ದಕ್ಷಿಣ ಕನ್ನಡ

ಚಾರ್ಮಾಡಿಯಲ್ಲಿ ಒಂಟಿ ಸಲಗ ಓಡಾಟ | ವಾಹನ ಸವಾರರಲ್ಲಿ ಆತಂಕ

ಉಜಿರೆ : ಒಂಟಿ ಸಲಗವೊಂದು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಕಾಣಿಸಿಕೊಂಡಿದೆ. ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ ಅರಣ್ಯ ಪ್ರದೇಶದತ್ತ ತೆರಳಿದೆ ಎಂದು ವಾಹನ ಸವಾರರು ತಿಳಿಸಿದ್ದಾರೆ. ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿದ ವೇಳೆ ಹಲವು ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ಕಂಡು ಬಂತು. ಮಂಜಿನ ವಾತಾವರಣ, ನಿರಂತರ ಸುರಿಯುವ ಮಳೆ, ಜೊತೆಗೆ ಕಾಡಾನೆಯ ತಿರುಗಾಟ ಘಾಟಿ ಪ್ರದೇಶದಲ್ಲಿ […]

ಚಾರ್ಮಾಡಿಯಲ್ಲಿ ಒಂಟಿ ಸಲಗ ಓಡಾಟ | ವಾಹನ ಸವಾರರಲ್ಲಿ ಆತಂಕ Read More »

ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು

ಸುಳ್ಯ : ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಪೆರಾಜೆ ಬಳಿಯ ಕಲ್ಮರ್ಪೆ ಎಂಬಲ್ಲಿ ನಡೆದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್ (23) ಮೃತಪಟ್ಟವರು. ನವೀನ್ ಖಾಸಗಿ ಕಾಲೇಜಿನ ಐಟಿಐ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದುಬಂದಿದೆ

ರಿಕ್ಷಾ-ದ್ವಿಚಕ್ರ ವಾಹನ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು Read More »

ಭೀಕರ ಕಾರು ಅಪಘಾತ | ನವವಿವಾಹಿತೆ ಮೃತ್ಯು

ಬಿ.ಸಿ.ರೋಡ್ : ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು  ಬೀಕರ  ಅಪಘಾತದಲ್ಲಿ ನವವಿವಾಹಿತೆ ಮೃತಪಟ್ಟು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ  ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದವದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು

ಭೀಕರ ಕಾರು ಅಪಘಾತ | ನವವಿವಾಹಿತೆ ಮೃತ್ಯು Read More »

ಮಂಗಳೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನ ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಚಾಲನೆ ನೀಡಿದರು. ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್ ಹಾಗೂ‌ ಪ್ರಮುಖರು ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ Read More »

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ | 70 ಕೆ.ಜಿ. ಗೋಮಾಂಸ ಪತ್ತೆ

ಕಡಬ: ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದ ಕಡಬ ಪೊಲೀಸರು ದಾಳಿ ನಡೆಸಿದ ಘಟನೆ ಇಂದು ಕಡಬ ತಾಲೂಕಿನ ಕಾಯರ್ತಡ್ದದಲ್ಲಿ ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾಯರ್ತಡ್ಕ ಸಮೀಪದ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ. ನೇತೃತ್ವದ ಪೊಲೀಸರು ದಾಳಿ ಮಾಡಿದ್ದು, ಗೋವಧೆ ಮಾಡಲು ಬಳಸಿದ ಸಾಧನ, ದನದ ತಲೆ, ಸುಮಾರು 70 ಕೆಜಿಯಷ್ಟು ಮಾಂಸ

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ | 70 ಕೆ.ಜಿ. ಗೋಮಾಂಸ ಪತ್ತೆ Read More »

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ ಪಲ್ಟಿ | ಸವಾರರಿಬ್ಬರು ಮೃತ್ಯು

ಮಂಗಳೂರು: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಬೈಕ್‍ ಸವಾರರಿಬ್ಬರು ಮೃತಪಟ್ಟ ಘಟನೆ ಮಂಗಳೂರಿನ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿಯ ಚೇತನ್ (24)  ಹಾಗೂ ಕೋಡಿಕಲ್‌ ನಿವಾಸಿ ಕಾಶೀನಾಥ್ (17) ಮೃತಪಟ್ಟವರು. ಬೈಕ್‍ ನಲ್ಲಿ ತೆರಳುತ್ತಿದ್ದಾಗ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿ ಬೈಕ್‍ ಪಲ್ಟಿ | ಸವಾರರಿಬ್ಬರು ಮೃತ್ಯು Read More »

ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡದ್ದಕ್ಕೆ ಕಾಪಿಕಾಡ್‌ ದುಬೈ ಕಾರ್ಯಕ್ರಮಕ್ಕೆ ಬಹಿಷ್ಕಾರ ಬೆದರಿಕೆ

ಸೋಷಿಯಲ್‌ ಮೀಡಿಯಾದಲ್ಲಿ ನಟನ ವಿರುದ್ಧ ಅಪಪ್ರಚಾರ ಮಂಗಳೂರು : ತುಳು ಸಿನಿಮಾದ ಜನಪ್ರಿಯ ನಟ ದೇವದಾಸ್ ಕಾಪಿಕಾಡ್ ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡಿರುವ ವಿಚಾರ ಭಾರಿ ವಿವಾದಕ್ಕೀಡಾಗಿದೆ. ಇತ್ತೀಚೆಗೆ ಬಿಜೆಪಿಯ ಸದಸ್ಯತ್ವ ನೋಂದಣಿ ಅಭಿಯಾನದಂಗವಾಗಿ ಹಿರಿಯ ನಾಯಕರಾದ ಸದಾನಂದ ಗೌಡ, ಶಾಸಕ ವೇದವ್ಯಾಸ ಕಾಮತ್‌ ಸಹಿತ ಕೆಲವು ನಾಯಕರು ಅವರ ಮನೆಗೆ ಭೇಟಿ ನೀಡಿದ್ದರು. ಈ ಫೋಟೊವನ್ನು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡು ದೇವದಾಸ್‌ ಕಾಪಿಕಾಡ್‌ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದು ಹೇಳಿತ್ತು.ಆದರೆ

ಬಿಜೆಪಿ ನಾಯಕರ ಜೊತೆ ಫೋಟೊ ತೆಗೆಸಿಕೊಂಡದ್ದಕ್ಕೆ ಕಾಪಿಕಾಡ್‌ ದುಬೈ ಕಾರ್ಯಕ್ರಮಕ್ಕೆ ಬಹಿಷ್ಕಾರ ಬೆದರಿಕೆ Read More »

ತೋಡಿಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಕಡಬ: ಕೂಲಿ ಕಾರ್ಮಿಕರೊಬ್ಬರು ನೀರು ತುಂಬಿದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ನೂಜಿಬಾಳ್ತಿಲ ಗ್ರಾಮದ ಪೇರಡ್ಕದಲ್ಲಿನಡೆದಿದೆ. ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಮೃತಪಟ್ಟವರು ಕೂಲಿ ಕಾರ್ಮಿಕರಾಗಿದ್ದ ಉಮೇಶ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ನಿನ್ನೆ ಸಂಜೆ ವೇಳೆ ಒಂದು ಕಿ.ಮೀ. ದೂರದ ಪೇರಡ್ಕ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ

ತೋಡಿಗೆ ಬಿದ್ದು ಕೂಲಿ ಕಾರ್ಮಿಕ ಮೃತ್ಯು Read More »

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರ ನೇಮಕ

ಮಂಗಳೂರು: ಭಾರತೀಯ ಜನತಾ ಪಾರ್ಟಿಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯರನ್ನು ನೇಮಕ ಮಾಡಲಾಗಿದೆ. ಪುತ್ತೂರಿನ ಮೂವರು ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜಯಶ್ರೀ ನಾಯಕ್, ಪ್ರೇಮಲತಾ ನಂದಿಲ ಹಾಗೂ ಮಲ್ಲಿಕಾ ಪ್ರಸಾದ್ ಅವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರ ನೇಮಕ Read More »

ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ, ಉಪಾಧ್ಯಕ್ಷರಾಗಿ ಸಂಜೀವ ಅಡ್ಯಾರ್ ಅವಿರೋಧವಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ನೂತನ ಅಧ್ಯಕ್ಷರಾಗಿ ಮಾತೃಭೂಮಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಭಾಸ್ಕರ ದೇವಸ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಫಲ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಅಡ್ಯಾ‌ರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಪಂಪ್ ವೆಲ್ ನಲ್ಲಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಕಚೇರಿಯಲ್ಲಿ ಬುಧವಾರ ಚುನಾವಣಾ ಪ್ರಕ್ರಿಯೆ ನಡೆದು ಈ ಆಯ್ಕೆ ನಡೆಯಿತು. ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್, ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು

ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ, ಉಪಾಧ್ಯಕ್ಷರಾಗಿ ಸಂಜೀವ ಅಡ್ಯಾರ್ ಅವಿರೋಧವಾಗಿ ಆಯ್ಕೆ Read More »

error: Content is protected !!
Scroll to Top