ದಕ್ಷಿಣ ಕನ್ನಡ

ಟೋಲ್‌ಗೇಟ್‌ ವಿರುದ್ಧ ಭಾರಿ ಪ್ರತಿಭಟನೆ : ಕಾಸರಗೋಡು-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಆರಿಕ್ಕಾಡಿಯಲ್ಲಿ ಟೋಲ್‌ ವಸೂಲಿ ಶುರುವಾದ ದಿನವೇ ಪ್ರತಿಭಟನೆಯ ಬಿಸಿ ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಬಳೆ ಸಮೀಪ ಆರಿಕ್ಕಾಡಿಯಲ್ಲಿ ಟೋಲ್‌ ವಸೂಲು ಮಾಡುವುದನ್ನು ಪ್ರತಿಭಟಿಸಲು ಸೋಮವಾರ ಬೆಳಗ್ಗೆಯೇ ಸಾವಿರಾರು ಜನರು ಜಮಾಯಿಸಿದ ಪರಿಣಾಮವಾಗಿ ಮಂಗಳೂರು-ಕಾಸರಗೋಡು ನಡುವೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಆರಿಕ್ಕಾಡಿಯಲ್ಲಿ ಇಂದಿನಿಂದ ಟೋಲ್‌ ವಸೂಲಿ ಶುರುವಾಗಿದೆ. ಈಗಾಗಲೇ ಕೇರಳ-ಕರ್ನಾಟಕ ಗಡಿಯಾಗಿರುವ ತಲಪ್ಪಾಡಿಯಲ್ಲಿ ಟೋಲ್‌ಗೇಟ್‌ ಇದ್ದು, ಇಲ್ಲಿಂದ ಬರೀ 20 ಕಿ.ಮೀ. ದೂರದಲ್ಲಿರುವ ಆರಿಕ್ಕಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇನ್ನೊಂದು ಟೋಲ್‌ಗೇಟ್‌ ಹಾಕಿದೆ. ಎರಡು ಟೋಲ್‌ಗೇಟ್‌ಗಳ […]

ಟೋಲ್‌ಗೇಟ್‌ ವಿರುದ್ಧ ಭಾರಿ ಪ್ರತಿಭಟನೆ : ಕಾಸರಗೋಡು-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ Read More »

ಬಾಂಗ್ಲಾದೇಶದವ ಎಂದು ಜಾರ್ಖಂಡ್‌ನ ಕಾರ್ಮಿಕನ ಮೇಲೆ ಹಲ್ಲೆ

ದೈಹಿಕ, ಮಾನಸಿಕ ಹಿಂಸೆ ನೀಡಿದ ನಾಲ್ವರ ವಿರುದ್ಧ ಕೇಸ್‌ ಮಂಗಳೂರು : ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಭಾವಿಸಿ ನಾಲ್ವರು ವ್ಯಕ್ತಿಗಳು ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಹಲ್ಲೆ ಮಾಡಿದವರು ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ನಾಲ್ವರು

ಬಾಂಗ್ಲಾದೇಶದವ ಎಂದು ಜಾರ್ಖಂಡ್‌ನ ಕಾರ್ಮಿಕನ ಮೇಲೆ ಹಲ್ಲೆ Read More »

ಮಂಗಳೂರು : ಸುಟ್ಟ ಗಾಯಕ್ಕೊಳಗಾಗಿದ್ದ ಎಎಸ್‌ಐ ಸಾವು

ಮಂಗಳೂರು: ಸುಟ್ಟ ಗಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಅವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ನಗರದ ಕೆಪಿಟಿ ಬಳಿಯ ವ್ಯಾಸ ನಗರದ ಮನೆಯಲ್ಲಿ ಡಿ.28ರಂದು ತರಗೆಲೆಯನ್ನು ಸುಡುವ ವೇಳೆ ಬೆಂಕಿ ಅವಘಡಕ್ಕೊಳಗಾಗಿ ತೀವ್ರ ತರದ ಸುಟ್ಟ ಗಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಾಸರಗೋಡು ಜಿಲ್ಲೆಯ ಕಾವುಗೋಳಿಯ ನಿವಾಸಿಯಾಗಿದ್ದ ಹರಿಶ್ಚಂದ್ರ ಬೈಕಂಪಾಡಿಯಲ್ಲಿ ನೆಲೆಸಿದ್ದರು. ಕೆಲವು ವರ್ಷಗಳ ಹಿಂದೆ

ಮಂಗಳೂರು : ಸುಟ್ಟ ಗಾಯಕ್ಕೊಳಗಾಗಿದ್ದ ಎಎಸ್‌ಐ ಸಾವು Read More »

ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ

ತಲೆದಿಂಬಿನಿಂದ ಉಸಿರುಗಟ್ಟಿಸಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿ ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಪ್ರಕರಣ ಆಕಸ್ಮಿಕ ಸಾವು ಅಲ್ಲ ಬದಲಾಗಿ ಕೊಲೆ ಎಂಬುದು ಬಯಲಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಶರ್ಮಿಳಾ (34) ಕೊಲೆಯಾದ ಮಹಿಳೆ. ಅವರು ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಅಕ್ಸೆಂಚರ್ ಸಾಫ್ಟ್‌ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸಕ್ಕೆ ಸೇರಿದ್ದರು. ಜನವರಿ 3ರ

ಮಂಗಳೂರಿನ ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಕೊಲೆ Read More »

ಅಕ್ರಮ ಮರಳುಗಾರಿಕೆ ಮೇಲೆ ದಾಳಿ : ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಬೆಳ್ತಂಗಡಿ : ಸರ್ಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿ ಜೊತೆ ಬೆಳ್ತಂಗಡಿ ಸಬ್‌ಇನ್ಸ್‌ಪೆಕ್ಟರ್ ಆನಂದ್ ಎಂ ರೌಂಡ್‌ ಕರ್ತವ್ಯದಲ್ಲಿರುವಾಗ ಮಾಹಿತಿದಾರರಿಂದ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಚಾಚಿ ಮೂಲಕ ಟಿಪ್ಪರ್ ಲಾರಿಗೆ ತುಂಬಿಸಿ

ಅಕ್ರಮ ಮರಳುಗಾರಿಕೆ ಮೇಲೆ ದಾಳಿ : ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ Read More »

ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಚಾಲಕ ಸಹಿತ ಮೂವರು ಅದೃಷ್ಟವಶಾತ್‌ ಪಾರು ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆ ಸಂಭವಿಸಿದೆ. ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಚಾರ್ಮಾಡಿ ಘಾಟಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಲಾರಿಯ ಟಯರ್‌ನ ಭಾಗದಿಂದ ಆರಂಭವಾದ

ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ Read More »

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ಬಂದು ನಿಂತ ಕಾಡಾನೆ

ತಾಸಿಗೂ ಅಧಿಕ ಹೊತ್ತು ಟ್ರಾಫಿಕ್‌ ಜಾಮ್‌, ವಾಹನ ಸವಾರರಿಗೆ ಭೀತಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ಮಧ್ಯೆ ಶುಕ್ರವಾರ ರಾತ್ರಿ ಭಾರಿ ಗಾತ್ರದ ಕಾಡಾನೆ ರಸ್ತೆ ಮಧ್ಯೆ ಕಾಣಿಸಿಕೊಂಡಿದ್ದು,ವಾಹನ ಸವಾರರಲ್ಲಿ ಭೀತಿ ಆವರಿಸಿದೆ. ಶುಕ್ರವಾರ ರಾತ್ರಿ ಸುಮಾರು 9.45ರ ವೇಳೆಗೆ ಮರವನ್ನು ಮುರಿದು ರಸ್ತೆ ಮಧ್ಯೆ ನಿಂತ ಕಾಡಾನೆ, ಒಂದು ತಾಸಿಗೂ ಅಧಿಕ ಕಾಲ ಅಲ್ಲೇ ಅಲೆಯುತ್ತಿತ್ತು. ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಭಾರಿ ಟ್ರಾಫಿಕ್

ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಮಧ್ಯೆ ಬಂದು ನಿಂತ ಕಾಡಾನೆ Read More »

ಮೇಯಲು ಬಿಟ್ಟಿದ್ದ ದನಗಳನ್ನು ಕದ್ದವ ಸೆರೆ

ವಿಟ್ಲ : ಮೇಯಲು ಬಿಟ್ಟಿದ್ದ ಹಸುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಉಳ್ಳಾಲ ನಿವಾಸಿ ಝಲ್ಫಾನ್ ಮಾಲಿಕ್ (30) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈತ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಅವಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ್ ರೈ ಹಾಗೂ ನಾರಾಯಣ ನಾಯ್ಕ್ ಎಂಬವರ ಒಟ್ಟು 4 ದನಗಳನ್ನು ಕಳ್ಳತನ ಮಾಡಿದ ಅರೋಪಿಯಾಗಿದ್ದು, ಈತನನ್ನು ವಿಟ್ಲ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೇಯಲು ಬಿಟ್ಟಿದ್ದ ದನಗಳನ್ನು ಕದ್ದವ ಸೆರೆ Read More »

ಕುಖ್ಯಾತ ಕ್ರಿಮಿನಲ್‌ ವಿಟ್ಲದಿಂದ ಮೂಡಿಗೆರೆಗೆ ಗಡಿಪಾರು

ವಿಟ್ಲ: ವಿಟ್ಲ ಕಸಬ ಗ್ರಾಮದ ನಿವಾಸಿ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬ ಕ್ರಿಮಿನಲ್‌ನನ್ನು ಪೊಲೀಸರು ಚಿಕ್ಕಮಗಳೂರಿಗೆ ಗಡಿಪಾರು ಮಾಡಿದ್ದಾರೆ. ಈತನ ವಿರುದ್ಧ ಹಲ್ಲೆ, ನಿಷೇಧಿತ ಮಾದಕ ವಸ್ತುಗಳ ಸೇವನೆ ಮತ್ತು NDPS ಕಾಯ್ದೆಯಡಿ ಉಲ್ಲಂಘನೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಿವೆ. ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಗಡಿಪಾರು ಮಾಡಲಾಗಿದೆ. ವಿಟ್ಲ ಕಸಬ ಗ್ರಾಮ ಬಂಟ್ವಾಳ ತಾಲೂಕಿನ ಅಬ್ದುಲ್‌ ಖಾದರ್‌ ಗಡಿಪಾರು ಆದ ಆರೋಪಿ. ಆರೋಪಿ ವಿರುದ್ಧ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಎನ್‌ಡಿಪಿಎಸ್

ಕುಖ್ಯಾತ ಕ್ರಿಮಿನಲ್‌ ವಿಟ್ಲದಿಂದ ಮೂಡಿಗೆರೆಗೆ ಗಡಿಪಾರು Read More »

ತಾಯಿ ಮತ್ತು ಮಗಳು ನಾಪತ್ತೆ: ದೂರು ದಾಖಲು

ವಿಟ್ಲ: ತಾಯಿ ಮತ್ತು ಮಗಳು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾರಮ್ಮ ಮತ್ತು ನೆಫಿಸತುಲ್ ಮಿಶ್ರಿಯಾ ಅವರು ನಾಪತ್ತೆಯಾಗಿರುವುದಾಗಿ ‌ಸಾರಮ್ಮ ಅವರ ಪುತ್ರ ಕೊಳ್ಳಾಡು ಅಗರಿ ಮನೆ ಸಾಲೆತ್ತೂರು ನಿವಾಸಿ ಮಹಮ್ಮದ್ ಮುಸ್ತಫಾ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ‘ಜ. 5 ರಂದು ಬೆಳಗ್ಗೆ ತಾನು ನಾಟೆಕಲ್ ಮದ್ರಸಾಗೆ ಪಾಠ ಮಾಡಲು ಹೋಗಿದ್ದು, ಹಿಂದಿರುಗಿ ಬಂದಾಗ ತಾಯಿ ಮತ್ತು ಅಕ್ಕ ಮನೆಯಲ್ಲಿದ್ದರು. ಆದರೆ ಸಂಜೆ ವೇಳೆ ಇರಾದಿಂದ ಪತ್ನಿಯನ್ನು ತವರು ಮನೆಯಿಂದ ಕರೆದುಕೊಂಡು

ತಾಯಿ ಮತ್ತು ಮಗಳು ನಾಪತ್ತೆ: ದೂರು ದಾಖಲು Read More »

error: Content is protected !!
Scroll to Top