ದಕ್ಷಿಣ ಕನ್ನಡ

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ದಿಡುಪೆಯಿಂದ ವರದಿಯಾಗಿದೆ. ಮಿತ್ತಬಾಗಿಲು ನೆಲ್ಲಿಗುಡ್ಡ ನಿವಾಸಿ ಹೃಶ್ಮಿ (17ವ) ಮೃತಪಟ್ಟ ವಿದ್ಯಾರ್ಥಿನಿ ರಾಜೇಶ್ ಅರುಣಾ ದಂಪತಿ ಮಗಳಾದ ಹೃಶ್ಮಿ ಒಂದು ವಾರದ ಹಿಂದೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಸಂಭ್ರಮ | ದ.ಕ.ಜಿಲ್ಲೆಯ ವಿವಿಧ ಸಾಧಕರಿಗೆ ಕರಾವಳಿ ರತ್ನ ಪ್ರಶಸ್ತಿ ಪ್ರದಾನ | ಮಂಗಳೂರು ಶಾಖಾ ಮಠ ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದೆ : ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ | ಸಂತ ಮತ್ತು ಸಮಾಜ ನಾಣ್ಯದ ಎರಡು ಮುಖಗಳಿದ್ದಂತೆ : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ಜನಮಾನಸದಲ್ಲಿ ಕಾರ್ಯಕ್ರಮ ಅಚ್ಚಳಿಯದೇ ಉಳಿಯಬೇಕು ಎಂಬ ಚಿಂತನೆಯಲ್ಲಿ ನಡೆದಿದೆ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಜ್ಞಾನ ಹಾಗೂ ಮಾನವೀಯತೆ ಆಧಾರದಲ್ಲಿ ಸಮಾಜ ಕಟ್ಟಲು ಸಾಧ್ಯ : ಡಾ.ಭರತ್ ವೈ ಶೆಟ್ಟಿ | ಸರಕಾರ ಪ್ರಾಥಮಿಕ , ಪ್ರೌಢಶಾಲೆ ಜತೆಗೆ ಕನ್ನಡವನ್ನು ಉಳಿಸುವ ಕೆಲಸ ಬದ್ಧತೆಯಿಂದ ಮಾಡಬೇಕಾಗಿದೆ : ಡಾ.ಕೆ.ಚಿನ್ನಪ್ಪ ಗೌಡ

ಮಂಗಳೂರು: ಧರ್ಮ ಉಳಿವಿನ ಜತೆಗೆ ಧರ್ಮ ಪ್ರಚಾರ ಮಠಗಳ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 25 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಪ್ರಾರಂಭವಾದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಇಂದು ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಸಂಭ್ರಮದ ಅಂಗವಾಗಿ ದ.ಕ.ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕರಾವಳಿ ರತ್ನ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಸಂಭ್ರಮ | ದ.ಕ.ಜಿಲ್ಲೆಯ ವಿವಿಧ ಸಾಧಕರಿಗೆ ಕರಾವಳಿ ರತ್ನ ಪ್ರಶಸ್ತಿ ಪ್ರದಾನ | ಮಂಗಳೂರು ಶಾಖಾ ಮಠ ಧರ್ಮ ಕಾರ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದೆ : ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ | ಸಂತ ಮತ್ತು ಸಮಾಜ ನಾಣ್ಯದ ಎರಡು ಮುಖಗಳಿದ್ದಂತೆ : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ಜನಮಾನಸದಲ್ಲಿ ಕಾರ್ಯಕ್ರಮ ಅಚ್ಚಳಿಯದೇ ಉಳಿಯಬೇಕು ಎಂಬ ಚಿಂತನೆಯಲ್ಲಿ ನಡೆದಿದೆ : ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ | ಜ್ಞಾನ ಹಾಗೂ ಮಾನವೀಯತೆ ಆಧಾರದಲ್ಲಿ ಸಮಾಜ ಕಟ್ಟಲು ಸಾಧ್ಯ : ಡಾ.ಭರತ್ ವೈ ಶೆಟ್ಟಿ | ಸರಕಾರ ಪ್ರಾಥಮಿಕ , ಪ್ರೌಢಶಾಲೆ ಜತೆಗೆ ಕನ್ನಡವನ್ನು ಉಳಿಸುವ ಕೆಲಸ ಬದ್ಧತೆಯಿಂದ ಮಾಡಬೇಕಾಗಿದೆ : ಡಾ.ಕೆ.ಚಿನ್ನಪ್ಪ ಗೌಡ Read More »

ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ  

ಮಂಗಳೂರು : ದ.ಕ. ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಅವರನ್ನು ದೆಹಲಿಯಲ್ಲಿ ಶನಿವಾರ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ  ಇಂಡಿಯನ್ ಕೋಸ್ಟ್ ಗಾರ್ಡ್ ಅಕಾಡೆಮಿ ನಿರ್ಮಾಣ ಪ್ರಕ್ರಿಯೆಗೆ ವೇಗ ನೀಡುವುದು, ಕೊಂಕಣ ರೈಲ್ವೆಯ ವಿಲೀನ, ಜಾಗತಿಕ ಸಾಮರ್ಥ್ಯ  ಕೇಂದ್ರಗಳು (ಜಿಸಿಸಿ), ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯ ಸ್ಥಾಪನೆ ಕುರಿತು ಮನವಿ ಮಾಡಿದರು. ಕೊಂಕಣ ರೈಲ್ವೆಯ ವಿಲೀನ, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯ ಸ್ಥಾಪನೆ ಪ್ರಮುಖವಾಗಿದೆ.

ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ   Read More »

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ನ.27 ರಿಂದ ಡಿ.12 ರವರೆಗೆ ನಡೆಯಲಿದೆ. ನ.27 ರಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.30 ರಂದು ಲಕ್ಷದೀಪೋತ್ಸವ, ಡಿ.1 ರಂದು ರಾತ್ರಿ ಶೇಷ ವಾಹನೋತ್ಸವ, ಡಿ.2 ರಂದು ರಾತ್ರಿ ಅಶ್ವವಾಹನೋತ್ಸವ, ಡಿ.3 ರಂದು ರಾತ್ರಿ ಮಯೂರವಾಹನೋತ್ಸವ, ಡಿ.4 ರಂದು ರಾತ್ರಿ ಶೇಷವಾಹನೋತ್ಸವ, ಡಿ.5 ರಂದು ರಾತ್ರಿ ಹೂವಿನ ತೇರಿನ ಉತ್ಸವ, ಡಿ.6  ರಂದು ರಾತ್ರಿ ಪಂಚಮಿ ಉತ್ಸವ,

ನ.27 ರಿಂದ ಡಿ.12 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ Read More »

ಸಮುದ್ರಕ್ಕೆ ಹಾರಿದ ವಿದ್ಯಾರ್ಥಿನಿ : ಈಜುಗಾರರಿಂದ ರಕ್ಷಣೆ

ಉಳ್ಳಾಲ: ಸಮುದ್ರಕ್ಕೆ ಹಾರಿದ ವಿದ್ಯಾರ್ಥಿನಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರದ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ವಿದ್ಯಾರ್ಥಿನಿಯನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ರಕ್ಷಿಸಿದ್ದಾರೆ. ಉಳ್ಳಾಲ ಸಮೀಪ ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಸಮುದ್ರಕ್ಕೆ ಹಾರಿದ ವಿದ್ಯಾರ್ಥಿನಿ : ಈಜುಗಾರರಿಂದ ರಕ್ಷಣೆ Read More »

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ ಸನ್ಮಾನ

ಕಾಣಿಯೂರು: ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಮಿತಿಯ ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಒಕ್ಕೂಟ, ಯುವ ಸಂಘ, ಮಹಿಳಾ ಸಂಘ ಗ್ರಾಮ ಸಮಿತಿಗಳ  ಸಹಕಾರದೊಂದಿಗೆ  ಒಕ್ಕಲಿಗ ಟ್ರಸ್ಟ್ ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಒಕ್ಕಲಿಗ ಸ್ವ ಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ.23 ರಂದು ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ 6 ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 50

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ದಾಂಪತ್ಯ ಜೀವನದ ಐವತ್ತು ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಕುದ್ಮಾರು ಅನ್ಯಾಡಿ ತರವಾಡು ಮನೆಯಲ್ಲಿ ಸನ್ಮಾನ Read More »

ಆಕಸ್ಮಿಕ ಬೆಂಕಿ ತಗುಲಿ ಗಾಯಗೊಂಡ ಜೀತು ನೇಲ್ಯಪಲ್ಕೆ | ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕದಿಂದ ಧನಸಹಾಯ ಹಸ್ತಾಂತರ

ಬಂಟ್ವಾಳ: ತೀರಾ ಕಡು ಬಡತನದಲ್ಲಿದ್ದ ಆದಿದ್ರಾವಿಡ ಸಮುದಾಯದ ಜೀತು ನೇಲ್ಯಪಲ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡಿದ್ದು, ಜೀವನ ನಿರ್ವಹಣೆ ಕಷ್ಟದಲ್ಲಿದ್ದುದನ್ನು ಮನಗಂಡು ವಿಶ್ವ ಹಿಂದೂ ಪರಿಷದ್ ಬಜರಂಗದಳ ವೀರಕೇಸರಿ ಶಾಖೆ ಮೀಯಾರುಪಲ್ಕೆ ಸರಪಾಡಿ ಕಾರ್ಯಕರ್ತರು ಧನಸಹಾಯ ನೀಡಿದರು. ಬೆಂಕಿ ತಾಗಿದ ಪರಿಣಾಮ ಮುಖ, ಕಿವಿ ಹಾಗೂ ದೇಹದ ಭಾಗ ಸುಟ್ಟು ಹೋಗಿದ್ದು, ದಾನಿಗಳ ಮೂಲಕ ಸಂಗ್ರಹಿಸಲ್ಪಟ್ಟ 25,950 ರೂಪಾಯಿಗಳನ್ನು ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ, ಬಜರಂಗದಳ

ಆಕಸ್ಮಿಕ ಬೆಂಕಿ ತಗುಲಿ ಗಾಯಗೊಂಡ ಜೀತು ನೇಲ್ಯಪಲ್ಕೆ | ವಿಶ್ವಹಿಂದೂ ಪರಿಷತ್ ಬಜರಂಗದಳ ಘಟಕದಿಂದ ಧನಸಹಾಯ ಹಸ್ತಾಂತರ Read More »

3 ವರ್ಷದ ಮಗುವಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

ಮಂಗಳೂರು: ಉಳ್ಳಾಲ ತಾಲೂಕಿನ ಬಾಳೆಪುಣಿ ಎಂಬಲ್ಲಿ 70 ವರ್ಷದ ವೃದ್ಧ ಮೂರು ವರ್ಷದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ವೃದ್ಧ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂಲತಃ ಪುತ್ತೂರು ನಿವಾಸಿ, ಪ್ರಸ್ತುತ ಮುದುಂಗಾರುಕಟ್ಟೆಯಲ್ಲಿ ವಾಸವಾಗಿರುವ ಅಬ್ದುಲ್ಲಾ (70) ಆರೋಪಿ. ಮಗು ಆಟವಾಡುತ್ತಿದ್ದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದು, ಅಸ್ವಸ್ಥಗೊಂಡ ಮಗುವನ್ನು ಗಮನಿಸಿ ವೈದ್ಯಕೀಯ

3 ವರ್ಷದ ಮಗುವಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ “INFOTSAV 2K24” ಸಮಾರೋಪ ಸಮಾರಂಭ

ಸವಣೂರು:  ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ “INFOTSAV 2K24”  ಸಮಾರೋಪ ಸಮಾರಂಭ ಗುರುವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ವಹಿಸಿ, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಶುಭ ಹಾರೈಸಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಿಗಳಾಗಲು ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಸ್ಪರ್ಧೆ ತರಬೇತಿಗಳು ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡುಯ್ಯುತ್ತದೆ ಎಂದರು. ಮುಖ್ಯಅತಿಥಿಯಾಗಿ ಬೆಳ್ಳಾರೆ ಆರಕ್ಷಕ ಠಾಣೆಯ ಸಬ್‌ ಇನ್‌ ಸ್ಪೆಕ್ಟರ್

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ “INFOTSAV 2K24” ಸಮಾರೋಪ ಸಮಾರಂಭ Read More »

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್

ಪುತ್ತೂರು: ಸುಸ್ತಿಯಾದ ಬೆಳೆಸಾಲದ ಬಡ್ಡಿಯನ್ನು ಮನ್ನಾ ಮಾಡದಿರುವುದರಿಂದ ದ.ಕ.ಜಿಲ್ಲೆಯ 731 ಮಂದಿ ರೈತರು ಅವಕಾಶ ವಂಚಿತರಾಗಿದ್ದು, ಈ ರೈತರ ರೂ. 14 ಕೋಟಿಯಷ್ಟು ಬಡ್ಡಿ ಮತ್ತು ಚಕ್ರಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಗಮನ ಹರಿಸಬೇಕು. ಜಿಲ್ಲೆಯ ಶಾಸಕರುಗಳು ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ರೈತರ ಧ್ವನಿಯಾಗಬೇಕು ಎಂದು ಎಸ್‍ಡಿಪಿಐ ಪಕ್ಷದ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿನ್ ಅವರು ಆಗ್ರಹಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ಮಾತನಾಡಿ, ರಾಜ್ಯದ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ

ಜಿಲ್ಲೆಯ ರೈತರ 14 ಕೋಟಿ ಸಾಲದ ಬಡ್ಡಿ, ಚಕ್ರಬಡ್ಡಿ ಮನ್ನಾಕ್ಕೆ ಆಗ್ರಹ | ಪತ್ರಿಕಾಗೋಷ್ಠಿಯಲ್ಲಿ ವಿಕ್ಟರ್ ಮಾರ್ಟಿನ್ Read More »

error: Content is protected !!
Scroll to Top