ದಕ್ಷಿಣ ಕನ್ನಡ

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ

ಬೆಳ್ತಂಗಡಿ : 12 ಜನರ ತಂಡವೊಂದು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಧರ್ಮಗುರು ಶಮೀರ್ ಮುಸ್ಲಿಯಾರ್ (37) ಅವರ ಮೇಲೆ ತಂಡ ಹಲ್ಲೆ ನಡೆಸಿದ್ದು, ಗಾಯಗೊಂಡ ಧರ್ಮಗುರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್, ಅನ್ಸರ್, ಮುನೀರ್ ಅಸೀಫ್, ಅಫೀಝ್, ಅಫ್ರೀಜ್, ಶರೀಫ್, ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ […]

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ Read More »

ಕುಡಿದು ಬಸ್‍ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು

ಉಪ್ಪಿನಂಗಡಿ : ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ಕುಡಿದು ಬಸ್ ಚಲಾಯಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ಹೋಗಿ, ತದ ನಂತರದಲ್ಲಿ ಆಲಂತಾಯದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಮದ್ಯಪಾನ  ಸೇವಿಸಿ ಬಸ್ಸನ್ನು ಮನ ಬಂದಂತೆ  ಚಲಾಯಿಸಿದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ಬೊಬ್ಬೆ ಹಾಕಿದ್ದಾರೆ.. ಬಸ್‌ನಲ್ಲಿದ್ದ ಪ್ರಯಾಣಿಕರ ಕೂಗು ಕೇಳಿ ಸ್ಥಳೀಯ ನಾಗರಿಕರು ಬಸ್‌ನ್ನು ನಿಲ್ಲಿಸಲು ಮುಂದಾಗಿದ್ದಾರೆ.  ಬಸ್ ನಿಲ್ಲುತ್ತಿದ್ದಂತೆಯೇ ಚಾಲಕನನ್ನು ಬಸ್‌ನಿಂದ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಬಳಿಕ ಪೊಲೀಸರಿಗೆ ದೂರಿ ನೀಡಿ ಚಾಲಕನನ್ನು ಠಾಣೆಗೆ

ಕುಡಿದು ಬಸ್‍ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು Read More »

17 ವರ್ಷದ ಬಾಲಕಿಗೆ ಮದುವೆ | ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಜೈಲು  ಶಿಕ್ಷೆ

ಮಂಗಳೂರು : ಕಾನೂನಿನ ವಿರುದ್ದವಾಗಿ 17 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.  ಈ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಷ್ಟೋ ನ್ಯಾಯಾಲಯ ಆರೋಪಿತರಾದ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಗಳ ಕಾಲ ಶಿಕ್ಷೆ ವಿಧಿಸಲು ನ್ಯಾಯಲಯ ತೀರ್ಪು ನೀಡಿದೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್

17 ವರ್ಷದ ಬಾಲಕಿಗೆ ಮದುವೆ | ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಜೈಲು  ಶಿಕ್ಷೆ Read More »

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು

ಮಂಗಳೂರು: ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿತ್ತಿರುವ ವೇಳೆ ಹುಂಡೈ ಕಾರು ಹೊತ್ತಿ ಉರಿದ ಘಟನೆ ಮಂಗಳೂರಿನ ಕೆ.ಎಸ್.ರಾವ್ ರಸ್ತೆಯ ಸಿಟಿ ಸೆಂಟರ್ ಬಳಿ ಸೋಮವಾರ ನಡೆದಿದೆ. ವೈದ್ಯೆಯೊಬ್ಬರು ತಮ್ಮ ಕಾರನ್ನು ಚಲಾಯಿಸಿಕೊಂಡು ಬಂದು ಅಪಾರ್ಟ್‌ಮೆಂಟ್ ಬಳಿ ತಂದು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅವರು ಕಾರಿನಿಂದ ಇಳಿದಿದ್ದಾರೆ. ಅಷ್ಟರಲ್ಲಾಗಲೇ ಕಾರಿನ ಮುಂಭಾಗ ಸುಟ್ಟು ಉರಿದು ಹೋಗಿದೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ತಗುಳಿ ಅವಘಡ ನಡೆದಿದ್ದು, ಸ್ಥಳಕ್ಕೆ ಧಾವಿಸಿದ

ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಹುಂಡೈ ಕಾರು Read More »

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಮೊಬೈಲ್‍ ನಲ್ಲಿ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿ ಜೀವನ ಮಾಡಿಕೊಂಡಿದ್ದ ಪುರುಷೋತ್ತಮ್ ತನ್ನ ಮೊಬೈಲ್ ಸ್ಟೇಟಸ್ ನಲ್ಲಿ “ಓಂ ಶಾಂತಿ ಎನ್ನ ಜೋಕ್ಲೆನ್ ಸೋಕುಡು ತೂವೆನ್ಲೆ ಅಣ್ಣ” ಎಂದು ಬರೆದು ಹಾಕಿ ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ

ಸುಳ್ಯ: ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿ ತರಬೇತುದಾರರು,  ಸಂಘಟಕಿ  ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ “ಪ್ರತಿಷ್ಠಿತ “ಚೈತನ್ಯ ಶ್ರೀ- 2024”  ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್ ಮೊದಲಾದ ಸಂಸ್ಥೆಗಳಲ್ಲಿ ಹಲವು ಪ್ರಥಮಗಳೊಂದಿಗೆ ಕೆಲವು ಶಾಶ್ವತ ದಾಖಲೆಗಳನ್ನು ನಿರ್ಮಿಸಿರುವ ಡಾ. ಅನುರಾಧಾ ಕುರುಂಜಿಯವರು ಶಿಕ್ಷಣದ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಪ್ರತಿಷ್ಠಿತ “ಚೈತನ್ಯ ಶ್ರೀ- 2024”   ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ Read More »

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ

ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ವೃತ್ತಿಪರ ಯಕ್ಷಗಾನ ಭಾಗವತೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಲೀಲಾವತಿ ಬೈಪಡಿತ್ತಾಯ (77) ಶನಿವಾರ ನಿಧನರಾಗಿದ್ದಾರೆ. ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ Read More »

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ

ಕಾರ್ಕಳ : ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ, ಕಬ್ಬಡಿ ಆಟಗಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮುನಿಯಲು ನಿವಾಸಿಯಾದ ಪ್ರೀತಮ್ ಶೆಟ್ಟಿ (26) ಎಂದು ಗುರುತಿಸಲಾಗಿದೆ. ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ತಂಡದ ಸಕ್ರಿಯ ಆಹ್ವಾನಿತ ಆಟಗಾರ. ಎಸ್‍. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಪ್ರತಿಭಾನ್ವಿತ ಆಟಗಾರ ಕಬಡ್ಡಿ ಆಟದ ಕಾರಣ ಮಂಡ್ಯಕ್ಕೆ ತೆರಳಿದ್ದ ಪ್ರೀತಮ್ ಶೆಟ್ಟಿ ಅವರಿಗೆ ಆಟದ ನಡುವೆ ಎದೆ ನೋವು ಕಾಣಿಸಿಕೊಂಡು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ Read More »

ವಿರಾಸತ್: ರಾಸಲೀಲೆ ನೃತ್ಯದ ವೈಭವ, ಡೊಳ್ಳಿನ ಅಬ್ಬರದ ಅಲೆ

ಕರಾವಳಿಯಲ್ಲಿ ಅವತರಿಸಿದ ಯದುಕುಲ ಲೋಕ ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ವಿರಾಸತ್‌ನ ನಾಲ್ಕನೇ ದಿನವಾದ ಶುಕ್ರವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶೈಕ್ಷಣಿಕ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಸಂಚಲನ ಸೃಷ್ಟಿಸಿದರು. ಬಡಗುತಿಟ್ಟಿನ ಯಕ್ಷ ವೇಷಧಾರಿಗಳು ಕೃಷ್ಣನ ರಾಸಲೀಲೆಯನ್ನು ವೇದಿಕೆ ಮೇಲೆ ಪ್ರದರ್ಶಿಸಿದರು.ಮಂಟಪ ಪ್ರಭಾಕರ ಮತ್ತು ವಿದ್ವಾನ್ ಚಂದ್ರಶೇಖರ ನಾವುಡ ನಿರ್ದೇಶನದಲ್ಲಿ ಮೋಡಿಬಂದ ‘ಬಡಗುತಿಟ್ಟು ಯಕ್ಷಗಾನ ರಾಸಲೀಲೆ’ ಯಕ್ಷ ರೂಪಕ ಕೃಷ್ಣನ ಯದುಕುಲ ಲೋಕ ಕರಾವಳಿಯಲ್ಲಿ ಅವತರಿಸಿದಂತೆ ಭಾಸವಾಯಿತು.’ರಂಗನೇತಕೆ ಬಾರನೇ..’ ‘ಕೊಳಲನೂದುತ ಬಂದ ಕೃಷ್ಣ’ ಸಾಲಿಗೆ ಮಕ್ಕಳ ನೃತ್ಯ ಗೋಕುಲವನ್ನೇ

ವಿರಾಸತ್: ರಾಸಲೀಲೆ ನೃತ್ಯದ ವೈಭವ, ಡೊಳ್ಳಿನ ಅಬ್ಬರದ ಅಲೆ Read More »

6.7 ಕೆಜಿ ಗಾಂಜಾ ವಶ: ಆರೋಪಿ ಬಂಧನ

ಮುಂಬಯಿಯಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪಿ ಮಂಗಳೂರು: ಡ್ರಗ್ಸ್ ಮುಕ್ತ ಮಂಗಳೂ ಮಾಡಲು ದಿಟ್ಟ ಕಾರ್ಯಾಚರಣೆ ನಡೆಸುತ್ತುರುವ ಪೊಲೀಸರು ಮಾದಕ ವಸ್ತು ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, 6.7 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಬಳಿಯ ಮೂಲ್ಕಿ ಬಪ್ಪನಾಡುವಿನಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಖಿಲೇಶ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಸೇರಿದಂತೆ ಜನರಿಗೆ ಮಾರಾಟ ಮಾಡುವ ಉದ್ದೇಶದಿಂದ ಅಖಿಲೇಶ್ ಮುಂಬಯಿಯಿಂದ ಮಂಗಳೂರಿಗೆ ಗಾಂಜಾ ತರಿಸಿಕೊಂಡಿದ್ದ ಎಂದು ಪೊಲೀಸರು

6.7 ಕೆಜಿ ಗಾಂಜಾ ವಶ: ಆರೋಪಿ ಬಂಧನ Read More »

error: Content is protected !!
Scroll to Top