ದಕ್ಷಿಣ ಕನ್ನಡ

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ

ಕಾರ್ಕಳ : ಸ್ವಚ್ಛ ಸುಂದರ ಪ್ರಕೃತಿಯಿಂದಲೇ ಪ್ರಸಿದ್ಧಿ ಪಡೆಯುತ್ತಿರುವ ಕಾರ್ಕಳದ ಕೆಲವು ಪ್ರದೇಶದಲ್ಲಿ ವಿವಿಧ ಸಂಘ ಸಂಸ್ಥೆಗಳು ಪರಿಸರ ದಿನಾಚರಣೆ ಮತ್ತಿತರ ಸಂದರ್ಭಗಳಲ್ಲಿ ನೆಟ್ಟ ಗಿಡಗಳು ಕೇವಲ ಆ ಒಂದು ದಿನದ ಸಂಭ್ರಮಕ್ಕೆ ಮಾತ್ರ ಸೀಮಿತವಾಗುತ್ತಿರುವದು ವಿಷಾದದ ಸಂಗತಿ. ಜನತೆಗೆ ಪರಿಸರದ ಮಹತ್ವ ಸಾರುವ ಹಾಗೂ ಜಾಗೃತಿಗೊಳಿಸುವ ಉದ್ದೇಶದಿಂದ ವಿಶ್ವಸಂಸ್ಥೆ ಜೂನ್‌ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಾರಂಭ ಮಾಡಿದೆ. ಆದರೆ ಇದೀಗ ಗಿಡ ನೆಡುವುದು, ಅದರ ಪೋಷಣೆ ಕೇವಲ ಪರಿಸರ ದಿನಾಚರಣೆಗೆ ಮಾತ್ರ ಸೀಮಿತವಾಗುತ್ತಿದೆ. […]

ಪರಿಸರ ದಿನಾಚರಣೆಗಷ್ಟೇ ಸೀಮಿತವೇ ಗಿಡ ನೆಡುವ ಕಾರ್ಯಕ್ರಮ Read More »

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ

ಪುತ್ತೂರು : ಕರ್ನಾಟಕ ರಾಜ್ಯ ಎಸ್ ಡಿಎಂಸಿ ಜಿಲ್ಲಾ ಸಮನ್ವಯ ವೇದಿಕೆ ವತಿಯಿಂದ ದ,ಕ.ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಎಸ್‍ಡಿಎಂಸಿಯ 21ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ ಫೆ.28 ಮಂಗಳವಾರ ಮಾಣಿ ನೆರಳಕಟ್ಟೆ ಜಯಪ್ರಿಯ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ರಾಜ್ಯ ಎಸ್‍ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷ  ಮೊಯಿದೀನ್‍ ಕುಟ್ಟಿ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ

ಫೆ.28 : ಜಿಲ್ಲಾ ಮಟ್ಟದ ಕ್ರಿಯಾಶೀಲ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿಗಳಿಗೆ ಅಭಿನಂದನಾ ಸಮಾರಂಭ | ದ.ಕ.ಜಿಲ್ಲಾ ಮಟ್ಟದ ದ್ವಿತೀಯ ಸಮಾವೇಶ Read More »

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ

ಮಂಗಳೂರು : ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿ ಯಿಂದ 2ಎಗೆ ವರ್ಗಾಯಿಸಬೇಕು ಎಂಬ ಬೇಡಿಕೆಯ ಮನವಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಉತ್ತರ ನೀಡಲಿದ್ದೇವೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‍ ಶೆಟ್ಟಿ ಹೇಳಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಶುಕ್ರವಾರ ಮಂಗಳೂರಿನ ಬಂಟ್ಸ್ ಹಾಸ್ಟೇಲ್‍ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಲ್ಲಾ ಸಮಾಜಕ್ಕೂ ನಿಗಮ, ಸರಕಾರದಿಂದ ಸೌಲಭ್ಯ ದೊರೆಯುತ್ತಿದೆ.

ಬಂಟ ಸಮಾಜಕ್ಕೆ ನಿಗಮ, ಮೀಸಲಾತಿಯನ್ನು 3 ಬಿಯಿಂದ 2 ಎಗೆ ವರ್ಗಾಯಿಸಬೇಕು | ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಮುಖ್ಯಮಂತ್ರಿಗಳಿಗೆ ಬಂಟರ ಸಂಘಗಳ ಒಕ್ಕೂಟದಿಂದ ಬೇಡಿಕೆ ಸಲ್ಲಿಕೆ Read More »

ಫೆ.24-25 : ಉಪ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್ | ದ.ಕ.ಜಿಲ್ಲಾಧಿಕಾರಿ ಆದೇಶ

ಪುತ್ತೂರು : ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನಲೆಯಲ್ಲಿ ಫೆ.24 ಹಾಗೂ 25 ರಂದು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಬಂದ್‍ ಮಾಡುವಂತೆ ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್‍ ಆದೇಶಿಸಿದ್ದಾರೆ. ಮತದಾನ ದಿನದಂದು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಫೆ.24 ರ ಬೆಳಿಗ್ಗೆ 6 ಗಂಟೆಯಿಂದ ಫೆ.25 ರ ಸಂಜೆ 6 ರ ತನಕ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ. ಬಂಟ್ವಾಳ ತಾಲೂಕಿನ ಪುದು

ಫೆ.24-25 : ಉಪ ಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯ ಮದ್ಯದಂಗಡಿಗಳು ಬಂದ್ | ದ.ಕ.ಜಿಲ್ಲಾಧಿಕಾರಿ ಆದೇಶ Read More »

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಗ್ರಾಮ ವಿಕಾಸ ಸಮಿತಿ ಭೇಟಿ | ಶೌಚಾಲಯ ನಿರ್ಮಿಸುವಂತೆ ಮನವೊಲಿಕೆ | ಕಾಮಗಾರಿ ಆರಂಭ

ಬೆಳ್ತಂಗಡಿ : ಪಟ್ರಮೆ ಗ್ರಾಮವನ್ನು ಗ್ರಾಮ ವಿಕಾಸದ ಅಡಿಯಲ್ಲಿ ಬಯಲು ಶೌಚಮುಕ್ತ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಶೌಚಾಲಯ ನಿರ್ಮಿಸದ ಕಲ್ಲಾಪು ಮನೆ ಅಂಬೋಡಿ ಎಂಬವರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಶೌಚಾಲು ನಿರ್ಮಿಸುವಂತೆ ಮನವೊಲಿಸಿತು. ಇವರಿಗೆ ಗ್ರಾಮದ ಹಲವರು ಅನೇಕ ಸಲ ಶೌಚಾಲಯ ನಿರ್ಮಿಸುವಂತೆ ಮನವೊಲಿಸಿದರೂ ಶೌಚಾಲಯ ನಿರ್ಮಾಣದ ಕಾರ್ಯ ನಡೆದಿರಲಿಲ್ಲ. ಈ ನಿಟ್ಟಿನಲ್ಲಿ ಭೇಟಿ ಮಾಡಿದ ವಿದ್ಯಾಸಂಸ್ಥೆ ಮನವೊಲಿಸಿದ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಯಿತು. ಈ ಬಗ್ಗೆ ಶಾಲಾ ಸಂಚಾಲಕ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಗ್ರಾಮ ವಿಕಾಸ ಸಮಿತಿ ಭೇಟಿ | ಶೌಚಾಲಯ ನಿರ್ಮಿಸುವಂತೆ ಮನವೊಲಿಕೆ | ಕಾಮಗಾರಿ ಆರಂಭ Read More »

ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು

ಸುಳ್ಯ : ಪುತ್ತೂರಿನ ಕೌಡಿಚ್ಚಾರು ನಿವಾಸಿಗಳಾದ ಇಬ್ಬರು ಯುವಕರು ಸುಳ್ಯದ ಪಯಸ್ವಿನಿ ನದಿ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಮೇಲೆತ್ತಿದ್ದು, ಜಿತೇಶ್ ಹಾಗೂ ಪ್ರವೀಣ್ ಮೃತಪಟ್ಟವರೆಂದು ಗುರುತಿಲಾಗಿದೆ.  ಪುತ್ತೂರಿನ ಕೌಡಿಚ್ಚಾರು ಪರಿಸರದ ಆರು ಯುವಕರು ಕಾರಿನಲ್ಲಿ ಸುಳ್ಯಕ್ಕೆ ಬಂದು ಓಡಬಾಯಿ ತೂಗು ಸೇತುವೆ ಬಳಿ ಕಾರು ನಿಲ್ಲಿಸಿ ದೊಡೇರಿಯವರೆಗೆ ಹೋಗಿ, ಬಳಿಕ ಪಯಸ್ವಿನಿ ನದಿಗೆ ಈಜಲೆಂದು ತೆರಳಿದ್ದರು. ಅವರಲ್ಲೋರ್ವ ನೀರು ಪಾಲಾದಾಗ, ಜೊತೆಗಿದ್ದ ಇನ್ನೊಬ್ಬಾತ ರಕ್ಷಿಸಲೆಂದು ನೀರಿಗೆ ಧುಮುಕ್ಕಿದ್ದಾನೆ. ನೀರಿನ ಸೆಳೆತಕ್ಕೆ ಗೆಳೆಯನನ್ನು ರಕ್ಷಿಸಲಾಗದೇ,

ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು Read More »

ಇಂದು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಪುತ್ತೂರಿಗೆ | ಕಾರ್ಯಕ್ರಮ ಹೀಗಿದೆ

ಪುತ್ತೂರು : ಅಮಿತ್‍ ಶಾ ಪುತ್ತೂರಿಗೆ ಭೇಟಿ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಮೂರು ಹೆಲಿಪ್ಯಾಡ್‍ಗಳನ್ನು ನಿರ್ಮಿಸಲಾಗಿದೆ. ಕೇರಳದ ಗಡಿ ಭಾಗದಲ್ಲಿರುವ ಹನುಮಗಿರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಅಮರಗಿರಿಯಲ್ಲಿ ಭಾರತ್‍ಮಾತಾ ಮಂದಿರವನ್ನು ಉದ್ಘಾಟಿಸುವರು. ಹೈದರಾಬಾದ್‍ನಿಂದ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದು, ಅಲ್ಲಿಂದ ಬಿಎಎಸ್‍ಎಫ್‍ ಹೆಲಿಕ್ಯಾಪ್ಟರ್‍ನಲ್ಲಿ ಬರಲಿರುವ ಅಮಿತ್‍ ಶಾ ಅವರ ಹೆಲಿಕಾಪ್ಟರ್ ಲ್ಯಾಂಡ್‍ ಆಗಲು ಈಶ್ವರಮಂಗಲದ ಗಜಾನನ ಶಾಲಾ ಮೈದಾನದಲ್ಲಿ ಹೆಲಿಪ್ಯಾಡ್‍ ನಿರ್ಮಿಸಲಾಗಿದೆ. ಹನುಮಗಿರಿ ಕಾರ್ಯಕ್ರಮ ಮುಗಿಸಿ ಹೆಲಿಕ್ಯಾಪ್ಟರ್‍ನಲ್ಲಿ ಬರಲಿರುವ ಶಾ ಅವರು

ಇಂದು ಕೇಂದ್ರ ಗೃಹ ಸಚಿವ ಅಮಿತ್‍ ಶಾ ಪುತ್ತೂರಿಗೆ | ಕಾರ್ಯಕ್ರಮ ಹೀಗಿದೆ Read More »

ಅಕ್ರಮ-ಸಕ್ರಮ ಸಿಟ್ಟಿಂಗ್ ಮೂಲಕ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ : ಶಾಸಕ ಸಂಜೀವ ಮಠಂದೂರು

ವಿಟ್ಲ : ಅಕ್ರಮ ಸಕ್ರಮ ಮಂಜುರಾತಿ ಸಭೆ  ಹಾಗೂ ಅಕ್ರಮ ಸಕ್ರಮ 94ಸಿ ಮತ್ತು  94ಸಿಸಿ ಹಕ್ಕುಪತ್ರ  ವಿತರಣಾ ಕಾರ್ಯಕ್ರಮ ಮಂಗಳವಾರ ವಿಟ್ಲದಲ್ಲಿ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಹಕ್ಕುಪತ್ರ ವಿತರಣೆ ಮಾಡಿ, 12 ಗ್ರಾಮದ ಬಂಧುಗಳು ಇಂದು ನೀಡುವ ಹಕ್ಕುಪತ್ರದ ಮೂಲಕ ತಮ್ಮ ಭೂಮಿಯಲ್ಲಿ ಕೃಷಿ ಮಾಡಿ ತಾವೇ ಒಡೆಯನಾಗಿ ಇರಬೇಕು. ಈ ನಿಟ್ಟಿನಲ್ಲಿ  ಅಕ್ರಮ-ಸಕ್ರಮ ಸಿಟ್ಟಿಂಗ್ ಮಾಡಿ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೆನೆ ಎಂದರು. ಕಾರ್ಯಕ್ರಮದಲ್ಲಿ,ಅಕ್ರಮ ಸಕ್ರಮ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ,,

ಅಕ್ರಮ-ಸಕ್ರಮ ಸಿಟ್ಟಿಂಗ್ ಮೂಲಕ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ : ಶಾಸಕ ಸಂಜೀವ ಮಠಂದೂರು Read More »

ಮಾಣಿಲ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ

ಮಾಣಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಾಣಿಲ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ಉನ್ನತೀಕರಣಕ್ಕಾಗಿ ವಿಶೇಷ ತರಬೇತಿ ಕಾರ್ಯಕ್ರಮ ಸೋಮವಾರ ಶಾಲೆಯಲ್ಲಿ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ, ಆರೋಗ್ಯ ಇಲಾಖೆ ವತಿಯಿಂದ ಕುಷ್ಠ ರೋಗ ಹಾಗೂ ಗಳಗಂಡ ರೋಗ (ಗಾಯ್ಟರ್) ನಿರ್ಮೂಲನೆ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್ ಕೆ. ಜಿ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ

ಮಾಣಿಲ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ Read More »

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಮುಂದಿನ 50 ವರ್ಷಕ್ಕೆ ಪೂರಕ ವ್ಯವಸ್ಥೆ : ಶಾಸಕ ಸಂಜೀವ ಮಠಂದೂರು

ಪುತ್ತೂರು : ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ  ಮುಂದಿನ 50 ವರ್ಷಕ್ಕೆ ಪೂರಕವಾದ ವ್ಯವಸ್ಥೆ ಆಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಸೋಮವಾರ 10 ಕೋಟಿ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕಾಮಗಾರಿಗೆ 34ನೇ ನೆಕ್ಕಿಲಾಡಿಯ ಶಕ್ತಿನಗರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ರಸ್ತೆಗಳ ಅಭಿವೃದ್ಧಿ ಆಗುತ್ತಿದ್ದಂತೆ ರಸ್ತೆಗಳನ್ನು ಮೇಲದರ್ಜೆಗೆ ಏರಿಸುವ ಕೆಲಸವೂ ಆಗುತ್ತಿದೆ. ಉಪ್ಪಿನಂಗಡಿ ಪ್ರವಾಸೋದ್ಯಮ ಕೇಂದ್ರ ಮಾಡುವ ಯೋಜನೆಗೆ ಪೂರಕವಾಗಿ ಸಂಗಮ ಕ್ಷೆತ್ರದಲ್ಲಿ ಬೋಟಿಗ್ ವ್ಯವಸ್ಥೆ ಮಾಡುವ

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಮುಂದಿನ 50 ವರ್ಷಕ್ಕೆ ಪೂರಕ ವ್ಯವಸ್ಥೆ : ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top