ದಕ್ಷಿಣ ಕನ್ನಡ

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ

ಮುಸ್ಲಿಂ ಮುಖಂಡರು ಅವರಾಗಿಯೇ ಬಂದು ಭೇಟಿ ಮಾಡಿದರು ಎಂದು ಸಮಜಾಯಿಷಿ ಬೆಂಗಳೂರು: ಶನಿವಾರ ಮಂಗಳೂರಿಗೆ ಬಂದಿದ್ದರೂ ಕೊಲೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮನೆಗೆ ಹೋಗಿ ತಂದೆ ತಾಯಿಗೆ ಸಾಂತ್ವನ ಹೇಳದ ಕುರಿತು ಇಂದು ಬೆಂಗಳೂರಿನಲ್ಲಿ ಸ್ಪಷ್ಟೀಕರಣ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್‌, ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸುಗಳಿದ್ದ ಕಾರಣ ಮನೆಗೆ ಹೋಗಿಲ್ಲ ಎಂದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದ ವತಿಯಿಂದ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. […]

ಸುಹಾಸ್‌ ಶೆಟ್ಟಿ ಮೇಲೂ ಕೇಸ್‌ಗಳಿರುವುದರಿಂದ ಮನೆಗೆ ಹೋಗಿಲ್ಲ : ಪರಮೇಶ್ವರ್ ಸ್ಪಷ್ಟನೆ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗು ರೌಡಿ ಶೀಟರ್ ಆಗಿದ್ದ ಸುಹಾಸ್‍ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಂಗಳೂರು ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಹಿಂದೂ ಸಂಘಟನೆಯ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ಸುಹಾಸ್ ಶೆಟ್ಟಿಯ ಕೊಲೆ ದಕ್ಷಿಣಕನ್ನಡದಲ್ಲಿ ಸಂಚಲನ ಮೂಡಿಸಿತ್ತು. ತಡರಾತ್ರಿ ನಡೆದ ಈ ಬರ್ಬರ ಕೃತ್ಯದ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳ ವಿವರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್‍ ಹತ್ಯೆ ಪ್ರಕರಣ | 8 ಮಂದಿ ಆರೋಪಿಗಳ ಬಂಧನ Read More »

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು

ಮಂಗಳೂರು : ರೌಡಿ ಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯ ಎರಡು ಕಡೆಗಳಲ್ಲಿ ದುಷ್ಕರ್ಮಿಗಳು ಸಾರ್ವಜನಿಕರಿಬ್ಬರಿಗೆ ತಲವಾರು ತೋರಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ತಿಳಿದು ಬಂದಿದೆ. ಪಂಜಿಮೊಗರು ಸಮೀಪ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಂಜಿಮೊಗರು ನಿವಾಸಿ ಮೊಯ್ಲಿನಬ್ಬ (37) ಮತ್ತು ಶಾಂತಿನಗರದ ನಾಸಿರ್ (38) ಎಂಬವರಿಗೆ ತಲವಾರು ತೋರಿಸಿ, ಬೆದರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‍ ಧರಿಸಿಕೊಂಡಿದ್ದ ಇಬ್ಬರು ದುಷ್ಕರ್ಮಿಗಳು ತಲವಾರಿನೊಂದಿಗೆ ಸಂಚರಿಸುತ್ತಾ

ಮಂಗಳೂರು : ಬಿಗಿ ಬಂದೋಬಸ್ತು ನಡುವೆ ತಲ್ವಾರು ಹಿಡಿದು ಕೃತ್ಯ ಮೆರೆದ ಯುವಕರು Read More »

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು

ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳ ಮೇಲೆ ತೀವ್ರ ನಿಗಾ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಿನ್ನೆ ಬಂದ್‌ ಆಗಿದ್ದ ಮಂಗಳೂರು ನಗರ ಇಂದು ಸಹಜ ಸ್ಥಿತಿಗೆ ಮರಳಿದೆ. ನಿನ್ನೆ ಸುಹಾಸ್‌ ಶೆಟ್ಟಿ ಹತ್ಯೆ ಪ್ರತಿಭಟಿಸಿ ವಿಶ್ವ ಹಿಂದೂ ಪರಿಷತ್‌ ನೀಡಿದ ಕರೆಯನ್ವಯ ಬಂದ್‌ ಆಚರಿಸಲಾಗಿತ್ತು. ಬಂದ್‌ ಆಚರಿಸಲು ಒಪ್ಪದೆ ರಸ್ತೆಗಿಳಿದ ಕೆಲವು ಬಸ್‌ಗಳಿಗೆ ಕಲ್ಲುತೂರಿದ ಘಟನೆ ಮಂಗಳೂರು, ಮೂಲ್ಕಿ, ಕಾರ್ಕಳ ಮತ್ತಿತರೆಡೆಗಳಲ್ಲಿ ಸಂಭವಿಸಿತ್ತು. ನಿನ್ನೆಯಿಡೀ ಮಂಗಳೂರು ಸುತ್ತಮುತ್ತ ಬಿಗುವಿನ ಪರಿಸ್ಥಿಯಿತ್ತು. ಪುತ್ತೂರು, ಕಡಬ, ಬೆಳ್ತಂಗಡಿ

ಸಹಜ ಸ್ಥಿತಿಗೆ ಮರಳಿದ ಮಂಗಳೂರು : ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಾವಲು Read More »

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ

ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳಲ್ಲಿ ಬಾರ್‌, ಮದ್ಯದಂಗಡಿಗಳು ಬಂದ್‌ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಇದಲ್ಲದೆ ಮಂಗಳೂರು ಆಯುಕ್ತರ ವ್ಯಾಪ್ತಿಯಲ್ಲಿ ಮೇ 2ರಿಂದ ಮೇ 4ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ರೌಡಿ ಶೀಟರ್ ಮತ್ತು ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಹತ್ಯೆ ಮಾಡಿದ

ಮೇ 4ರ ತನಕ ನಾಲ್ಕು ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ : ಡಿಸಿ ಆದೇಶ Read More »

ಹತ್ಯೆಯಾದ ಸುಹಾಸ್‍ ಶೆಟ್ಟಿ ಮನೆಗೆ ಬಿ.ವೈ.ವಿಜಯೇಂದ್ರ, ಆರ್.ಅಶೋಕ್‍ ಭೇಟಿ | 25 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ಬಜ್ಜೆಯಲ್ಲಿ ಕೊಲೆಯಾದ ರೌಡಿ ಶೀಟರ್ ಸುಹಾಶ್ ಶೆಟ್ಟಿ ಮನೆಗೆ ಶುಕ್ರವಾರ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಹಾಸ್ ಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ನಡೆದ ಈ ಘಟನೆ ಖಂಡನಾರ್ಹ. ಬಿಜೆಪಿಯು ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಸುಹಾಸ್ ಜೀವಕ್ಕೆ ಬೆದರಿಕೆ ಇದ್ದರೂ ರಕ್ಷಣೆ ಇಲ್ಲದಿರುವುದು ಪೊಲೀಸರ ವೈಫಲ್ಯ,

ಹತ್ಯೆಯಾದ ಸುಹಾಸ್‍ ಶೆಟ್ಟಿ ಮನೆಗೆ ಬಿ.ವೈ.ವಿಜಯೇಂದ್ರ, ಆರ್.ಅಶೋಕ್‍ ಭೇಟಿ | 25 ಲಕ್ಷ ರೂ. ಪರಿಹಾರ ಘೋಷಣೆ Read More »

ಹಿಂದೂತ್ವವೇ ನನ್ನ ಸರ್ವಸ್ವ ಎಂದವನ ಉಸಿರು ನಿಲ್ಲಿಸಿದರು | ಸಹಾಸ್‍ ಶೆಟ್ಟಿ ತಾಯಿ ಸುಲೋಚನಾ

ನನ್ನ ಮಗ ಹಿಂದುತ್ವವನ್ನೇ ಉಸಿರಾಗಿಸಿಕೊಂಡು ಹಿಂದೂಗಳನ್ನು ಒಗ್ಗೂಡಿಸಿದ್ದ.  ಸದಾ ಹಿಂದುತ್ವವೇ ನನ್ನ ಉಸಿರು ಎನ್ನುತ್ತಿದ್ದವನ ಉಸಿರನ್ನೇ ಕಸಿದರು ಎಂದು ಹತ್ಯೆಯಾದ ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಹೇಳಿದ್ದಾರೆ. ನಿನ್ನೆ ನಾವೆಲ್ಲರೂ ಒಂದು ಮದುವೆ ಕಾರ್ಯಕ್ರಮದಲ್ಲಿ ಇದ್ದವು. ಇಲ್ಲದಿದ್ದರೆ ಪ್ರತಿದಿನದಂತೆ ನಿನ್ನೆಯೂ ಆತನಿಗೆ ಕರೆ ಮಾಡಬೇಕಿತ್ತು. ನಿನ್ನೆ ಮದುವೆ ಕೆಲಸದಲ್ಲಿ ಅವನಿಗೆ ಕರೆ ಮಾಡಲಾಗಲಿಲ್ಲ ಎಂದು ಅವರು ಹೇಳುತ್ತಾರೆ. ಆರೋಪಿಗಳು ಯಾರೇ ಆಗಿರಲಿ ಅವರಿಗೆ ತಕ್ಕ ಶಿಕ್ಷೆಯಾಗಿಬೇಕು, ಇನ್ನೊಮ್ಮೆ ಇಂಥಾ ಘಟನೆಗಳು ನಡೆಯಬಾರದು ಎಂದು ಸುಹಾಸ್ ಶೆಟ್ಟಿ ತಾಯಿ

ಹಿಂದೂತ್ವವೇ ನನ್ನ ಸರ್ವಸ್ವ ಎಂದವನ ಉಸಿರು ನಿಲ್ಲಿಸಿದರು | ಸಹಾಸ್‍ ಶೆಟ್ಟಿ ತಾಯಿ ಸುಲೋಚನಾ Read More »

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ

ಕೂದಲೆಳೆ ಅಂತರದಿಂದ ಪಾರಾದ ಇಬ್ಬರು ಯುವಕರು ಉಡುಪಿ: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆದ ಬೆನ್ನಲ್ಲೇ ಉಡುಪಿ ಸಮೀಪ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಹಿರಿಯಡಕ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಮಾಡಲು ಯತ್ನಿಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಮದು ಪೊಲೀಸರು ತಿಳಿಸಿದ್ದಾರೆ. ಸುಶಾಂತ್ ಮತ್ತು ಸಂದೇಶ್ ಪೂಜಾರಿ ಬಂಧಿತ ಆರೋಪಿಗಳು. ನಿನ್ನೆ

ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಇಬ್ಬರ ಕೊಲೆಗೆ ಯತ್ನ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ

ನಮ್ಮ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಸಾರ್ವಜನಿಕ ಹತ್ಯೆಯು ಮತ್ತೊಮ್ಮೆ ಕರಾವಳಿಗರ ಹೃದಯದಲ್ಲಿ ಮನಸ್ಸಿನಲ್ಲಿ ಅಳಿಸಲಾಗದ ಆಘಾತ ಸೃಷ್ಟಿಸಿದೆ. ಇಂತಹ ನೋವು ಮೊದಲನೆಯದಲ್ಲ, ಹೊಸತೂ ಅಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ನಮ್ಮ ಭಾಗದ ಹಿಂದೂ ಕಾರ್ಯಕರ್ತರ ಗುರಿಯಾಗಿ ಹತ್ಯೆಗಳ ಪ್ರವೃತ್ತಿ ಹೆಚ್ಚಾಗುತ್ತವೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಗುರಿ ಇಟ್ಟು ನಡೆಸಿದ ಹತ್ಯೆಯ ರೀತಿಯಲ್ಲಿಯೇ ಈ ಘಟನೆಯು ನಡೆದಿದೆ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್‌ಐ ನಂತಹ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ Read More »

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ

ಕೆಲವು ಬಸ್‌ಗಳಿಗೆ ಕಲ್ಲುತೂರಾಟ; ಅಂಗಡಿ ಹೋಟೆಲ್‌ಗಳು ಬಂದ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದನ್ನು ಅನುಸರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಆದೇಶ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿದ್ದು, ಮೇ 6 ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಈ ನಿಷೇಧಾಜ್ಞೆಯನ್ನು ತಕ್ಷಣದಿಂದಲೇ ಜಾರಿಗೆ

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ Read More »

error: Content is protected !!
Scroll to Top