ದಕ್ಷಿಣ ಕನ್ನಡ

ಸುಳ್ಯ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ಸಮೀಪ ಬೋಳುಬೈಲು ಎಂಬಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಪುತ್ತೂರಿನಿಂದ ಸುಳ್ಯದತ್ತ ಹೋಗುತ್ತಿದ್ದ ಕಾರು ಬೋಳುಬೈಲಿನಲಿ ಎದುರಿನಿಂದ ಬಂದ ವಾಹನಕ್ಕೆ ಸೈಡ್‌ ಕೊಡುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಹೇಮಾ ಮತ್ತು ಶ್ರೀಚಂದ್‌ ಎಂಬವರು ಗಾಯಗೊಂಡಿದ್ದಾರೆ. ಅವರ ಪುಟ್ಟ ಮಗು ಮತ್ತು ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದರು.

ಸುಳ್ಯ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

ಕೋಕೋ ಮಿತ್ರ ಲೋಕಾರ್ಪಣೆ

ಕೋಕೋ ಮಿತ್ರ ಎಲ್ಲರ ಮಿತ್ರನಾಗಲಿ – ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನಿಂತಿಕಲ್ಲು: ನಾಗೇಶ್ ಕೆಡೆಂಜಿ ಮಾಲಕತ್ವದ ‘ಕೋಕೋ ಮಿತ್ರ’ – ತಂಪೊತ್ತಿನ ಗಾಣದ ತೆಂಗಿನೆಣ್ಣೆ ಉತ್ಪಾದನ ಘಟಕವು ನಿಂತಿಕಲ್ಲಿನಲ್ಲಿರುವ ಎಣ್ಮೂರು-ಮುರುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ‘ಸಾಧನಾ ಸಹಕಾರಿ ಸೌಧ’ದಲ್ಲಿ ಲೋಕಾರ್ಪಣೆಗೊಂಡಿತು. ಪವಿತ್ರ ಪಾವಕ ಪ್ರಜ್ಷಲಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಸ್ವಾಮೀಜಿ ಪೂಜ್ಯ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ನಾಗೇಶ್ ಕೆಡೆಂಜಿಯವರ ಉದ್ಯಮಶೀಲತೆಗೆ ಮೆಚ್ಚುಗೆ

ಕೋಕೋ ಮಿತ್ರ ಲೋಕಾರ್ಪಣೆ Read More »

ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ!

ದೈವಾರಾಧನೆ ಪರಂಪರೆಗೆ ಧಕ್ಕೆಯಾಗಿದೆ ಎಂದು ಪಂಬದ ಸಮುದಾಯದವರ ಆರೋಪ ಮಂಗಳೂರು : ತುಳುನಾಡಿನ ಪ್ರಸಿದ್ಧ ದೈವಾರಾಧನೆ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನವೊಂದರ ನೇಮೋತ್ಸವದಲ್ಲಿ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ ನಡೆದಿತ್ತು. ಸಂಪ್ರದಾಯದಂತೆ ದೈವ ನರ್ತನ ಸೇವೆಯನ್ನು ನಲಿಕೆ, ಪರವ ಹಾಗೂ ಪಂಬದ ಸಮುದಾಯದವರು ಮಾತ್ರ ಮಾಡಬೇಕು ಎಂಬ

ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ! Read More »

ಕೆಲಸಕ್ಕೆಂದು ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ : ಆರೋಪಿ ಪಲಾಯನ

ಮಂಗಳೂರು: ಕೂಲಿ ಕೆಲಸಕ್ಕೆಂದು ಹೊರಜಿಲ್ಲೆಯ ಮಹಿಳೆಯನ್ನು ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಚಾರ ಮಾಡಲು ಯತ್ನಿಸಿದ ಘಟನೆ ಶುಕ್ರವಾರ ಮಂಗಳೂರಿನ ಲಾಲ್‌ಭಾಗ್‌ನಲ್ಲಿ ಸಂಭವಿಸಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಪಲಾಯನ ಮಾಡಿದ್ದಾನೆ. ಉರ್ವಸ್ಟೋರ್‌ ಜಂಕ್ಷನ್‌ನಲ್ಲಿ ಎಂದಿನಂತೆ ಕೆಲಸ ಅರಸಿಕೊಂಡು ನಿಂತಿದ್ದ 35ರ ಹರೆಯದ ಮಹಿಳೆಯನ್ನು ಆರೋಪಿ ತನ್ನ ಮನೆಯಲ್ಲಿ ಕೆಲಸ ಇದೆ ಎಂದು ಹೇಳಿ ಲಾಲ್‌ಬಾಗ್‌ಗೆ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಲಾಲ್‌ಬಾಗ್‌ನ ಪಂಪ್‌ಹೌಸ್‌ನ ಜನವಸತಿಯಿಲ್ಲದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಮಹಿಳೆ ಬೊಬ್ಬೆ ಹಾಕಿದಾಗ ಜನ ಸೇರಿದ್ದು,

ಕೆಲಸಕ್ಕೆಂದು ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ : ಆರೋಪಿ ಪಲಾಯನ Read More »

ದ.ಕ.ಜಿಲ್ಲೆಯಲ್ಲಿ ಗ್ಯಾಸ್‌ ಕೊರತೆಯಿಲ್ಲ : ಜಿಲ್ಲಾಡಳಿತ

ಗೃಹ ಬಳಕೆ ಸಿಲಿಂಡರ್‌ ಸಮಸ್ಯೆಯಿ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್ಗಳ ದಾಸ್ತಾನು ಇದ್ದು, ಜಿಲ್ಲೆಯ ಎಲ್ಲ ಗೃಹ ಬಳಕೆ ಅನಿಲ ಗ್ರಾಹಕರು ಗಾಬರಿ/ ಆತಂಕಪಡಬಾರದೆಂದು ಹಾಗೂ ಹೆಚ್ಚುವರಿ ದಾಸ್ತಾನು ಮಾಡಿಕೊಳ್ಳಬಾರದು ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಸಿಲಿಂಡರ್‌ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಗೃಹ ಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ

ದ.ಕ.ಜಿಲ್ಲೆಯಲ್ಲಿ ಗ್ಯಾಸ್‌ ಕೊರತೆಯಿಲ್ಲ : ಜಿಲ್ಲಾಡಳಿತ Read More »

ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ

ಸುಳ್ಯ: ಸ್ವಾವಲಂಬಿ ಬದುಕು ವ್ಯಕ್ತಿಯನ್ನು ಬಲಿಷ್ಠನಾಗಿಸುತ್ತದೆ. ತನ್ನ ಪರಿಶ್ರಮ ಮತ್ತು ಸಾಮರ್ಥ್ಯದಿಂದ ಬದುಕುವ ವ್ಯಕ್ತಿ ಸಮಾಜಕ್ಕೆ ಮಾದರಿಯಾಗುತ್ತಾನೆ. ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರೆ, ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧಾ ಕುರುಂಜಿ ಅಭಿಪ್ರಾಯಪಟ್ಟರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ಸುಳ್ಯ ತಾಲೂಕಿನ ದೊಡ್ಡೇರಿ ಕಾರ್ಯಕ್ಷೇತ್ರದಲ್ಲಿ ಅಮೃತ ಜ್ಞಾನವಿಕಾಸ ಕೇಂದ್ರದಲ್ಲಿ ಮೂರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮದ

ಸ್ವಾವಲಂಬಿ ಬದುಕು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ: ಡಾ. ಅನುರಾಧಾ ಕುರುಂಜಿ Read More »

ಕುಸಿದು ಬಿದ್ದು ಉಪನ್ಯಾಸಕ ಮೃತ್ಯು

ಸುಳ್ಯ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದ ಉಪನ್ಯಾಸಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೈಸೂರಿನ ಕೆ. ಆರ್. ನಗರದ ಬೇರ್ಯ ನಿವಾಸಿ ಮಂಜು (42) ಎಂಬವರೇ ‌ಮೃತ ದುರ್ದೈವಿ. ಗುರುವಾರ ತರಗತಿ ಮುಗಿಸಿದ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಹೀಗಾಗಿ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆದಿದ್ದರು. ಬಳಿಕ ಸ್ಥಳೀಯ ಮೆಡಿಕಲ್‌ಗೆ ಔಷಧ ಖರೀದಿಗೆ ಹೋಗಿದ್ದರು. ಅಲ್ಲಿ ಇದ್ದಕ್ಕಿದ್ದ ಹಾಗೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ ಅದಾಗಲೇ‌ ಅವರು

ಕುಸಿದು ಬಿದ್ದು ಉಪನ್ಯಾಸಕ ಮೃತ್ಯು Read More »

ಗ್ಯಾರೇಜ್‌ನಲ್ಲಿ ಕಳ್ಳತನ ಮಾಡಿದವ ಸೆರೆ : 16 ಲ.ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ಸುರತ್ಕಲ್‌ನ ಹೊಸಬೆಟ್ಟು ಪರಿಸರದ ಗ್ಯಾರೇಜ್‌ನಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಓರ್ವನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದು, ಕಳವು ಗೈದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ರಾಜಸ್ಥಾನದ ಜೋದ್‌ಪುರ ನಿವಾಸಿ ಸದ್ಯ ಬೆಂಗಳೂರಿನ ಬನಶಂಕರಿ ಶ್ರೀನಿವಾಸ ನಗರದಲ್ಲಿ ವಾಸವಾಗಿರುವ ಮುಖೇಶ್ ದಾಸ್ (46) ಬಂಧಿತ ಆರೋಪಿ. ಆರೋಪಿಯ ಬಳಿಯಿದ್ದ 96 ಸಾವಿರ ರೂ. ಮೌಲ್ಯದ ವಾಹನಗಳ ಬಿಡಿಭಾಗಗಳು, ಕೃತ್ಯಕ್ಕೆ ಬಳಸಿದ್ದ 15 ಲಕ್ಷ ರೂ.‌ಮೌಲ್ಯದ ಈಚರ್ ಲಾರಿ ಸೇರಿದಂತೆ 15.96 ಲಕ್ಷ ರೂ.‌ಲಕ್ಷ ರೂ.‌ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ

ಗ್ಯಾರೇಜ್‌ನಲ್ಲಿ ಕಳ್ಳತನ ಮಾಡಿದವ ಸೆರೆ : 16 ಲ.ರೂ. ಮೌಲ್ಯದ ಸೊತ್ತು ವಶ Read More »

ಸ್ಲೀಪರ್‌ ಬಸ್‌ನಲ್ಲಿದ್ದ 90 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

ಬಸ್ಸನ್ನು ಹಿಂಬಾಲಿಸಿಕೊಂಡು ಬಂದು ಬ್ಯಾಗ್‌ ಎತ್ತಿಕೊಂಡು ಪಲಾಯನ ಮಾಡಿದ ಖದೀಮರು ಮಂಗಳೂರು: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ ಮಂಗಳೂರಿನ ಇಬ್ಬರು ಪ್ರಯಾಣಿಕರ 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ ಹೊರಹೊಲಯದಲ್ಲಿ ಹೊಟೇಲಿನ ಎದುರು ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್ ಮತ್ತು ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ಲೀಪರ್‌ ಬಸ್‌ನಲ್ಲಿದ್ದ 90 ಲ.ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಸುಳ್ಯ : ಕಳ್ಳತನ ಆರೋಪಿಗೆ ಜೈಲು ಶಿಕ್ಷೆ

ಸುಳ್ಯ: ಮನೆಗಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ನೆರಿಯ ನಿವಾಸಿ ಶರತ್ ಎಸ್. (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಳವು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಕಲಂ 457 ಐಪಿಸಿ ರಲ್ಲಿ ಆರೋಪಿಗೆ ಆರು ತಿಂಗಳ ಸಾದ ಸಜೆ ಹಾಗೂ 500 ದಂಡ, ಕಲಂ 380 ಐಪಿಸಿಯಲ್ಲಿ 10 ತಿಂಗಳ ಸಾದಾ ಸಜೆ ಹಾಗೂ 500 ರೂ.ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ 10 ದಿನಗಳ ಹೆಚ್ಚುವರಿ ಸಜೆ

ಸುಳ್ಯ : ಕಳ್ಳತನ ಆರೋಪಿಗೆ ಜೈಲು ಶಿಕ್ಷೆ Read More »

error: Content is protected !!
Scroll to Top