ದಕ್ಷಿಣ ಕನ್ನಡ

ಭಾರೀ ಮಳೆಯ ಹಿನ್ನಲೆ ದ.ಕ ಜಿಲ್ಲಾದ್ಯಂತ ಆ. 2 ರಂದು ಶಾಲಾ- ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಆ.2 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಸಮುದ್ರ ತೀರ ಪ್ರದೇಶಗಳಿಗೆ, ತುಂಬಿ ಹರಿಯುತ್ತಿರುವ ನದಿ ಸಮೀಪ ಸಾರ್ವಜನಿಕರು ತೆರಳದಂತೆ, ಮೀನುಗಾರಿಕೆಗೆ ತೆರಳದಂತೆ ಆದೇಶ ನೀಡಲಾಗಿದೆ.

ಭಾರೀ ಮಳೆಯ ಹಿನ್ನಲೆ ದ.ಕ ಜಿಲ್ಲಾದ್ಯಂತ ಆ. 2 ರಂದು ಶಾಲಾ- ಕಾಲೇಜುಗಳಿಗೆ ರಜೆ Read More »

ಪಬ್‌ಜಿ ಗೇಮ್‌ನ ಯುವತಿ ನಾಪತ್ತೆ

ಮಂಗಳೂರು : ಮೊಬೈಲ್‌ನಲ್ಲಿ ಪಬ್‌ಜಿ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ ಯುವತಿ. ಇವರು ಎಸ್ ಎಸ್ ಎಲ್ ಸಿ ಬಳಿಕ ಆಟೊಮೊಬೈಲ್‌ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದರು‌.‌ ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಸಿಸಿ ಕ್ಯಾಮಾರದಲ್ಲಿ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು. ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್‌, ಕೊಂಕಣಿ

ಪಬ್‌ಜಿ ಗೇಮ್‌ನ ಯುವತಿ ನಾಪತ್ತೆ Read More »

ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಆ.1 ರಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ,ಕ.ಜಿಲ್ಲಾದ್ಯಂತ ಆ.1 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ., ಕಾಸರಗೋಡು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಸಮುದ್ರ ತೀರ ಪ್ರದೇಶಗಳಿಗೆ, ತುಂಬಿ ಹರಿಯುತ್ತಿರುವ ನದಿ ಸಮೀಪ ಸಾರ್ವಜನಿಕರು ತೆರಳದಂತೆ, ಮೀನುಗಾರಿಕೆಗೆ ತೆರಳದಂತೆ ಆದೇಶ ನೀಡಲಾಗಿದೆ.

ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಆ.1 ರಂದು ಶಾಲಾ-ಕಾಲೇಜುಗಳಿಗೆ ರಜೆ Read More »

ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ | ವಾಹನ ಸಂಚಾರ ಸಂಪೂರ್ಣ ಬಂದ್

ಪುತ್ತೂರು: ಶಿರಾಡಿ ಘಾಟಿನ ಮಾರೇನಹಳ್ಳಿಯಲ್ಲಿ ಮತ್ತೊಮ್ಮೆ ಭಾರೀ ಭೂಕುಸಿತ ಉಂಟಾಗಿದೆ. ಭೂಕುಸಿತದಿಂದಾಗಿ ಹಲವು ವಾಹನಗಳು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ವಿವರ ಇನ್ನಷ್ಟೇ ಲಭ್ಯವಾಗಿದೆ. ಭೂಕುಸಿತದ ಹಿನ್ನಲೆಯಲ್ಲಿ ಮಂಗಳೂರು – ಬೆಂಗಳೂರು ಸಂಚಾರ ಸಂಪೂರ್ಣ ಬಂದ್ ಆಗಿದೆ. ಆದ್ದರಿಂದ ತುರ್ತು ತೆರಳುವವರು ಸಂಪಾಜೆ – ಮಡಿಕೇರಿಯಾಗಿ ಅಥವಾ ಬೆಳ್ತಂಗಡಿ – ಚಾರ್ಮಾಡಿ ಘಾಟ್ ರಸ್ತೆಯ ಮೂಲಕ ತೆರಳಬಹುದು ಎಂದು ಮಾಹಿತಿ ಲಭ್ಯವಾಗಿದೆ.

ಶಿರಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ | ವಾಹನ ಸಂಚಾರ ಸಂಪೂರ್ಣ ಬಂದ್ Read More »

ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ |  ಸಾಂಪ್ರದಾಯಿಕ ಆಟಗಳಲ್ಲಿ ಸಂಭ್ರಮಿಸಿದ ಜನರು | ಕಾರ್ಯಕ್ರಮಕ್ಕೆ ಮೆರುಗು ತಂದ ಜಾನಪದ ಸೊಗಡು ವಿಷಯಾಧಾರೀತ  ನೃತ್ಯ ಗಾನ ಸಾಂಸ್ಕೃತಿಕ ವೈಭವ

ಕಾವು : ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘ ಇದರ ನೇತೃತ್ವದಲ್ಲಿ  ಒಕ್ಕಲಿಗ ಗೌಡ ಸೇವಾ ಸಂಘ,ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಈಶ್ವರಮಂಗಲ ವಲಯ ಇದರ ಸಹಕಾರದೊಂದಿಗೆ  ಕಂಡಡೊಂಜಿ ದಿನ ಕಾರ್ಯಕ್ರಮ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ಜು 28 ರಂದು ನಡೆಯಿತು.   ಕಾರ್ಯಕ್ರಮವನ್ನು ಈಶ್ವರಮಂಗಲ   ಮರಕ್ಕಡ ಗದ್ದೆಯ ಮಾಲಕ  ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು  ಒಕ್ಕಲಿಗ ಗೌಡ ಸೇವಾ ಸಂಘ ಅಧ್ಯಕ್ಷ ನಾಗಪ್ಪ

ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ |  ಸಾಂಪ್ರದಾಯಿಕ ಆಟಗಳಲ್ಲಿ ಸಂಭ್ರಮಿಸಿದ ಜನರು | ಕಾರ್ಯಕ್ರಮಕ್ಕೆ ಮೆರುಗು ತಂದ ಜಾನಪದ ಸೊಗಡು ವಿಷಯಾಧಾರೀತ  ನೃತ್ಯ ಗಾನ ಸಾಂಸ್ಕೃತಿಕ ವೈಭವ Read More »

ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ | ತಪ್ಪಿದ ಅನಾಹುತ

ಸುಳ್ಯ : ಸುಳ್ಯ ಸಮೀಪ ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಸುಳ್ಯ ಬಸ್ ನಿಲ್ದಾಣದಿಂದ ಸುಳ್ಯ-ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ. ಬಸ್ ನಲ್ಲಿದ್ದವರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯನಡೆಸಿದರು.

ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ | ತಪ್ಪಿದ ಅನಾಹುತ Read More »

ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ | ಬಸ್‍ ನ್ನು ತುರ್ತು ವಾಹನವಾಗಿ ಪರಿವರ್ತಿಸಿ ಆಸ್ಪತ್ರೆಗೆ ಕರೆದೊಯ್ದ ಚಾಲಕ

ಮಂಗಳೂರು : ಚಲಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.  ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದರು.   ಮಂಗಳೂರಿನ ಕೂಳೂರು ಮಾರ್ಗ 13ಎಫ್‌ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್‌ ಚಾಲಕ ಗಜೇಂದ್ರ ಕುಂದ‌ರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು. ಬಸ್‌ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು

ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ | ಬಸ್‍ ನ್ನು ತುರ್ತು ವಾಹನವಾಗಿ ಪರಿವರ್ತಿಸಿ ಆಸ್ಪತ್ರೆಗೆ ಕರೆದೊಯ್ದ ಚಾಲಕ Read More »

ದ.ಕ.ಜಿಲ್ಲೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಆರ್.ಅಶೋಕ್‍

ಮಂಗಳೂರು: ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ ಇಂದು ದ.ಕ.ಜಿಲ್ಲೆ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್‍, ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರು ಅವರನ್ನು ಸ್ವಾಗತಿಸಿದರು. ಬಳಿಕ ನೆರೆಪೀಡಿತ ಪ್ರದೇಶಗಳಿಗೆ ಅವರು ಭೇಟಿ ನೀಡಿ ವೀಕ್ಷಿಸಿದರು.

ದ.ಕ.ಜಿಲ್ಲೆ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಆರ್.ಅಶೋಕ್‍ Read More »

ಕಣಿಯ ದೊಡ್ಡಮನೆ ಬೆಳಿಯಪ್ಪ ಗೌಡ ನಿಧನ.

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಕಣಿಯ ದೊಡ್ಡಮನೆ ತರವಾಡು ಮನೆಯ ಯಜಮಾನ, ಕೆ ಎಸ್ ಆರ್ ಟಿ ಸಿಸಂಸ್ಥೆಯ ನಿವೃತ್ತ ಟಿಸಿ ಬೆಳಿಯಪ್ಪ ಗೌಡ (76) ಅವರು ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಉಪ್ಪಿನಂಗಡಿಯಲ್ಲಿ ನೆರೆ ವೀಕ್ಷಿಸಿ ಅಂಚೆಕಚೇರಿಗೆ ತೆರಳಿ ಅಲ್ಲಿಂದ ಹೊರಬರುತ್ತಿರುವಾಗ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕ್ಸಿತೆ ಫಲಕಾರಿಯಾಗದೆ ಮೃತಪಟ್ಟರು. ಪುತ್ತೂರು ಕೆ ಎಸ್ ಆರ್ ಟಿ ಸಿ ಯಲ್ಲಿ ನಿರ್ವಾಹಕನಾಗಿ ಸೇವೆಗೆ ಸೇರಿದ್ದ ಬೆಳಿಯಪ್ಪ ಗೌಡ ಅವರು

ಕಣಿಯ ದೊಡ್ಡಮನೆ ಬೆಳಿಯಪ್ಪ ಗೌಡ ನಿಧನ. Read More »

ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ಹಚ್ಚಿದ ಅರಣ್ಯ ಸಂಚಾರಿ ದಳ

ಮಂಗಳೂರು : ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್‌ ಕುಮಾ‌ರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್ ಡಿ’ಸೋಜ ಹಾಗೂ

ಅಕ್ರಮ ಮರದ ದಿಮ್ಮಿ ಸಾಗಾಟ ಪತ್ತೆ ಹಚ್ಚಿದ ಅರಣ್ಯ ಸಂಚಾರಿ ದಳ Read More »

error: Content is protected !!
Scroll to Top