ಬಂಟ್ವಾಳದ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳವು
ಮಂಗಳೂರು: ಬಂಟ್ವಾಳ ತಾಲೂಕಿನ ಪುದು ಗ್ರಾಮದ ಶ್ರೀ ದೇವಕಿ ಕೃಷ್ಣ ರವಳನಾಥ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವುಗೈದ ಘಟನೆ ನಡೆದಿದೆ. ಮೂವರು ಕಳ್ಳರ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ. ದೇವಸ್ಥಾನದ ಹಿಂಬಾಗಿಲು ಮುರಿದು ಒಳನುಗ್ಗಿದ್ದ ಮೂವರು ಆಗಂತುಕರು ಈ ದರೋಡೆಯನ್ನು ಮಾಡಿದ್ದಾರೆ. ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಬಂಗಾರದ ವಸ್ತುಗಳನ್ನು ತೆಗೆದು ಹೊರತಂದು […]










