ದಕ್ಷಿಣ ಕನ್ನಡ

ಬಂಟ್ವಾಳದ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು

ಮಂಗಳೂರು: ಬಂಟ್ವಾಳ ತಾಲೂಕಿನ ಪುದು ಗ್ರಾಮದ ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವುಗೈದ ಘಟನೆ ನಡೆದಿದೆ. ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ. ದೇವಸ್ಥಾನದ ಹಿಂಬಾಗಿಲು ಮುರಿದು ಒಳನುಗ್ಗಿದ್ದ ಮೂವರು ಆಗಂತುಕರು ಈ ದರೋಡೆಯನ್ನು ಮಾಡಿದ್ದಾರೆ. ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಬಂಗಾರದ ವಸ್ತುಗಳನ್ನು ತೆಗೆದು ಹೊರತಂದು […]

ಬಂಟ್ವಾಳದ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು Read More »

ಮರ ಬಿದ್ದು ಮೃತಪಟ್ಟ ಸೀತಾರಾಮ ಗೌಡರ ಸ್ಕೂಟಿ ಮೇಲೆ ಕೋಳಿ | ಅಪಘಾತ ನಡೆದ ಸ್ಥಳದಲ್ಲಿ ಠಿಕಾಣಿ ಹೂಡಿದ ಹರಕೆಯ ಕೋಳಿ

ಕಡಬ: ಎರಡು ದಿನಗಳ ಹಿಂದೆ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದ್ದ ಪರಿಣಾಮ, ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಸ್ಥಳದಲ್ಲಿ ಪವಾಡವೊಂದು ನಡೆದಿದೆ. ಸೀತಾರಾಮ ಅವರು ತಮ್ಮ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಳಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿತ್ತು. ಘಟನೆಯ ವೇಳೆ ಕೋಳಿಯ ಕಾಲುಗಳನ್ನು ಹಗ್ಗದಿಂದ ಕಟ್ಟಿದ್ದರಿಂದ ಮೃತದೇಹದ ಬಳಿಯೇ ಕೋಳಿ ಬಿದ್ದಿತ್ತು. ಬಳಿಕ ಸ್ಥಳದಲ್ಲಿದ್ದವರು ಕೋಳಿಯ ಕಾಲಿಗೆ

ಮರ ಬಿದ್ದು ಮೃತಪಟ್ಟ ಸೀತಾರಾಮ ಗೌಡರ ಸ್ಕೂಟಿ ಮೇಲೆ ಕೋಳಿ | ಅಪಘಾತ ನಡೆದ ಸ್ಥಳದಲ್ಲಿ ಠಿಕಾಣಿ ಹೂಡಿದ ಹರಕೆಯ ಕೋಳಿ Read More »

ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ

ಮಂಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸಂಚರಿಸುತಿದ್ದ ವಾಹನಕ್ಕೆ ಕಿಡಿಗೇಡಿಗಳು ತಡೆಯೊಡ್ಡಿ ಕೃತ್ಯ ಎಸಗಿದ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಪೂಜ್ಯ ಸಾಧು ಸಂತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ  ಶರಣ್ ಪಂಪವೆಲ್ ಕೇರಳ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ | ವಿಶ್ವಹಿಂದೂ ಪರಿಷದ್‍ ನಿಂದ ಖಂಡನೆ Read More »

ಡಾ. ಚಿನ್ನಪ್ಪ ಗೌಡರಿಗೆ ಡಾ. ಜಿ.ಶಂ.ಪ ತಜ್ಞ ಪ್ರಶಸ್ತಿ

ಮಂಗಳೂರು: 2023ನೇ ಸಾಲಿನ ಡಾ. ಜಿ.ಶಂ.ಪ ತಜ್ಞ ಪ್ರಶಸ್ತಿಯನ್ನು ಡಾ. ಕೆ. ಚಿನ್ನಪ್ಪ ಗೌಡ ಅವರಿಗೆ ಘೋಷಿಸಲಾಗಿದೆ. ಜನಪದ ಆರಾಧನೆಯ ‘ಮಧ್ಯಂತರ ಜಗತ್ತು’ ಮತ್ತು ಅದರ ‘ಸಂಕೀರ್ಣ ಪಠ್ಯ’, ಜಾನಪದದ ಅರ್ಥ ಮತ್ತು ಕಾರ್ಯಗಳ ವಿವೇಚನೆ, ಜಾನಪದ ಪ್ರಕಾರವೊಂದರ ಪ್ರದರ್ಶನ ಸಂದರ್ಭದ ಆಚೆಗಿರುವ ವಿವರಗಳ ಪರಿಕಲ್ಪನೆಗಳನ್ನು ವಿವರಿಸಿ ಜಾನಪದ ಅಧ್ಯಯನದಲ್ಲಿ ವಿಶೇಷವಾಗಿ ತೊಡಗಿಸಿಕೊಂಡವರು ಡಾ. ಕೆ.ಚಿನ್ನಪ್ಪ ಗೌಡ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಚಿನ್ನಪ್ಪ ಗೌಡ ಅವರು ಭೂತಾರಾಧನೆಯ ಅತ್ಯಂತ ಪ್ರಾಚೀನವೂ ವಿಶಿಷ್ಟವೂ ಆದ ‘ಜಾಲಾಟ’ದ

ಡಾ. ಚಿನ್ನಪ್ಪ ಗೌಡರಿಗೆ ಡಾ. ಜಿ.ಶಂ.ಪ ತಜ್ಞ ಪ್ರಶಸ್ತಿ Read More »

ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದಿ, ವಕ್ಫ್ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದಿಂದ ಪ್ರತಿಭಟನೆ

ಕಡಬ: ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್‍ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಕಡಬ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಆಶಾ ತಿಮ್ಮಪ್ಪ, ಪುಲಸ್ತ್ಯ ರೈ, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದಿ, ವಕ್ಫ್ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದಿಂದ ಪ್ರತಿಭಟನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ  ಇಂದು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ ಟಿ ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೂಪ ಜೆ. ರೈ ಅತಿಥಿಯಾಗಿದ್ದರು. ಕನ್ನಡ ಭಾಷಣ, ಆಶುಭಾಷಣ, ಸಮೂಹ ಗೀತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಉದಯಕುಮಾರ ಪ್ರಸಾವಿಕವಾಗಿ ಮಾತನಾಡಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಸ್ಪರ್ಧೆಗಳು Read More »

ಸವಣೂರು ಕೆನರಾ ಬ್ಯಾಂಕ್‍ ಶಾಖೆಯಲ್ಲಿ ಸೇವಾ ನ್ಯೂನತೆ | ಸರಿಪಡಿಸುವಂತೆ ಆಗ್ರಹಿಸಿ ಗ್ರಾಹಕರಿಂದ ಪ್ರತಿಭಟನೆ

ಸವಣೂರು : ಕೆನರಾ ಬ್ಯಾಂಕ್ ಸವಣೂರು ಶಾಖೆಯಲ್ಲಿ ನಡೆಯುತ್ತಿರುವ ಸೇವಾ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಬ್ಯಾಂಕ್ ಎದುರು ಗ್ರಾಹಕರಿಂದ ಪ್ರತಿಭಟನೆ ಇಂದು ನಡೆಯಿತು. ಸವಣೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸರಿಯಾದ ಸೇವೆ ದೊರಕದೆ ಗ್ರಾಹಕರು ಪರದಾಡುವಂತಾಗಿದೆ. ಹಲವಾರು ಬಾರಿ ಬ್ಯಾಂಕ್‌ನ ಶಾಖಾಧಿಕಾರಿಗಳು, ಉನ್ನತ ಅಧಿಕಾರಿಗಳ ಗಮನಕ್ಕೆ ತಂದರೂ ಸೇವೆಯಲ್ಲಿ ಯಾವುದೇ ಸುಧಾರಣೆ ಆಗಿರುವುದಿಲ್ಲ. ಹಿರಿಯ ಗ್ರಾಹಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸವಣೂರು ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ ಗುಣಮಟ್ಟದ ಗ್ರಾಹಕ ಸ್ನೇಹಿ

ಸವಣೂರು ಕೆನರಾ ಬ್ಯಾಂಕ್‍ ಶಾಖೆಯಲ್ಲಿ ಸೇವಾ ನ್ಯೂನತೆ | ಸರಿಪಡಿಸುವಂತೆ ಆಗ್ರಹಿಸಿ ಗ್ರಾಹಕರಿಂದ ಪ್ರತಿಭಟನೆ Read More »

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ

ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಸಂದರ್ಭ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯೋಬ್ಬನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪುತ್ತೂರು ಹಾರಾಡಿ ಮೂಲದ, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಆರೋಪಿ ಮೊಹಮ್ಮದ್ ಹಫೀಜ್‍ ಹೈಡೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ

ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ಆರೋಪಿ ಪುತ್ತೂರು ಮೂಲದ ಎಚ್‍.ಮೊಹಮ್ಮದ್ ಹಫೀಜ್‍ ಬಂಧನ | ಸೊತ್ತುಗಳ ವಶ Read More »

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ

ಬಂಟ್ವಾಳ: ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಬಂಟ್ವಾಳ ತಾಲೂಕಿನ ವಿಟ್ಲ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತು. ಶುಭಾರಂಭದ ಪ್ರಯುಕ್ತ ಬೆಳಿಗ್ಗೆ  10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ ನಡೆಯಿತು. ಬಳಿಕ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕಾಯಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ.ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ದ.ಕ.ಜಿಲ್ಲಾ ಶಾಮಿಯಾನ

ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ Read More »

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬೈಕ್ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ತುಂಬೆ ಬಳಿ ನಡೆದಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲೇ ಮೃತಪಟ್ಟವರು. ಸಂದೀಪ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ

ಬೈಕ್ – ಖಾಸಗಿ ಬಸ್ ಡಿಕ್ಕಿ | ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ Read More »

error: Content is protected !!
Scroll to Top