ದಕ್ಷಿಣ ಕನ್ನಡ

ಕಾಸ್ಮೆಟಿಕ್‌ ಸರ್ಜರಿ ಮಾಡಿಸಿಕೊಂಡ ಯುವಕ ಸಾವು

ಮಂಗಳೂರು: ಮಂಗಳೂರಿನ ಕಂಕನಾಡಿಯ ಬೆಂದೂರ್‌ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮೊಹ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ.ಮೊಹ್ಮದ್ ಮಾಝಿನ್ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್‌ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪರೆಂಟ್ ಕ್ಲಿನಿಕ್​ಗೆ ಹೋಗಿದ್ದರು. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಹೆಚ್ಚು ಸಮಯ ಕಳೆದರೂ ಶಸ್ತ್ರಚಿಕಿತ್ಸೆ ಮುಗಿಯದ ಕಾರಣ ಸಂಶಯಗೊಂಡ ಪೋಷಕರು ಈ ಬಗ್ಗೆ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು […]

ಕಾಸ್ಮೆಟಿಕ್‌ ಸರ್ಜರಿ ಮಾಡಿಸಿಕೊಂಡ ಯುವಕ ಸಾವು Read More »

ಮನೆಗೆ ನುಗ್ಗಿ ನಗ-ನಗದು ಅಪಹರಣ : ಪ್ರಕರಣ ದಾಖಲು

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗ-ನಗದು ಕಳವುಗೈದ ಘಟನೆ ಬೆಳ್ತಂಗಡಿ ನಗರದ ಹಳೆಕೋಟೆ ಎಂಬಲ್ಲಿ ನಡೆದಿದೆ. ಒಳನುಗ್ಗಿದ ಕಳ್ಳರು ಮನೆಯಿಂದ ಸುಮಾರು ಐದು ಲಕ್ಷ  ರೂ.ಮೌಲ್ಯದ ಚಿನ್ನಾಭರಣ ಹಾಗೂ ಐದು ಲಕ್ಷ ರೂ. ನಗದನ್ನು ಅಪಹರಿಸಿದ್ದಾರೆ. ಪ್ರಸನ್ನ ಕುಮಾರ್ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಇದೇ ಮನೆಯ ಹಾಲ್ ನಲ್ಲಿ ಟಿ.ವಿ.ಸ್ಟ್ಯಾಂಡ್ ಮೇಲೆ ಇಟ್ಟಿದ್ದ 5,05,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ರೂ. ನಗದನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಬೆಳ್ತಂಗಡಿ

ಮನೆಗೆ ನುಗ್ಗಿ ನಗ-ನಗದು ಅಪಹರಣ : ಪ್ರಕರಣ ದಾಖಲು Read More »

ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ | ಹಿಂದೂ ಸಂಘಟನೆ ಯುವಕರ ಬಂಧನ | ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಸುಳ್ಯ : ಅನ್ಯ ಕೋಮಿನ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ ಯುವಕನಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪದಡಿ ಇಬ್ಬರು ಹಿಂದೂ ಸಂಘಟನೆಯ ಯುವಕರನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಸುಳ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಸುಳ್ಯ ಬಸ್ ನಿಲ್ದಾಣದಲ್ಲಿ ಸೇರಿದ ಹಿಂದೂ ಹಿತರಕ್ಷಣಾ ವೇದಿಕೆಯ ಹಿಂದೂ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಮೆರವಣಿಗೆ ಮೂಲಕ ಗಾಂಧಿನಗರ ಕಲ್ಕುಡ ದೈವಸ್ಥಾನಕ್ಕೆ ತೆರಳಿ

ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ | ಹಿಂದೂ ಸಂಘಟನೆ ಯುವಕರ ಬಂಧನ | ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ Read More »

ಖಾಸಗಿ ಸಮಾರಂಭಗಳಿಗೆ ನೀತಿ ಸಂಹಿತೆಯಡಿ ಅನುಮತಿ ಅಗತ್ಯವಿಲ್ಲ

ವಿಧಾನ ಪರಿಷತ್‌ ಚುನಾವಣೆಗಾಗಿ ಜಾರಿಯಾದ ನೀತಿ ಸಂಹಿತೆ ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದ ಬೆನ್ನಿಗೆ ನೀತಿ ಸಂಹಿತೆ ಜಾರಿಗೆ ಬಂದಿದೆ. ಆದರೆ ಈ ನೀತಿ ಸಂಹಿತೆಯಡಿ ಮದುವೆ ಮತ್ತಿತರ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಪಡೆದುಕೊಳ್ಳುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.ಆದರೆ ಈ ಸಮಾರಂಭಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಗಳನ್ನು ಉಲ್ಲಂಘನೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದ್ದಾರೆ.ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ

ಖಾಸಗಿ ಸಮಾರಂಭಗಳಿಗೆ ನೀತಿ ಸಂಹಿತೆಯಡಿ ಅನುಮತಿ ಅಗತ್ಯವಿಲ್ಲ Read More »

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ತಂಡದಿಂದ ಹಲ್ಲೆ | ಪ್ರಕರಣ ದಾಖಲು

ಸುಳ್ಯ: ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ತಂಡವೊಂದು ಥಳಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅಬ್ದುಲ್ ನಿಯಾಝ್ ಎಂಬಾತ ಅಸಭ್ಯ ವರ್ತನೆ ತೋರಿದ್ದ ಎನ್ನಲಾಗಿದೆ. ಆತನಿಗೆ ತಂಡ ಹಿಗ್ಗಾಮುಗ್ಗಾ ಥಳಿಸಿದ್ದು, ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆತ ಅಲ್ಲಿಂದ ತೆರಳಿರುವುದಾಗಿ ತಿಳಿದುಬಂದಿದೆ. ಬಸ್ ಸುಬ್ರಹ್ಮಣ್ಯಕ್ಕೆ ತಲುಪಿದಾಗ ಆರೋಪಿ ಯುವಕ ಬಸ್ಸಿನಿಂದ ಇಳಿದಿದ್ದಾನೆ. ವಿದ್ಯಾರ್ಥಿನಿ ಅದೇ ಬಸ್ಸಿನಲ್ಲಿ ಸುಳ್ಯಕ್ಕೆ ಬಂದಿದ್ದಾಳೆ. ಅಲ್ಲಿ ವಿದ್ಯಾರ್ಥಿನಿಯ ಸಹಪಾಠಿಗಳು ಜಮಾಯಿಸಿದ್ದರು. ಬಳಿಕ

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ತಂಡದಿಂದ ಹಲ್ಲೆ | ಪ್ರಕರಣ ದಾಖಲು Read More »

ಜಿಲ್ಲಾ ಮಟ್ಟಡ ಕಬಡ್ಡಿಯನ್ನು ಪ್ರತಿನಿಧಿಸಿದ ವಯೋಮಿತಿ ಮೀರಿದ ಯುವಕ | ಪ್ರಥಮ ಸ್ಥಾನ ಕಳೆದುಕೊಂಡ ತಂಡ

ಸುಳ್ಯ: ವಯೋಮಿತಿ ಮೀರಿದ ವಿದ್ಯಾರ್ಥಿಯೊಬ್ಬ ಪ್ರಾಥಮಿಕ ಶಾಲಾ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಆಡಿದ ಕಾರಣಕ್ಕಾಗಿ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಪಡೆದುಕೊಂಡಿದ್ದ ತಂಡ ತನ್ನ ಸ್ಥಾನ ಕಳೆದುಕೊಂಡ ಘಟನೆ ವರದಿಯಾಗಿದೆ. ಗುತ್ತಿಗಾರಿನ ಪಿ.ಎಂ. ಶ್ರೀ ಶಾಲಾ ಮೈದಾನದಲ್ಲಿ ಎರಡು ದಿನಗಳ ಹಿಂದೆ  ನಡೆದ ಪ್ರಾಥಮಿಕ ಶಾಲಾ ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು ತಾಲೂಕಿನ ಹೆಸರಲ್ಲಿ ಆಡಿರುವ ಕಡಬ ತಾಲೂಕಿನ ಸೈಂಟ್ ಆನ್ಸ್ ಕಡಬ ತಂಡ ಪ್ರಥಮ ಸ್ಥಾನ ಪಡೆದಿತ್ತು. ಆದರೆ ಈ ತಂಡದಲ್ಲಿ ವಯೋಮಿತಿ

ಜಿಲ್ಲಾ ಮಟ್ಟಡ ಕಬಡ್ಡಿಯನ್ನು ಪ್ರತಿನಿಧಿಸಿದ ವಯೋಮಿತಿ ಮೀರಿದ ಯುವಕ | ಪ್ರಥಮ ಸ್ಥಾನ ಕಳೆದುಕೊಂಡ ತಂಡ Read More »

ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ

ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ಶನಿವಾರ ನಿಧನರಾಗಿದ್ದಾರೆ. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದ ಅವರು, ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು

ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ | 2.01 ಕೋಟಿ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಡ್ ಘೊಷಣೆ : ಪಿ.ಸಿ.ಜಯರಾಮ

ಸುಳ್ಯ: ಗೌಡರ ಯುವ ಸೇವಾ ಸಂಘದಡಿ ಕಾರ್ಯಾಚರಿಸುತ್ತಿರುವ ಶ್ರೀ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ ಭಾನುವಾರ ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ವರದಿ ವರ್ಷದಲ್ಲಿ 1,060 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 2.01 ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಘದಲ್ಲಿ 19 ಸಾವಿರಕ್ಕೂ ಮಿಕ್ಕಿ ಸದಸ್ಯರಿದ್ದು, ಶೇ.15ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಘೋಷಿಸಿದರು. ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ.ಟಿ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ | 2.01 ಕೋಟಿ ರೂ. ನಿವ್ವಳ ಲಾಭ, ಸದಸ್ಯರಿಗೆ ಶೇ.15 ಡಿವಿಡೆಂಡ್ ಘೊಷಣೆ : ಪಿ.ಸಿ.ಜಯರಾಮ Read More »

ಮಂಗಳೂರು ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ | ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

ಮಂಗಳೂರು: ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರ್ಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಾಣ ಮಾಡುತ್ತಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ ಇತ್ತೀಚೆಗೆ ಕಾಂಗ್ರೆಸ್‌ನಿಂದ ಐವನ್ ಡಿಸೋಜಾ ಅವರನ್ನು ಎಂಎಲ್‌ಸಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗಾಗಿ ನೂತನವಾಗಿ ನಿರ್ಮಿಸುತ್ತಿರುವ ಸರ್ಕಾರಿ ಕಚೇರಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮಂಗಳೂರಿನ ಲಾಲ್‌ಬಾಗ್ ಬಳಿ ಇರುವ ಮಹಾನಗರ ಪಾಲಿಕೆಯ ಸಂಕೀರ್ಣದಲ್ಲಿ ನೂತನ ಕಚೇರಿಯ ನಿರ್ಮಾಣ ಕಾರ್ಯ

ಮಂಗಳೂರು ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ | ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ Read More »

ಅಡಿಕೆ ಖರೀದಿಯಲ್ಲಿ ಸವಣೂರು ಸಿ.ಎ.ಬ್ಯಾಂಕ್‍ನ ಮಾಸ್ ಸಂಸ್ಥೆ ಪ್ರಥಮ | ಗೌರವಾರ್ಪಣೆ

ಮಂಗಳೂರು: ಅಡಿಕೆ ಖರೀದಿಯಲ್ಲಿ, ಉಭಯ ಜಿಲ್ಲೆಗಳಲ್ಲಿ ಅತೀ ಹೆಚ್ಚು ವ್ಯವಹಾರ ಮಾಡಿ ಪ್ರಥಮ ಸ್ಥಾನವನ್ನು ಪಡೆದಿರುವ ಸವಣೂರು ಸಿ ಎ ಬ್ಯಾಂಕ್ ಮಾಸ್ ಶಾಖೆಯನ್ನು ಮಂಗಳೂರು ಬೈಕಂಪಾಡಿಯಲ್ಲಿ ಜರುಗಿದ ಮಾಸ್ ಸಂಸ್ಥೆಯ ಮಹಾಸಭೆಯಲ್ಲಿ ಅಭಿನಂದಿಸಲಾಯಿತು. ಸವಣೂರು ಸಿ ಎ ಬ್ಯಾಂಕ್ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ, ಮಾಸ್ ಶಾಖೆಯ ಮುಖ್ಯಸ್ಥ ಯತೀಶ್ ಅವರಿಗೆ ಗೌರವಾರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮಾಸ್ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ನಿರ್ದೇಶಕರು ಸಹಿತಿ ಮತ್ತಿತರರು ಉಪಸ್ಥಿತರಿದ್ದರು.

ಅಡಿಕೆ ಖರೀದಿಯಲ್ಲಿ ಸವಣೂರು ಸಿ.ಎ.ಬ್ಯಾಂಕ್‍ನ ಮಾಸ್ ಸಂಸ್ಥೆ ಪ್ರಥಮ | ಗೌರವಾರ್ಪಣೆ Read More »

error: Content is protected !!
Scroll to Top