ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್

ಮಂಗಳೂರು : ಕರಾವಳಿಯ ಹಲವೆಡೆ ಚಿಕನ್ ಪಾಕ್ಸ್ ಕಂಡುಬಂದಿದ್ದು, ಇದೀಗ ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ  21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿದೆ ಎಂಬುವುದು ವರದಿಯಾಗಿದೆ. ಮಾಹಿತಿ ಪ್ರಕಾರ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು 9 ಮಕ್ಕಳಿಗೆ, ಸುಬ್ರಹ್ಮಣ್ಯದಲ್ಲಿ 6 ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೊಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕರಾವಳಿಯಲ್ಲಿ ಮತ್ತೆ ಚಿಕಾನ್‍ ಪಾಕ್ಸ್ Read More »

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್ ಮೇಲೆ ದೂಪದ ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ -ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಾಯಗೊಂಡ ಬೈಕ್‍ ಸವಾರ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕ್ನಿ ಕಲೆಕ್ಟರ್ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ಹಿಂತಿರುಗುವಾಗ ಈ ಘಟನೆ ಸಂಭವಿಸಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ

ಬೈಕ್‍ ಸವಾರನ ಮೇಲೆ ಬಿದ್ದ ಮರ | ಸವಾರನಿಗೆ ಗಂಭೀರ ಗಾಯ Read More »

ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಅಸ್ತಂಗತ

ಹಿರಿಯ ತಲೆಮಾರಿನ ಯಕ್ಷಗಾನದ ಅರ್ಥದಾರಿಗಳಲ್ಲಿ ಅಗ್ರಮಾನ್ಯರೆನಿಸಿದ ಕಲಾವಿದ ಅರ್ಥಧಾರಿ, ನಿವೃತ್ತ ಶಿಕ್ಷಕ ಕಿವಿ ಗಣಪಯ್ಯ  ಅಸೌಖ್ಯದಿಂದ  ನಿಧನರಾಗಿದ್ದಾರೆ.  ಸ್ವಾತಂತ್ರ್ಯ ಪೂರ್ವದಲ್ಲಿ 1933 ಜೂನ್ 5ರಂದು ಜನಿಸಿದ ಅವರು ಸುದೀರ್ಘ 92 ವರ್ಷಗಳ ತುಂಬು ಜೀವನವನ್ನು ನಡೆಸಿದ್ದಾರೆ.  ಅವರು ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳ ಅನೇಕ  ಸರಕಾರಿ ಶಾಲೆಗಳಲ್ಲಿ ಹಿಂದಿ ಪಂಡಿತರಾಗಿ, ಶಿಕ್ಷಕರಾಗಿ ಮುಖ್ಯೋಪಾಧ್ಯಾಯರಾಗಿ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ದೇರಾಜೆ, ಶೇಣಿ, ಪೆರ್ಲ, ಸಾಮಗ ಮುಂತಾದ ಹಿರಿಯ ಅರ್ಥದಾರಿಗಳ ಜೊತೆಗೆ ಸರಿಸಾಟಿ ಎನಿಸಿ ಅರ್ಥಗಾರಿಕೆಯಲ್ಲಿ ಮೆರೆದ  ಕೆ.ವಿ.ಗಣಪಯ್ಯನವರು

ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಅಸ್ತಂಗತ Read More »

3 ದಶಕಗಳ ಬಳಿಕ ಮಂಗಳೂರು ಕಡಲ ಕಿನಾರೆಗೆ ಬಂದ ಕಡಲಾಮೆಗಳು

ಮಂಗಳೂರು : ಸುಮಾರು ಮೂರು ದಶಕಗಳ ಬಳಿಕ , ಅಳಿವಿನಂಚಿನ ಅತ್ಯಂತ ಅಪರೂಪದ ಕಡಲಾಮೆ ಒಲೀವ್ ರಿಡ್ಲೆ ಹೊರವಲಯದ ಸಸಿಹಿತ್ಲು ಬೀಚ್‌ ನಲ್ಲಿ ಕಂಡುಬಂದಿದೆ. ಈ ಕಡಲಾಮೆಗಳು ಕಡಲಲ್ಲಿ ಮೊಟ್ಟೆ ಇಟ್ಟಿದ್ದು ಕಂಡುಬಂದಿದೆ. ಕಡಲ ತಡಿಗೆ ಬಂದು ಮೊಟ್ಟೆ ಇಡುತ್ತಿರುವ ಕಡಲಾಮೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮೊಟ್ಟೆಗಳ ಸಂರಕ್ಷಣೆಗೆ ಸ್ಥಳೀಯ ಮೀನುಗಾರರು ವಿಶೇಷ ನಿಗಾ ವಹಿಸಿದ್ದಾರೆ. ಮಂಗಳೂರಿನ ಸುತ್ತ ಮುತ್ತ ಸುಮಾರು 12 ಕಡೆ ಈ ಹಿಂದೆ ಆಮೆ ಮೊಟ್ಟೆಗಳು ಪತ್ತೆಯಾಗಿದ್ದವು. ಮಂಗಳೂರಿನ ಕಡಲ ತಡಿಯ ತಣ್ಣೀರು

3 ದಶಕಗಳ ಬಳಿಕ ಮಂಗಳೂರು ಕಡಲ ಕಿನಾರೆಗೆ ಬಂದ ಕಡಲಾಮೆಗಳು Read More »

ಕಳಿಯ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಫೆ. 3ರಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಮೆದಿನರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಅವರು ಸ್ವಾಗತಿಸಿ ಸಭೆಯನ್ನು ಉದ್ದೇಶಸಿ ಮಾತನಾಡಿದರು. ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದ್ದು, ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ  ಆಗಬೇಕೆಂದು ಸಭೆಯ

ಕಳಿಯ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ Read More »

ವಿಜಯವಾಣಿ ಪತ್ರಿಕೆ ಉಪಸಂಪಾದಕ ಗಿರೀಶ್‍ ಕೆ.ಎಲ್‍. ನಿಧನ

ಮಂಗಳೂರು: ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ. ಉದಯವಾಣಿ ಪತ್ರಿಕೆಗಳಲ್ಲಿ ಗಿರೀಶ್ ಕೆ.ಎಲ್ ಅವರು ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಗಿರೀಶ್ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ವಿಜಯವಾಣಿ ಪತ್ರಿಕೆ ಉಪಸಂಪಾದಕ ಗಿರೀಶ್‍ ಕೆ.ಎಲ್‍. ನಿಧನ Read More »

ಜಿಲ್ಲಾ ಗವರ್ನರ್ ವಿಕ್ರಂ ದತ್ತ ಬೇಟಿ ಸಂದರ್ಭ | ವಿಟ್ಲ ರೋಟರಿ ಕ್ಲಬ್ ವತಿಯಿಂದ ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ

ವಿಟ್ಲ  : ವಿಟ್ಲ ರೋಟರಿ ಕ್ಲಬ್ ಗೆ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಇವರ ಅಧಿಕೃತ ಬೇಟಿಯ ಸಂದರ್ಭದಲ್ಲಿ ವಿಟ್ಲ ರೋಟರಿ ಕ್ಲಬ್ ವತಿಯಿಂದ ವಿಟ್ಲ  ಕೊಡಂಗೆ ನಿರ್ಗತಿಕ ಮಹಿಳೆ ಎಂಬವರಿಗೆ ಪುಷ್ಪಾ ಇವರಿಗೆ ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮನೆಯನ್ನು ಹಸ್ತಾಂತರಿಸಲಾಯಿತು. ಸುನಂದಾ ಎಂಬವರಿಗೆ 10 ಸಾವಿರ ಧನ ಸಹಾಯ, ಪ್ರತಿಭಾವಂತ ವಿದ್ಯಾರ್ಥಿಗಳಾದ ಸಮೃದ್ಧಿ, ಅಕ್ಷತಾ ಮತ್ತು ಕೌಶಿಕ್ ಎಂಬವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಪಿ ಡಿ ಶ್ರೀನಿವಾಸ್ ಗೌಡ, ಸುನಿಲ್

ಜಿಲ್ಲಾ ಗವರ್ನರ್ ವಿಕ್ರಂ ದತ್ತ ಬೇಟಿ ಸಂದರ್ಭ | ವಿಟ್ಲ ರೋಟರಿ ಕ್ಲಬ್ ವತಿಯಿಂದ ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ Read More »

ಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ | ಕ್ಯಾ.ಬ್ರಿಜೇಶ್ ಚೌಟರಿಂದ ರೈಲ್ವೇ ಮಂಡಳಿ ಅಧ್ಯಕ್ಷರಿಗೆ ಮನವಿ

ಪುತ್ತೂರು: ಕಬಕ – ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಲು ಸಂಸದ ಕ್ಯಾ.ಬ್ರಿಜೇಶ್‍ ಚೌಟ ರೈಲ್ವೇ ಮಂಡಳಿ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ. ಈ ರೈಲು ಯೋಜನೆಯನ್ನು ವಿಸ್ತರಿಸಲು ಸಂಸದರು ಅವಿರತ ಪ್ರಯತ್ನಪಡುತ್ತಿದ್ದು, ಸೋಮವಾರ ದೆಹಲಿಯಲ್ಲಿ ರೈಲ್ವೆ ಮಂಡಳಿ ಅಧ್ಯಕ್ಷ ಸತೀಶ್ ಕುಮಾರ್ ಅವರನ್ನು ಭೇಟಿಯಾಗಿ ಕಬಕ-ಪುತ್ತೂರು ಪ್ಯಾಸೆಂಜರ್ ರೈಲು (06485) ವನ್ನು ಸುಬ್ರಹ್ಮಣ್ಯ ಜಂಕ್ಷನ್‌ವರೆಗೆ ವಿಸ್ತರಿಸುವ ಪ್ರಸ್ತಾವನೆಯ ಬಗ್ಗೆ ಪ್ರಗತಿ ಮತ್ತು ಇದನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಮನವಿ ಮಾಡಿದರು. ಬಹು ಕಾಲದ ಬೇಡಿಕೆಯ ಈಡೇರಿಕೆಗೆ ನಾನಾ

ಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ | ಕ್ಯಾ.ಬ್ರಿಜೇಶ್ ಚೌಟರಿಂದ ರೈಲ್ವೇ ಮಂಡಳಿ ಅಧ್ಯಕ್ಷರಿಗೆ ಮನವಿ Read More »

ವೀರಕಂಭ: ಮನೆಯ ಅಂಗಳಕ್ಕೆ  ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ | 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು

ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ  “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮೈರ ನಿವಾಸಿ ಯತೀಶ ಎಮ್ ಸಿ ಎಂಬವರು ಜ.31  ರಂದು ರಾತ್ರಿ 8:00 ಗಂಟೆಗೆ  ಅವರ ಮನೆಯ ಅಂಗಳದಲ್ಲಿ ಮಗುವಿನ ಜೊತೆ ಆಟವಾಡುತ್ತಿರುವಾಗ ಮೋಹನ ಗೌಡ ಎಂಬಾತನು ಏಕಾ ಏಕಿಯಾಗಿ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಅವರ ಮೇಲೆ ಹಿಗ್ಗಾ ಮುಗ್ಗ ಹಲ್ಲೆ

ವೀರಕಂಭ: ಮನೆಯ ಅಂಗಳಕ್ಕೆ  ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ | 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು Read More »

ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ| ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್-2025| ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ

ಮಂಗಳೂರು : ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಕುಸ್ತಿ ಸಂಘದ ವತಿಯಿಂದ ತಪಸ್ಯ ಫೌಂಡೇಶನ್ ಸಹಕಾರದೊಂದಿಗೆ  ಎರಡು ದಿನಗಳ ಕಾಲ ಆಯೋಜಿಸಿದ್ದ ರಾಜ್ಯಮಟ್ಟದ ಕುಸ್ತಿ ಚಾಂಪಿಯನ್ ಶಿಪ್ -2025 ನಲ್ಲಿ ಮಂಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 110 ಕುಸ್ತಿಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 15ಕ್ಕೂ ಹೆಚ್ಚು

ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ| ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್-2025| ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಚಾಲನೆ Read More »

error: Content is protected !!
Scroll to Top