ದಕ್ಷಿಣ ಕನ್ನಡ

ಮಹಾಶಿವರಾತ್ರಿಯಂದು ಶಾಲೆಯ ಸೊತ್ತುಗಳನ್ನು  ಧ್ವಂಸ ಮಾಡಿದ ವಿದ್ಯಾರ್ಥಿಗಳು

ಕಡಬ : ವಿದ್ಯಾರ್ಥಿಗಳು ಮಹಾಶಿವರಾತ್ರಿಯಂದು ಹೂವಿನ ಚಟ್ಟಿ ಹಾಗೂ ಇನ್ನೀತರ ವಸ್ತುಗಳನ್ನು ಹಗಲು ವೇಳೆಯಲ್ಲಿ ಧ್ವಂಸ ಮಾಡಿರುವ ಘಟನೆ ಅಲಂಕಾರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಶಾಲೆಯ ಹೂವಿನ ಗಿಡ, ಹೂವಿನ ಚಟ್ಟಿ, ವಾಲಿಬಾಲ್ ನೆಟ್ ಹಾಳುಮಾಡಿದ್ದಲ್ಲದೇ, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿ ಪಪ್ಪಾಯ ಗಿಡವನ್ನು ನಾಶ ಮಾಡಿದ್ದಾರೆ. ಶಾಲಾ ನೋಟಿಸ್ ಬೋರ್ಡ್‌ ಗೆ ಕೂಡ ಹಾನಿ ಮಾಡಲಾಗಿದ್ದು, ಶಾಲೆಯ ಬಾಳೆಗಿಡದಲ್ಲಿದ್ದ ಗೊನೆಯನ್ನು ಕಡಿದು ಶಾಲಾ ಆವರಣದಲ್ಲಿ ಹಾಕಿದಲ್ಲದೆ,  ಶೌಚಾಲಯದ ಟ್ಯಾಪ್ ಸಹ ಮುರಿದು ಹಾಕಿದ್ದಾರೆ. ಶಾಲಾ […]

ಮಹಾಶಿವರಾತ್ರಿಯಂದು ಶಾಲೆಯ ಸೊತ್ತುಗಳನ್ನು  ಧ್ವಂಸ ಮಾಡಿದ ವಿದ್ಯಾರ್ಥಿಗಳು Read More »

ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ  ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯ

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಭಿವೃದ್ಧಿ ಯೋಜನೆ   ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ  ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ  ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯ ಮಾಡಿದರು. ಮಹಾಶಿವರಾತ್ರಿಯ  ದಿನ  2 ಮಖೆ  ಉತ್ಸವದ ಮರುದಿನ   ಫೆ. 27 ಗುರುವಾರದಂದು  ದೇವಸ್ಥಾನದ  ಸುತ್ತ ಮುತ್ತ  ಸ್ವಚ್ಛತೆಯನ್ನು  ಮಾಡಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಭಿವೃದ್ಧಿ ಯೋಜನೆ   ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ  ಘಟಕದ  ಸದಸ್ಯರಾದ  ಗೋಪಾಲ, ರಮೇಶ, ಕೇಶವ, ಕೃಷ್ಣಪ್ಪ, ಅಶೋಕ, ಮಮತಾ, ಸುನಂದಾ, ಚಂದ್ರಾವತಿ, ಜಗದೀಶ, ಶೀನಪ್ಪ, ವೆಂಕಪ್ಪ,

ಪೆರ್ನೆ ಶೌರ್ಯ ವಿಪತ್ತು  ನಿರ್ವಹಣಾ ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ  ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯ Read More »

ಪಿಕಪ್‍-ಮಿನಿ ಲಾರಿ ಅಪಘಾತ

ಬೆಳ್ಳಾರೆ: ಪಿಕಪ್‍ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಸವಣೂರು ರಸ್ತೆಯ ಕುಂಡಡ್ಕ ಚಾಮುಂಡಿಮೂಲೆ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತ ಪರಿಣಾಮ ಪಿಕಪ್ ಚಾಲಕನಿಗೆ ಗಾಯವಾಗಿದೆ. ಹೊಸ ರಸ್ತೆಯಾದ ಬಳಿಕ ಈ ಪರಿಸರದಲ್ಲಿ ಸಂಭವಿಸಿದ ಮೂರನೇ ಅಪಘಾತ ಪ್ರಕರಣ ಇದಾಗಿದ್ದು, ಅಗತ್ಯ ಸೂಚನಾ ಫಲಕ ನಿರ್ಮಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ.

ಪಿಕಪ್‍-ಮಿನಿ ಲಾರಿ ಅಪಘಾತ Read More »

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ

800 ವರ್ಷ ಪುರಾತನ ದೈವಸ್ಥಾನದ ಆರಾಧನೆಗೆ ತಡೆಯೊಡ್ಡಿದ ಅಧಿಕಾರಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ ಮಂಗಳೂರು : ಬಜ್ಪೆ ಸಮೀಪ ಇರುವ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಆರಾಧನೆಗೆ ತಡೆಯೊಡ್ಡಿರುವ ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್‌ಇಝಡ್‌) ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾಂತೇರಿ ಜುಮಾದಿ ದೈವಸ್ಥಾನ ಉಳಿಸಿ ಹೋರಾಟಕ್ಕೆ ತಯಾರಿ ನಡೆಯುತ್ತಿದೆ. ನಿನ್ನೆ ಮೊನ್ನೆ ಬಂದ ಎಂಎಸ್‌ಇಝಡ್‌ ಅಧಿಕಾರಿಗಳು 800 ವರ್ಷಕ್ಕೂ ಹಿಂದಿನ ದೈವದ ಆಚರಣೆ ಮತ್ತು ಆರಾಧನೆಗೆ ತಡೆಯೊಡ್ಡಿರುವುದು ಜನರ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸಿದೆ. ಕಂಪನಿಯ

ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್‌ಇಝಡ್‌ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ Read More »

ರುದ್ರಗಿರಿಯಲ್ಲಿ ಶಿವರಾತ್ರಿ ತಾಳಮದ್ದಳೆ

ತಣ್ಣೀರುಪಂತ  ಗ್ರಾಮದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು. ಭಾಗವತರಾಗಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ,  ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ) ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ ), ವಿದ್ವಾನ್  ಕೇಕಣಾಜೆ ಕೇಶವ ಭಟ್(ಅರ್ಜುನ), ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು. ದೇವಳದ

ರುದ್ರಗಿರಿಯಲ್ಲಿ ಶಿವರಾತ್ರಿ ತಾಳಮದ್ದಳೆ Read More »

ಸುಳ್ಯದ ವಿದ್ಯಾರ್ಥಿನಿ ಆತ್ಮಹತ್ಯೆ

ಸುಳ್ಯ: ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿಜಾಪುರ ಮೂಲದ ಕೃತಿಕಾ ಹಾಸ್ಟೆಲ್ ನಲ್ಲಿ  ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು,. ಸುಳ್ಯ ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಳ್ಯದ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ | ಜಾನುವಾರುಗಳ ಮೇವು ಸಾಗಾಟದ ಟೆಂಪೋ

ಬೆಳ್ತಂಗಡಿ: ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ  ಘಟನೆ  ನಿನ್ನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ನಡೆದಿದೆ. ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ | ಜಾನುವಾರುಗಳ ಮೇವು ಸಾಗಾಟದ ಟೆಂಪೋ Read More »

ಮಂಗನಖಾಯಿಲೆಗೆ ಓರ್ವ ಮಹಿಳೆ ಬಲಿ

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಕೆಎಫ್‌ಡಿ ಸೋಂಕಿನಿಂದ ಬಳಲುತ್ತಿದ್ದರು. ಈ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎನ್ನುವ ವಿಚಾರ  ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಕೊನೇರಿಪುರದ 55 ವರ್ಷದ ಮಹಿಳೆಗೆ ಜ.23ರಂದು ಕೆಎಫ್‌ಡಿ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಜ.23ರಂದು ಮಹಿಳೆಗೆ ಕಎಫ್‌ಡಿ ಪಾಸಿಟಿವ್ ಬಂದಿದ್ದರಿಂದ ಶಿವಮೊಗ್ಗ ಮೆಗ್ಯಾನ್ ಆಸ್ಪತ್ರೆಗೆ ದಾಖಲಿಸಿ

ಮಂಗನಖಾಯಿಲೆಗೆ ಓರ್ವ ಮಹಿಳೆ ಬಲಿ Read More »

ವಿದ್ಯಾರ್ಥಿ ದಿಗಂತ್‍ ನಾಪತ್ತೆ | ಚಪ್ಪಲಿ, ಮೊಬೈಲ್‍ ರೈಲ್ವೇ ಹಳಿಯಲ್ಲಿ ಪತ್ತೆ

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್‍ ನಾಪತ್ತೆಯಾಗಿದ್ದು, ಆತನ ಚಪ್ಪಲಿ ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಆತ ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ. ಬಳಿಕ ಹುಡುಕಾಡಿದಾಗ

ವಿದ್ಯಾರ್ಥಿ ದಿಗಂತ್‍ ನಾಪತ್ತೆ | ಚಪ್ಪಲಿ, ಮೊಬೈಲ್‍ ರೈಲ್ವೇ ಹಳಿಯಲ್ಲಿ ಪತ್ತೆ Read More »

ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ

ಉಪ್ಪಿನಂಗಡಿ: ತನ್ನದೇ ಮನೆಯ ತೋಟದ ಕೆರೆಗೆ ಹಾರಿ ಯುವಕನೋರ್ವ  ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ. ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ ಆತ್ಮಹತ್ಯೆ ಮಾಡಿಕೊಂಡ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು. ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ Read More »

error: Content is protected !!
Scroll to Top