ದಕ್ಷಿಣ ಕನ್ನಡ

ಜರ್ಮನಿಯ ಸಾಫ್ಟ್ ವೇರ್ ಇಂಜಿನಿಯರ್ ಆದಿತ್ಯ ಭಟ್‍ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಅತ್ತಾಜೆ ನಿವಾಸಿ, ಜರ್ಮನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಭಟ್ (28) ಮೃತಪಟ್ಟ ಯುವಕ ರಮೇಶ್ ಭಟ್ ಎಂಬವರ ಪುತ್ರ ಆದಿತ್ಯ ಭಟ್‍ ಶುಕ್ರವಾರ ಮನೆಯಲ್ಲಿ ನಡೆದ ಆಯುಧ ಪೂಜೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ತಕ್ಷಣ ಮನೆಯವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರಿ […]

ಜರ್ಮನಿಯ ಸಾಫ್ಟ್ ವೇರ್ ಇಂಜಿನಿಯರ್ ಆದಿತ್ಯ ಭಟ್‍ ಹೃದಯಾಘಾತದಿಂದ ನಿಧನ Read More »

ವಿಧಾನಪರಿಷತ್ ಉಪಚುನಾವಣೆ : ಮಂಗಳೂರಿನಲ್ಲಿ ಪ್ರಚಾರ ಸಭೆ

ಮಂಗಳೂರು: ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಮಂಗಳೂರಿನ ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ,, ಯುವ ನಾಯಕನಿಗೆ, ಅತ್ಯಂತ ಹಿಂದುಳಿದ ಜಾತಿಯ ಬಿಜೆಪಿ ಕಾರ್ಯಕರ್ತನಿಗೆ ಪಕ್ಷ ಟಿಕೆಟ್ ನೀಡಿದೆ, ನಾವೆಲ್ಲರೂ ಸೇರಿ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗಾಗಿ ಶ್ರಮಿಸೋಣ ಎಂದರು. ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥವಾದ  ಅಭ್ಯರ್ಥಿಯನ್ನೇ ಬಿಜೆಪಿ ಇಂದು ವಿಧಾನ

ವಿಧಾನಪರಿಷತ್ ಉಪಚುನಾವಣೆ : ಮಂಗಳೂರಿನಲ್ಲಿ ಪ್ರಚಾರ ಸಭೆ Read More »

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ಳಾರೆ: ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳ್ಳಾರೆ ಜೀವನ್ ಸಾರಥ್ಯದ ಡ್ಯಾನ್ಸ್ & ಬೀಟ್ಸ್ ತಂಡ ಆಯ್ಕೆಯಾಗಿದೆ. ಡ್ಯಾನ್ಸ್ & ಬೀಟ್ಸ್ ಬೆಳ್ಳಾರೆ, ಪಂಜ, ಕೈಕಂಬ, ಸುಬ್ರಹ್ಮಣ್ಯ ವಿದ್ಯಾರ್ಥಿಗಳ ತಂಡವನ್ನೊಳಗೊಂಡಿದೆ. ಅ.11 ರಂದು ದಸರಾ ಮೈಸೂರು ಜಗನ್ ಮೋಹನ ಅರಮನೆಯ ಸಾಂಸ್ಕೃತಿಕ ವೇದಿಕೆಯಲ್ಲಿ ನೃತ್ಯ ಸಂಭ್ರಮದ ಕಾರ್ಯಕ್ರಮದಲ್ಲಿ ತಮ್ಮ ಡ್ಯಾನ್ಸ್ ಪ್ರದರ್ಶನ ನೀಡಲಿದ್ದಾರೆ.

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ Read More »

ಉಪನ್ಯಾಸಕ ಅರುಣ್ ಉಳ್ಳಾಲ್‍ ಮೇಲೆ ಸುಮೊಟೋ ಕೇಸ್ ಹಾಕಿರುವುದು ಸರಿಯಲ್ಲ | ತಾಕತ್ತಿದ್ದರೆ ಪೊಲೀಸರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಭವನಕ್ಕೆ ನುಗ್ಗುತ್ತೇವೆ ಎಂದ ಐವನ್ ಡಿ’ಸೋಜಾ ಅವರ ಮೇಲೆ ಸುಮೊಟೋ ಕೇಸು ದಾಖಲಿಸಲಿ : ಶ್ರೀಕಾಂತ್ ಶೆಟ್ಟಿ ಕಾರ್ಕಳ

ಮಂಗಳೂರು: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ನೀಡಿರುವ ಒಂದು ವಿಡಿಯೋ ಹೇಳಿಕೆಯನ್ನು ತಿರುಚಿ ಅವರನ್ನು ತೇಜೋವಧೆ ಮಾಡುತ್ತಿರುವ ಸಂಗತಿ ಸಂಘಟನೆಯ ಗಮನಕ್ಕೆ ಬಂದಿದ್ದು, ಕೆಲವು ಕಿಡಿಗೇಡಿಗಳು ಈ ವಿಡಿಯೋವನ್ನು ಮುಂದಿಟ್ಟುಕೊಂಡು ಡಾಕ್ಟರ್ ಅರುಣ್ ಉಳ್ಳಾಲ್ ಅವರ ಮೇಲೆ ಪೊಲೀಸರಿಂದ ಸುಮೊಟೊ ಪ್ರಕರಣ ದಾಖಲಿಸುವ ಕೃತ್ಯದಲ್ಲೂ ಯಶಸ್ವಿಯಾಗಿರುತ್ತಾರೆ. ತಾಕತ್ತಿದ್ದರೆ ರಾಜ್ಯಪಾಲರ ಭವನಕ್ಕೆ ಬಾಂಗ್ಲಾ ಮಾದರಿ ನುಗ್ಗುತ್ತೇವೆ ಎಂದ ಐವನ್ ಡಿಸೋಜಾ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ ಎಂದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಕಿಡಿಕಾರಿದ್ದಾರೆ. ಅವರು ನಗರದ ಖಾಸಗಿ

ಉಪನ್ಯಾಸಕ ಅರುಣ್ ಉಳ್ಳಾಲ್‍ ಮೇಲೆ ಸುಮೊಟೋ ಕೇಸ್ ಹಾಕಿರುವುದು ಸರಿಯಲ್ಲ | ತಾಕತ್ತಿದ್ದರೆ ಪೊಲೀಸರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಭವನಕ್ಕೆ ನುಗ್ಗುತ್ತೇವೆ ಎಂದ ಐವನ್ ಡಿ’ಸೋಜಾ ಅವರ ಮೇಲೆ ಸುಮೊಟೋ ಕೇಸು ದಾಖಲಿಸಲಿ : ಶ್ರೀಕಾಂತ್ ಶೆಟ್ಟಿ ಕಾರ್ಕಳ Read More »

ವಿಧಾನ ಪರಿಷತ್ ಉಪಚುನಾವಣೆ : ದ.ಕ.ಜಿಲ್ಲಾ ಸಹಸಂಚಾಲಕರಾಗಿ ರಾಕೇಶ್‍‍ ರೈ ಕೆಡೆಂಜಿ ನಿಯೋಜನೆ

ಸವಣೂರು: ವಿಧಾನಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದ್ದು, ಸಂಚಾಲಕರಾಗಿ ಕ್ಯಾ.ಗಣೇಶ್‍ ಕಾರ್ಣಿಕ್‍, ಸಹಸಂಚಾಲಕರಾಗಿ ದ.ಕ.ಜಿಲ್ಲಾ ಉಪಾಧ್ಯಕ್ಷ ರಾಕೇಶ್‍ ರೈ ಕೆಡೆಂಜಿ ಅವರನ್ನು ನಿಯೋಜನೆ ಮಾಡಲಾಗಿದೆ. ರಾಕೇಶ್ ರೈ ಕಡೆಂಜಿ ಅವರು ಸವಣೂರು ಗ್ರಾ.ಪಂ.ಉಪಾಧ್ಯಕ್ಷರಾಗಿ, ಬಿಜೆಪಿ ಸುಳ್ಯ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ ವಿವಿಧ ಸಂಘ ಸಂಸ್ಥೆಗಳು ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ

ವಿಧಾನ ಪರಿಷತ್ ಉಪಚುನಾವಣೆ : ದ.ಕ.ಜಿಲ್ಲಾ ಸಹಸಂಚಾಲಕರಾಗಿ ರಾಕೇಶ್‍‍ ರೈ ಕೆಡೆಂಜಿ ನಿಯೋಜನೆ Read More »

ವಿಧಾನ ಪರಿಷತ್ ಉಪಚುನಾವಣೆ | ಜನಪ್ರತಿನಿಧಿಗಳ ಸಭೆ

ಮಂಗಳೂರು: ವಿಧಾನ ಪರಿಷತ್‌ ಸ್ಥಾನದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳ ಸಭೆ ಇಂದು ನಡೆಯಿತು. ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಕಿಶೋರ್ ಕುಮಾರ್ ಅವರಿಂದ ಪಕ್ಷ ಚಟುವಟಿಕೆಯಲ್ಲಿ ಪ್ರೇರಣೆ ಪಡೆದವರಲ್ಲಿ ನಾನೂ ಒಬ್ಬ ಎಂಬ ಹೆಮ್ಮೆಯಿದೆ. ವಿವಿಧ ಚುನಾವಣೆಗಳಲ್ಲಿ ಬೂತ್ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಸಂಘಟನಾ ಚಟುವಟಿಕೆಯ ಅನುಭವವಿರುವ ಕಿಶೋರ್ ಕುಮಾರ್ ಅವರನ್ನು ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯು ಪಕ್ಷ

ವಿಧಾನ ಪರಿಷತ್ ಉಪಚುನಾವಣೆ | ಜನಪ್ರತಿನಿಧಿಗಳ ಸಭೆ Read More »

ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024 | ಜೂಯಿಸ್ ಫಿಟ್ನೆಸ್ ಕ್ಲಬ್ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಆಯೋಜನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ-2024ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್-2024 ಸ್ಪರ್ಧೆ ಭಾನುವಾರ ಬೆಳಿಗ್ಗೆ ನಡೆಯಿತು. ‘ವನ್ ಸಿಟಿ ವನ್ ಸ್ಪಿರಿಟ್’ ಧ್ಯೇಯದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ವ್ಯಸನಮುಕ್ತವಾಗಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಸ್ಪರ್ಧೆಯಲ್ಲಿ ಚಿಣ್ಣರಿಂದ ವೃದ್ಧರವರೆಗೂ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ಮೂಲಕ ವಿಶೇಷ ಮೆರಗು ನೀಡಿದರು. ಕೇರಳ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. ಧಾರ್ಮಿಕ ಕ್ಷೇತ್ರದಿಂದ ಇಂತಹ

ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024 | ಜೂಯಿಸ್ ಫಿಟ್ನೆಸ್ ಕ್ಲಬ್ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಆಯೋಜನೆ Read More »

ಮಾಜಿ ಶಾಸಕ ಮೊಯಿದೀನ್ ಬಾವಾ ಸಹೋದರ ಮಮ್ತಾಜ್ ಆಲಿ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ | ತನಿಖೆ ಕೈಗೆತ್ತಿಕೊಂಡ ಪೊಲೀಸರು

ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ರಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಇಂದು ಮುಂಜಾನೆ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ತನಿಖೆ ಕೈಗೊಂಡಿದ್ದಾರೆ. ಮಮ್ರಾಜ್ ಅಲ್ಲಿ ಅವರು ತನ್ನ ಮಗಳಿಗೆ ನಾಟ್ರಸ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ

ಮಾಜಿ ಶಾಸಕ ಮೊಯಿದೀನ್ ಬಾವಾ ಸಹೋದರ ಮಮ್ತಾಜ್ ಆಲಿ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ | ತನಿಖೆ ಕೈಗೆತ್ತಿಕೊಂಡ ಪೊಲೀಸರು Read More »

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮಂಗಳೂರು ಕಚೇರಿ ನವೀಕೃತಗೊಂಡು ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರಿನ ಕಛೇರಿ ಆದಿಚುಂಚನಗಿರಿ ಶ್ರೀಗಳ ದಿವ್ಯ ಅನುಗ್ರಹದೊಂದಿಗೆ ಹಾಗೂ ಆದಿಚುಂಚನಗಿರಿ ಮಂಗಳೂರು ಶ್ರೀಗಳ ದಿವ್ಯ ಆಶೀರ್ವಾದದೊಂದಿಗೆ ಶನಿವಾರ ಮಂಗಳೂರಿನ ಒಕ್ಕಲಿಗರ ಭವನದ 1 ನೇ ಮಹಡಿಯಲ್ಲಿ ನವೀಕೃತಗೊಂಡು ಶುಭಾರಂಭಗೊಂಡಿತು. ಮುಂಜಾನೆ ಗಣಹೋಮ ಪೂಜಾ ಕಾರ್ಯಕ್ರಮ ನೆರವೇರುವ ಮೂಲಕ ಸಮಸ್ತ ದಕ್ಷಿಣ ಕನ್ಡಡ ಜಿಲ್ಲೆಯ ಒಕ್ಕಲಿಗರ ಸೇವೆಗಾಗಿ ಸಿದ್ದವಾಗಿದೆ. ಸಮುದಾಯದ ಅನೇಕ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮಂಗಳೂರು ಕಚೇರಿ ನವೀಕೃತಗೊಂಡು ಶುಭಾರಂಭ Read More »

ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಟ್ಟ ಕುಜುಮಗದ್ದೆಯಲ್ಲಿ ನಡೆದಿದೆ. ಮೂಲತ: ಜಪ್ಪು ಗೋರ್ದಂಡು ವಿವಾಸಿಯಾದ ಪ್ರಸಾದ್ (44) ಮೃತಪಟ್ಟವರು. ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ರೆಯಲ್ಲಿ ನೆಲೆಸಿದ್ದರು. ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಹೇಳಲಾಗಿದೆ. ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು

ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ Read More »

error: Content is protected !!
Scroll to Top