ದಕ್ಷಿಣ ಕನ್ನಡ

ಜೈನ ಧರ್ಮ ಅವಹೇಳನ : ನಾರಾವಿಯ ಮಹಿಳೆ ವಿರುದ್ಧ ಕೇಸ್‌

ಬಾಹುಬಲಿ ಫೋಟೊ ವಿಕೃತಗೊಳಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಟ್ಟ ಮಹಿಳೆ ನಾರಾವಿ : ಬಾಹುಬಲಿ ಮೂರ್ತಿಯ ಫೋಟೊ ವಿಕೃತಗೊಳಿಸಿ ಜೈನಧರ್ಮವನ್ನು ಅವಹೇಳನ ಮಾಡಿರುವ ನಾರಾವಿಯ ಮಹಿಳೆಯ ವಿರುದ್ಧ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ. ನಾರಾವಿ ಗ್ರಾಮದ ವಿಜಯಾ ನಾರಾವಿ ಎಂಬಾಕೆ ಡಿ.20ರಂದು ತನ್ನ ಫೇಸ್‌ಬುಕ್‌ ಮತ್ತು ವಾಟ್ಸಪ್‌ನಲ್ಲಿ ಬಾಹುಬಲಿಯ ವಿಕೃತ ಚಿತ್ರಗಳನ್ನು ಹಂಚಿಕೊಂಡಿದ್ದಳು. ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ಫೇಸ್‌ಬುಕ್‌ ಖಾತೆ ಹಾಗೂ ವಾಟ್ಸಪ್‌ ಮೂಲಕ ಹರಿಯಬಿಟ್ಟು ಜೈನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ […]

ಜೈನ ಧರ್ಮ ಅವಹೇಳನ : ನಾರಾವಿಯ ಮಹಿಳೆ ವಿರುದ್ಧ ಕೇಸ್‌ Read More »

ಅಪಘಾತದ ವೇಳೆ ಪತ್ತೆಯಾದ ಗೋಮಾಂಸ | ಆರೋಪಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ಎರಡು ಸ್ಕೂಟರ್ಗಳ ನಡುವೆ  ಅಪಘಾತವಾದಾಗ ಒಂದು  ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾದ ಘಟನೆ ಡಿ. 24ರಂದು ನಡೆದಿದೆ.  ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಬರುತ್ತಿದ್ದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸಜೀಪಮುನ್ನೂರು ದಾನರಗುಡ್ಡೆ ನಿವಾಸಿ ಸ್ಕೂಟರ್ ಸವಾರ ಅನುರಾದ ಕೆ. ಅವರು ಡಿ. 24ರಂದು

ಅಪಘಾತದ ವೇಳೆ ಪತ್ತೆಯಾದ ಗೋಮಾಂಸ | ಆರೋಪಿ ವಿರುದ್ಧ ಪ್ರಕರಣ ದಾಖಲು Read More »

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ

ಮುಲ್ಕಿ:  ಹಳೆಯಂಗಡಿ ರೈಲ್ವೇ ಗೇಟ್ ಬಳಿ ರೈಲು ಬರುವ ಕೆಲವೇ ಹೊತ್ತಲ್ಲಿ ಪಿಕಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ರೈಲ್ವೆ ಗೇಟ್‍ ತುಂಡಾಗಿದ್ದು. ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ರೈಲ್ವೇ ಗೇಟ್ ಸಿಬ್ಬಂದಿ ರೈಲು ಬರುವ ಹೊತ್ತಿನಲ್ಲಿ ಗೇಟ್ ಹಾಕಲು ಮುಂದಾಗುವ ವೇಳೆ ಕಿನ್ನಿಗೋಳಿ ಕಡೆಯಿಂದ ಹಳೆಯಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನ ಇಂದ್ರ ನಗರ ರೈಲ್ವೇ ಗೇಟ್ ತಲುಪುತ್ತಿದ್ದಂತೆ ಪಿಕಪ್ ಚಾಲಕ

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ Read More »

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು  ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ,  ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ,  ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬೆಳ್ತಂಗಡಿ : ಕಾಡಿಗೆ ಸೊಪ್ಪು ತರಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾಲ್ಯಳ ಕಾಡಿನಲ್ಲಿ ನಡೆದಿದೆ. ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36) ಮೃತಪಟ್ಟವರು. ಸೋಮವಾರ ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋದ ವ್ಯಕ್ತಿ ವಾಪಾಸು ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟ ನಡೆಸಿದಾಗ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ ಆನಂದ ಆಚಾರ್ಯ ಅವರನ್ನು ಅಗಲಿದ್ದಾರೆ. ಮೃತರು ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖಾಮಠದ ಸುವರ್ಣ ಮಹೋತ್ಸವದ ಸಂಭ್ರಮ | ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಪ್ಪರ ಮುಹೂರ್ತ

ಮಂಗಳೂರು : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖಾಮಠದ ಸುವರ್ಣ ಮಹೋತ್ಸವವು ಜನವರಿ 1 ಮತ್ತು 2 ರಂದು ನಡೆಯಲಿದ್ದು, ಕಾರ್ಯಕ್ರಮದ ಪೂರ್ವಭಾವಿ ತಯಾರಿಯ ಅಂಗವಾಗಿ ನಿರ್ಮಾಣಗೊಳ್ಳಲಿರುವ ಯಾಗಶಾಲೆ, ಪಾಕಶಾಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಮುಂತಾದವುಗಳ ನಿರ್ಮಾಣ ಕಾರ್ಯದ ಪ್ರಾರಂಭೋತ್ಸವದ ಸಲುವಾಗಿ ಇಂದು ಬೆಳಿಗ್ಗೆ ಚಪ್ಪರ ಮುಹೂರ್ತ ನಡೆಯಿತು. ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಚಪ್ಪರ ಮುಹೂರ್ತ ನಡೆಸಿದರು. ಕಾರ್ಯಕ್ರಮದಲ್ಲಿ ಸುಬ್ಬಕಾರಡ್ಕ, ಸುಬ್ರಹ್ಮಣ್ಯ ಭಟ್, ಕುಮಾರ. ಬಿ. ಕೆ. , ಸ್ವಾಮಿರಾವ್ , ರಣದೀಪ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಖಾಮಠದ ಸುವರ್ಣ ಮಹೋತ್ಸವದ ಸಂಭ್ರಮ | ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಪ್ಪರ ಮುಹೂರ್ತ Read More »

ಯುವತಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬಂಟ್ವಾಳ : ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾವೆಸೆಗಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವಕ್ಕೆ ಮನೆಯವರ ಜೊತೆ ಆಗಮಿಸಿದ್ದ ಯುವತಿಯನ್ನು ಆರೋಪಿ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಯುವತಿ ನೀಡಿದ ದೂರಿನ ಅನ್ವಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ Read More »

ಚಾಲಕನ ನಿರ್ಲಕ್ಷ್ಯದಿಂದ ಪಾಣೆಮಂಗಳೂರು ಸೇತುವೆಯಲ್ಲಿ ಸಿಕ್ಕಿ ಹಾಕಿಕೊಂಡ ಏಸ್ ಗೂಡ್ಸ್ ಟೆಂಪೋ

ಬಂಟ್ವಾಳ : ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಿದ್ದರು ಸಹ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಟಾಟಾ ಕಂಪೆನಿಯ ಎಸ್ ಗೂಡ್ಸ್ ಟೆಂಪೋವೊಂದು ಚಾಲಕನ ನಿರ್ಲಕ್ಷ್ಯತನದಿಂದ ಸೇತುವೆಯಲ್ಲಿ ತಲೆ ಮೇಲೆಯಾಗಿ ನಿಂತುಕೊಂಡಿದೆ. ಬಿಸಿರೋಡಿನಿಂದ ಗೂಡಿನಾಚೆಯಿಂದ ಪಾಣೆಮಂಗಳೂರು ಕಡೆ ಸಂಚಾರಕ್ಕೆ ಪ್ರಯತ್ನಿಸಿದಾಗ ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ಹಾಕಲಾದ ಕಬ್ಬಿಣದ ತಡೆಬೇಲಿಯಲ್ಲಿ ಎಸ್ ಗೂಡ್ಸ್ ಟೆಂಪೋವೊಂದು ಸಿಲುಕಿಕೊಂಡಿದೆ. ಶಂಭೂರು

ಚಾಲಕನ ನಿರ್ಲಕ್ಷ್ಯದಿಂದ ಪಾಣೆಮಂಗಳೂರು ಸೇತುವೆಯಲ್ಲಿ ಸಿಕ್ಕಿ ಹಾಕಿಕೊಂಡ ಏಸ್ ಗೂಡ್ಸ್ ಟೆಂಪೋ Read More »

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು

ಬೆಳ್ತಂಗಡಿ: ಕಾರು ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಬೈಕ್‍ ಸವಾರ ಮೃತಪಟ್ಟ ಘಟನೆ ಎನ್‍ ಆರ್‍ ಪುರ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಮೃತಪಟ್ಟ ಬೈಕ್‍ ಸವಾರ. ಸಜೇಶ್‍ ಅವರು ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ಮ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ.

ಬೈಕ್‍-ಕಾರು ಡಿಕ್ಕಿ : ಓಡಿಲ್ನಾಳದ ಯುವಕ ಮೃತ್ಯು Read More »

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು

ಮಂಗಳೂರು : ಮಹಿಳೆಯೋರ್ವಳು ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಘಟನೆ ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಮಹಿಳೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಭಾವತಿ ಪ್ರಭು ಎಂಬ ಮಹಿಳೆ 2024ರ ಅ.22 ರಂದು 1.31 ಲ.ರೂ., ಆ. 25ರಂದು 111 ಲ.ರೂ. ನ 21ರಂದು 144 ಲ ರೂ.  29ರಂದು 241 ಲ.ರೂ. ಡಿ 3ರಂದು

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು Read More »

error: Content is protected !!
Scroll to Top