ದಕ್ಷಿಣ ಕನ್ನಡ

ಉಳ್ಳಾಲ : ಯುವಕನಿಗೆ ಚೂರಿ ಇರಿತ

ಮನೆಯಿಂದ ಹೊರಗೆ ಕರೆದು ಮರಣಾಂತಿಕ ಹಲ್ಲೆ ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ಆತನ ಮನೆಯ ಎದುರೇ ಸಂಭವಿಸಿದೆ. ಶುಕ್ರವಾರ ತಡರಾತ್ರಿ ವೇಳೆ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬವರು ಕೊಲೆಯತ್ನಕ್ಕೆ ಒಳಗಾದವರು. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಹಾಗೂ ಇನ್ನಿಬ್ಬರು ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ […]

ಉಳ್ಳಾಲ : ಯುವಕನಿಗೆ ಚೂರಿ ಇರಿತ Read More »

ಮಾ.7 : ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ 24ನೇ ವರ್ಷದ ಸಂಸ್ಥಾಪನಾ ದಿನಾಚರಣೆ

ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್‌ನ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆ ದ.ಕ.ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಎಲ್ಲಾ ಕ್ಷೇತ್ರಗಳ, ವಲಯಗಳ ಸಹಕಾರದೊಂದಿಗೆ ಮಾ. 7ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಕೆ.ಎಸ್.ಟಿ.ಎ. ಜಿಲ್ಲಾ ಸಮಿತಿ ಅಧ್ಯಕ್ಷ ಜಯಂತ್ ಉರ್ಲಾಂಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ಬಜೆಟ್ ಮಂಡನೆ ಮೊದಲು ನಮ್ಮ ಮೂರು ಬೇಡಿಕೆಯಾದ ಪೆನ್ಶನ್, ಟೈಲರ್ ವೃತ್ತಿಯಲ್ಲಿರುವವರ ಮಕ್ಕಳಿಗೆ ಸ್ಕಾಲರ್ ಶಿಪ್ ಹಾಗೂ ಆರೋಗ್ಯ ವಿಮೆ ನೀಡುವಂತೆ ಸಚಿವ ಕೋಟ

ಮಾ.7 : ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ 24ನೇ ವರ್ಷದ ಸಂಸ್ಥಾಪನಾ ದಿನಾಚರಣೆ Read More »

ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ

ಪುತ್ತೂರು: ಯಶಸ್ವಿನಿ ಯೋಜನೆಯಲ್ಲಿ ಚಿಕಿತ್ಸಾ ದರ ಪರಿಷ್ಕರಿಸುವ ಸಹಿತ ವಿವಿಧ ಬೇಡಿಕೆಗಳನ್ನು ಸರಕಾರದ ಗಮನ ಸೆಳೆಯಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ನಿರ್ಧಾರವನ್ನು ಮೆಡಿಕಲ್‍ ಅಸೋಸಿಯೇಶನ್‍ ಕೈಗೊಂಡಿದೆ ಎಂದು ಅಸೋಸಿಯೇಶನ್‍ ಅಧ್ಯಕ್ಷ ಡಾ.ಶ್ರೀಪತಿ ರಾವ್‍ ತಿಳಿಸಿದ್ದಾರೆ.. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಎಲ್ಲಾ ಹಣವನ್ನು ಕೂಡಲೇ ಸಂದಾಯ ಮಾಡಬೇಕು, ರೋಗಿಗಳು ಆಸ್ಪತ್ರೆಗೆ ಸೇರುವಾಗ ಇರುವ ನಿಬಂಧನೆಗಳನ್ನು ಸಡಿಲಿಕರಣಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು. ಪುತ್ತೂರಿನ ಆಸ್ಪತ್ರೆಗಳಲ್ಲಿ ಸರಕಾರಿ ಯೋಜನೆಗಳಾದ ಇಎಸ್‌ಐ, ಯಶಸ್ವಿನಿ

ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೆಡಿಕಲ್‍ ಅಸೋಸಿಯೇಶನ್‍ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ | ಸರಕಾರದ ಗಮನ ಸೆಳೆಯುವಂತೆ ಆಗ್ರಹ Read More »

ಸಣ್ಣ ನೀರಾವರಿ ಇಲಾಖೆಯಡಿ 3 ಕೋಟಿ ರೂ. ವೆಚ್ಚದಲ್ಲಿ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಸಂಜೀವ ಮಠಂದೂರು ಶಂಕು ಸ್ಥಾಪನೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಬಳಿಯ ಕುಮಾರಧಾರ ನದಿಗೆ ಸಣ್ಣ ನೀರಾವರಿ ಇಲಾಖೆಯಡಿ 2 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ರಚನೆ ಹಾಗೂ ಸಿ.ಎ.ಬ್ಯಾಂಕ್ ಬಳಿ ನೇತ್ರಾವತಿ ನದಿಗೆ 1 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ರಚನೆ ಕಾಮಗಾರಿಗೆ ಶಂಕು ಸ್ಥಾಪನೆ ಸೋಮವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಮಳೆಗಾಲದಲ್ಲಿ ತುಂಬಿ ಹರಿಯುವ ನದಿಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಯಾವುದೇ ಹಾನಿಯಾಗಬಾರದು ಎಂಬ ನಿಟ್ಟಿನಲ್ಲಿ ತಡೆಗೋಡೆ ಕಾಮಗಾರಿಗೆ ಸಣ್ಣ

ಸಣ್ಣ ನೀರಾವರಿ ಇಲಾಖೆಯಡಿ 3 ಕೋಟಿ ರೂ. ವೆಚ್ಚದಲ್ಲಿ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಶಾಸಕ ಸಂಜೀವ ಮಠಂದೂರು ಶಂಕು ಸ್ಥಾಪನೆ Read More »

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ

ಕಾರ್ಕಳ : ಸ್ವಚ್ಛ ಸುಂದರ ಪ್ರಕೃತಿಯಿಂದಲೇ ಪ್ರಸಿದ್ಧಿ ಪಡೆಯುತ್ತಿರುವ ಕಾರ್ಕಳದ ಕೆಲವು ಪ್ರದೇಶದಲ್ಲಿ ವಿವಿಧ ಸಂಘ ಸಂಸ್ಥೆಗಳು ಪರಿಸರ ದಿನಾಚರಣೆ ಮತ್ತಿತರ ಸಂದರ್ಭಗಳಲ್ಲಿ ನೆಟ್ಟ ಗಿಡಗಳು ಕೇವಲ ಆ ಒಂದು ದಿನದ ಸಂಭ್ರಮಕ್ಕೆ ಮಾತ್ರ ಸೀಮಿತವಾಗುತ್ತಿರುವದು ವಿಷಾದದ ಸಂಗತಿ. ಜನತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜಾಗೃತಿಗೊಳಿಸುವ ಉದ್ದೇಶದಿಂದ ವಿಶ್ವಸಂಸ್ಥೆ ಜೂನ್‌ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಾರಂಭ ಮಾಡಿದೆ. ಆದರೆ ಇದೀಗ ಗಿಡ ನೆಡುವುದು, ಅದರ ಪೋಷಣೆ ಕೇವಲ ಪರಿಸರ ದಿನಾಚರಣೆಗೆ ಮಾತ್ರ ಸೀಮಿತವಾಗುತ್ತಿದೆ.

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ Read More »

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ

ಪುತ್ತೂರು : ಕರ್ನಾಟಕ ರಾಜ್ಯ ಎಸ್ ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆ ವತಿಯಿಂದ ದ,ಕ.ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಎಸ್‍ಡಿಎಂಸಿಯ 21ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ ಫೆ.28 ಮಂಗಳವಾರ ಮಾಣಿ ನೆರಳಕಟ್ಟೆ ಜಯಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ರಾಜ್ಯ ಎಸ್‍ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷ  ಮೊಯಿದೀನ್‍ ಕುಟ್ಟಿ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ Read More »

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ

ಮಂಗಳೂರು : ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿ ಯಿಂದ 2ಎಗೆ ವರ್ಗಾಯಿಸಬೇಕು ಎಂಬ ಬೇಡಿಕೆಯ ಮನವಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಉತ್ತರ ನೀಡಲಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‍ ಶೆಟ್ಟಿ ಹೇಳಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಶುಕ್ರವಾರ ಮಂಗಳೂರಿನ ಬಂಟ್ಸ್ ಹಾಸ್ಟೇಲ್‍ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಲ್ಲಾ ಸಮಾಜಕ್ಕೂ ನಿಗಮ, ಸರಕಾರದಿಂದ ಸೌಲಭ್ಯ ದೊರೆಯುತ್ತಿದೆ.

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ Read More »

ಫೆ.24-25 : ಉಪ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್ | ದ.ಕ.ಜಿಲ್ಲಾಧಿಕಾರಿ ಆದೇಶ

ಪುತ್ತೂರು : ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನಲೆಯಲ್ಲಿ ಫೆ.24 ಹಾಗೂ 25 ರಂದು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಬಂದ್‍ ಮಾಡುವಂತೆ ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್‍ ಆದೇಶಿಸಿದ್ದಾರೆ. ಮತದಾನ ದಿನದಂದು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಫೆ.24 ರ ಬೆಳಿಗ್ಗೆ 6 ಗಂಟೆಯಿಂದ ಫೆ.25 ರ ಸಂಜೆ 6 ರ ತನಕ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ. ಬಂಟ್ವಾಳ ತಾಲೂಕಿನ ಪುದು

ಫೆ.24-25 : ಉಪ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್ | ದ.ಕ.ಜಿಲ್ಲಾಧಿಕಾರಿ ಆದೇಶ Read More »

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಗ್ರಾಮ ವಿಕಾಸ ಸಮಿತಿ ಭೇಟಿ | ಶೌಚಾಲಯ ನಿರ್ಮಿಸುವಂತೆ ಮನವೊಲಿಕೆ | ಕಾಮಗಾರಿ ಆರಂಭ

ಬೆಳ್ತಂಗಡಿ : ಪಟ್ರಮೆ ಗ್ರಾಮವನ್ನು ಗ್ರಾಮ ವಿಕಾಸದ ಅಡಿಯಲ್ಲಿ ಬಯಲು ಶೌಚಮುಕ್ತ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಶೌಚಾಲಯ ನಿರ್ಮಿಸದ ಕಲ್ಲಾಪು ಮನೆ ಅಂಬೋಡಿ ಎಂಬವರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಶೌಚಾಲು ನಿರ್ಮಿಸುವಂತೆ ಮನವೊಲಿಸಿತು. ಇವರಿಗೆ ಗ್ರಾಮದ ಹಲವರು ಅನೇಕ ಸಲ ಶೌಚಾಲಯ ನಿರ್ಮಿಸುವಂತೆ ಮನವೊಲಿಸಿದರೂ ಶೌಚಾಲಯ ನಿರ್ಮಾಣದ ಕಾರ್ಯ ನಡೆದಿರಲಿಲ್ಲ. ಈ ನಿಟ್ಟಿನಲ್ಲಿ ಭೇಟಿ ಮಾಡಿದ ವಿದ್ಯಾಸಂಸ್ಥೆ ಮನವೊಲಿಸಿದ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಯಿತು. ಈ ಬಗ್ಗೆ ಶಾಲಾ ಸಂಚಾಲಕ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಗ್ರಾಮ ವಿಕಾಸ ಸಮಿತಿ ಭೇಟಿ | ಶೌಚಾಲಯ ನಿರ್ಮಿಸುವಂತೆ ಮನವೊಲಿಕೆ | ಕಾಮಗಾರಿ ಆರಂಭ Read More »

ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು

ಸುಳ್ಯ : ಪುತ್ತೂರಿನ ಕೌಡಿಚ್ಚಾರು ನಿವಾಸಿಗಳಾದ ಇಬ್ಬರು ಯುವಕರು ಸುಳ್ಯದ ಪಯಸ್ವಿನಿ ನದಿ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಮೇಲೆತ್ತಿದ್ದು, ಜಿತೇಶ್ ಹಾಗೂ ಪ್ರವೀಣ್ ಮೃತಪಟ್ಟವರೆಂದು ಗುರುತಿಲಾಗಿದೆ.  ಪುತ್ತೂರಿನ ಕೌಡಿಚ್ಚಾರು ಪರಿಸರದ ಆರು ಯುವಕರು ಕಾರಿನಲ್ಲಿ ಸುಳ್ಯಕ್ಕೆ ಬಂದು ಓಡಬಾಯಿ ತೂಗು ಸೇತುವೆ ಬಳಿ ಕಾರು ನಿಲ್ಲಿಸಿ ದೊಡೇರಿಯವರೆಗೆ ಹೋಗಿ, ಬಳಿಕ ಪಯಸ್ವಿನಿ ನದಿಗೆ ಈಜಲೆಂದು ತೆರಳಿದ್ದರು. ಅವರಲ್ಲೋರ್ವ ನೀರು ಪಾಲಾದಾಗ, ಜೊತೆಗಿದ್ದ ಇನ್ನೊಬ್ಬಾತ ರಕ್ಷಿಸಲೆಂದು ನೀರಿಗೆ ಧುಮುಕ್ಕಿದ್ದಾನೆ. ನೀರಿನ ಸೆಳೆತಕ್ಕೆ ಗೆಳೆಯನನ್ನು ರಕ್ಷಿಸಲಾಗದೇ,

ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು Read More »

error: Content is protected !!
Scroll to Top