ದಕ್ಷಿಣ ಕನ್ನಡ

ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಪರಿಣಾಮ ಭಾರಿ ಗಾಳಿ-ಮಳೆಗೆ ಬೃಹದಾದ ಜಾಹಿರಾತು ಫಲಕ ಬಿದ್ದು ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಜಖಂ ಆಗಿರುವ ಘಟನೆ ಮಂಗಳೂರು ಬಿಕರ್ನಕಟ್ಟೆಯಲ್ಲಿ ನಡೆದಿದೆ. ಕಮರ್ಷಿಯಲ್ ಬಿಲ್ಡಿಂಗ್ ಮೇಲೆ ಜಾಹಿರಾತು ಫಲಕ ಹಾಕಲಾಗಿತ್ತು. ಜೋರಾಗಿ ಬೀಸಿದ ಗಾಳಿಗೆ ಫಲಕ ಕಟ್ಟಡದ ಕೆಳಭಾಗಕ್ಕೆ ಬಿದ್ದಿದೆ. ಕಬ್ಬಿಣದ ಸರಳು ಹೊಂದಿರುವ ಫಲಕ ಕೆಳಗೆ ಹಾದು ಹೋದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು, ಭಾರ ತಾಳಲಾಗದೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಕಂಬದ […]

ಭಾರೀ ಗಾಳಿ ಮಳೆಗೆ ಮುರಿದು ಬಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕ |ಜಖಂಗೊಂಡ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು Read More »

ಜು.5 : ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ | ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ

ಮಂಗಳೂರು : ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜು.4 ರಿಂದ 5 ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜು.5 ರಂದು ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ. ಪ್ರಾಕೃತಿಕ ವಿಕೋಪದಿಂದ ಉಂಟಾಗುವ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ತುರ್ತು ಸೇವೆಗೆ

ಜು.5 : ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ | ದ.ಕ.ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ Read More »

ಸೌಜನ್ಯ ಹತ್ಯೆ ಪ್ರಕರಣದ ನಿಜವಾದ ಆರೋಪಿಗಳ ಪತ್ತೆಗೆ ದೈವದ ಮೊರೆ ಹೋದ ಸೌಜನ್ಯ ಕುಟುಂಬ | 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವ, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಹರಕೆ

ಬೆಳ್ತಂಗಡಿ: ಧರ್ಮಸ್ಥಳದ ಸಮೀಪ ನೇತ್ರಾವತಿಯ ಪಕ್ಕದ ಕಾಡಿನಲ್ಲಿ ಭೀಕರ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಪ್ರಕರಣದ ತನಿಖೆ ಮರು ಜೀವ ಪಡೆದುಕೊಳ್ಳುತ್ತಿದೆ. ಸಿಬಿಐ ವಿಶೇಷ ಕೋರ್ಟ್ ನಲ್ಲಿ, ಆರೋಪಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಉದ್ಭವ ಆಗಿದೆ. ಸೌಜನ್ಯ ಪೋಷಕರು ಮತ್ತು ಹೋರಾಟಗಾರರು ಮಾಧ್ಯಮಗಳ ಮುಂದೆ ಬಂದು ತಮ್ಮ ನೋವನ್ನು ಮತ್ತು ಬೇಸರವನ್ನು ಮತ್ತು ನಮ್ಮ ನ್ಯಾಯ ವ್ಯವಸ್ಥೆಯ ಮೇಲಿನ ಒಟ್ಟಾರೆ

ಸೌಜನ್ಯ ಹತ್ಯೆ ಪ್ರಕರಣದ ನಿಜವಾದ ಆರೋಪಿಗಳ ಪತ್ತೆಗೆ ದೈವದ ಮೊರೆ ಹೋದ ಸೌಜನ್ಯ ಕುಟುಂಬ | 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವ, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಹರಕೆ Read More »

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದುಕೊಂಡು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ. ವಿಟ್ಲದ ಕೊಡಂಗಾಯಿಯಲ್ಲಿ ಈ ಅಪಘಾತ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬ ಮೇಲಕ್ಕೆದ್ದಿದೆ. ಕಾರಿನ ಮೇಲೆಯೇ ಕಂಬ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಅಪಾಯದಿಂದ ಪಾರು Read More »

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜನಾರ್ದನ್ ಕುಲಾಲ್ ನಿಧನ | ರೈಲಿನಲ್ಲಿ ಹೃದಯಾಘಾತ

ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ, ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ್ ಕುಲಾಲ್ (75) ಅವರು ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜುಲೈ 2ರ ರವಿವಾರ ರಾತ್ರಿ ಘಟನೆ ನಡೆದಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಜನಾರ್ದನ ಅವರು ತಮ್ಮ ಕುಟುಂಬದ ಜತೆ ರವಿವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ

ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜನಾರ್ದನ್ ಕುಲಾಲ್ ನಿಧನ | ರೈಲಿನಲ್ಲಿ ಹೃದಯಾಘಾತ Read More »

ಐಎಸ್ ಉಗ್ರ ಸಂಘಟನೆ ಜತೆ ನಂಟು | ವಿದ್ವಂಸಕ ಕೃತ್ಯ ಎಸಗಲು ಸಂಚು | 9 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರು: ಐಎಸ್ ಉಗ್ರ ಸಂಘಟನೆ ಜತೆಗೂಡಿ ದೇಶಾಸ್ಯಂತ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ 9 ಮಂದಿ ವಿರುದ್ಧ ಎನ್‍ಐಎ ಆರೋಪ ಪಟ್ಟಿ ಸಲ್ಲಿಸಿದೆ. ಮಾಝ್‍ ಮುನೀರ್ ಅಹಮ್ಮದ್ (23), ಮಹಮ್ಮದ್ ಶಾರೀಕ್ (25), ರಿಶಾನ್ ತಾಜುದ್ದೀನ್ ಶೇಖ್ (22), ವಝೀನ್ ಅಬ್ದುಲ್ ರಹಿಮಾನ್ (22), ಹುಝೈರ್ ಫರ್ಹಾನ್ ಬೇಗ್ (22), ನದೀಮ್ ಅಹಮ್ಮದ್ ಕೆ. (22), ನದೀಮ್ ಫೈಝಲ್ ಎನ್. (27) ಹಾಗೂ ಜಬೀವುಲ್ಲಾ ಎಂಬವರ ಮೇಲೆ ಪೂರಕ ಆರೋಪ ಪಟ್ಟಿ

ಐಎಸ್ ಉಗ್ರ ಸಂಘಟನೆ ಜತೆ ನಂಟು | ವಿದ್ವಂಸಕ ಕೃತ್ಯ ಎಸಗಲು ಸಂಚು | 9 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ Read More »

ರಾಜ್ಯ ಸರಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ : ಸ್ವಾಮೀಜಿಗಳಿಂದ ನಿರ್ಧಾರ

ಮಂಗಳೂರು: ರಾಜ್ಯ ಸರ್ಕಾರ ತನ್ನ ಹಿಂದೂ ವಿರೋಧಿ ನಡೆಯನ್ನು ಕೈ ಬಿಡದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವ ಬಗ್ಗೆ ಸ್ವಾಮೀಜಿಗಳು ಕೈಗೊಂಡಿದ್ದಾರೆ. ಕಾಂಗ್ರೆಸ್​​ನ ಹಿಂದೂ ವಿರೋಧಿ ನಡೆಯ ವಿರುದ್ಧ ನಗರದ ಬಾಳಂಭಟ್​ ಹಾಲ್​​ನಲ್ಲಿ ಸ್ವಾಮೀಜಿಗಳು ಧರ್ಮ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಕಾಂಗ್ರೆಸ್​ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರವನ್ನು ಈ ಕೂಡಲೇ ಕೈ ಬಿಡಬೇಕು ಎಂದು ಗುರುಪುರ ವಜ್ರದೇಹಿ ಸ್ವಾಮೀಜಿ, ಒಡಿಯೂರು ಗುರುದೇವಾನಂದ ಸ್ವಾಮೀಜಿ, ಮಾಣಿಲ ಸ್ವಾಮೀಜಿ, ಕೇಮಾರು ಸೇರಿ

ರಾಜ್ಯ ಸರಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ : ಸ್ವಾಮೀಜಿಗಳಿಂದ ನಿರ್ಧಾರ Read More »

ಬಂಟ್ವಾಳ ನೀರಪಾದೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ನೀರಪಾದೆ ಬಾಳ್ತಿಲ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ ಹಾಗೂ ಜೀರ್ಣೋದ್ಧಾರ ಸೇವಾ ಸಮಿತಿ ವತಿಯಿಂದ ನೀರಪಾದೆಯಲ್ಲಿ ನಾರಾಯಣ ಗುರು ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಸೂರ್ಯೋದಯದ ಶುಭ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ನಿಡ್ಯೆ ಅವರ ಮುಂದಾಳತ್ವ ದಲ್ಲಿ ವೇ.ಮೂ. ಕೇಶವ ಶಾಂತಿಯವರಿಂದ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ನಡೆಯಿತು. ಅತಿಥಿಗಳಾಗಿ ಸಮಿತಿಯ ಗೌರವ ಅಧ್ಯಕ್ಷ ಡಾ | ಪ್ರಭಾಕರ ಭಟ್ ಕಲ್ಲಡ್ಕ , ಸೂರ್ಯನಾರಾಯಣ ಭಟ್ ಕಲಾಶ್ರಯ ದಾಸಕೋಡಿ , ಮಾಜಿ

ಬಂಟ್ವಾಳ ನೀರಪಾದೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಶಿಲಾನ್ಯಾಸ Read More »

ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ, ಹಸಿರುಸೇನೆ ಆಗ್ರಹ

ಪುತ್ತೂರು: ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ.ಜಿಲ್ಲಾ ಸಮಿತಿ ಸಹಾಯಕ ಆಯುಕ್ತರ ಮೂಲಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದೆ. ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೂ.20 ರ ಒಳಗಡೆ ರೈತರಿಗೆ ಹೆಕ್ಟೇರಿಗೆ 6400 ರೂ. ಕಟ್ಟಲು ಸೂಚನೆ ಬರುತ್ತಿದ್ದು, ಈ ಬಾರಿ ಜೂ.25 ಕಳೆದರೂ ಸಂಬಂಧ ಪಟ್ಟ ಇಲಾಖೆ ಯಾವುದೇ ಸೂಚನೆಯನ್ನು ಇಲ್ಲಿಯತನಕ ನೀಡಿಲ್ಲ. ತಕ್ಷಣ ಸಂಬಂಧ ಪಟ್ಟ ಇಲಾಖೆಗೆ ಬರಪೀಡಿತ

ದ.ಕ.ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ, ಹಸಿರುಸೇನೆ ಆಗ್ರಹ Read More »

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ

ಮಂಗಳೂರು: ಮುಂದೆ ನಡೆಯುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಹಿನ್ನಲೆಯಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಆಕ್ಷೇಪಣೆ ಇದ್ದಲ್ಲಿ  ಸಲ್ಲಿಸಲು ಮತದಾರರಿಗೆ ದಿನಾಂಕ ನಿಗದಿಗೊಳಿಸಿ ಆದೇಶ ನೀಡಲಾಗಿದೆ. ದ.ಕ.ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕು ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಆಕ್ಷೇಪಣೆ ಏನಾದರೂ ಇದ್ದಲ್ಲಿ ಜು.4 ರಂದು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜು.7 ರಂದು ಆಕ್ಷೇಪಣೆಗಳನ್ನು

ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನಲೆ | ಮತದಾರರ ಕರಡು ಪಟ್ಟಿ ಪ್ರಕಟ Read More »

error: Content is protected !!
Scroll to Top