ದಕ್ಷಿಣ ಕನ್ನಡ

ಕೆಲಂಬೀರಿಯಲ್ಲಿ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ

ಕುದ್ಮಾರು : ಶ್ರೀ ಬ್ರಹ್ಮಬೈದೆರುಗಳ ಗರಡಿ , ಕೆಲಂಬೀರಿ ಕುದ್ಮಾರುವಿನಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಶ್ರೀ ಕೊಡಮಣಿತ್ತಾಯ ನೇಮೋತ್ಸವ ನಡೆಯಿತು. ಬಳಿಕ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ ನಡೆಯಲಿದ್ದು, ಸಂಜೆ 4 ಗಂಟೆಗೆ  ಶ್ರೀ ಬ್ರಹ್ಮಬೈದೆರುಗಳ ಭಂಡಾರ ತೆಗೆಯುವುದು, ರಾತ್ರಿ 6 ಗಂಟೆಗೆ ಪಂಚಲಿಂಗೇಶ್ವರ ಕುಣಿತ ಭಜನಾ ಮಕ್ಕಳ ತಂಡ, ಕುದ್ಮಾರು ಇವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 7ರಿಂದ ಗರಡಿಯಲ್ಲಿ ಗಂಧಪ್ರಸಾದ ವಿತರಣೆ, ರಾತ್ರಿ 8:30 ಅನ್ನಸಂತರ್ಪಣೆ,  ಇಂದು ರಾತ್ರಿ 9 ಗಂಟೆಗೆ ಶ್ರೀ ಬ್ರಹ್ಮಬೇದೆರುಗಳ […]

ಕೆಲಂಬೀರಿಯಲ್ಲಿ ಶ್ರೀ ಬ್ರಹ್ಮಬೈದೆರುಗಳ ನೇಮೋತ್ಸವ Read More »

ಅನಾರೋಗ್ಯದಿಂದ ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ ನಿಧನ

ನಂದಾವರ : ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಹಲವು ವರ್ಷಗಳಿಂದ ಅನಾರೋಗ್ಯ ಬಳಲುತಿದ್ದು, ಇಂದು (ಮಾ.15) ಶನಿವಾರ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದವರಾದ ವಿದ್ವಾಂಸ ಡಾ.ವಾಮನ ನಂದಾವರರವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಇವರು ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ತಮ್ಮ ಪದವಿ ವ್ಯಾಸಂಗವನ್ನು ಮಾಡಿದ್ದು, ನಂತರ ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿಎಡ್, ಕರ್ನಾಟಕ ವಿವಿಯಿಂದ ಎಂ.ಎ.ಕನ್ನಡ ಪದವಿ ಗಳಿಸಿದ್ದರು.

ಅನಾರೋಗ್ಯದಿಂದ ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ ನಿಧನ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಸಮಾಜಶಾಸ್ತ್ರ ವಿಭಾಗ, ವಿವೇಕಾನಂದ ಕಾಲೇಜು ಪುತ್ತೂರು, ಸಮಾಜಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ, ಒಡಂಬಡಿಕೆ ಕಾರ್ಯಕ್ರಮವಾಗಿ ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತೆಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ಎಂಬ ವಿಷಯದ ಕುರಿತು ಮಾ14  ರಂದು ಒಂದು ದಿನದ ಕಾರ್ಯಗಾರ  ನಡೆಯಿತು. ಎಂ ಎಲ್ ಟಿ ಸಿ ಕಾಲೇಜ್ ಉಜಿರೆ, ಇಲ್ಲಿನ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ Read More »

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ

ಸುಳ್ಯ: ತಾಲೂಕಿನ ಕುಂಬರ್ಚೋಡು ತಿರುವಿನಲ್ಲಿ ತಡ ರಾತ್ರಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದೂ ತಿಳಿದುಬಂದಿದೆ. ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್‌ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ ಮತ್ತು ಅಲ್ಲಿ ಬದಿಯ ಕಂದಕಕ್ಕೂ ಉರುಳಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ Read More »

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶರವೂರು ಜಾತ್ರೋತ್ಸವ

ಶರವೂರು : ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶರವೂರು ಜಾತ್ರೋತ್ಸವದ ಅಂಗವಾಗಿ ಶ್ರೀ ದೇವಿಯ ವರ್ಷಾವಧಿ ಉತ್ಸವ, ಪರಿವಾರ ದೈವಗಳಿಗೆ ಭಂಡಾರ ಹಿಡಿದು ನೇಮೋತ್ಸವ ಹಾಗೂ ಶ್ರೀ ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ಪೂಜೆ ಮಾ. 14 ರಿಂದ ಮಾ. 24 ರವರೆಗೆ ನಡೆಯಲಿದೆ. ಮಾ. 14 ರಂದು ಬೆಳಗ್ಗೆ 8 ಗಂಟೆಗೆ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ, ಕಲಶಾಭಿಷೇಕ, ಗೊನೆ ಮುಹೂರ್ತ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ಗಂಟೆಗೆ ಧ್ವಜಾರೋಹಣ, ಮಹಾಪೂಜೆ, ಭೂತಬಲಿ,

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶರವೂರು ಜಾತ್ರೋತ್ಸವ Read More »

ಸ್ಕೌಟ್ ಮತ್ತು ಬುಲ್ ಬುಲ್ ಅರ್ಹತಾ ಪತ್ರ ವಿತರಣೆ

ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು ಇಲ್ಲಿನ ಸ್ಕೌಟ್ ಮತ್ತು ಬುಲ್ ಬುಲ್ ಘಟಕದ ದ್ವಿತೀಯ ಸೋಪಾನ ಪರೀಕ್ಷೆಯಲ್ಲಿ ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಸೂರ್ಯಕುಮಾರ ಹಳೆಯಂಗಡಿ ಇವರ ಅಧ್ಯಕ್ಷತೆಯಲ್ಲಿ ವಿತರಿಸಲಾಯಿತು. ಅರುಣ್ ಪಿ ಆಚಾರ್ಯ ಮುಂಬೈ  ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಗುರುರಾಜ ಕೆ ಜೆ ಮಂಗಳೂರು, ಜನಾರ್ದನ ಬಜಕೂಡ್ಲು,ಸುಧೀಶ್, ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ, ಮುಖ್ಯ

ಸ್ಕೌಟ್ ಮತ್ತು ಬುಲ್ ಬುಲ್ ಅರ್ಹತಾ ಪತ್ರ ವಿತರಣೆ Read More »

ಕಲ್ಲಡ್ಕ ವಲಯದ  ಮಾಮೇಶ್ವರ  ಒಕ್ಕೂಟದ  ಉಮಾಮಹೇಶ್ವರ ದೇವಸ್ಥಾನದ  ಸಮುದಾಯ ಭವನ ರಚನೆಗೆ  ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ  ಅನುದಾನ ಮಂಜೂರು

ಕಲ್ಲಡ್ಕ  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಕಲ್ಲಡ್ಕ ವಲಯದ  ಮಾಮೇಶ್ವರ ಒಕ್ಕೂಟದ ಉಮಾಮಹೇಶ್ವರ ದೇವಸ್ಥಾನದ ಸಮುದಾಯ ಭವನ ರಚನೆಗೆ  ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ನೀಡಲಾಯಿತು. ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ರಮೇಶ್  ದೇವಸ್ಥಾನದ ಆಡಳಿತ ಸಮಿತಿಯವರಿಗೆ  ಕ್ಷೇತ್ರದಿಂದ ಮಂಜೂರಾಗಿರುವ ರೂ.1,50,000/- ಅನುದಾನದ ಮಂಜೂರಾತಿ ಪತ್ರವನ್ನು ದೇವಸ್ಥಾನದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ

ಕಲ್ಲಡ್ಕ ವಲಯದ  ಮಾಮೇಶ್ವರ  ಒಕ್ಕೂಟದ  ಉಮಾಮಹೇಶ್ವರ ದೇವಸ್ಥಾನದ  ಸಮುದಾಯ ಭವನ ರಚನೆಗೆ  ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ  ಅನುದಾನ ಮಂಜೂರು Read More »

ರಿಕ್ಷಾ – ಕಾರು ನಡುವೆ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ ಗಾಯ

ಮಾಣಿ: ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್‍ ಬಳಿ ನಡೆದಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

ರಿಕ್ಷಾ – ಕಾರು ನಡುವೆ ಡಿಕ್ಕಿ | ರಿಕ್ಷಾ ಚಾಲಕ ಗಂಭೀರ ಗಾಯ Read More »

ತುಳುನಾಡಿನ ರಂಗಭೂಮಿ ಹಾಗೂ ಚಲನಚಿತ್ರ ಹಾಸ್ಯ ಕಲಾವಿದ ವಿವೇಕ್‍  ಮಾಡೂರ್ ಹೃದಯಘಾತದಿಂದ ನಿಧನ

ಉಳ್ಳಾಲ: ತುಳು ಚಿತ್ರರಂಗದಲ್ಲಿ ನಟನೆಯ ಮೂಲಕ ಕುಬ್ಜ ದೇಹದಿಂದಲೇ ಕಲಾ ಪ್ರೇಮಿಗಳನ್ನು ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್‌ ಮಾಡೂರು (52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ತಮ್ಮ ಮನೆಯ ಶೌಚಾಲಯದಲ್ಲಿ ಬಿದ್ದಿದ್ದ ವಿವೇಕ್‌,  ನಿದ್ದೆಗೆ ಜಾರಿ ವಿಶ್ರಾಂತಿ ಪಡೆದಿದ್ದಾರೆ. ಬೆಳಗ್ಗೆ ಮನೆ ಮಂದಿ ಎಬ್ಬಿಸುವಾಗ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಟೆಲಿಫೋನ್‌ ಎಸ್‌ಟಿಡಿ ಬೂತ್‌ ನಡೆಸುತ್ತಿದ್ದ ವಿವೇಕ್‌ ಅವರು ಬೂತ್‌ ಮುಚ್ಚಿದ ನಂತರ ಅಣ್ಣನ ದಿನಸಿ ಅಂಗಡಿಯಲ್ಲಿ ಪ್ಲಾಸ್ಟಿಕ್‌ ಮನೆ

ತುಳುನಾಡಿನ ರಂಗಭೂಮಿ ಹಾಗೂ ಚಲನಚಿತ್ರ ಹಾಸ್ಯ ಕಲಾವಿದ ವಿವೇಕ್‍  ಮಾಡೂರ್ ಹೃದಯಘಾತದಿಂದ ನಿಧನ Read More »

ನಾಪತ್ತೆಯಾದ ನಿತೇಶ್‌ ಬೆಳ್ಚಾಡ  ಪತ್ತೆ

ಮಂಗಳೂರು :  ಪ್ಯಾರಾಮೆಡಿಕಲ್ ವಿದ್ಯಾರ್ಥಿ ನಿತೇಶ್‌ ಬೆಳ್ಚಾಡ  ಸುಮಾರು  ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ. ಮೂಡುಪೆರಾರ ನಿವಾಸಿ ನಿತೇಶ್ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಫೆಬ್ರವರಿ 13 ಕ್ಕೆ ನಾಪತ್ತೆಯಾಗಿದ್ದ ಈತನ ಸುಳಿವಿಗೆ ಪೊಲೀಸರು ವಿಶೇಷ ತಂಡ ರಚಿಸಿ ಅನೇಕ ಕಡೆ ತನಿಖೆ ನಡೆಸಿದ್ದರು ಮಾಹಿತಿ ಲಭಿಸಿರಲಿಲ್ಲ. ಆದರೆ ನಿತೇಶ್‍ ಎಂಬವನು ಗೋವಾದಲ್ಲಿ ಸಿಕ್ಕಿದ್ದಾನೆ ಎನ್ನಲಾಗಿದೆ.

ನಾಪತ್ತೆಯಾದ ನಿತೇಶ್‌ ಬೆಳ್ಚಾಡ  ಪತ್ತೆ Read More »

error: Content is protected !!
Scroll to Top