ಮಾಣಿ ಶ್ರೀರಾಮಚಂದ್ರಾಪುರ ಮಠದ ಗುಡ್ಡಕ್ಕೆ ಬೆಂಕಿ ಅವಘಡ
ಬಂಟ್ವಾಳ: ತಾಲೂಕಿನ ಮಾಣಿ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಗುಡ್ಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಹಿನ್ನಲೆ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 1,000 ಕೋಕಂ ಸಸಿಗಳು ಸುಟ್ಟೋಗಿದೆ ಎನ್ನಲಾಗಿದೆ. ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಹೊತ್ತಿಕೊಂಡ ಬೆಂಕಿ ನಂದಿ ಹೋಗಲಿಲ್ಲ ಎನ್ನಲಾಗಿದೆ. ತೀವ್ರ ಶಾಖದಿಂದಾಗಿ ಬೆಂಕಿ ಬೆಟ್ಟದಾದ್ಯಂತ ಹರಡಿದೆ. ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಬೆಂಕಿಯಲ್ಲಿ ಸುಮಾರು 50 ಹಣ್ಣು ಬಿಡುವ […]
ಮಾಣಿ ಶ್ರೀರಾಮಚಂದ್ರಾಪುರ ಮಠದ ಗುಡ್ಡಕ್ಕೆ ಬೆಂಕಿ ಅವಘಡ Read More »










