ದಕ್ಷಿಣ ಕನ್ನಡ

ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ನಡುವೆ ಅಪಘಾತ |  ನಾಲ್ಕು ಮಂದಿಗೆ ಗಾಯ

ಕಡಬ: ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ಕಾರು ಪರಸ್ಪರ ಡಿಕ್ಕಿಯಾದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾಮದ ಗಂಡಿಬಾಗಿಲು ಬಳಿ ನಡೆದಿದೆ. ಘಟನಾನುಸಾರವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 4 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕಡಬ ತಾಲೂಕು ಆಲಂಕಾರು ನಿವಾಸಿಗಳಾದ ಪದ್ಮನಾಭ, ಸುದರ್ಶನ್, ಚೇತನ್, ಸತೀಶ್ ಎಂದು ಎನ್ನಲಾಗಿದೆ. ಗಾಯಗೊಂಡವರ ಪೈಕಿ ಗಂಭೀರ ಗಾಯಗಳಾಗಿರುವ ಪದ್ಮನಾಭರವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಮೂಲದ ಯಾತ್ರಿಕರು ಟೆಂಪೋ ಟ್ರಾವೆಲರ್‌ನಲ್ಲಿ ಸುಬ್ರಹ್ಮಣ್ಯ […]

ಟೆಂಪೋ ಟ್ರಾವೆಲರ್ ಮತ್ತು ಮಾರುತಿ-800 ನಡುವೆ ಅಪಘಾತ |  ನಾಲ್ಕು ಮಂದಿಗೆ ಗಾಯ Read More »

ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ

ಬೆಳ್ತಂಗಡಿ: ಒಂದೆಡೆ ಆರ್ಥಿಕ ಸಮಸ್ಯೆ, ಇನ್ನೊಂದೆಡೆ ಅನಾರೋಗ್ಯದಿಂದಾಗಿ ನಿದ್ರೆ ಮಾತ್ರೆ ಸೇವಿಸಿದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಮೃತಪಟ್ಟವರು. ಪುತ್ರ ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ, (58) ಅವರು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಯಾಣಿ ಮತ್ತು ಜಯರಾಂ ಅವರ ಕೂಳೂರಿನ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು

ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ Read More »

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ

ಕಡಬ: ತಾಲೂಕಿನ ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ನೇಮೋತ್ಸವ ಮೇ 12 ರಿಂದ 16 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಇಂದು ಬೆಳಿಗ್ಗೆ 9.30 ಕ್ಕೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ಹೊರಟು ಸವಣೂರು ಪುದುಬೆಟ್ಟು ಬಸದಿಯ ಮೂಲಕ ದೈವಸ್ಥಾನಕ್ಕೆ ಆಗಮಿಸಿ ಶ್ರೀ ದೈವಸ್ಥಾನಕ್ಕೆ ಸಮರ್ಪಣೆಯಾಯಿತು. ಸಂಜೆ ಅಲಂಕಾರ ಸೇವೆ, ಸ್ವಚ್ಛತೆ, ತಂತ್ರಿಗಳ ಆಗಮನ, ರಾತ್ರಿ 7

ಮೇ 12 ರಿಂದ 16 : ಆರೇಲ್ತಡಿ ಕೆಡೆಂಜೊಡಿತ್ತಾಯ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ನೇಮೋತ್ಸವ | ಇಂದು ನಡೆಯಿತು ಬೃಹತ್ ಹೊರೆಕಾಣಿಕೆ ಮೆರವಣಿಗೆ Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಅರಂತೋಡು ಗ್ರಾಮದ ಕಿರ್ಲಾಯದಲ್ಲಿ ನಡೆದಿದೆ. ಮೃತಪಟ್ಟವರು ಅಡಬಳೆ ವಾಸುದೇವ ಎನ್ನಲಾಗಿದೆ.  ತೆಂಗಿನಕಾಯಿ ತೆಗೆಯಲೆಂದು ಮರಕ್ಕೆ ಹತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣ ವಾಸುದೇವ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 75ನೇ ಕಾರ್ಯಕ್ರಮವಾಗಿ ಗಾಂಡಿವ ನಿಂದನೆ ತಾಳಮದ್ದಳೆ ಇಚ್ಚ್ಯೂರು  ಶ್ರೀಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜರಗಿತು. ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾಗವತರಾಗಿ ಸುರೇಶ್ ರಾವ್ ಬಿ, ನಿತೀಶ್ ಕುಮಾರ್ ವೈ, ಪದ್ಮನಾಭ ಕುಲಾಲ್ ಇಳಂತಿಲ ಹೀಮ್ಮೆಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿ ಭಟ್ ಉಪ್ಪಿನಂಗಡಿ  ಹಾಗೂ ಅರ್ಥಧಾರಿಗಳಾಗಿ ಜಬ್ಬಾರ್ ಸಮೊ (ಅರ್ಜುನ), ದಿವಾಕರ ಆಚಾರ್ಯ

ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ Read More »

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್

ಸುಳ್ಯ : ಪಿಕಪ್ ವಾಹನವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಿನ್ನೆ (ಮೇ. 11) ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ನಡೆದಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವು ಬಳಿ ಸಮೀಪಿಸುತ್ತಿದ್ದಂತೆ ಮುಂಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಚಾಲಕನು ಕೂಡಲೇ ವಾಹನ ನಿಲ್ಲಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಗ್ನಿಯ ತೀವ್ರತೆಗೆ ಪಿಕಪ್ ವಾಹನ ಸಂಪೂರ್ಣ ಸುಟ್ಟು ಹೋಗಿದೆ ಎನ್ನಲಾಗಿದೆ

ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಟಿಪ್ಪರ್ Read More »

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್

ಮಂಗಳೂರು : ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ವಿಷಯನುಸಾರವಾಗಿ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. *ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದಿರೆ

ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ | ಆರೋಪಿ ಅರೆಸ್ಟ್ Read More »

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ

ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು,  ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ Read More »

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..!

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಡೆಯುತ್ತಿದ್ದ ವೇಳೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ ಐ ಠಾಣಾ ವ್ಯಾಪ್ತಿಯ ಪಳಿಕೆ ಎಂಬಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಬಳಿಕ ವಿಟ್ಲ ಠಾಣೆಯಲ್ಲಿ ಮಧ್ಯವರ್ತಿ ಮಾಡುತ್ತಿರುವ ಈ ಹಿಂದೆ ಪಿರಿಯಾಪಟ್ಟಣ ಮತ್ತು ಉಪ್ಪಿನಂಗಡಿಯಲ್ಲಿ ಹನಿಟ್ರಾಪ್ ನಡೆಸಿ ಸಿಕ್ಕಿಬಿದ್ದಿರುವ ಆರೋಪಿ ವಿಟ್ಲದ ಜಮಾಲ್ ಜೊತೆ ಎಸೈ ಅವರು ಸೇರಿಕೊಂಡು ಜುಗಾರಿ ಆರೋಪಿಗೆ ಕರೆ ಮಾಡಿದ್ದಾರೆ. ಜಮಾಲ್ ಜೊತೆ ಮಾತುಕತೆ ನಡೆಸಿ ಮೂವತ್ತು ಸಾವಿರ ನೀಡಬೇಕು.

ಹನಿ ಟ್ರ್ಯಾಪ್ ನಡೆಸಿ ಪೊಲೀಸರ ದಲ್ಲಾಳಿಯಂತೆ ವರ್ತಿಸಿದ ವಿಟ್ಲದ ನಟೋರಿಯಸ್ ರೌಡಿ ಶೀಟರ್ ಜಮಾಲ್..! Read More »

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು

ವಿಟ್ಲ: ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್ ಗೆ ಬೀಗ ಹಾಕುವ ವೇಳೆ ವಿಚಾರಿಸಲು ಬಂದ ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ವಿಕೃತಿ ಮೆರೆದ ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ತಿಳಿದು ಬಂದಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದರಿಂದ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದಾರೆ. ಇದನ್ನು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ | ಪ್ರಕರಣ ದಾಖಲು Read More »

error: Content is protected !!
Scroll to Top