ದಕ್ಷಿಣ ಕನ್ನಡ

ಭಾರಿ ಗಾಳೆಮಳೆಗೆ ಧರಾಶಾಯಿಯಾದ ನೆಲ್ಲಿಕಟ್ಟೆಯ ಅತಿ ಎತ್ತರದಲ್ಲಿದ್ದ ರಾಷ್ಟ್ರಧ್ವಜ

ರಾಜ್ಯದ ಮೂರನೇ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ರಾಷ್ಟ್ರಧ್ವಜ ಪುತ್ತೂರು: ನೆಲ್ಲಿಕಟ್ಟೆ ಉದ್ಯಾನದಲ್ಲಿ ಸ್ಥಾಪಿಸಲಾಗಿದ್ದ ರಾಜ್ಯದ ಮೂರನೇ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ದೊಡ್ಡ ಗಾತ್ರದ ರಾಷ್ಟ್ರಧ್ವಜ ಸೋಮವಾರ ರಾತ್ರಿ ಬೀಸಿದ ಭಾರಿ ಗಾಳಿಮಳೆಗೆ ಧರಾಶಾಯಿಯಾಗಿದೆ. ಭಾರಿ ಗಾಳಿಮಳೆಗೆ ಧ್ವಜದ ದಾರ ಕಡಿದು ಧ್ವಜ ಸಮೀಪ ವಿದ್ಯುತ್‌ ತಂತಿಯ ಮೇಲೆ ಬಿದ್ದಾಗ ಶಾರ್ಟ್‌ ಸರ್ಕ್ಯೂಟ್‌ ಆಗಿದ್ದು, ಇದರ ಪರಿಣಾಮ ತುಸು ಹೊತ್ತು ವಿದ್ಯುತ್‌ ಕೈಕೊಟ್ಟಿತ್ತು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಧ್ವಜವನ್ನು […]

ಭಾರಿ ಗಾಳೆಮಳೆಗೆ ಧರಾಶಾಯಿಯಾದ ನೆಲ್ಲಿಕಟ್ಟೆಯ ಅತಿ ಎತ್ತರದಲ್ಲಿದ್ದ ರಾಷ್ಟ್ರಧ್ವಜ Read More »

ತಿಮರೋಡಿಗೆ ಮೂರನೇ ಬಾರಿ ಗಡಿಪಾರು ನೋಟಿಸ್‌

ಮಧ್ಯರಾತ್ರಿ ಹೋಗಿ ಮನೆಗೆ ನೋಟಿಸ್‌ ಅಂಟಿಸಿರುವ ಪೊಲೀಸರು ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಮಾ.16ರಂದು (16-03-2026 ರಿಂದ 16-09-2026 ರವರೆಗೆ) ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಆರು ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎಸಿ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ

ತಿಮರೋಡಿಗೆ ಮೂರನೇ ಬಾರಿ ಗಡಿಪಾರು ನೋಟಿಸ್‌ Read More »

ಇಂದು ಮಂಗಳೂರಿಗೆ ಬರಲಿದೆ 26 ಸಾವಿರ ಟನ್‌ ಎಲ್‌ಪಿಜಿ

ವಾಣಿಜ್ಯ ಸಿಲಿಂಡರ್‌ ಕೊರತೆ ಸಮಸ್ಯೆ ತುಸು ಕಡಿಮೆಯಾಗುವ ನಿರೀಕ್ಷೆ ಮಂಗಳೂರು : ಮಧ್ಯಪ್ರಾಚ್ಯ ಯುದ್ಧದಿಂದಾಗಿ ಅಡುಗೆ ಅನಿಲ ಅಭಾವ ಉಂಟಾಗಿ ಜನರು ಪರಿತಪಿಸುತ್ತಿದ್ದಾರೆ. ವಾಣಿಜ್ಯ ಉದ್ದೇಶದ ಸಿಲಿಂಡರ್‌ಗಳು ಸಿಗದೆ ಹೋಟೆಲ್‌ ಮತ್ತಿತರ ವಾಣಿಜ್ಯ ಚಟುವಟಿಕೆಗಳಿಗೆ ಬಹಳ ಸಮಸ್ಯೆಯಾಗಿದೆ. ಅನೇಕ ಹೋಟೆಲ್‌ಗಳು ಬಂದ್‌ ಆಗಿದ್ದು, ಈ ನಡುವೆ 26,000 ಎಲ್‌ಪಿಜಿ ಹೊತ್ತ ಹಡಗು ಇಂದು ಮಂಗಳೂರು ತಲುಪಲಿದೆ ಎಂಬ ಶುಭ ಸುದ್ದಿ ಬಂದಿದೆ. ಇದರಿಂದ ರಾಜ್ಯದ ಗ್ಯಾಸ್‌ ಸಮಸ್ಯೆ ಕೊಂಚ ಕಡಿಮೆಯಾಗುವ ನಿರೀಕ್ಷೆ ಇದೆ. ಇರಾನ್, ಅಮೆರಿಕ, ಇಸ್ರೇಲ್

ಇಂದು ಮಂಗಳೂರಿಗೆ ಬರಲಿದೆ 26 ಸಾವಿರ ಟನ್‌ ಎಲ್‌ಪಿಜಿ Read More »

ಸರ್ಕಾರಿ ಬಸ್‌ ಡಿಕ್ಕಿ ಹೊಡೆದು ಟೆಂಪೊ ಚಾಲಕ ಸಾವು

ಮಂಗಳೂರು : ಕಾರ್ಕಳ – ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಬಳಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮಿನಿ ಗೂಡ್ಸ್ ಟೆಂಪೊ ಚಾಲಕ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳದ ಕೆಲಿಂಜೆಯ ಲೆಸ್ಟರ್ ಡೇವಿಡ್ ಡಿ’ಸೋಜಾ (30) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಮೂಡುಬಿದಿರೆಯ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ಟೆಂಪೋ ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ ) ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ

ಸರ್ಕಾರಿ ಬಸ್‌ ಡಿಕ್ಕಿ ಹೊಡೆದು ಟೆಂಪೊ ಚಾಲಕ ಸಾವು Read More »

ಮಂಗಳೂರು : ಜೈಲು ಅಧೀಕ್ಷಕರ ಮೇಲೆ ಕೈದಿಗಳಿಂದ ಹಲ್ಲೆ

ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಜೈಲು ಅಧೀಕ್ಷಕರು ಮತ್ತು ಸಿಬ್ಬಂದಿ ಮೇಲೆಯೇ ಕೈದಿಗಳು ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಮೂವರು ವಿಚಾರಣಾಧೀನ ಕೈದಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಾದ ಇಕ್ಬಾಲ್, ಶೆಹರಾಜ್ ಯಾನೆ ಶಾರೂಕ್, ಅಫ್ರೀದ್ ಹಲ್ಲೆಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಮಾ.13ರಂದು ರಾತ್ರಿ ವಿಚಾರಣಾ ಕೈದಿ ಇಕ್ಬಾಲ್ ಎಂಬಾತ ಕಚೇರಿಗೆ ಬಂದು ಕಾರಾಗೃಹಕ್ಕೆ ಹೊಸದಾಗಿ ದಾಖಲಾಗುವ ಕೈದಿಗಳನ್ನು ತನ್ನ ಕೊಠಡಿಗೆ ಸೇರಿಸಬೇಕು ಎಂದು ಜೋರಾಗಿ ಕೂಗಾಡಿ ಅವಾಚ್ಯವಾಗಿ

ಮಂಗಳೂರು : ಜೈಲು ಅಧೀಕ್ಷಕರ ಮೇಲೆ ಕೈದಿಗಳಿಂದ ಹಲ್ಲೆ Read More »

ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಬಾಲಕಿ ಸಾವು; ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಲ್ಲೇರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾಳನ್ನು ಕುಳ್ಳಿರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ವೇಣೂರು ಮೂಲದ ಶಿವಪ್ರಸಾದ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಸುಹೈರಾ ಮತ್ತಾಕೆಯ ತಾಯಿ ಸಾಜಿರಾ

ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಬಾಲಕಿ ಸಾವು; ಇಬ್ಬರಿಗೆ ಗಾಯ Read More »

ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳೆ

ಗಂಡನನ್ನು ಅರೆಸ್ಟ್‌ ಮಾಡಿ ಬಿಡುಗಡೆ ಮಾಡಲು ಲೈಂಗಿಕ ಪೀಡನೆ ಎಂದು ಗಂಭೀರ ಆರೋಪ ಮಂಗಳೂರು: ಮೂಡುಬಿದಿರೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಗೃಹಿಣಿಯೊಬ್ಬರು ಮಾಡಿರುವ ಲೈಂಗಿಕ ಕಿರುಕುಳ ಆರೋಪ ಭಾರಿ ಸಂಚಲನವುಂಟು ಮಾಡಿದೆ. ಮಹಿಳೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪೊಲೀಸ್‌ ಅಧಿಕಾರಿಯ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಸಂದರ್ಶನದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಕಾರ್ಯಕರ್ತರಾಗಿದ್ದ ತನ್ನ ಗಂಡನನ್ನು ಅರೆಸ್ಟ್‌ ಮಾಡಿ ಬಿಡುಗಡೆ ಮಾಡಬೇಕಿದ್ದರೆ ನನ್ನ ಜೊತೆ ಸಹಕರಿಸು ಎಂದು ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ.

ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಮಹಿಳೆ Read More »

ಸುಳ್ಯ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ಸಮೀಪ ಬೋಳುಬೈಲು ಎಂಬಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಪುತ್ತೂರಿನಿಂದ ಸುಳ್ಯದತ್ತ ಹೋಗುತ್ತಿದ್ದ ಕಾರು ಬೋಳುಬೈಲಿನಲಿ ಎದುರಿನಿಂದ ಬಂದ ವಾಹನಕ್ಕೆ ಸೈಡ್‌ ಕೊಡುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಹೇಮಾ ಮತ್ತು ಶ್ರೀಚಂದ್‌ ಎಂಬವರು ಗಾಯಗೊಂಡಿದ್ದಾರೆ. ಅವರ ಪುಟ್ಟ ಮಗು ಮತ್ತು ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದರು.

ಸುಳ್ಯ : ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ Read More »

ಕೋಕೋ ಮಿತ್ರ ಲೋಕಾರ್ಪಣೆ

ಕೋಕೋ ಮಿತ್ರ ಎಲ್ಲರ ಮಿತ್ರನಾಗಲಿ – ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನಿಂತಿಕಲ್ಲು: ನಾಗೇಶ್ ಕೆಡೆಂಜಿ ಮಾಲಕತ್ವದ ‘ಕೋಕೋ ಮಿತ್ರ’ – ತಂಪೊತ್ತಿನ ಗಾಣದ ತೆಂಗಿನೆಣ್ಣೆ ಉತ್ಪಾದನ ಘಟಕವು ನಿಂತಿಕಲ್ಲಿನಲ್ಲಿರುವ ಎಣ್ಮೂರು-ಮುರುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ‘ಸಾಧನಾ ಸಹಕಾರಿ ಸೌಧ’ದಲ್ಲಿ ಲೋಕಾರ್ಪಣೆಗೊಂಡಿತು. ಪವಿತ್ರ ಪಾವಕ ಪ್ರಜ್ಷಲಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಸ್ವಾಮೀಜಿ ಪೂಜ್ಯ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ನಾಗೇಶ್ ಕೆಡೆಂಜಿಯವರ ಉದ್ಯಮಶೀಲತೆಗೆ ಮೆಚ್ಚುಗೆ

ಕೋಕೋ ಮಿತ್ರ ಲೋಕಾರ್ಪಣೆ Read More »

ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ!

ದೈವಾರಾಧನೆ ಪರಂಪರೆಗೆ ಧಕ್ಕೆಯಾಗಿದೆ ಎಂದು ಪಂಬದ ಸಮುದಾಯದವರ ಆರೋಪ ಮಂಗಳೂರು : ತುಳುನಾಡಿನ ಪ್ರಸಿದ್ಧ ದೈವಾರಾಧನೆ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನವೊಂದರ ನೇಮೋತ್ಸವದಲ್ಲಿ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ ನಡೆದಿತ್ತು. ಸಂಪ್ರದಾಯದಂತೆ ದೈವ ನರ್ತನ ಸೇವೆಯನ್ನು ನಲಿಕೆ, ಪರವ ಹಾಗೂ ಪಂಬದ ಸಮುದಾಯದವರು ಮಾತ್ರ ಮಾಡಬೇಕು ಎಂಬ

ಕ್ರೈಸ್ತ ಸಮುದಾಯದ ಯುವಕನಿಂದ ದೈವ ನರ್ತನ! Read More »

error: Content is protected !!
Scroll to Top