ದಕ್ಷಿಣ ಕನ್ನಡ

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ

ಸುಳ್ಯ:ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ನಿರ್ದೇಶಕ ಚಂದ್ರ ಕೋಲ್ಚಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದಿಂದ ಗೆಲುವು ಸಾಧಿಸಿ ಚಂದ್ರ ಕೋಲ್ಚಾರ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನು ಒಳಗೊಂಡ ಮೈಸೂರು ವಿಭಾಗದಿಂದ ಚಂದ್ರ ಕೋಲ್ಟಾರ್ ಸೇರಿ 3 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದಾರೆ. 5 […]

ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿರ್ದೇಶಕರಾಗಿ ಚಂದ್ರ ಕೋಲ್ಚಾರ್ ಆಯ್ಕೆ Read More »

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ (ರಿ ) ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.  ಈ ಸಂದರ್ಭದಲ್ಲಿ  ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾಳು ಮೆಣಸು ಕೊಯ್ಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ: ಕಾಳುಮೆಣಸು ಕೊಯ್ಯುವ ವೇಳೆ ಮರದಿಂದ ಆಯತಪ್ಪಿ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೊಲ್ಲಂತಡ್ಕ ಎಂಬಲ್ಲಿ ಸೋಮವಾರ ಸಂಭವಿಸಿದೆ. ಕನಕಮಜಲು ಗ್ರಾಮದ ಕೊಲ್ಲಂತಡ್ಕದ ಜಗನ್ನಾಥ (75) ಮೃತರು. ಜಗನ್ನಾಥ ಅವರು ಸೋಮವಾರ ಬೆಳಿಗ್ಗೆ ತಮ್ಮ ಮನೆಯ ಅಂಗಳದಲ್ಲಿದ್ದ ಮರದಲ್ಲಿ ಕಾಳುಮೆಣಸು ಕೊಯ್ಯಲು ಏಣಿ ಇರಿಸಿ, ಹತ್ತಿ ಕಾಳು ಮೆಣಸು ಕೊಯ್ಯುವ ವೇಳೆ ಆಯತಪ್ಪಿ ಕೆಳಗೆ ಬಿದ್ದು, ತಲೆಗೆ ತೀವ್ರ ಗಾಯಗೊಂಡಿದ್ದು, ಗಾಯಾಳುವನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತರಾಗಿದ್ದಾರೆ

ಕಾಳು ಮೆಣಸು ಕೊಯ್ಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವು Read More »

ಚಾರ್ಮಾಡಿ ಘಾಟಿಯಲ್ಲಿ ಕಾರು-ಲಾರಿ ಅಪಘಾತ : ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ(55) ಜ್ಞಾನಮ್ಮ (70), ಮಂಜುಳಾ (50) ಮತ್ತು ರೇಣುಕಾ (26) ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆಂದು

ಚಾರ್ಮಾಡಿ ಘಾಟಿಯಲ್ಲಿ ಕಾರು-ಲಾರಿ ಅಪಘಾತ : ನಾಲ್ವರಿಗೆ ಗಂಭೀರ ಗಾಯ Read More »

ಮಂಡೆಕೋಲು ಗ್ರಾಮದ ಕನ್ಯಾನದಲ್ಲಿ ಮೃತ ಕಾಡಾನೆ ಪತ್ತೆ

ಸುಳ್ಯ : ತಾಲುಕಿನ ಮಂಡೆಕೋಲು ಗ್ರಾಮದ ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಕಾಡಾನೆ ಹೇಗೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಮಂಡೆಕೋಲು ಗ್ರಾಮದ ಕನ್ಯಾನದಲ್ಲಿ ಮೃತ ಕಾಡಾನೆ ಪತ್ತೆ Read More »

ಕಕ್ಕಿಂಜೆ ವೃದ್ಧ ದಂಪತಿ ಹತ್ಯೆ ಮಾಡಿ ಚಿನ್ನ, ನಗದು ದೋಚಿದ ಪ್ರಕರಣ | ಆರೋಪಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ: ಕಕ್ಕಿಂಜೆಯಲ್ಲಿ ನಡೆದ ವೃದ್ಧ ದಂಪತಿ ಕೊಲೆ  ಹಾಗೂ ಚಿನ್ನ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಮಂಗಳೂರಿನ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ರ ನ. 10 ರಂದು ರಾತ್ರಿ ಕಕ್ಕಿಂಜೆ ಹೈಸ್ಕೂಲ್ ನ ಹಿಂಬದಿಯ ಮನೆಯಲ್ಲಿ ವಾಸಿಸುತ್ತಿದ್ದ ವೃದ್ದ ದಂಪತಿ ವರ್ಕಿ ಹಾಗೂ ಏಲಿಕುಟ್ಟಿ ಅವರನ್ನು ಗದಗ ಜಿಲ್ಲೆಯ ಬಿ.ಸಿ.ಕೇರಿ ನಿವಾಸಿ ರಾಜು ಕಲ್ಲವಡ್ಡರ್ ಎಂಬಾತ ಹತ್ಯೆ ಮಾಡಿರುವುದು ಸಾಬೀತಾಗಿದೆ. ಈತ ಬೆಳ್ತಂಗಡಿಯ ನೆರಿಯಾ

ಕಕ್ಕಿಂಜೆ ವೃದ್ಧ ದಂಪತಿ ಹತ್ಯೆ ಮಾಡಿ ಚಿನ್ನ, ನಗದು ದೋಚಿದ ಪ್ರಕರಣ | ಆರೋಪಿಗೆ ಜೀವಾವಧಿ ಶಿಕ್ಷೆ Read More »

ಬಸ್‍ನಿಂದ ತಲೆ ಹೊರಹಾಕಿದ ಮಹಿಳೆಗೆ ಲಾರಿ ಡಿಕ್ಕಿ | ದೇಹದಿಂದ ಬೇರ್ಪಟ್ಟ ರುಂಡ

ಚಾಮರಾಜನಗರ : ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಿಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಕತ್ತರಿಸಿಕೊಂಡು ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಲಾರಿಯೊಂದು ಮಹಿಳೆಯ ದೇಹದಿಂದ ರುಂಡವನ್ನು ಬೇರ್ಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ಲಾರಿಯನ್ನು

ಬಸ್‍ನಿಂದ ತಲೆ ಹೊರಹಾಕಿದ ಮಹಿಳೆಗೆ ಲಾರಿ ಡಿಕ್ಕಿ | ದೇಹದಿಂದ ಬೇರ್ಪಟ್ಟ ರುಂಡ Read More »

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ ಜ. 25ರಂದು ಬೆಳಗ್ಗೆ 10ಗಂಟೆಗೆ ನಡೆಯಿತು. ಮಹಾಸಭೆಯಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಗೋರಖ್ ಪುರದ ಗೋರಕ್ಷಾ ಮಠದ ಮಹಂತ ಯೋಗಿ ಆದಿತ್ಯ ನಾಥ್ ಜಿರವರು  ಸಾನಿಧ್ಯವನ್ನು  ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ

ಉತ್ತರ ಪ್ರದೇಶದ ಪ್ರಯಾಗ್ ರಾಜ್ಯದ ಮಹಾ ಕುಂಭಮೇಳದಲ್ಲಿ ನಾಥಯೋಗಿ ಪಂಥದ ಮಹಾಸಭೆ| ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಚನ Read More »

ಜುಬಿನ್‌ ಮೊಹಾಪಾತ್ರ ರಾಯಚೂರಿಗೆ ವರ್ಗ

12 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಬೆಂಗಳೂರು: ಪುತ್ತೂರು ಉಪವಿಭಾಗದ ಹಿರಿಯ ಸಹಾಯಕ ಆಯುಕ್ತ ಜುಬಿನ್‌ ಮೊಹಾಪಾತ್ರ ಸಹಿತ 12 ಐಎಎಸ್‌ ಅಧಿಕಾರಿಗಳನ್ನು ಸರಕಾರ ವರ್ಗಾವಣೆಗೊಳಿಸಿದೆ. ಜುಬಿನ್‌ ಮೊಹಾಪಾತ್ರ ಅವರನ್ನು ರಾಯಚೂರು ನಗರದ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಉಳಿದಂತೆ ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು ಜಿಲ್ಲೆಗಳಲ್ಲಿ ಐಎಎಸ್‌ ಅಧಿಕಾರಿಗಳ ವರ್ಗಾವಣೆಯಾಗಿದೆ.

ಜುಬಿನ್‌ ಮೊಹಾಪಾತ್ರ ರಾಯಚೂರಿಗೆ ವರ್ಗ Read More »

ಕೆ.ವಿ.ಜಿ. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಡಾ. ವಜಿದಾ ಬಾನು ಅವರಿಗೆ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್

ಸುಳ್ಯ: ಕೆ.ವಿ.ಜಿ. ಡೆಂಟಲ್ ಕಾಲೇಜಿನ ದ್ವಿತೀಯ ವರ್ಷ ಎಮ್.ಡಿಎಸ್ ವಿದ್ಯಾರ್ಥಿನಿ ಮತ್ತು NSS ಸ್ವಯಂಸೇವಕಿ ಡಾ. ವಜಿದಾ ಬಾನು, 2023ರ ಜನವರಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು. ಅವರ ಈ ಸಾಧನೆಗೆ ಗೌರವ ಸೂಚವಾಗಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರುನಲ್ಲಿ ಈ ವರ್ಷ (2025) ನಡೆಯುವ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್ ಅವರನ್ನು ಆಯ್ಕೆ ಮಾಡಲಾಗಿದೆ. ಹಿಂದಿನ ವರ್ಷ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ, ಡಾ. ವಜಿದಾ ಬಾನು ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ

ಕೆ.ವಿ.ಜಿ. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಡಾ. ವಜಿದಾ ಬಾನು ಅವರಿಗೆ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್ Read More »

error: Content is protected !!
Scroll to Top