನೀಸಾ (530/600), ಶೈಮಾ (525/600) ಮತ್ತು ಯಶಸ್ವಿ ರೈ ಕೆ.

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ Read More »

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯ ಕಡೆಗೆ ಬರುತ್ತಿದ್ದ ಅಮ್ಮಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಬರುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.  ಈ ಅಪಘಾತದಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದಾರೆ  ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ Read More »

error: Content is protected !!
Scroll to Top