ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ
ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರದಲ್ಲಿ ಅನ್ಯಧರ್ಮದ ಜನಪ್ರತಿನಿಧಿಗಳ ಹೆಸರು ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರದಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಇಂದಿನಿಂದ ಡಿ.26ರವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22ರಂದು ಆಡಳಿತ ಕಚೇರಿ […]
ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ Read More »










