ದಕ್ಷಿಣ ಕನ್ನಡ

ವಿದ್ಯುತ್‍ ಕಂಬಕ್ಕೆ ಗೂಡ್ಸ್ ಲಾರಿ ಡಿಕ್ಕಿ

ಸುಳ್ಯ: ಗೂಡ್ಸ್ ಲಾರಿಯೊಂದು 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಜಾಲ್ಸೂರ್ ಗ್ರಾಮದ ವಿನೋಬಾನಗರದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಂಬ ತುಂಡಾಗಿದೆ ಎನ್ನಲಾಗಿದೆ. ಅಪಘಾತದಿಂದ ಈ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ವಿದ್ಯುತ್‍ ಕಂಬಕ್ಕೆ ಗೂಡ್ಸ್ ಲಾರಿ ಡಿಕ್ಕಿ Read More »

ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ | ಗೋ ಕಳ್ಳರ ಕೈಯಲ್ಲಿ ರಿವಾಲ್ವರ್ | ಗೋಮಾಂಸ ಮಾಫಿಯಾದ ಕುರಿತು ಸಿಐಡಿ ತನಿಖೆಗೆ ಒಪ್ಪಿಸಬೇಕು : ಡಾ.ಭರತ್ ಶೆಟ್ಟಿ ವೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಹತ್ಯೆ, ಗೋ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಗೋಕಳ್ಳರು ರಿವಾಲ್ವರ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಪೊಲೀಸ್ ಇಲಾಖೆಯ ಬದಲು ಬಜರಂಗದಳ ಸಂಘಟನೆ ಪತ್ತೆ ಮಾಡಿ ಕೊಡುವಂತಹ ಪರಿಸ್ಥಿತಿ ಉಂಟಾಗಿದೆ. ಅಪರಾಧಿಗಳು ಭಯವಿಲ್ಲದೆ ಹಾಡು ಹಗಲೇ ರಾಜಾರೋಷವಾಗಿ ಸಾಗಾಟ ಮಾಡುತ್ತಿದ್ದು, ರಾಜ್ಯದಲ್ಲಿ ಕಾನೂನು ಇದೆಯೆ ಎಂಬ ಬಗ್ಗೆ ಅನುಮಾನ ಉಂಟಾಗುತ್ತಿದ್ದು, ಅಕ್ರಮ ಗೋಸಾಗಾಟ ಗೋಹತ್ಯೆಯ ಪ್ರಕರಣಗಳನ್ನು ನಿರ್ಲಕ್ಷ್ಯಮಾಡುವುದರಿಂದ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರಬಹುದು ಎಂದು ಡಾ. ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ | ಗೋ ಕಳ್ಳರ ಕೈಯಲ್ಲಿ ರಿವಾಲ್ವರ್ | ಗೋಮಾಂಸ ಮಾಫಿಯಾದ ಕುರಿತು ಸಿಐಡಿ ತನಿಖೆಗೆ ಒಪ್ಪಿಸಬೇಕು : ಡಾ.ಭರತ್ ಶೆಟ್ಟಿ ವೈ Read More »

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ

ಉಪ್ಪಿನಂಗಡಿ: ಇಲ್ಲಿನ  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಇಚ್ಚೂರು  ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ  ಕರ್ಣ ದಿಗ್ವಿಜಯ ತಾಳಮದ್ದಳೆ ಜರಗಿತು.  ಭಾಗವತರಾಗಿ ಸುರೇಶ್ ರಾವ್. ಬಿ, ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಕೌರವ), ಸತೀಶ ಶಿರ್ಲಾಲು(ಕರ್ಣ 1), ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ 2), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ದ್ರುಪದ),

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ Read More »

ಮಾಡಾವು : ಯಕ್ಷಗಾನ ತರಬೇತಿ ಉದ್ಘಾಟನೆ

ಪುತ್ತೂರು : ಅಭಿನವ ಕೇಸರಿ ಮಾಡಾವು ಇದರ ವತಿಯಿಂದ ಅಯ್ಯಪ್ಪ ಭಜನಾ ಮಂದಿರ ಮಾಡಾವು ಇದರ ಸಹಯೋಗದಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿಯ ಉದ್ಘಾಟನೆ ಅಭಿನವ ಕೇಸರಿ ಯಕ್ಷ ಕಲಾ ಕೇಂದ್ರದಲ್ಲಿ ನಡೆಯಿತು. ಯಕ್ಷಗಾನ ತರಬೇತಿ ಕಾರ್ಯಕ್ರಮವನ್ನು ಕೆದಂಬಾಡಿ-ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕೆಯ್ಯೂರು ಗ್ರಾ.ಪಂ.ಅಧ್ಯಕ್ಷ ಶರತ್ ಕುಮಾರ್ ವಹಿಸಿದ್ದರು. ಅತಿಥಿಗಳಾಗಿ ಕೆಯ್ಯೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ  ಜಯಂತಿ ಎಸ್.ಭಂಡಾರಿ, ಸದಸ್ಯೆ ಮೀನಾಕ್ಷಿ ವಿ.ರೈ, ಅಯ್ಯಪ್ಪ ಭಜನಾ ಮಂದಿರದ

ಮಾಡಾವು : ಯಕ್ಷಗಾನ ತರಬೇತಿ ಉದ್ಘಾಟನೆ Read More »

ಕರ್ನಾಟಕ ರಾಜ್ಯ ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ & ಸೈನ್ಸ್ ಬೆಂಗಳೂರಿನ ಬೋರ್ಡ್ ಆಫ್ ಸ್ಟಡೀಸ್ ಚೆಯರ್ ಮೆನ್ ಆಗಿ ಡಾ. ಡಿ. ವಿ. ಲೀಲಾಧರ್ ಆಯ್ಕೆ

ಸುಳ್ಯ: ಕರ್ನಾಟಕ ರಾಜ್ಯ ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ & ಸೈನ್ಸ್ ಬೆಂಗಳೂರು ಇದರ ಬೋರ್ಡ್ ಆಫ್ ಸ್ಟಡೀಸ್ ಚೆಯರ್ ಮೆನ್ ಆಗಿ ಸುಳ್ಯದ ಜನಪ್ರಿಯ ವೈದ್ಯ ಡಾ. ಡಿ ವಿ ಲೀಲಾಧರ್ ಆಯ್ಕೆಯಾಗಿದ್ದಾರೆ. ರಾಜ್ಯ ವೈದ್ಯಕೀಯ ವಿಭಾಗದಲ್ಲಿಯೇ ಪರಮೋಚ್ಛ ಹುದ್ದೆ ಇದಾಗಿದ್ದು , ರಾಜ್ಯದ ನೂರಾರು ಮಂದಿ ಪ್ರತಿಭಾನ್ವಿತ ವೈದ್ಯರುಗಳ ಪೈಕಿ ಡಾ. ಡಿ ವಿ ಲೀಲಾಧರ್ ಆಯ್ಕೆಯಾಗಿದ್ದಾರೆ. ಡಾ. ಡಿ .ವಿ ಲೀಲಾಧರ್ ಮುಖ್ಯಸ್ಥರಾಗಿರುವ ಪೀಠದಲ್ಲಿ ಸದಸ್ಯರುಗಳಾಗಿ 14 ಮಂದಿ ಇದ್ದು ಇಬ್ಬರು

ಕರ್ನಾಟಕ ರಾಜ್ಯ ರಾಜೀವ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ & ಸೈನ್ಸ್ ಬೆಂಗಳೂರಿನ ಬೋರ್ಡ್ ಆಫ್ ಸ್ಟಡೀಸ್ ಚೆಯರ್ ಮೆನ್ ಆಗಿ ಡಾ. ಡಿ. ವಿ. ಲೀಲಾಧರ್ ಆಯ್ಕೆ Read More »

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಎನ್ನಲಾಗಿದೆ. ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು. ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಶೋಭಾ ಸೀರೆಯ ಸೆರಗು ಸಿಲುಕಿ ಪ್ರಾಣಬಿಟ್ಟಿದ್ದಾರೆ. ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಯಂತ್ರ ಶೋಭಾರನ್ನು ಎತ್ತಿ ಬಿಸಾಡಿದ್ದು, ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.  ಕಳೆದ ಮೂರು

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ  ಸಹಾಯಧನ ಮಂಜೂರಾತಿ ಪತ್ರ ವಿತರಣೆ

ಮಿತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಿತ್ತೂರು ಇದರ  ಸಭಾಂಗಣ ರಚನೆಗೆ ಒಂದು  ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಮಾ.27 ಗುರುವಾರದಂದು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಯಿಣಿ ಸರೋಜಾರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್‍ ಅವರು ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ವಲಯ  ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ, ಶೌರ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ  ಸಹಾಯಧನ ಮಂಜೂರಾತಿ ಪತ್ರ ವಿತರಣೆ Read More »

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು

ಸುಳ್ಯ: ಲಾರಿ ಮತ್ತು ಬೈಕ್ ನಡುವೆ ತೀರ್ವ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂದು ಪತ್ತೆಹಚ್ಚಲಾಗಿದೆ. ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಯುವಕ ಬಿದ್ದಿದ್ದಾನೆ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು Read More »

ಬಸ್ಸಿನಲ್ಲಿ ಯುವತಿಗೆ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸ್ಥಳೀಯರು ಗೂಸ ನೀಡಿ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಮೋನು ಎಂಬಾತನೆ ಕಿರುಕುಳ ನೀಡಿದ ಆರೋಪಿಯಾಗಿದ್ದಾನೆ. ಆರೋಪಿ ಮೋನು ಪುತ್ತೂರಿನಿಂದ ಬಿಸಿ ರೋಡು ತನಕ ಬರುವ ವೇಳೆ ಯುವತಿ ಸೀಟಿನಲ್ಲಿ ಕುಳಿತು ಕಿರುಕುಳ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಸ್ಸಿನಲ್ಲಿ ಯುವತಿಗೆ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ Read More »

ವಿದ್ಯುತ್‍ ಕಳ್ಳತನ : ಗುತ್ತಿಗೆದಾರ ಸಹಿತ ಬಳಕೆದಾರನ ಮೇಲೆ ಪ್ರಕರಣ ದಾಖಲು

ಸವಣೂರು: ವ್ಯಕ್ತಿಯೊಬ್ಬರು ವಿದ್ಯುತ್‍ ಕಳ್ಳತನ ಮಾಡಿರುವುದನ್ನು ಮೆಸ್ಕಾಂ ಜಾಗೃತ ದಳದ ಸಿಬ್ಬಂದಿಗಳು ಕಡಬ ತಾಲೂಕು ಸವಣೂರು ಗ್ರಾಮದ ಕಣಿಮಜಲು ಎಂಬಲ್ಲಿ ಪತ್ತೆಹಚ್ಚಿದ್ದಾರೆ. ಅಬ್ದುಲ್ ಆಸೀಫ್ ರೆಂಜಾಲಾಡಿ ಎಂಬವರ ತೋಟದಲ್ಲಿ ವಿದ್ಯುತ್ ಕಳ್ಳತನ ಮಾಡಿರುವುದರ ಕುರಿತು ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ ಜಾಗೃತದಳ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ. ವಿದ್ಯುತ್ ಕಂಬ ಅಳವಡಿಸಿ ಅನಧಿಕೃತವಾಗಿ ಸಂಪರ್ಕ ನೀಡಿದ ಗುತ್ತಿಗೆದಾರ ಬೈಟ್ ಪವರ್ ಪ್ಲಸ್ ತಾಜುದ್ದೀನ್ ಕೂರತ್ ಹಾಗೂ ಅಬ್ದುಲ್ ಆಸೀಫ್ ರೆಂಜಲಾಡಿಯವರ ಮೇಲೆ ಪ್ರಕರಣ ದಾಖಲಾಗಿದೆ.

ವಿದ್ಯುತ್‍ ಕಳ್ಳತನ : ಗುತ್ತಿಗೆದಾರ ಸಹಿತ ಬಳಕೆದಾರನ ಮೇಲೆ ಪ್ರಕರಣ ದಾಖಲು Read More »

error: Content is protected !!
Scroll to Top