ದಕ್ಷಿಣ ಕನ್ನಡ

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಉಳ್ಳಾಲ ಪೊಲೀಸರು  ದಂಪತಿಯನ್ನು ಬಂಧಿಸಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮದ ರಹ್ಮತ್ ನಗರದ ಎಲ್ಲ್ ಪಡ್ಪು ಎಂಬಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಪಿ ಧನ್ಯ ನಾಯಕ್ ನೇತೃತ್ವದ ಉಳ್ಳಾಲ ಪೊಲೀಸರು ಹಾಗೂ ಉಳ್ಳಾಲ ತಹಶೀಲ್ದಾರ್ ನೇತೃತ್ವದ ತಂಡ ದಂಪತಿಯನ್ನು ಬಂಧಿಸಿದ್ದಾರೆ. ನಝೀರ್ ಹಾಗೂ ಆತನ ಪತ್ನಿ ಅಸ್ಮ ಬಂಧಿತ ದಂಪತಿ. ಕಾರಿನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಬಂಧಿತ ಆರೋಪಿಗಳಿಂದ 6.800ಕೆಜಿ […]

ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ | ಉಳ್ಳಾಲ ಪೊಲೀಸರು ಹಾಗೂ ತಹಶೀಲ್ದಾರ್ ತಂಡದಿಂದ ಕಾರ್ಯಾಚರಣೆ Read More »

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ

ಸುಳ್ಯ : ಡೀಸೆಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್ ನಲ್ಲಿ ಡೀಸಲ್ ಸೋರಿಕೆಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಟ್ಯಾಂಕರ್ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಡಿಸೇಲ್ ಟ್ಯಾಂಕರ್ ಪಲ್ಟಿ : ಡೀಸೆಲ್ ಸೋರಿಕೆ Read More »

ವಕ್ಫ್ ಬೋರ್ಡ್ ನಿಂದ ಭೂಮಿ ಕಬಳಿಕೆ : ಭೂದಾಖಲೆಗಳನ್ನು ಪರಿಶೀಲಿಸುವಂತೆ ಹಿಂದೂ ಸಮಾಜಕ್ಕೆ ವಿಶ್ವ ಹಿಂದೂ ಪರಿಷದ್ ಕರೆ

ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC)ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಖ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಭೂದಾಖಲೆಗಳನ್ನು ಪರಿಶೀಲಿಸುವಂತೆ ಹಿಂದೂ ಸಮಾಜಕ್ಕೆ ವಿಶ್ವ ಹಿಂದೂ ಪರಿಷದ್ ಕರೆ ನೀಡಿದೆ. ಈ ಕುರಿತು ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯದರ್ಶಿ ಶರಣ್‍ ಪಂಪ್‍ ವೆಲ್‍ ಹೇಳಿಕೆ ನೀಡಿ,

ವಕ್ಫ್ ಬೋರ್ಡ್ ನಿಂದ ಭೂಮಿ ಕಬಳಿಕೆ : ಭೂದಾಖಲೆಗಳನ್ನು ಪರಿಶೀಲಿಸುವಂತೆ ಹಿಂದೂ ಸಮಾಜಕ್ಕೆ ವಿಶ್ವ ಹಿಂದೂ ಪರಿಷದ್ ಕರೆ Read More »

ನಾಳೆ (ಅ.31) : ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ನಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ 12 ತಂಡಗಳ ‘ಪ್ರೊ ವಾಲಿಬಾಲ್ ಪಂದ್ಯಾಟ’ | ಸನ್ಮಾನ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ

ಕಡಬ: ತಾಲೂಕಿನ ಕಾಣಿಯೂರು ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ ಆಯ್ದ ಸ್ಥಳೀಯ ಆಟಗಾರರ ನಿಗದಿತ 12 ತಂಡಗಳ ‘ಪ್ರೊ ವಾಲಿಬಾಲ್ ಪಂದ್ಯಾಟ’, ಸ್ಥಳೀಯರಿಗೆ ಆಟೋಟ ಸ್ಪರ್ಧೆ, ಸನ್ಮಾನ, ಪ್ರತಿಭಾ ಪುರಸ್ಕಾರ, ಆಶಕ್ತ ಬಡ ಕುಟುಂಬಗಳಿಗೆ ಸಹಾಯಧನ ವಿತರಣೆ  ಅ.31 ಗುರುವಾರ ಪುಣ್ಚತ್ತಾರಿನಲ್ಲಿ ನಡೆಯಲಿದೆ ಎಂದು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ಸದಸ್ಯ ದಿನೇಶ್‍ ಮಾಳ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ಲಬ್‍ ಕಳೆದ 11 ವರ್ಷಗಳಿಂದ

ನಾಳೆ (ಅ.31) : ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್‍ ನಿಂದ ದೀಪಾವಳಿ ಹಬ್ಬದ ಪ್ರಯುಕ್ತ 12ನೇ ವರ್ಷದ 12 ತಂಡಗಳ ‘ಪ್ರೊ ವಾಲಿಬಾಲ್ ಪಂದ್ಯಾಟ’ | ಸನ್ಮಾನ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ Read More »

ಡಿ.6-7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ಸಮಾಲೋಚನಾ ಸಭೆ

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಡಿ.6,7 ರಂದು ನಡೆಯಲಿರುವ ಷಷ್ಠಿ ಮಹೋತ್ಸವದ ಸಮಾಲೋಚನಾ ಸಭೆ ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ವಹಿಸಿ ಮಾತನಾಡಿ, ದೇವಳದಲ್ಲಿ ಷಷ್ಠಿ ಮಹೋತ್ಸವವನ್ನು ಪ್ರತಿ ವರ್ಷದಂತೆ ಈ ವರ್ಷವೂ ಊರ ಪರವೂರ ಭಕ್ತರ ಸಹಕಾರದಿಂದ ಅತ್ಯಂತ ಸಂಭ್ರಮದಿಂದ ಆಚರಿಸಲಿದ್ದು, ಡಿ. 6ರ ಪಂಚಮಿ ದಿವಸ ಸುಬ್ರಹ್ಮಣ್ಯ ಶ್ರೀ ಅವರಿಂದ ಆಶೀರ್ವಚನ ನಡೆಯಲಿದೆ. ಡಿ. 7ರಂದು ಷಷ್ಠಿ

ಡಿ.6-7 : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ಸಮಾಲೋಚನಾ ಸಭೆ Read More »

ಸವಣೂರು ಪರಿಸರದ ಬೇಡಿಕೆಯಾದ 63 ಕೆ.ವಿ. ವಿದ್ಯುತ್ ಪರಿವರ್ತಕಕ್ಕೆ ಚಾಲನೆ

ಸವಣೂರು: ಗ್ರಾಮದ ಬೇರಿಕೆ ಎಂಬಲ್ಲಿ ಅಲ್ಲಿನ ಪರಿಸರದ ಬಹುದಿನಗಳ ಬೇಡಿಕೆಯಾದ 63 K.V.(ಕೆ. ವಿ ) ವಿದ್ಯುತ್ ಪರಿವರ್ತಕವನ್ನು ಸವಣೂರು ಮೆಸ್ಕಾಂನ ಜೆ. ಇ. ರಾಜೇಶ್ ಅರವರ ಮುತುವರ್ಜಿಯಲ್ಲಿ  ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವೆಂಕಪ್ಪ ಶೆಟ್ಟಿ ಸವಣೂರು ಗುತ್ತು, ಸವಣೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ವಸಂತ್ ಶೆಟ್ಟಿ ಸಿಬಂದಿ ಪ್ರಮೋದ್ ರೈ, ಪಂಚಾಯತ್ ಸದಸ್ಯೆ ಇಂದಿರಾ ಬೇರಿಕೆ, ಮಾಜಿ ಸದಸ್ಯ ಸತೀಶ್ ಬಲ್ಯಾಯ, ಮಾಜಿ ಸದಸ್ಯೆ ಗಾಯತ್ರಿ ಬರಮೇಲು ಸವಣೂರು ಸಿ. ಎ ಬ್ಯಾಂಕ್ ಉಪಾಧ್ಯಕ್ಷ

ಸವಣೂರು ಪರಿಸರದ ಬೇಡಿಕೆಯಾದ 63 ಕೆ.ವಿ. ವಿದ್ಯುತ್ ಪರಿವರ್ತಕಕ್ಕೆ ಚಾಲನೆ Read More »

ಸವಣೂರು ಶಕ್ತಿ ಕೇಂದ್ರ ಬೂತ್ 65 ರಲ್ಲಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು: ಶಕ್ತಿ ಕೇಂದ್ರ ಬೂತ್ 65 ರಲ್ಲಿ ಭಾನುವಾರ ನರೇಂದ್ರ ಮೋದಿ ಯವರ ಮನ್ ಕೀ ಬಾತ್ ಕಾರ್ಯಕ್ರಮದ ವೀಕ್ಷಣೆ ಮಾಡಲಾಯಿತು. ಉಮೇಶ್ ಆಚಾರ್ಯ ಅಟ್ಟೊಳೆ ಅವರ ಮನೆಯಲ್ಲಿ ಮನ್‍ ಕೀ ಬಾತ್ ವೀಕ್ಷಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡಂಜಿ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಕೋಡಿ ಬೈಲು, ಬೂತ್ ಸಂಖ್ಯೆ 65 ರ ಅಧ್ಯಕ್ಷ ತೀರ್ಥರಾಮ ಕೆಡಂಜಿ, ಕಾರ್ಯದರ್ಶಿ ಸತೀಶ್ ಬಲ್ಯಾಯ, ಪಂಚಾಯತ್ ಸದಸ್ಯರಾದ

ಸವಣೂರು ಶಕ್ತಿ ಕೇಂದ್ರ ಬೂತ್ 65 ರಲ್ಲಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ Read More »

ಕೊಕ್ಕಡ ದೇವಸ್ಥಾನದ ಸ್ಥಿರಾಸ್ತಿ ಬೇನಾಮಿ ಟ್ರಸ್ಟ್ ಗೆ ಹಸ್ತಾಂತರ |ತೀವ್ರ ಆಕ್ರೋಶಕ್ಕೊಳಗಾದ ಭಕ್ತಾದಿಗಳು | ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ರಚನೆ | ಅನಿರ್ದಿಷ್ಠಾವಧಿ ಧರಣಿಗೆ ನಿರ್ಧಾರ

ಬೆಳ್ತಂಗಡಿ : ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ದೇವಳದ ಅಭಿವೃದ್ಧಿಯ ದೃಷ್ಟಿಯಿಂದ ಸೌತಡ್ಕ ಕ್ಷೇತ್ರದ ಭಕ್ತಾದಿಗಳಿಂದ, ದಾನಿಗಳಿಂದ, ಹಿತೈಷಿಗಳಿಂದ ಸಂಗ್ರಹಿಸಲ್ಪಟ್ಟ ಹಣದಲ್ಲಿ ಖರೀದಿಸಲಾಗಿದ್ದ ಸ್ಥಿರಾಸ್ತಿಗಳನ್ನು ಮಹಾಗಣಪತಿ ಸೇವಾ ಟ್ರಸ್ಟ್ ಎಂಬ ಬೇನಾಮಿ ಟ್ರಸ್ಟ್ ಗೆ ಮತ್ತು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಸರಿಗೆ ಅಕ್ರಮವಾಗಿ ವರ್ಗಾವಣೆಗೊಳಿಸಿದ ವಿವಾದ ಭಕ್ತಾದಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಪ್ರತಿಭಟನೆಗೆ ಸಿದ್ಧತೆಗಳು ನಡೆಯುತ್ತಿದೆ. ಕೊಕ್ಕಡ ಸೌತಡ್ಕ ದೇವಳದ ಭಕ್ತಾದಿಗಳು ಇದೀಗ ಪಕ್ಷ

ಕೊಕ್ಕಡ ದೇವಸ್ಥಾನದ ಸ್ಥಿರಾಸ್ತಿ ಬೇನಾಮಿ ಟ್ರಸ್ಟ್ ಗೆ ಹಸ್ತಾಂತರ |ತೀವ್ರ ಆಕ್ರೋಶಕ್ಕೊಳಗಾದ ಭಕ್ತಾದಿಗಳು | ಕೊಕ್ಕಡ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ರಚನೆ | ಅನಿರ್ದಿಷ್ಠಾವಧಿ ಧರಣಿಗೆ ನಿರ್ಧಾರ Read More »

ಕಲ್ಲಡ್ಕ ಪ್ರಸಿದ್ಧ ಹೊಟೇಲ್ ಶ್ರೀ ಲಕ್ಷ್ಮೀನಿವಾಸದಲ್ಲಿ ಕಳ್ಳತನ

ಬಂಟ್ವಾಳ: ಕಲ್ಲಡ್ಕದಲ್ಲಿ ಕಳೆದ ಹಲವಾರು ವರ್ಷಗಳಿಂದ ಮನೆಮಾತಾಗಿರುವ ಪ್ರಸಿದ್ಧ ಹೊಟೇಲ್ ಗೆ ಕಳ್ಳನೋರ್ವ ನುಗ್ಗಿದ ಘಟನೆ ನಡೆದಿದ್ದು, ಸಿಸಿ ಟಿವಿ ದೃಶ್ಯಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲ್ಲಡ್ಕದಲ್ಲಿರುವ ಶ್ರೀ ಲಕ್ಮೀನಿವಾಸ ಕೆ.ಟಿ.ಹೋಟೆಲ್ ಗೆ ಕಳ್ಳನೋರ್ವ ನುಗ್ಗಿದ್ದು, ಹೊಟೇಲ್‍ ನಲ್ಲಿ ಇರಿಸಿದ್ದ ದೇವರ ಹುಂಡಿಯನ್ನು ಕಳವು ಮಾಡಿದ್ದಾನೆ. ಈ ಬಗ್ಗೆ ಮಾಲಕರು ಯಾವುದೇ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದೇವರ ಡಬ್ಬಿಯಲ್ಲಿದ್ದ ಚಿಲ್ಲರೆ ಹಣವನ್ನು ಕಳವು ಮಾಡಿದ ಕಳ್ಳ ಇತರ ಕಡೆಗಳಲ್ಲಿ ಜಾಲಾಡಿರುವ ದೃಶ್ಯ ‌ಸಿಸಿ.ಟಿ.ವಿಯಲ್ಲಿ ಸೆರೆಯಾಗಿದೆ.

ಕಲ್ಲಡ್ಕ ಪ್ರಸಿದ್ಧ ಹೊಟೇಲ್ ಶ್ರೀ ಲಕ್ಷ್ಮೀನಿವಾಸದಲ್ಲಿ ಕಳ್ಳತನ Read More »

ವಲಯ ಮಟ್ಟದ ಕ್ರೀಡಾಕೂಟ : ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ       

ಸವಣೂರು: ಪಟ್ಟೆ ವಿದ್ಯಾಸ೦ಸ್ಥೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿ ಮೂವರು  ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ 7ನೇ ತರಗತಿಯ ಮಿಲನ್ ಜಿ. 100 ಮೀ. ಮತ್ತು 200 ಮೀ. ಓಟದಲ್ಲಿ ಪ್ರಥಮ ಸ್ಥಾನ, ಗು೦ಡೆಸೆತದಲ್ಲಿ ತೃತೀಯ, 8ನೇ ತರಗತಿಯ ಹೃತೇಶ್ ಬಿ.ಎಸ್. 200 ಮೀ ಓಟದಲ್ಲಿ ದ್ವಿತೀಯ, ಮತ್ತು 100 ಮೀ. ಓಟದಲ್ಲಿ ತೃತೀಯ,  10ನೇ ತರಗತಿಯ ಮಹಮ್ಮದ್ ಶಮ್ಮಾಸ್ 400 ಮೀ ಓಟದಲ್ಲಿ ತೃತೀಯ ಸ್ಥಾನ ಗಳಿಸಿ ತಾಲೂಕು

ವಲಯ ಮಟ್ಟದ ಕ್ರೀಡಾಕೂಟ : ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ        Read More »

error: Content is protected !!
Scroll to Top