ದಕ್ಷಿಣ ಕನ್ನಡ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜಮಹೋತ್ಸವ | ಪೂರ್ವಭಾವಿ ಸಭೆ

ಮಂಗಳೂರು: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜತ ಮಹೋತ್ಸವವನ್ನು ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯ ಸಾನ್ನಿಧ್ಯವನ್ನು ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು. ಸಭೆಯಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿ , ಪಿ. ಎಸ್ . ಪ್ರಕಾಶ್ , ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು . ಮತ್ತು  ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು.

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ರಜಮಹೋತ್ಸವ | ಪೂರ್ವಭಾವಿ ಸಭೆ Read More »

ಸವಣಾಲು ಗ್ರಾಮದಲ್ಲಿ ಚಿರತೆ ಸೆರೆಯಾಗಿ ವಾರ ಕಳೆಯುವುದರೊಳಗೆ ಮತ್ತೊಂದು ಚಿರತೆ ಅರಣ್ಯ ಇಲಾಖೆಯ ಬೋನಿಗೆ

ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ  ಬೋನಿಗೆ ಚಿರತೆಯೊಂದು ಬಿದ್ದಿದ್ದು ಇದು ಈ ತಿಂಗಳಲ್ಲಿ ಬೋನಿಗೆ ಬಿದ್ದ ಎರಡನೇ ಚಿರತೆಯಾಗಿದೆ. ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಕಳೆದ ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಕಳೆದ ಕೆಲವು ತಿಂಗಳುಳಿಂದ  ಗುರಿಕಂಡ ಪರಿಸರದಲ್ಲಿ ಚಿರತೆ ಹಾವಳಿಯಿಂದ ಕೋಳಿ ಸೇರಿದಂತೆ ಸಾಕು ಪ್ರ್ರಾಣಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಬೋನ್ ಆಳವಡಿಸಿದ್ದರು. ಸುಮಾರು

ಸವಣಾಲು ಗ್ರಾಮದಲ್ಲಿ ಚಿರತೆ ಸೆರೆಯಾಗಿ ವಾರ ಕಳೆಯುವುದರೊಳಗೆ ಮತ್ತೊಂದು ಚಿರತೆ ಅರಣ್ಯ ಇಲಾಖೆಯ ಬೋನಿಗೆ Read More »

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಆಶ್ರಯದಲ್ಲಿ RDC-II ಮತ್ತು CATC ಶಿಬಿರ ಸೆ.21 ರಿಂದ 30 ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು  ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ  ಭಾಗವಹಿಸುವ ಕೆಡೆಟ್ ಗಳ ಎರಡನೇ ಹಂತದ ಆಯ್ಕೆ ಶಿಬಿರ ಮತ್ತು ಕಂಬೈನ್ಡ್ ಆನ್ವಲ್  ಟ್ರೈನಿಂಗ್ ಕ್ಯಾಂಪ್ ಎಂಬ ಎರಡು ಶಿಬಿರಗಳು ನಡೆಯಲಿವೆ.

ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ Read More »

ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಶಿಪಟ್ನ ಗ್ರಾಮದ ಉರ್ದು ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಸಮೀಪ ಕಾಡಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ನೋಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಿನಲ್ಲಿದ್ದರು ಎನ್ನಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆ ಎಂದು ತಿಳಿದು ಬಂದಿದ್ದು ಹಿಂದಿನ ಪತ್ನಿ ಕಳೆದ

ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ Read More »

ಯುವತಿ ನಾಪತ್ತೆ : ಪ್ರಕರಣ ದಾಖಲು

ಕೊಣಾಜೆ: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊರ್ವಳು ನಾಪತ್ತೆಯಾಗಿರುವ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾಗಿರುವ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಮುಡಿಪು

ಯುವತಿ ನಾಪತ್ತೆ : ಪ್ರಕರಣ ದಾಖಲು Read More »

ಮಂಗಳೂರು ಮೇಯರ್ ಮನೋಜ್‍ ಕುಮಾರ್, ಉಪಮೇಯರ್ ಭಾನುಮತಿ ಆಯ್ಕೆ

ಮಂಗಳೂರು : ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ದೇರೆಬೈಲ್ ವಾರ್ಡ್‌ನಿಂದ ಮನೋಜ್ ಕುಮಾರ್, ಉಪಮೇಯರ್ ಆಗಿ ಬೋಳಾರ್ ವಾರ್ಡ್‍ ನಿಂದ ಭಾನುಮತಿ ಆಯ್ಕೆಯಾದರು. ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ ನಾಲ್ವರು ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ಸೆ.19ರಂದು ಎಂಸಿಸಿಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಮೇಯರ್ ಸ್ಥಾನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಬಿಜೆಪಿಯಿಂದ ಮನೋಜ್ ಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅರ್ಹ

ಮಂಗಳೂರು ಮೇಯರ್ ಮನೋಜ್‍ ಕುಮಾರ್, ಉಪಮೇಯರ್ ಭಾನುಮತಿ ಆಯ್ಕೆ Read More »

ಮಹಿಳೆಗೆ ಲೈಂಗಿಕ ದೌರ್ಜನ್ಯ | ಆರೋಪಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನ

ಬೆಳ್ಳಾರೆ: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬರೆಪ್ಪಾಡಿ ಅವರ ಮೇಲೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಕುರಿತು ತಿಳಿದು ಬಂದಿದೆ. ಜ್ಯೋತಿಷಿ ಹಾಗೂ ಪುರೋಹಿತರಾಗಿದ್ದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ಎಡಮಂಗಲದ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ತಡರಾತ್ರಿ ಬೆಳ್ಳಾರೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಗೆ ಲೈಂಗಿಕ ದೌರ್ಜನ್ಯ | ಆರೋಪಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನ Read More »

ಬಿ.ಸಿ.ರೋಡು ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ

ಬಿ.ಸಿ.ರೋಡು: ಭಾರತ ಹಾಗೂ ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ‘ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ’ಯಡಿ ಬಿ.ಸಿ.ರೋಡಿನ ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಕಲಿಕೆಗೆ ಪ್ರವೇಶಾತಿ ಆರಂಭಗೊಂಡಿದೆ. ಬಿ.ಸಿ.ರೋಡಿನ ಭಾರತ್ ಕಮರ್ಷಿಯಲ್ ಸೆಂಟರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸಂಸ್ಥೆ ಉಪ್ಪಿನಂಗಡಿ ಪಾರಿಜಾತ ಬಿಲ್ಡಿಂಗ್‍ನಲ್ಲೂ ಕಾರ್ಯಾಚರಿಸುತ್ತಿದೆ. ಸಂಸ್ಥೆಯಲ್ಲಿ ಡಿಐಟಿ, ಡಿಒಎ, ಡಿಸಿಎ, ಡಿಡಿಟಿಪಿ, ಪಿಜಿಡಿಐಟಿ ಮತ್ತು ಪಿಜಿಡಿಸಿಎ, ಡಿಪ್ಲೋಮಾ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್, ನರ್ಸರಿ ಟೀಚರ್ಸ್ ಟ್ರೈನಿಂಗ್, ಮೊಂಟೆಸ್ಸರಿ ಟೀಚರ್ಸ್ ಟ್ರೈನಿಂಗ್, ತಾಂತ್ರಿಕ ಕೋರ್ಸುಗಳು, ಎ.ಸಿ.ರೆಫ್ರಿಜರೇಶನ್

ಬಿ.ಸಿ.ರೋಡು ಐಡಿಯಲ್ ಐಟಿಐ ಕಾಲೇಜಿನಲ್ಲಿ ಕಂಪ್ಯೂಟರ್ ಸಹಿತ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಆರಂಭ Read More »

ನೂತನವಾಗಿ ಅಸ್ತಿತ್ವಕ್ಕೆ ಬಂದ ಲೈವ್‍ ಅಸೋಸಿಯೇಶನ್‍ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಿವ್ಯವರ್ಮಾ, ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ, ಗಣೇಶ್ ಮಂಗಳೂರು ಆಯ್ಕೆ

ಕಾರ್ಕಳ: ನೂತನವಾಗಿ ಅಸ್ತಿತ್ವಕ್ಕೆ ಬಂದ ದ.ಕ., ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ದ.ಕ. ಉಡುಪಿ ಅಸ್ತಿತ್ವಕ್ಕೆ ಬಂದಿದ್ದು ಗೌರವಾಧ್ಯಕ್ಷರಾಗಿ ವಾಲ್ಟರ್ ನಂದಳಿಕೆ, ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ, ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ, ಗಣೇಶ್ ಮಂಗಳೂರು ಕಾರ್ಯದರ್ಶಿಯಾಗಿ ಶರತ್ ಎಂ. ಬೆಳ್ತಂಗಡಿ ಹಾಗೂ ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್ ಅಸೋಸಿಯೇಶನ್ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. , ಜೊತೆ ಕಾರ್ಯದರ್ಶಿಯಾಗಿ ಸುವಿಲ್ ಬೈಂದೂರು, ಪ್ರದೀಪ್

ನೂತನವಾಗಿ ಅಸ್ತಿತ್ವಕ್ಕೆ ಬಂದ ಲೈವ್‍ ಅಸೋಸಿಯೇಶನ್‍ ಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಿವ್ಯವರ್ಮಾ, ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ, ಗಣೇಶ್ ಮಂಗಳೂರು ಆಯ್ಕೆ Read More »

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಚಿನ್ನಾಭರಣ ಕಳವು

ವಿಟ್ಲ: ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಈ ಕುರಿತು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ದೂರು ನೀಡಿದ್ದರು.  ಸೆ.17ರಂದು ಬಂಟ್ವಾಳ ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿರುವ ನನ್ನ ಮನೆಯ ಬಾಗಿಲುಗಳನ್ನು ಭದ್ರಪಡಿಸಿ ಬೇರೆಡೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಚಿನ್ನಾಭರಣ ಕಳವು Read More »

error: Content is protected !!
Scroll to Top