ದಕ್ಷಿಣ ಕನ್ನಡ

ಜಾಗ್ವಾರ್ ಯುದ್ದ ವಿಮಾನಕ್ಕೆ ಪೈಲಾಟ್ ಆಗಿ ಆಯ್ಕೆಯಾದ ಮಂಗಳೂರಿನ ತನುಷ್ಕಾ ಸಿಂಗ್  

ಮಂಗಳೂರು: ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸಲು ಮಹಿಳೆಯೋರ್ವಳಾದ ಪ್ಲೆಯಿಂಗ್ ಆಫೀಸರ್ ತನುಷ್ಕಾ ಸಿಂಗ್ ಆಯ್ಕೆಯಾಗಿದ್ದಾರೆ. ಇವರು ಜಾಗ್ವಾರ್ ಯುದ್ಧ ವಿಮಾನ ಸ್ಮಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಜಾಗ್ವಾರ್ ಯುದ್ಧ ವಿಮಾನ ಸ್ಮಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾದ ತನುಷ್ಕಾ ಸಿಂಗ್, ತಂದೆ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅಜಯ್ ಪ್ರತಾಪ್ ಸಿಂಗ್ ಅವರ ಪುತ್ರಿ. ಪ್ರಸ್ತುತ  ಇವರು ಎಂಆರ್‌ಪಿಎಲ್ ಸಂಸ್ಥೆಯ ಎಚ್‌ಎಸ್‌ಇ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. […]

ಜಾಗ್ವಾರ್ ಯುದ್ದ ವಿಮಾನಕ್ಕೆ ಪೈಲಾಟ್ ಆಗಿ ಆಯ್ಕೆಯಾದ ಮಂಗಳೂರಿನ ತನುಷ್ಕಾ ಸಿಂಗ್   Read More »

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಮೃತಪಟ್ಟವರು ಲೇಖಿರಾಜ್ (29) ಎನ್ನಲಾಗಿದೆ. ಮೃತರು ಲೇಖಿರಾಜ್ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು ತಿಳಿದು ಬಂದಿದೆ. ಘಟನೆಗೆ ಸಂಬಂಧ ಪಟ್ಟಂತೆ ನಿಖರ ಕಾರಣ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ

ಹೀಗಿದೆ ರೈಲಿನ ಹೊಸ ವೇಳಾಪಟ್ಟಿ ಮಂಗಳೂರು: ಮೂರು ದಶಕಗಳ ಬೇಡಿಕೆಯಾಗಿದ್ದ ಮಂಗಳೂರು-ಕಬಕ ಪ್ಯಾಸೆಂಜರ್‌ ರೈಲು ಸೇವೆಯನ್ನು ಸುಬ್ರಹ್ಮಣ್ಯದ ತನಕ ವಿಸ್ತರಿಸಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರೈಲು ಸೇವೆಯನ್ನು ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಬಹಳಷ್ಟು ಪ್ರಯತ್ನಪಟ್ಟಿದ್ದರು. ರೈಲು ವಿಸ್ತರಣೆಯಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮಾತ್ರವಲ್ಲದೆ ನಿತ್ಯ ಮಂಗಳೂರಿಗೆ ಬಂದು ಹೋಗುವವರಿಗೆ ತುಂಬ ಅನುಕೂಲ ಆಗಲಿದೆ. ೀ ಭಾಗದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎನ್ನಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ Read More »

ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್‍ ದರೋಡೆ | ಮತ್ತೆ ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ:  ತಾಲ್ಲೂಕಿನ ಕೋಟಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕನ್ಯಾನದ ಭಾಸ್ಕರ್ ಬೆಳ್ಳವಾಡ ಅಲಿಯಾಸ್ ಶಶಿ ಥೇವರ್ (69) ಹಾಗೂ ಉಳ್ಳಾಲ ತಾಲ್ಲೂಕಿನ ಕೆ.ಸಿ.ರೋಡ್‌ನ ಮಹಮ್ಮದ್ ನಜೀರ್ (65) ಬಂಧಿತ ಆರೋಪಿಗಳು. ಈ ಮೂಲಕ ಪ್ರಕರಣದಲ್ಲಿ, ಒಟ್ಟಾರೆ ಆರು ಜನರನ್ನುಈ ವರೆಗೆ ಬಂಧಿಸಲಾಗಿದೆ. ಮುಂಬೈನ ದರೋಡೆಕೋರರ ತಂಡಕ್ಕೆ ಈ

ಉಳ್ಳಾಲ ಕೋಟಕಾರು ಸಿಎ ಬ್ಯಾಂಕ್‍ ದರೋಡೆ | ಮತ್ತೆ ಇಬ್ಬರು ಆರೋಪಿಗಳ ಬಂಧನ Read More »

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ | ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ಸುಳ್ಯ : ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರು, ವ್ಯಕ್ತಿತ್ವವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ  ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ  ಹಂಪಿ ಉತ್ಸವವು ಫೆಬ್ರುವರಿ  28 ರಿಂದ ಮಾರ್ಚ್  2

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ | ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ

ಬಂಟ್ವಾಳ  ತಾಲೂಕು, ಕೆದಿಲ ಗ್ರಾಮದ  ಕರಿಮಜಲು  ಪ್ರೇಮ W/O  ರಾಮಮೂಲ್ಯ ಮತ್ತು  ಕಂಪ  ಲೋಕಯ ಗೌಡ ಇವರು ಅಸೌಖ್ಯಂದಿದ್ದು, ಇವರಿಗೆ    ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ  ಯೋಜನೆಯ  ಜನಮಂಗಲ ಕಾರ್ಯಕ್ರಮದ  ಯೋಜನೆಯಡಿಯಲ್ಲಿ ಫೆ.24   ಸೋಮವಾರದಂದು ಕೊಮೋಡೋ  ವೀಲ್ ಚಯರನ್ನು ನೀಡಲಾಯಿತು. ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ ಮತ್ತು ಪೆರ್ನೆ ವಲಯ  ಮೇಲ್ವಿಚಾರಕಿ ಶಾರದಾ ಕೊಮೋಡೋ  ವೀಲ್ ಚಯರನ್ನು ವಿತರಿಸಿದರು.  ಈ ಸಂದರ್ಭದಲ್ಲಿ  ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ  ಶಾರದಾ ಮತ್ತು ಕೆದಿಲ  “B” ಒಕ್ಕೂಟದ ಸೇವಾಪ್ರತಿನಿಧಿ

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ, ಕುಣಿತ ಭಜನೆ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ ಉತ್ಸವ ‘ರಜತ ಪಥ’ ಫೆ.26 ಬುಧವಾರ ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ 6.30 ರಿಂದ ಸಂಜೆ 6.30 ರ ತನಕ ಅರ್ಧ ಏಕಾಹ ಭಜನೆ, ಬೆಳಿಗ್ಗೆ 7.30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಏಕಾದಶ ರುದ್ರಾಭಿಷೇಕ, ಶ್ರೀ ಪಂಚಲಿಂಗೇಶ್ವರ ದೇವರಿಗೆ ರಜತ ಕವಚ ಸಮರ್ಪಣೆ, ಶ್ರೀ ರುದ್ರಯಾಗದ ಪ್ರಾರಂಭ, ಮಧ್ಯಾಹ್ನ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 25ನೇ ವರ್ಷದ ಮಹಾಶಿವರಾತ್ರಿ “ರಜತ ಪಥ” | ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮ, ಕುಣಿತ ಭಜನೆ | ಶ್ರೀ ದೇವರಿಗೆ ರಜತ ಕವಚ ಸಮರ್ಪಣೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯಿಂದ  ಕ್ರಿಟಿಕಲ್ ಇನ್ಲೆಸ್ ಫಂಡ್  ವಿತರಣೆ

ಕೆದಿಲ : ಬಂಟ್ವಾಳ  ತಾಲೂಕು, ಕೆದಿಲ ಗ್ರಾಮದ    ಲಕ್ಷ್ಮಿ  ವಿಶ್ವನಾಥ ಮಡಿವಾಳ  ಕುಕ್ಕಾಜೆ ಮತ್ತು  ಕುಸುಮಾವತಿ  ಚೆನ್ನಪ್ಪ ಗೌಡ  ಮುದ್ರಾಜೆ   ಇವರು ಅಸೌಖ್ಯಂದಿದ್ದು, ಇವರಿಗೆ   ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ  ಯೋಜನೆಯಿಂದ  ಕ್ರಿಟಿಕಲ್ ಇನ್ಲೆಸ್ ಫಂಡ್ ಅನ್ನು  ಫೆ.24 ಸೋಮವಾರದಂದು ವಿತರಿಸಲಾಯಿತು.  ವಿಟ್ಲ ತಾಲೂಕು ಕೃಷಿ ಅಧಿಕಾರಿ  ಚಿದಾನಂದ ಮತ್ತು ಪೆರ್ನೆ ವಲಯ  ಮೇಲ್ವಿಚಾರಕಿ ಶಾರದಾ ಕ್ರಿಟಿಕಲ್ ಇನ್ಲೆಸ್ ಫಂಡ್ ವಿತರಿಸಿದರು.  ಈ ಸಂದರ್ಭದಲ್ಲಿ  ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ  ಶಾರದಾ, ಕೆದಿಲ  “B” ಒಕ್ಕೂಟದ ಸೇವಾಪ್ರತಿನಿಧಿ ಜಯಂತಿ,

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯಿಂದ  ಕ್ರಿಟಿಕಲ್ ಇನ್ಲೆಸ್ ಫಂಡ್  ವಿತರಣೆ Read More »

ಶ್ರೀ ಮಹಾಭಾರತ ಸರಣಿಯಲ್ಲಿ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀಸಹಸ್ರಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ದಿನದ ಪ್ರಯುಕ್ತ ಫೆ. 24ರಂದು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದಿಂದ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ ಜರಗಿತು. ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ (ಕುಮುದಾಕ್ಷಿ) ಭಾಸ್ಕರ ಬಾರ್ಯ (ಹನುಮಂತ) ಶ್ರೀಧರ ಎಸ್. ಪಿ ಸುರತ್ಕಲ್ (ಕರ್ಣ), ಜಿನೇಂದ್ರ ಜೈನ್ ಬಳ್ಳಮಂಜ(ಗಾರ್ಗ್ಯ ಮುನಿ ಮತ್ತು ಕುಂಜರ), ಗೀತಾ(ಚಂದ್ರಸೇನ1), ಸತೀಶ್ ಶಿರ್ಲಾಲು(ದ್ರೋಣ), ಗುಡ್ಡಪ್ಪ ಬಲ್ಯ(ಅರ್ಜುನ), ಜಯರಾಮ ಬಲ್ಯ(ಭೀಮ), ರವೀಂದ್ರ ದರ್ಬೆ(ಕೌರವ), ಶ್ರುತಿ ವಿಸ್ಮಿತ್ (ಭೀಷನಿ), ಪೂರ್ಣಿಮಾ ರಾವ್ ಬೆಳ್ತಂಗಡಿ (ಧರ್ಮರಾಯ

ಶ್ರೀ ಮಹಾಭಾರತ ಸರಣಿಯಲ್ಲಿ ಕುಮುದಾಕ್ಷಿ ಕಲ್ಯಾಣ ತಾಳಮದ್ದಳೆ Read More »

ಕಾರು ಡಿಕ್ಕಿ ಬಾಲಕ ಸಾವು

ಬೆಳ್ತಂಗಡಿ: ಕಾರು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಅಂಡಿಂಜೆಯಲ್ಲಿ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ‌ ಎಂಬವರ ಪುತ್ರ ಇಮಾಂಶು ಶರ್ಮ(5) ಮೃತಪಟ್ಟ ಬಾಲಕ. ಸೋಮವಾರ ಸಂಜೆ ಅಂಡಿಂಜೆಯಲ್ಲಿ ವೇಣೂರು-ನಾರಾವಿ ರಸ್ತೆಯಲ್ಲಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ‌

ಕಾರು ಡಿಕ್ಕಿ ಬಾಲಕ ಸಾವು Read More »

error: Content is protected !!
Scroll to Top