ದಕ್ಷಿಣ ಕನ್ನಡ

ಪ್ರಧಾನಿ ಮೋದಿ 74ನೇ ಜನ್ಮ ದಿನಾಚರಣೆ : ಸವಣೂರು-65, ಮೊಗರು-66 ಬಿಜೆಪಿ ಬೂತ್‍ ಜಂಟಿ ಆಶ್ರಯದಲ್ಲಿ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಸವಣೂರು: ಬಿಜೆಪಿ ಬೂತ್ ಸಮಿತಿ 66-ಮೊಗರು ಹಾಗೂ 65-ಸವಣೂರು ಜಂಟಿ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 74ನೇ ಜನ್ಮದಿನಾಚರಣೆಯ ಅಂಗವಾಗಿ ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮೋದಿ ಅವರ ಆರೋಗ್ಯವೃದ್ಧಿ ಹಾಗೂ ಪ್ರಧಾನಿ ಹುದ್ದೆಯಲ್ಲಿ ಆಡಳಿತ ನಡೆಸಲು ಇನ್ನು ಹೆಚ್ಚಿನ ಶಕ್ತಿ ಸಿಗಲು ಪ್ರಾಥನೆಯೊಂದಿಗೆ ದೇವರಿಗೆ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.  ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಎಸ್.ಟಿ. ಮೋರ್ಚಾದ ಅಧ್ಯಕ್ಷ ಗಂಗಾಧರ […]

ಪ್ರಧಾನಿ ಮೋದಿ 74ನೇ ಜನ್ಮ ದಿನಾಚರಣೆ : ಸವಣೂರು-65, ಮೊಗರು-66 ಬಿಜೆಪಿ ಬೂತ್‍ ಜಂಟಿ ಆಶ್ರಯದಲ್ಲಿ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

ನರೇಂದ್ರ ಮೋದಿ ಜನುಮ ದಿನ : ಇದ್ಪಾಡಿ ಶಿರಾಡಿ ಗ್ರಾಮ ದೈವ ಸ್ಥಾನದಲ್ಲಿ  ಬಿಜೆಪಿ ವತಿಯಿಂದ ಪ್ರಾರ್ಥನೆ

ಸವಣೂರು: ನರೇಂದ್ರ ಮೋದಿಯವರ ಜನುಮ ದಿನದ ಪ್ರಯುಕ್ತ ಬಿಜೆಪಿ ಕೆದಂಬಾಡಿ 186ನೇ ಬೂತ್ ಸಮಿತಿಯ ವತಿಯಿಂದ ಶಿರಾಡಿ ಗ್ರಾಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಬಿಜೆಪಿ ಮುಖಂಡರು ಪ್ರಾರ್ಥನೆ ಸಲ್ಲಿಸಿ ವಿಶೇಷ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಸೀತಾರಾಮ ಗೌಡ ಇದ್ಯಪ್ಪೆ, ಮಂಡಲ ಕಾರ್ಯದರ್ಶಿ ರತನ್ ರೈ ಕುಂಬ್ರ, ಕೃಷಿಕ ಸಮಾಜದ ಅಧ್ಯಕ್ಷ ವಿಜಯ ಕುಮಾರ್ ರೈ ಕೊರಂಗ, ಸುಧಾಕರ್ ರೈ ಮುಂಡಾಲಗುತ್ತು, ಬೂತ್ ಕಾರ್ಯದರ್ಶಿ ಚಂದ್ರ ಇದ್ಪಾಡಿ, ಸದಸ್ಯತ್ವ ಅಭಿಯಾನ ಬೂತ್ ಸಂಯೋಜಕ

ನರೇಂದ್ರ ಮೋದಿ ಜನುಮ ದಿನ : ಇದ್ಪಾಡಿ ಶಿರಾಡಿ ಗ್ರಾಮ ದೈವ ಸ್ಥಾನದಲ್ಲಿ  ಬಿಜೆಪಿ ವತಿಯಿಂದ ಪ್ರಾರ್ಥನೆ Read More »

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ವಿಟ್ಲ: ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮ  ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಕೋಡಿಂಬಾಡಿ ದಾರಂದಕುಕ್ಕು ನಿವಾಸಿ ಧರ್ಮಪಾಲ ಗೌಡರ ಪತ್ನಿ ಸುಂದರಿ (48) ಮೃತಪಟ್ಟವರು. ಸೆ.10 ರಂದು ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು, ಸುಂದರಿ ಅವರು ಸಾಲೆತ್ತೂರಿನಲ್ಲಿರುವ ಪ್ರಸಿದ್ಧ ವೈದ್ಯರ ಬಳಿ ಪುತ್ತೂರಿನಿಂದ ಸಂಬಂಧಿಕನ ಜೊತೆ ಆಕ್ಟಿವಾದಲ್ಲಿ ಬರುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿ ಪಲ್ಟಿ

ಬಿ.ಸಿ.ರೋಡ್ : ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ಎಂಬಲ್ಲಿ ಸಂಭವಿಸಿದೆ. ಆರ್ ಎ ಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಗೆ ಹೋಗುತ್ತಿರುವಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಪಘಾತದಿಂದ ಚಾಲಕ ಸಣ್ಣ ಪುಟ್ಟ ಗಾಯಗೊಂಡಿದ್ದು, ಮತ್ತೋರ್ವ ಪ್ರಯಾಣಿಕ ಸಾಂತಪ್ಪ ನಾಯಕ್ ಅವರನ್ನು ಚಿಕಿತ್ಸೆಗೆ ಮಂಗಳೂರು ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

ರಾಪಿಡ್ ಏಕ್ಷನ್ ಫೋರ್ಸ್ ನ ಗೂಡ್ಸ್ ಲಾರಿ ಪಲ್ಟಿ Read More »

ಮ್ಯಾಕ್ಸ್ ಲೈಫ್ ಇನ್ಸುರೆನ್ಸ್ ಹಾಗೂ ಆಕ್ಸಿಸ್ ಬ್ಯಾಂಕ್ ನೀಡುವ ಸೇವಾ ರತ್ನ ಅವಾರ್ಡ್ ಗೆ ಉದ್ಯಮಿ ದಯಾನಂದ ಡಿ.ಕೆ. ಭಾಜನ

ಸುಳ್ಯ: ಮ್ಯಾಕ್ಸ್ ಲೈಫ್ ಇನ್ಸುರೆನ್ಸ್ ಹಾಗೂ ಆಕ್ಸಿಸ್ ಬ್ಯಾಂಕ್ ಸಹಭಾಗಿತ್ವದಲ್ಲಿ ಕೊಡಮಾಡುವ ಸೇವಾ ರತ್ನ ಅವಾರ್ಡ್ ಗೆ ಅಜ್ಞಾವರ ಗ್ರಾಮದ ದೊಡ್ಡೇರಿ ನಿವಾಸಿ, ಉದ್ಯಮಿ ದಯಾನಂದ ಡಿ.ಕೆ. ಭಾಜನರಾಗಿದ್ದು, ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಜ್ಞಾವರ ಗ್ರಾಮದ ದೊಡ್ಡೇರಿ ಮುಳ್ಳ ಕ್ರಾಸ್ ಬಳಿ ಆರ್.ಕೆ. ಇಂಟರ್ನ್ಯಾಷನಲ್ ಹೋಲಿಡೆ ಆನ್ ಪಾಸ್ ಪೋರ್ಟ್, ವೀಸಾ ಆಂಡ್ ಏರ್ ಲೈನ್ ಟಿಕೆಟ್ ಬುಕ್ಕಿಂಗ್ ಉದ್ಯಮ ಸಂಸ್ಥೆಯನ್ನು ಇವರು ನಡೆಸುತ್ತಿದ್ದಾರೆ. ದೊಡ್ಡೇರಿ ಕಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಶಾಲೆಯ

ಮ್ಯಾಕ್ಸ್ ಲೈಫ್ ಇನ್ಸುರೆನ್ಸ್ ಹಾಗೂ ಆಕ್ಸಿಸ್ ಬ್ಯಾಂಕ್ ನೀಡುವ ಸೇವಾ ರತ್ನ ಅವಾರ್ಡ್ ಗೆ ಉದ್ಯಮಿ ದಯಾನಂದ ಡಿ.ಕೆ. ಭಾಜನ Read More »

ಮಂಗಳೂರಿನ ಬಾವುಟಗುಡ್ಡೆಯಲ್ಲಿ ದ.ಕ.ಜಿಲ್ಲೆಯಲ್ಲೇ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣ | ನೆರವೇರಿತು ಶಂಕುಸ್ಥಾಪನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣಕ್ಕೆ ಶಂಕು ಸ್ಥಾಪನೆ ಭಾನುವಾರ ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ನಡೆಯಿತು. ಬಾವುಟಗುಡ್ಡೆಯ ಇತಿಹಾಸವನ್ನು ಶಾಶ್ವತಗೊಳಿಸುವ ಸಲುವಾಗಿ ಧ್ವಜಸ್ತಂಭವನ್ನು ನಿರ್ಮಿಸಲು ಸ್ವಾತ್ರಂತ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಅವರು ಕೆಪಿಸಿಸಿ ಕಾರ್ಯಧ್ಯಕ್ಷ, ಶಾಸಕ ಮಂಜುನಾಥ ಭಂಡಾರಿ ಅವರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಜುನಾಥ ಭಂಡಾರಿ ಅವರು ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಸ್ಮಾರ್ಟ್ ಸಿಟಿವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜ ಸ್ತಂಭವನ್ನು

ಮಂಗಳೂರಿನ ಬಾವುಟಗುಡ್ಡೆಯಲ್ಲಿ ದ.ಕ.ಜಿಲ್ಲೆಯಲ್ಲೇ ಅತೀ ಎತ್ತರದ ಧ್ವಜಸ್ತಂಭ ನಿರ್ಮಾಣ | ನೆರವೇರಿತು ಶಂಕುಸ್ಥಾಪನೆ Read More »

ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ನಿಯಂತ್ರಣ: ಸಾಂಗವಾಗಿ ನಡೆದ ಮೆರವಣಿಗೆ

ಪೊಲೀಸರ ಸರ್ಪಗಾವಲು; ಹೆಚ್ಚುವರಿ ಭದ್ರತೆ ನಿಯೋಜನೆ ಮಂಗಳೂರು: ಮುಸ್ಲಿಂ ಮತ್ತು ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದ ಬೆಳಗ್ಗೆ ತುಸು ಉದ್ವಿಗ್ನಗೊಂಡಿದ್ದ ಬಿ.ಸಿ.ರೋಡ್‌ನಲ್ಲಿ ಪರಿಸ್ಥಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಾಲಾಗಿದ್ದು, ಈಗ ಪರಿಸ್ಥಿತಿ ಪೂರ್ಣವಾಗಿ ಶಾಂತವಾಗಿದೆ ಎಂದು ದಕ್ಷಿಣ ಕನ್ನಡ ಎಸ್​​ಪಿ ಎನ್​.ಯತೀಶ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ತಕ್ಷಣ ಕಾರ್ಐಪ್ರವೃತ್ತರಾದ ಪರೊಣಾಮ ಪರಿಸ್ಥಿತಿ ಉಲ್ಬಣಿಸಲು ನಾವು ಅವಕಾಶ ಕೊಟ್ಟಿಲ್ಲ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ

ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ನಿಯಂತ್ರಣ: ಸಾಂಗವಾಗಿ ನಡೆದ ಮೆರವಣಿಗೆ Read More »

ಸವಾಲು ಹಾಕಿದರೆ ಮಸೀದಿಗೆ ಬರಲು ತಯಾರಿದ್ದೇವೆ : ಶರಣ್‌ ಪಂಪ್‌ವೆಲ್‌

ಸವಾಲು ಸ್ವೀಕರಿಸಿ ಬಿ.ಸಿ.ರೋಡ್‌ಗೆ ಹೋದ ಹಿಂದು ಮುಖಂಡ ಬಜರಂಗದಳ-ವಿ.ಎಚ್.ಪಿ ಬಿ‌.ಸಿ.ರೋಡ್ ಚಲೋ ವೇಳೆ ಪೊಲೀಸರ ಜೊತೆ ತಿಕ್ಕಾಟ ಮಂಗಳೂರು : ಬಜರಂಗದಳ-ವಿಶ್ವ ಹಿಂದು ಪರಿಷತ್‌ ವತಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಕರ್ತರು ಜೈಕಾರ ಘೋಷಣೆ ಹಾಕಿದ್ದು, ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯವಾಹ ಶರಣ್ ಪಂಪ್‌ವೆಲ್ ಬಿ.ಸಿ.ರೋಡಿಗೆ ಆಗಮಿಸಿದ್ದಾರೆ.ಜೈಕಾರ ಘೋಷಣೆ ಕೂಗಿದ ಕಾರ್ಯಕರ್ತರು ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿದರು. ಈ ವೇಳೆ ಪೋಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ

ಸವಾಲು ಹಾಕಿದರೆ ಮಸೀದಿಗೆ ಬರಲು ತಯಾರಿದ್ದೇವೆ : ಶರಣ್‌ ಪಂಪ್‌ವೆಲ್‌ Read More »

ಶರಣ್ ಪಂಪ್‍ ವೆಲ್‍ ಗೆ ಮಿಲಾದ್ ಮೆರವಣಿಗೆ ವೇಳೆ ಬರುವಂತೆ ಧಮ್ಕಿ | ಬೆಳಿಗ್ಗೆಯೇ ಜಮಾಯಿಸಿದ ಹಿಂದೂ ಕಾರ್ಯಕರ್ತರು

ಬಂಟ್ವಾಳ: ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ಗೆ ಸಾಮಾಜಿಕ ಜಾಲತಾಣದಲ್ಲಿ ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಈದ್ ಮಿಲಾದ್ ಮೆರವಣಿಗೆ ವೇಳೆ ಬಿ.ಸಿ.ರೋಡಿಗೆ ಬನ್ನಿ ಎಂದು ಹೇಳಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಹಿಂದು ಸಂಘಟನೆಗಳ ಅಧಿಕ ಮುಖಂಡರು ಸೋಮವಾರ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನ ಮುಂಭಾಗ ಜಮಾಯಿಸತೊಡಗಿದ್ದಾರೆ. ಒಂದು ಬದಿಯಿಂದ ಹಿಂದು ಸಂಘಟನೆಗಳು ಜಮಾಯಿಸತೊಡಗುತ್ತಿದ್ದಂತೆ  ಮತ್ತೊಂದು ಕಡೆಯಿಂದ ಪೊಲೀಸ್ ಪಡೆ ಬಂದು ನಿಂತಿದೆ. ಈ ಸಂದರ್ಭ ಹಿಂದು ಸಂಘಟನೆ ಕಾರ್ಯಕರ್ತರು ಪೊಳಲಿ

ಶರಣ್ ಪಂಪ್‍ ವೆಲ್‍ ಗೆ ಮಿಲಾದ್ ಮೆರವಣಿಗೆ ವೇಳೆ ಬರುವಂತೆ ಧಮ್ಕಿ | ಬೆಳಿಗ್ಗೆಯೇ ಜಮಾಯಿಸಿದ ಹಿಂದೂ ಕಾರ್ಯಕರ್ತರು Read More »

ಹಿರಿಯರು ಒಂದು ಗ್ರಂಥಾಲಯವಿದ್ದಂತೆ  – ಡಾ.ತುಕಾರಾಮ ಪೂಜಾರಿ | ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆ

ಬಂಟ್ವಾಳ: ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿರಿಯರಿಂದ  ನಾವು ಕೇಳಿದ ಮತ್ತು ಪಡೆದ. ಮಾಹಿತಿ ಈಗಲೂ ಮಾರ್ಗದರ್ಶಕವೆನಿಸುತ್ತದೆ. ಇಂದಿನ ಯುವಜನಾಂಗಕ್ಕೆ ತಾಳ್ಮೆಯ ಕೊರತೆ ಇದ್ದು ಹಿರಿಯರ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿ ಪರಿತಪಿಸುವುದನ್ನು ನಾವು ಕಾಣುತ್ತೇವೆ. ಆದುದರಿಂದ ಹಿರಿಯರೊಬ್ಬರನ್ನು ನಾವು ಕಳೆದುಕೊಂಡರೆ ಒಂದು ಗ್ರಂಥಾಲಯವೇ ನಾಶವಾದಂತೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಡಾ. ತುಕಾರಾಮ ಪೂಜಾರಿ ಹೇಳಿದರು. ಬಂಟ್ವಾಳದ ಸಂಚಯಗಿರಿಯಲ್ಲಿರುವ ಅಧ್ಯಯನ ಕೇಂದ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆಯನ್ನು

ಹಿರಿಯರು ಒಂದು ಗ್ರಂಥಾಲಯವಿದ್ದಂತೆ  – ಡಾ.ತುಕಾರಾಮ ಪೂಜಾರಿ | ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿ ಸಭೆ Read More »

error: Content is protected !!
Scroll to Top