ದಕ್ಷಿಣ ಕನ್ನಡ

ಸಾಲಭಾದೆಯಿಂದ ಯುವಕ ಆತ್ಮಹತ್ಯೆ

ಮೂಡಬಿದಿರೆ : ಸಾಲ ಭಾದೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಎಂಬುವವರು  ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಈ ವೇಳೆ ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ. ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರೆನ್ನಲಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]

ಸಾಲಭಾದೆಯಿಂದ ಯುವಕ ಆತ್ಮಹತ್ಯೆ Read More »

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ  ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್‌.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸಂಧ್ಯಾ ಎಸ್ ಅರ್ಜಿಯನ್ನು ವಜಾಗೊಳಿಸಿ, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. 2024ರ ಡಿಸೆಂಬರ್ 19ರಂದು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಿನೇಶ್ ಅವರನ್ನು ಬಂಧಿಸಿದ್ದಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು Read More »

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಸಮುದ್ರದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದು ನೀರಿಗೆ ಇಳಿದ ಮೂವರು ನೀರು ಪಾಲಾದ ಘಟನೆ ಇಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ುಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟವರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಕಾರಿನಲ್ಲಿ ಹೊರಟು ಇಂದು ಮಧ್ಯಾಹ್ನ 12.30 ಕ್ಕೆ ಹೊಸಬೆಟ್ಟು ಬಳಿ ಇರುವ ಬೀಚ್ ಗೆ ಪ್ರವಾಸ ನಿಟ್ಟಿನಲ್ಲಿ ಬಂದಿದ್ದರು ಎನ್ನಲಾಗಿದೆ. ಈ ಸಂದರ್ಭ

ಸುರತ್ಕಲ್ ನ ಹೊಸಬೆಟ್ಟು ಸಮುದ್ರಕ್ಕೆ ಪ್ರವಾಸ ಬಂದ ಮೂವರು ನೀರಿನಲ್ಲಿ ಕೊಚ್ಚಿಹೋಗಿ ಮೃತ್ಯು Read More »

ರಿವಾಲ್ವರ್ ಪರಿಶೀಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ತಗುಲಿದ ಗುಂಡು | ವ್ಯಕ್ತಿಯೋರ್ವರಿಗೆ ಗಾಯ

ಮಂಗಳೂರು : ವಾಮಂಜೂರಿನಲ್ಲಿ ವ್ಯಕ್ತಿಯೋರ್ವರಿಗೆ ಆಕಸ್ಮಿಕ ಗುಂಡು ತಗುಲಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಸಫ್ಘಾನ್ ಎಂಬುವರು ಗುಂಡು ತಗುಲಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ. ಸಫ್ಘಾನ್ ಎಂಬವರು ವಾಮಂಜೂರಿನ ಅಂಗಡಿಯೊಂದಕ್ಕೆ ಬಂದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ ನ್ನು ಪರಿಶೀಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದೆ. ಈ  ಪರಿಣಾಮ ಸಫ್ಘಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಇದನ್ನು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

ರಿವಾಲ್ವರ್ ಪರಿಶೀಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ತಗುಲಿದ ಗುಂಡು | ವ್ಯಕ್ತಿಯೋರ್ವರಿಗೆ ಗಾಯ Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಬಾನೋತ್ ದುರ್ಗಾ | ಅಪರೂಪದ ಹೆರಿಕೆ ಪ್ರಕರಣ

ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನನ ನೀಡಿರುವ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ವರದಿಯಾಗಿದೆ. ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ಕು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಈ ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳು. 1.1, 1.2, 800, 900 ಗ್ರಾಂ ತೂಕ ಹೊಂದಿದೆ. ಆದರೆ 30

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಬಾನೋತ್ ದುರ್ಗಾ | ಅಪರೂಪದ ಹೆರಿಕೆ ಪ್ರಕರಣ Read More »

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ

ಪುತ್ತೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಕಡಬ ತಾಲೂಕಿನ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಕೃಷಿ ಮೇಳದ ಉದ್ಘಾಟನಾ ಸಮಾರಂಭ ಜ.11, 12 ಹಾಗೂ 13 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಗಣೇಶ್ ಕೆ.ಎಸ್‍. ಉದನಡ್ಕ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರಿ ತತ್ವದ ಅಡಿಯಲ್ಲಿ ದ.ಕ.ಜಿಲ್ಲೆಯ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಮಾರ್ಗದರ್ಶನದಲ್ಲಿ ಚಾರ್ವಾಕ ಭಾಗದ ಅನೇಕ ಹಿರಿಯರು ಸೇರಿಕೊಂಡು ಉಪ್ಪಿನಂಗಡಿ ತಾಲೂಕು ಕೇಂದ್ರ ಆಗಿದ್ದ ಸಂದರ್ಭದಲ್ಲಿ

ಜ.11, 12, 13 : ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ, ಕೃಷಿಮೇಳಕ್ಕೆ ಚಾಲನೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ

ಕಾಣಿಯೂರು:  ಧಾರ್ಮಿಕ ಕಾರ್ಯಕ್ರಮಗಳಲ್ಲಿ ಊರಿನ ಜನತೆ ಸಮರ್ಪಣ ಭಾವದಿಂದ ಹೆಚ್ಚು ಭಾಗವಹಿಸುವುದರಿಂದ ಆ ಊರಿನಲ್ಲಿ ನಮ್ಮ ಸಂಸ್ಕೃತಿ ಉಳಿಯುವುದರ ಜೊತೆಗೆ ಸಾಮರಸ್ಯದಿಂದ ಜೀವನ ಮಾಡಲು ಸಾಧ್ಯವಿದೆ ಎಂದು ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂ ಶ್ರೀ ಕಾಣಿಯೂರು ರಾಮ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ನುಡಿದರು. ಅವರು ಕಡಬ ತಾಲೂಕಿನ ಕುದ್ಮಾರು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಪ್ರಯುಕ್ತ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ, ನಿಧಿ ಸಮರ್ಪಣೆ | ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ Read More »

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ

ಸುಳ್ಯ: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತ್ ನವರು ಪ್ರಥಮ ಬಾರಿಗೆ  ಕೊಡಮಾಡಿದ ಪ್ರತಿಷ್ಠಿತ  “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಯಲಹಂಕದ ವಿ ಜೆ ಇಂಟರ್ ನ್ಯಾಷನಲ್ ಶಾಲಾ ಮೈದಾನದಲ್ಲಿ ಜ. 3 ಮತ್ತು 4 ರಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಬೃಹತ್ ವೈಜ್ಞಾನಿಕ ಸಮ್ಮೇಳನದಲ್ಲಿ ನಡೆಯಿತು. ಈ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ  ಪ್ರಥಮ ಬಾರಿಗೆ ಭಾಜನರಾದ ಸುಳ್ಯದ ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ನಟಿ

ಡಾ.  ಅನುರಾಧಾ ಕುರುಂಜಿಯವರಿಗೆ “ಚೈತನ್ಯ ಶ್ರೀ- 2024” ಪ್ರಶಸ್ತಿ ಪ್ರದಾನ | ನಟಿ ಉಮಾಶ್ರೀಯವರಿಂದ ಪ್ರಶಸ್ತಿ ಪ್ರದಾನ | ಪ್ರಥಮ ಬಾರಿಗೆ ಕೊಡ ಮಾಡಿದ  ಪ್ರಶಸ್ತಿಯನ್ನು ಸ್ವೀಕರಿಸಿದ ದ.ಕ ಜಿಲ್ಲೆಯ ಪ್ರಥಮ ಮಹಿಳಾ ಸಾಧಕಿ Read More »

ಕಿರುತೆರೆ ನಟಿ ಹಂಸ ಗೌಡ ಕುತ್ತಾರು ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ

ಪುತ್ತೂರು: ಚಲನಚಿತ್ರ  ಹಾಗು ಕಿರುತೆರೆಯ ನಟಿ, ಬಿಗ್ ಬಾಸ್ ಖ್ಯಾತಿಯ ಹಂಸ ಗೌಡ ಕಾರಣಿಕ ಕ್ಷೇತ್ರವಾದ ಕುತ್ತಾರು ಶ್ರೀ ಆದಿಸ್ಥಳ ಕೊರಗಜ್ಜ ದೈವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿರು. ಈ ಸಂದರ್ಭದಲ್ಲಿ ಶ್ರೀ ದೈವದ ದರ್ಶನ ಪಡೆದರು ಅವರೊಂದಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ ನಾರಾಯಣ್, ನಟಿಯ ತಂದೆ ನಾರಾಯಣಸ್ವಾಮಿ, ನಿರೂಪಕ ಉಜಿತ್ ಶ್ಯಾಮ್ ಚಿಕ್ಮುಳಿ, ಜನನಿ ಗೌಡ, ದಯಾನಂದ ಗೌಡ ದೇವಶ್ಯ ಉಪಸ್ಥಿತರಿದ್ದರು

ಕಿರುತೆರೆ ನಟಿ ಹಂಸ ಗೌಡ ಕುತ್ತಾರು ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ Read More »

ಉಜಿರೆ ಬಳಿ ದ್ವಿಚಕ್ರ ವಾಹನ-ಕಾರು ಅಪಘಾತ : ಮಹಿಳೆಗೆ ಗಂಭೀರ ಗಾಯ

ಉಜಿರೆ: ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿ ಹೊಡೆದುಕೊಂಡ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಚಾರ್ಮಾಡಿ ರಸ್ತೆ ಸಮೀಪದ ವಿಲೇಜ್ ಹೋಟೆಲ್ ಬಳಿ ನಡೆದಿದೆ. ಸ್ಕೂಟರ್‌ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿಎ. ಸ್ಕೂಟರ್ ಸವಾರೆ ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದು, ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಎರಡು ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದ್ದು, ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು

ಉಜಿರೆ ಬಳಿ ದ್ವಿಚಕ್ರ ವಾಹನ-ಕಾರು ಅಪಘಾತ : ಮಹಿಳೆಗೆ ಗಂಭೀರ ಗಾಯ Read More »

error: Content is protected !!
Scroll to Top