ದಕ್ಷಿಣ ಕನ್ನಡ

ಪಾದಚಾರಿಗಳಿಗೆ ಕಾರು ಡಿಕ್ಕಿ | ಇಬ್ಬರ  ದುರ್ಮರಣ | ಕಾರನ್ನು ವಶಕ್ಕೆ ಪಡೆದ ಸುಳ್ಯ ಪೋಲಿಸರು

ಸುಳ್ಯ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಾರು ಹರಿದುಕೊಂಡು ಹೋಗಿರುವ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಕನಕಮಜಲುವಿನಲ್ಲಿ ನಡೆದಿದೆ.  ಕಾರು ಅಪಘಾತದಲ್ಲಿ ಪಾದಚಾರಿಗಳಿಬ್ಬರು  ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣವಾದ ಕಾರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ರಾಮಯ್ಯ ರೈ ಮತ್ತು ಕನಕಮಜಲಿನ ಜನಾರ್ದನ ರೈ ಅವರು ಫೆ. 8ರಂದು ರಾತ್ರಿ ನಡೆದ ಕಾರು ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಫೆ. 9ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಅಪಘಾತ ಎಸಗಿದ ಕಾರು ಚಾಲಕ ಘಟನ ಸ್ಥಳದಲ್ಲಿ […]

ಪಾದಚಾರಿಗಳಿಗೆ ಕಾರು ಡಿಕ್ಕಿ | ಇಬ್ಬರ  ದುರ್ಮರಣ | ಕಾರನ್ನು ವಶಕ್ಕೆ ಪಡೆದ ಸುಳ್ಯ ಪೋಲಿಸರು Read More »

ಯಕ್ಷಭಾರತಿ ದಶಮಾನೋತ್ಸವ: ಭಾರತ ಮಾತಾಪೂಜನ, “ದಶಪರ್ವ ಸ್ಮರಣ ಸಂಚಿಕೆ” ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ರಿ.ಬೆಳ್ತಂಗಡಿ ಇದರ ದಶವರ್ಷದ ಪ್ರಯುಕ್ತ ಉಜಿರೆ  ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ಭಾರತ ಮಾತಾ ಪೂಜನ  ಕಾರ್ಯಕ್ರಮವು ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ದಶಪರ್ವ ಸಂಚಿಕೆ ಬಿಡುಗಡೆಗೊಳಿಸಿ ಯಕ್ಷಗಾನದೊಂದಿಗೆ ಸಂಸ್ಕಾರ ಶಿಕ್ಸಣ ಮತ್ತು ಅರೋಗ್ಯ ಸೇವಾಕಾರ್ಯಗಳನ್ನು ಯಕ್ಷ ಭಾರತಿ ನಡೆಸಿರುವುದು ಅಪೂರ್ವವಾಗಿದೆ. ಉಳಿದ ಸಂಘ ಸಂಸ್ಥೆಗಳಿಗೆ ಮಾದರಿಯಾಗಿರುವ ಯಕ್ಷಭಾರತಿ ಸಂಸ್ಥೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ

ಯಕ್ಷಭಾರತಿ ದಶಮಾನೋತ್ಸವ: ಭಾರತ ಮಾತಾಪೂಜನ, “ದಶಪರ್ವ ಸ್ಮರಣ ಸಂಚಿಕೆ” ಬಿಡುಗಡೆ Read More »

ವಿಟ್ಲ (ಫೆ.13 ರಿಂದ ಫೆ.17) :ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ| ಶೌರ್ಯ ವಿಪತ್ತು ನಿರ್ವಹಣಾ  ಘಟಕ  ತಂಡ ಸದಸ್ಯರಿಂದ ಶ್ರಮದಾನ

ವಿಟ್ಲ : ಭ/ಶ್ರೀ1008 ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ/1008 ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವವು ಫೆ.13ರಿಂದ ಫೆ.17ರವರೆಗೆ ಮೆಗಿನಪೇಟೆ ಜೈನ ಬಸದಿಯಲ್ಲಿ ನಡೆಯಲಿದೆ. ಇದಕ್ಕೆ  ಪೂರಕವಾಗಿ ಭಗವಾನ್ ಚಂದ್ರನಾಥಸ್ವಾಮಿ ನೂತನ ಬಿಂಬವನ್ನು ಆರ್ಕುಳ ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ, ಇದರ ಕೆದಿಲ ಹಾಗೂ ವಿಟ್ಲ

ವಿಟ್ಲ (ಫೆ.13 ರಿಂದ ಫೆ.17) :ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ| ಶೌರ್ಯ ವಿಪತ್ತು ನಿರ್ವಹಣಾ  ಘಟಕ  ತಂಡ ಸದಸ್ಯರಿಂದ ಶ್ರಮದಾನ Read More »

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವ 

ಉಪ್ಪಿನಂಗಡಿ : ಇಲ್ಲಿನ  ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವವು   ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳಲ್ಲಿ ಜರಗಿತು. ಫೆಬ್ರವರಿ 6ರಂದು ಸುತ್ತಮುತ್ತಲಿನ ಗ್ರಾಮಗಳಿಂದ ಹೊರೆಕಾಣಿಕೆ, ‌ಮಹಾಪೂಜೆ, ಅನ್ನಸಂತರ್ಪಣೆ, ಭಜನೆ ಮಹಾರಂಗಪೂಜೆ ಬಳಿಕ ನಾಗ ಮಾಣಿಕ್ಯ ನಾಟಕ ನಡೆಯಿತು.  ಮರುದಿನ ಕೆಮ್ಮಿಂಜೆ ಬ್ರಹ್ಮ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಗಣಹೋಮ, ಪಂಚ ವಿಂಶತಿ ಕಲಶಾಭಿಶೇಕ, ಪರಿವಾರ ದೈವಗಳಿಗೆ ಕಲಶ ತಂಬಿಲ, ಶ್ರೀ ಆಂಜನೇಯ ಯಕ್ಷಗಾನ ಮಹಿಳಾ ಸಂಘ ಬೊಳುವಾರು ಪುತ್ತೂರು ಇವರಿಂದ ಶ್ಯಮಂತಕ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವ  Read More »

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ

ಕಾವೂರು, ಫೆ. 9: ಸಂತೃಪ್ತ ಗ್ರಾಹಕರನ್ನು ಹೊಂದಿರುವ ಮಂಗಳೂರಿನ ಕೊಟ್ಟಾರ ಚೌಕಿಯ ‘ವಿ ಗ್ರೂಪ್’ ಅಸೋಸಿಯೇಟ್ ಕಾವೂರಿನ ಗೊಲ್ಲರಬೆಟ್ಟು ಪ್ರಕೃತಿ ರಮಣೀಯ ಪರಿಸರದಲ್ಲಿ 2 ಬಿಎಚ್‌ಕೆ ಮತ್ತು 3 ಬಿಎಚ್‌ಕೆಯ 15 ಮನೆಗಳನ್ನು ನಿರ್ಮಿಸಿದ್ದು, ಕೇವಲ 60ರಿಂದ 80 ಲಕ್ಷ ರೂ.ಗಳಿಗೆ ಲಭ್ಯವಿವೆ. ನಗರದ ಎಲ್ಲ ಅನುಕೂಲಗಳು ಇರುವ ಈ ವಸತಿ ಪ್ರದೇಶಕ್ಕೆ ಬಹು ಹತ್ತಿರದಲ್ಲಿಯೇ ಹೆಸರಾಂತ ಶಾಲಾ ಕಾಲೇಜುಗಳು, ಮೆಡಿಕಲ್ ಕಾಲೇಜು ಆಸ್ಪತ್ರೆ ಇರುವುದರಿಂದ ಗ್ರಾಹಕರು ಇಲ್ಲಿ ನಿರ್ಮಾಣಗೊಂಡಿರುವ ಮನೆಗಳನ್ನು ಖರೀದಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ.

‘ವಿ ಗ್ರೂಪ್’ ಅಸೋಸಿಯೇಟ್ ಮಿತದರದಲ್ಲಿ ಕನಸಿನ ಮನೆಯನ್ನು ಪಡೆಯಲು ಸುವರ್ಣವಕಾಶ Read More »

ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌  ದಿಢೀರ್ ದಾಳಿ

ಮಂಗಳೂರು :  ಇಲ್ಲಿನ ಅಕ್ರಮ ಕಸಾಯಿಖಾನೆಗಳ ವಿರುದ್ದ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌ ಕುಮಾರ್‌ ಸಮರ ಸಾರಿದ್ದು, ಮಂಗಳೂರಿನ ಹೃದಯಭಾಗದಲ್ಲಿರುವ ಕುದ್ರೋಳಿ ಕಸಾಯಿಖಾನೆ ಪರಿಸರಕ್ಕೆ ದಿಢೀರ್ ದಾಳಿ ಮಾಡಿದ್ದಾರೆ. ಕುದ್ರೋಳಿ ಕಸಾಯಿಖಾನೆ ಈ ಹಿಂದೆ ಅಧಿಕೃತವಾಗಿದ್ದರು ಸಹ ಹಸಿರು ಪೀಠದ ಆದೇಶದ ಹಿನ್ನಲೆಯಲ್ಲಿ ಸ್ಥಗಿತಗೊಳಿಸಿ ನಾಲ್ಕು ವರ್ಷ ಕಳೆದಿದೆ. ಆದರೆ ಈ ಕಸಾಯಿಖಾನೆ ಖಾಸಗಿ ಜಾಗದಲ್ಲಿ ಅಕ್ರಮವಾಗಿ ವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ಪ್ರತಿನಿತ್ಯ ಗೋವು, ಆಡು, ಕುರಿಗಳ ವಧಿಸುವ ಕುರಿತಾಗಿ ದೂರುಗಳಿದ್ದವು. ಈ ದೂರಿನನ್ವಯ ಮಂಗಳೂರು

ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆ ಮೇಯರ್‌ ಮನೋಜ್‌  ದಿಢೀರ್ ದಾಳಿ Read More »

ಸಮಾಜ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನಮಾನಸದಲ್ಲಿ ಎಂದೆಂದೂ ಜೀವಂತ : ಡಿ.ವಿ.ಸದಾನಂದ ಗೌಡ | ಸ್ವರ್ಣ ಉದ್ಯಮಿ, ಸಮಾಜ ಸೇವಕರೂ ಆಗಿದ್ದಂತಹ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಮರಣೆ ಕಾರ್ಯಕ್ರಮ

ಕಾಸರಗೋಡು : ಸಮಾಜದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಇದಕ್ಕೆ ಉದಾಹರಣೆ ಜಿ.ಎಲ್. ಆಚಾರ್ಯ ರಂತಹ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು. ಸ್ವರ್ಣ ಉದ್ಯಮಿ, ಸಮಾಜ ಸೇವಕರೂ ಆಗಿದ್ದಂತಹ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಮರಣೆ ಕಾರ್ಯಕ್ರಮವನ್ನು ಶ್ರೀ ಎಡನೀರು ಮಠದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಸಾಮಾಜಿಕ

ಸಮಾಜ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನಮಾನಸದಲ್ಲಿ ಎಂದೆಂದೂ ಜೀವಂತ : ಡಿ.ವಿ.ಸದಾನಂದ ಗೌಡ | ಸ್ವರ್ಣ ಉದ್ಯಮಿ, ಸಮಾಜ ಸೇವಕರೂ ಆಗಿದ್ದಂತಹ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಮರಣೆ ಕಾರ್ಯಕ್ರಮ Read More »

ಮಹಾಭಾರತ ಸರಣಿಯ 64ನೇ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ  ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಂಗಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ಪ್ರಕಾಶ ಅಭ್ಯಂಕರ ಬೆಳ್ತಂಗಡಿ, ಕಿಶೋರ್ ಶೆಟ್ಟಿ ಮೂಡಾಯಿರು ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಜುನ ಅಭ್ಯಂಕರ್ ಬೆಳ್ತಂಗಡಿ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ(ಬಲರಾಮ ), ಶ್ರೀಧರ ಎಸ್ ಪಿ ಸುರತ್ಕಲ್( ಕೌರವ ), ಹರೀಶ ಆಚಾರ್ಯ ಬಾರ್ಯ(ಶ್ರೀಕೃಷ್ಣ),

ಮಹಾಭಾರತ ಸರಣಿಯ 64ನೇ ತಾಳಮದ್ದಳೆ Read More »

ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಧಾರಾಣಿ ದಿವಾಕರ ಆಯ್ಕೆ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದನೆ

ಸುಳ್ಯ: ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸದಸ್ಯೆ ಸುಧಾರಾಣಿ ದಿವಾಕರ ಗೌಡ ಕಡಿರಮೂಲೆ ಅವರನ್ನು ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದಿಸಲಾಯಿತು. ಸಭೆಯಲ್ಲಿ ಮಾತನಾಡಿದ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಉಪಾಧ್ಯಕ್ಷ ಯು. ಪಿ ರಾಮಕೃಷ್ಣ ಮಾತನಾಡಿ, ಸಹಕಾರ ಸಂಘದಲ್ಲಿ ಇನ್ನಷ್ಟು ಸ್ಥಾನವನ್ನು ಪಡೆದು ಅಭಿವೃದ್ಧಿ ಕೆಲಸವನ್ನು, ಸಾಧನೆಯನ್ನು ಮಾಡಿ

ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಸುಧಾರಾಣಿ ದಿವಾಕರ ಆಯ್ಕೆ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕಾಣಿಯೂರು ಶಾಖೆಯ ಸಲಹಾ ಸಮಿತಿ ಸಭೆಯಲ್ಲಿ ಅಭಿನಂದನೆ Read More »

ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಪೊಲೀಸರಿಂದ ದಾಳಿ | 10 ಮಂದಿ ಬಂಧನ, ನಗದು, ಸೊತ್ತುಗಳು ವಶ

ಬಿ.ಸಿ.ರೋಡ್: ಅಕ್ರಮ ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿ, ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ  ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಇಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್‌, ಸಂಶುದ್ದೀನ್‌,

ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಪೊಲೀಸರಿಂದ ದಾಳಿ | 10 ಮಂದಿ ಬಂಧನ, ನಗದು, ಸೊತ್ತುಗಳು ವಶ Read More »

error: Content is protected !!
Scroll to Top