ದಕ್ಷಿಣ ಕನ್ನಡ

ದೈಗೋಳಿಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಸಮಾಜದಲ್ಲಿ ನಿರ್ವಸಿತರಾದವರ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಳೆದುಕೊಂಡವರಲ್ಲಿ ಚೈತನ್ಯವನ್ನು ತುಂಬಿ ಅವರು ಹೊಸ ಜೀವನವನ್ನು ಆರಂಭಿಸಲು ಪ್ರಾಮಾಣಿಕ ಪ್ರಯತ್ನವನ್ನು ಸೇವಾಶ್ರಮದಲ್ಲಿ ಮಾಡಲಾಗುತ್ತಿದೆ. ಸೇವಾ ಮನೋಭಾವದ ದಾನಿಗಳ ಸಹಕಾರದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ದೈಗೋಳಿ ಸಾಯಿನಿಕೇತನ ಸೇವಾ ಆಶ್ರಮದ  ಟ್ರಸ್ಟಿ ಡಾ. ಉದಯ ಕುಮಾರ್ ಹೇಳಿದರು. ಅವರು ಬಂಟ್ವಾಳ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರ ಸಮಿತಿಯ ಸಭೆಯನ್ನು ಉದ್ಘಾಟಿಸಿ  ಸೇವಾ ಚಟುವಟಿಕೆಗಳ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ […]

ದೈಗೋಳಿಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18 ಆಗಿದ್ದು ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಗಳ ವಿವರ: ಸಾಮಾನ್ಯ ವರ್ಗ: 62, ಪರಿಶಿಷ್ಟ ಜಾತಿ: 18, ಪರಿಶಿಷ್ಟ ಪಂಗಡ: 4, ಪ್ರವರ್ಗ 1: 5, ಪ್ರವರ್ಗ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಭಾರೀ ಮಳೆ : ಇಂದು ದ.ಕ.ಜಿಲ್ಲಾದ್ಯಂತ ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ಇಂದು ದ.ಕ.ಜಿಲ್ಲಾದ್ಯಂತ ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

ಮಂಗಳೂರಿನ ಫಿಶ್‍ ಮಿಲ್‍ ನಲ್ಲಿ ಬೆಂಕಿ ಅವಘಡ | ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಮಂಗಳೂರು: ಅಥೆಂಟಿಕ್ ಓಪನ್ ಟ್ರೆಷರ್ ಮೀನು ಸಂಸ್ಕರಣಾ ಘಟಕವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ. ಸುರತ್ಕಲ್ ನ ಎಸ್‍ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫಿಶ ಮಿಲ್‍ ನಲ್ಲಿ ವಿದ್ಯುತ್ ಶಾರ್ಟ್‍ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮಂಗಳೂರಿನ ಫಿಶ್‍ ಮಿಲ್‍ ನಲ್ಲಿ ಬೆಂಕಿ ಅವಘಡ | ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ Read More »

ಡೆಂಗ್ಯೂ ಜ್ವರಕ್ಕೆ ವ್ಯಕ್ತಿ ಬಲಿ !

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ (52) ಎಂಬವರು ಡೆಂಗ್ಯೂ ಜ್ವರಕ್ಕೆ ಬಲಿಯಾದವರು. ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಅವರು ಚಿಕಿತ್ಸೆಗೆ ಸ್ಪಂದಿಸದಿರುವ ಹಿನ್ನಲೆಯಲ್ಲಿ ಅವರನ್ನು

ಡೆಂಗ್ಯೂ ಜ್ವರಕ್ಕೆ ವ್ಯಕ್ತಿ ಬಲಿ ! Read More »

ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ಬಜಪೆ: ಬುರ್ಖಾ ಧರಿಸಿ ಬಂದು ಆ್ಯಸಿಡ್ ಎರಚಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತ ಆರೋಪಿಗಳು. ಬಂಧಿತರಿಂದ 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ. ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಬಜಪೆ

ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ Read More »

ಡ್ರಗ್ಸ್ ನಶೆಯಲ್ಲಿ ತನ್ನ ಮನೆಯವರಿಗೇ ಚಿತ್ರಹಿಂಸೆ| ಆಸೀಫ್ ಆಪತ್ಭಾಂಧವನ ಕರಾಳ ಮುಖ ಬಯಲು

ಮಂಗಳೂರು: ಆಸೀಫ್‌ ಆಪತ್ಭಾಂಧವನ ಕರಾಳ ಮುಖ ಬಯಲಾಗಿದೆ. ನಶೆಯಲ್ಲಿ ಹೆಂಡತಿಗೆ ಚಿತ್ರಹಿಂಸೆ, ಮನೆಯಲ್ಲಿ ರಂಪಾಟ ಮಾಡುವುದು ಜೊತೆಗೆ ತನ್ನ ಸ್ವಂತ ಮಗಳದ್ದೇ ಖಾಸಗಿ ವಿಡಿಯೋ ವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಿಕೃತಿ ಮೇರೆದಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿವಿಧ ವಾಟ್ಸಾಪ್‌ ಗುಂಪುಗಳಲ್ಲಿ ತನ್ನ ಮಗಳ ಖಾಸಗಿ ವೀಡಿಯೋಗಳನ್ನು ಹರಿಬಿಟ್ಟ ಆರೋಪದಲ್ಲಿ ತಂದೆ ಆಸೀಫ್‌ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ನಡುವೆ ಆರೋಪಿಯ ಪುತ್ರಿಯು ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ

ಡ್ರಗ್ಸ್ ನಶೆಯಲ್ಲಿ ತನ್ನ ಮನೆಯವರಿಗೇ ಚಿತ್ರಹಿಂಸೆ| ಆಸೀಫ್ ಆಪತ್ಭಾಂಧವನ ಕರಾಳ ಮುಖ ಬಯಲು Read More »

ತುಂಬಿ ಹರಿಯುತ್ತಿರುವ ಬಂಟ್ವಾಳ ನೇತ್ರಾವತಿ ನದಿ | ನೀರಿನ ಮಟ್ಟ ಹೆಚ್ಚಳ

ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಬೆಳಗಿನ ಜಾವ ಹೆಚ್ಚಳವಾಗಿದೆ. ಈ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಸುಮಾರು 8 ಮೀಟರ್ ಎತ್ತರಕ್ಕೆ ಬರುವ ಹೊತ್ತಿಗೆ ನೀರು ಸಮೀಪದ ತಗ್ಗು ಪ್ರದೇಶಗಳಿಗೆ ಹರಿಯಲಾರಂಭಿಸುತ್ತದೆ. ಈಗಾಗಲೇ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದ್ದು, ನದಿ ಸಮೀಪದ ಭಾಗಗಳಲ್ಲಿ ವಾಸಿಸುವವರು ಹಾಗೂ ಪ್ರತಿ ಬಾರಿಯೂ ನೀರಿನ ಮಟ್ಟ ಏರುವ ಸಂದರ್ಭ ತೊಂದರೆಗೊಳಗಾಗುವವರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಆಡಳಿತ ತಿಳಿಸಿದೆ.

ತುಂಬಿ ಹರಿಯುತ್ತಿರುವ ಬಂಟ್ವಾಳ ನೇತ್ರಾವತಿ ನದಿ | ನೀರಿನ ಮಟ್ಟ ಹೆಚ್ಚಳ Read More »

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು

ನೆಲ್ಯಾಡಿ : ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿಯ ಕೊಣಾಲು ಸಮೀಪ ಇಂದು ನಡೆದಿದೆ. ಮಂಗಳೂರು ಕೋಡಿಕ್ಕಲ್ ನಿವಾಸಿ, ಬೈಕ್ ಸವಾರ ಪ್ರಣಮ್ ಕೋಟ್ಯಾನ್ ಮೃತಪಟ್ಟ ಬೈಕ್ ಸವಾರ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರಣಮ್‍ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಣಮ್ ಮೆಡಿಕಲ್ ರೆಪ್ರೆಸೆಂಟಿವ್ ಆಗಿ ಕೆಲಸ ಮಾಡುತ್ತಿದ್ದು, ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೋಗುತ್ತಿದ್ದ ವೇಳೆ ನೆಲ್ಯಾಡಿಯಿಂದ

ನೆಲ್ಯಾಡಿಯಲ್ಲಿ ಬೈಕ್-ಪಿಕಪ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »

ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ನೂತನ ಕಚೇರಿ ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರವರ ನೂತನ ಕಚೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಉದ್ಘಾಟನೆಗೊಂಡಿತು. ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಶುಭಾರಂಭದಲ್ಲಿ ಭಾಗವಹಿಸಿ ಸಂಸದರಿಗೆ ಶುಭಹಾರೈಸಿದರು. ಈ ಸಂದರ್ಭ ಪ್ರಸನ್ನ ಮಾರ್ತ, ಉಮೇಶ್ ಕೊಡಿಬೈಲು, ಅನಿಲ್ ತೆಂಕಿಲ, ಪ್ರವೀಣ್ ಶೆಟ್ಟಿ ತಿಂಗಳಾಡಿ ಮೊದಲಾದವರು ಉಪಸ್ಥಿತರಿದ್ದರು.

ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ನೂತನ ಕಚೇರಿ ಶುಭಾರಂಭ Read More »

error: Content is protected !!
Scroll to Top