ದಕ್ಷಿಣ ಕನ್ನಡ

ಕಾಂಗ್ರೆಸ್ ನಾಯಕರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ : ನಳಿನ್ ಕುಮಾರ್ ಕಟೀಲ್‍ ಆರೋಪ

ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದು, ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಒತ್ತಾಯಿಸಿದ್ದಾರೆ. ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ನಳಿನ್ ಕುಮಾರ್ ಕಟೀಲ್, ಮೂಡಾ ಹಗರಣ ದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ […]

ಕಾಂಗ್ರೆಸ್ ನಾಯಕರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ : ನಳಿನ್ ಕುಮಾರ್ ಕಟೀಲ್‍ ಆರೋಪ Read More »

ಪುತ್ತೂರು : ವಿದ್ಯಾರ್ಥಿಯ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಜಗಳ | ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

ಪುತ್ತೂರು : ಹಿಂದೂ ಯುವಕ ತನಗೆ ಚೂರಿ ಇರಿದಿದ್ದಾನೆ ಎಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಹೈಡ್ರಾಮ ‌ನಡೆದಿದ್ದು, ಈ ಪ್ರಕರಣ ಸತ್ಯಾಸತ್ಯತೆ ಬೇರೆಯೇ ಇದೆ. ಈಗಾಗಲೇ ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಆದರೆ ಅವಳ ಕೈಯಲ್ಲಿ ಕೇವಲ ಗೀರಿದ ಗುರುತು ಕಂಡು ಬಂದಿದೆ. ಆದರೆ ಮಾಹಿತಿ ಪ್ರಕಾರ,

ಪುತ್ತೂರು : ವಿದ್ಯಾರ್ಥಿಯ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಜಗಳ | ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು Read More »

ಸುಳ್ಯ : ಎಸ್.ಐ.ಈರಯ್ಯ ವರ್ಗಾವಣೆ: ಸುಳ್ಯಕ್ಕೆ ಸಂತೋಷ್ ಬಿ.ಪಿ

ಬೆಳ್ಳಾರೆ : ಸುಳ್ಯ ಎಸ್.ಐ. ಆಗಿರುವ ಈರಯ್ಯ ದೂಂತೂರು ರಿಗೆ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದ್ದು, ಸುಳ್ಯಕ್ಕೆ ಬೆಳ್ಳಾರೆ ಪೋಲೀಸ್ ಠಾಣೆ ಎಸ್. ಐ. ಸಂತೋಷ್ ಬಿ.ಪಿ. ಯವರನ್ನು ನೇಮಿಸಲಾಗಿದೆ. ಸುಳ್ಯ ಪೊಲೀಸ್‌ ಠಾಣೆಯ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಎಸ್‌ಐ ಆಗಿದ್ದ ಈರಯ್ಯ ಡಿ.ಎನ್. ಅವರನ್ನು ಬೆಳ್ಳಾರೆ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ಎಸ್‌ಐ ಆಗಿ ವರ್ಗಾಯಿಸಲಾಗಿದೆ.   ಬೆಳ್ಳಾರೆ ಎಸ್‌ಐ ಸಂತೋಷ್ ಅವರನ್ನು ವರ್ಗಾಯಿಸಲಾಗಿದೆ.  ಸುಳ್ಯ ಪೊಲೀಸ್‌ ಠಾಣೆಯ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆ

ಸುಳ್ಯ : ಎಸ್.ಐ.ಈರಯ್ಯ ವರ್ಗಾವಣೆ: ಸುಳ್ಯಕ್ಕೆ ಸಂತೋಷ್ ಬಿ.ಪಿ Read More »

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ 2024 ಇದರ ಸಮಾರೋಪ ಸಮಾರಂಭ | ದುಶ್ಚಟ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳಿಂದ ಮಾಡಲು ಸಾಧ್ಯ – ಭಾಗೀರಥಿ ಮುರುಳ್ಯ |  ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ರಾಮಕುಂಜ :  ದುಶ್ಚಟ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳಿಂದ ಮಾಡಲು ಸಾಧ್ಯವಿದೆ. ಕೂಡಿ ಹಾಕಿ ಶಿಕ್ಷಣ ಕೊಡುವ ಕಾಲ ಬದಲಾಗಿದೆ. ವಿದ್ಯಾರ್ಥಿಗಳು ಸಂವಿಧಾನಕ್ಕೆ ಬದ್ಧರಾಗಿ, ಗೌರವ ಕೊಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿ – ವಿದ್ಯಾರ್ಥಿಯನಿರಾಗಿ ನಡೆದ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ 2024 ಇದರ ಸಮಾರೋಪ

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ 2024 ಇದರ ಸಮಾರೋಪ ಸಮಾರಂಭ | ದುಶ್ಚಟ ಮುಕ್ತ ಸಮಾಜ ನಿರ್ಮಾಣ ವಿದ್ಯಾರ್ಥಿಗಳಿಂದ ಮಾಡಲು ಸಾಧ್ಯ – ಭಾಗೀರಥಿ ಮುರುಳ್ಯ |  ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ Read More »

ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬಂಟ್ವಾಳ : ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.  ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮುಂಜಾನೆ 5ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಆತ ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ Read More »

ಮಂಗಳೂರು : ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ | ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ

ಮಂಗಳೂರು : ಮಂಗಳೂರಿನ ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳು ಆಟವಾಡುತ್ತಿದ್ದಾಗ ಕಿರಿಕ್ ಮಾಡಿಕೊಂಡ, ಬಳಿಕ ಒಂದು ತಂಡದ ವಿದ್ಯಾರ್ಥಿಗಳು ಇನ್ನೊಂದು ತಂಡದ ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ ನಡೆಸಿದ ಘಟನೆ ನಡೆದಿದೆ.   ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್‌ ಕಾಲೇಜು ವಿದ್ಯಾರ್ಥಿಗಳ ನಡುವೆ ಪುಟ್ಬಾಲ್ ಆಟದ ವಿಚಾರವಾಗಿ ಗಲಾಟೆ ಆರಂಭಗೊಂಡು ಬಳಿಕ ತಾರಕಕ್ಕೇರಿದೆ ಎಂದು ತಿಳಿದು ಬಂದಿದೆ. ಯೆನಪೊಯದ 17ರ ಬಾಲಕ ದೂರು ನೀಡಿದಾತ. ಈತನ ಜತೆ ಇನ್ನಿಬ್ಬರು 17ರ ಹರೆಯದ ಬಾಲಕರು ಹಲ್ಲೆಗೊಳಗಾಗಿದ್ದಾರೆ. ದಿಯಾನ್,

ಮಂಗಳೂರು : ಎರಡು ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ | ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ Read More »

ದೇಶದಲ್ಲಿ ಮಂಕಿಪಾಕ್ಸ್ ಭೀತಿ | ಎಚ್ಚರವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ

 ಮಂಗಳೂರು : ದೇಶದ ಎಲ್ಲಾ ವಿಮಾನ ನಿಲ್ದಾಣಗಳು ಹಾಗೂ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಭೂ ಬಂದರುಗಳಲ್ಲಿನ ಅಧಿಕಾರಿಗಳಿಗೆ ಒಳಬರುವ ಪ್ರಯಾಣಿಕರ ಬಗ್ಗೆ  ಮಂಕಿಪಾಕ್ಸ್‌ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಎಚ್ಚರದಿಂದಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ದೆಹಲಿಯ ರಾಮ್ ಮನೋಹ‌ರ್ ಲೋಹಿಯಾ ಆಸ್ಪತ್ರೆ, ಸಫರ್‌ಜಂಗ್‌ ಆಸ್ಪತ್ರೆ ಮತ್ತು ಲೇಡಿ ಹಾರ್ಡಿಂಜ್ ಆಸ್ಪತ್ರೆಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ಮಂಕಿಪಾಕ್ಸ್ ರೋಗಿಯ ಪ್ರತ್ಯೇಕತೆ, ನಿರ್ವಹಣೆ ಮತ್ತು ಚಿಕಿತ್ಸೆಗಾಗಿ ನೋಡಲ್‌ ಕೇಂದ್ರಗಳಾಗಿ ಗುರುತಿಸಿದೆ. ಅಂತಹ ಗೊತ್ತುಪಡಿಸಿದ

ದೇಶದಲ್ಲಿ ಮಂಕಿಪಾಕ್ಸ್ ಭೀತಿ | ಎಚ್ಚರವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ Read More »

ಖೋಟಾ ನೋಟು ಚಲಾವಣೆ- ನಾಲ್ವರು ಬಂಧನ

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ

ಖೋಟಾ ನೋಟು ಚಲಾವಣೆ- ನಾಲ್ವರು ಬಂಧನ Read More »

ಈಟಿ ಸ್ಪರ್ಧೆ : ಮೇಘಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು :  ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 17 ರ ವಯೋ ಮಾನದ ಬಾಲಕಿಯರ ವಿಭಾಗದಲ್ಲಿ ಮೇಘಶ್ರೀ ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ಧಾರೆ. ಮಂಗಳ ಕ್ರಿಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಸ್ಪರ್ದೆ ನಡೆಯಿತು. ಕಲ್ಲಡ್ಕ ಶ್ರೀ ರಾಮ ಪ್ರೌಢ ಶಾಲೆಯ 10 ನೇ ತರಗತಿಯ ವಿಧ್ಯಾರ್ಥಿ  ಮೇಘಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಟಿ ಸ್ಪರ್ಧೆ : ಮೇಘಶ್ರೀ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಆ.22 ರಿಂದ 29 : ಪುಣ್ಚಪ್ಪಾಡಿ ವಿನಾಯಕನಗರದಲ್ಲಿ ಮದ್ಯವರ್ಜನ ಶಿಬಿರ | ಕಾರ್ಯಕ್ರಮದ ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ

ಕಡಬ: ಪುಣ್ಚಪ್ಪಾಡಿ ವಿನಾಯಕನಗರ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆ.22 ರಿಂದ 29 ರ ತನಕ ವಿನಾಯಕನಗರ ಶ್ರೀ ಗೌರಿ ಸದನ ಸಭಾಂಗಣದಲ್ಲಿ ನಡೆಯುವ 1843ನೇ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆ ಭಾನುವಾರ ಸವಣೂರಿನಲ್ಲಿ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಚರ್ಚಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗಾಗಿ ಉಪ ಸಮಿತಿಗಳನ್ನು ರಚಿಸಲಾಯಿತು. ಸಭಾ ವೇದಿಕೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ತಾಲೂಕು ಅಧ್ಯಕ್ಷ ಮಹೇಶ್‍ ಕೆ. ಸವಣೂರು, ಸವಣೂರು ಸಿಎ

ಆ.22 ರಿಂದ 29 : ಪುಣ್ಚಪ್ಪಾಡಿ ವಿನಾಯಕನಗರದಲ್ಲಿ ಮದ್ಯವರ್ಜನ ಶಿಬಿರ | ಕಾರ್ಯಕ್ರಮದ ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ Read More »

error: Content is protected !!
Scroll to Top