ದಕ್ಷಿಣ ಕನ್ನಡ

ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಶ್ವಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪ್ರಕರಣ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಲ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಕೇಸು ಇವನ ಮೇಲೆ ಇದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ […]

ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ Read More »

ಅನಾರೋಗ್ಯಕ್ಕೀಡಾಗಿ ಬಾಲಕಿ ಮೃತ್ಯು

ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಬಾಲಕಿ ಸಾವನ್ನಪ್ಪಿದ ಘಟನೆ ಶಿಶಿಲ ಗ್ರಾಮದ ಪೆರಿಕೆ ಎಂಬಲ್ಲಿ ನಡೆದಿದೆ. ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ ಬಾಲಕಿ. ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.  ಜು. 9 ರಂದು ಆಕೆಯ ಆರೋಗ್ಯ ತೀವ್ರ ಹದಗೆಟ್ಟಿದ್ದು, ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದಿದ್ದರು, ಆದರೆ ಮನೆಗೆ ಹಿಂದಿರುಗುವ ಮಾರ್ಗ ಮಧ್ಯೆ ಆಕೆ ಪ್ರಜ್ಞಾಹೀನಳಾಗಿದ್ದಳು. ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು

ಅನಾರೋಗ್ಯಕ್ಕೀಡಾಗಿ ಬಾಲಕಿ ಮೃತ್ಯು Read More »

ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಬೀಮುಡ ಗ್ರಾಮ ಟೈಲರ್ ಒಬ್ಬನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಧರ್ಮರಾಜ್ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಜೆ ಹೊತ್ತು ಬಾಲಕಿ ಅಂಗಡಿಗೆ ಬಂದ ಸಂದರ್ಭ ಕೈ ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ

ಕಡಬ: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರು ನೆಕ್ಕಿತ್ತಡ್ಕ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ | ಪೊಲೀಸರಿಂದ ಆರೋಪಿಗಳ ಕಾಲಿಗೆ ಗುಂಡು

ಮಂಗಳೂರು : ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಾಜು ಸಿಂಗ್ಲಾನಿಯಾ (24), ಭೂಪಾಲ್ ನ ಮಯೂರ್ (30), ಬಾಲಿ (22), ಗುಣಾ ಜಿಲ್ಲೆಯ ವಿಕ್ಕಿ (21) ನಾಲ್ವರು ಬಂಧಿತ ಆರೋಪಿಗಳು. ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಿನ್ನೆ ಚಡ್ಡಿ ಗ್ಯಾಂಗ್ ನ ನಾಲ್ವರನ್ನು ಸಕಲೇಶಪುರದಲ್ಲಿ ಬಂಧಿಸಿ ಮಂಗಳೂರಿಗೆ ಕರೆ ತಂದಿದ್ದರು. ದರೋಡೆ ನಡೆಸಿದ

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ | ಪೊಲೀಸರಿಂದ ಆರೋಪಿಗಳ ಕಾಲಿಗೆ ಗುಂಡು Read More »

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಲಕ್ಷಾಂತರ ವಂಚನೆ

ಬೆಳ್ತಂಗಡಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ವ್ಯಕ್ತಿಯೊಬ್ಬರಿಂದ ವಂಚಕರು ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ವ್ಯಕ್ತಿಯೊಬ್ಬರು ಇನ್ ಸ್ಟಾಗ್ರಾಮ್ ನಲ್ಲಿ ಬಂದ ಲಿಂಕ್ ಮೂಲಕ ವಾಟ್ಸಪ್ ಗ್ರೂಪಿಗೆ ಸೇರಿದ ವ್ಯಕ್ತಿಗೆ ಅಲ್ಲಿ ಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಬಳಿಕ ಅವರು ಕಳುಹಿಸಿದ ಲಿಂಕ್ ಮುಖಾಂತರ ಎ.ಸಿ ಮಾಕ್ಸ್, JOHCM ಎಂಬ ಎರಡು ಆಪ್ ಗಳನ್ನು ಡೌನ್ ಲೋಡ್ ಮಾಡಿದ್ದಾರೆ ಬಳಿಕ ಈ ಆಪ್ ಗಳ ಮೂಲಕ ದೂರುದಾರರ ಖಾತೆಯಿಂದ ಅವರು ಹೇಳಿದ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಲಕ್ಷಾಂತರ ವಂಚನೆ Read More »

ದೇವಾಲಯದ ಒಳಗ್ಗೆ ನುಗ್ಗಿ ಯುವಕನಿಂದ ದಾಂಧಲೆ | ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಮಂಗಳೂರು: ದೇವಾಲಯದ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯೋರ್ವ ದಾಂಧಲೆ ಮಾಡಿದ ಘಟನೆ ಮಂಗಳೂರಿನ ಕದ್ರಿ ದೇವಾಲಯದಲ್ಲಿ ನಡೆದಿದೆ. ಬೈಕ್ ಚಲಾಯಿಸಿಕೊಂಡು ನೇರ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದ ಯುವಕ, ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಾನೆ. ಅಲ್ಲದೆ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನೆ ಎಂದು ಹೇಳಲಾಗಿದೆ. ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಈ ರೀತಿಯ ದಾಂಧಲೆ ನಡೆಸಿದಾತ. ಈ ವೇಳೆ ಪ್ರಶ್ನೆ

ದೇವಾಲಯದ ಒಳಗ್ಗೆ ನುಗ್ಗಿ ಯುವಕನಿಂದ ದಾಂಧಲೆ | ಥಳಿಸಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ 83 ಶಾಲೆಗಳಿಗೆ ಹಾನಿ l ಅನುದಾನ ಬಿಡುಗಡೆಗೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂಗಾರು ಮಳೆ ಶುರುವಾದ ಒಂದೇ ತಿಂಗಳಲ್ಲಿಯೇ 83 ಶಾಲೆಗಳಿಗೆ ಹಾನಿಯಾಗಿದ್ದು, ಸರಿಸುಮಾರು 3 ಕೋಟಿ ರೂ.ನಷ್ಟು ನಷ್ಟವಾಗಿದೆ. ಬಂಟ್ವಾಳ ಹಾಗೂ ಉಳ್ಳಾಲ ಭಾಗದಲ್ಲೇ ಅತೀ ಹೆಚ್ಚು ಶಾಲೆಗಳಿಗೆ ಹಾನಿಯಾಗಿದೆ. ಕೆಲವೊಂದು ಶಾಲೆಗಳಿಗೆ ತೀವ್ರ ಹಾನಿಯಾದರೆ ಇನ್ನು ಕೆಲವು ಕಡೆಯಲ್ಲಿ ಸಾಧಾರಣ ಹಾನಿಯಾಗಿದೆ. ಮುಂಗಾರು ಮಳೆಯ ಅಬ್ಬರ ಜೂನ್‌ನಲ್ಲಿ ಶುರುವಾಗಿ ಕೆಲವು ಭಾಗದ ಶಾಲೆಗಳು ಗಾಳಿ, ಮಳೆಯ ಅಬ್ಬರದಲ್ಲಿ ಹಾನಿಯಾಗಿದೆ. ಜೂನ್‌ನ ಕೇವಲ 15 ದಿನಗಳಲ್ಲಿಯೇ ಮಳೆಯ ತೀವ್ರತೆಯಲ್ಲಿ ಶಾಲೆಗಳು ಕಂಗಾಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಹಾನಿಯಾಗಿರುವ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ 83 ಶಾಲೆಗಳಿಗೆ ಹಾನಿ l ಅನುದಾನ ಬಿಡುಗಡೆಗೆ ಜಿಲ್ಲಾಧಿಕಾರಿಗೆ ಮನವಿ Read More »

ಕೆರೆಗೆ ಬಿದ್ದು ಮಹಿಳೆ ಮೃತ್ಯು

ಪೆರಾಬೆ: ಹುಲ್ಲು ತರಲೆಂದು ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಕಡಬ ತಾಲೂಕು ಪೆರಾಬೆ ಗ್ರಾಮದ ಬಲಂಪೋಡಿ ನಿವಾಸಿ ಉಮೇಶ್ ರೈ ಅವರ ಪತ್ನಿ ಶಶಿಕಲಾ(58) ಮೃತಪಟ್ಟವರು. ಉಮೇಶ್ ರೈ- ಶಶಿಕಲಾ ದಂಪತಿಯ ಪುತ್ರಿಯನ್ನು ವಿವಾಹ ಮಾಡಿಕೊಡಲಾಗಿದ್ದು ಪುತ್ರ ಕೃತನ್ ರೈ ತೆಲಂಗಾಣದಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಉಮೇಶ್ ರೈ ಹಾಗೂ ಶಶಿಕಲಾ ದಂಪತಿ ಮಾತ್ರ ಮನೆಯಲ್ಲಿದ್ದು ಜು.8ರಂದು ಬೆಳಿಗ್ಗೆ 6 ಗಂಟೆಗೆ ಎದ್ದು ಎಂದಿನಂತೆ

ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ  ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

error: Content is protected !!
Scroll to Top