ದಕ್ಷಿಣ ಕನ್ನಡ

ಬಂಟ್ವಾಳ ವಿಹಿಂಪ ಪ್ರಖಂಡದಿಂದ ಧಾರ್ಮಿಕ ಆಚರಣೆ ಕುರಿತು ಚಿಂತನಾ ಬೈಠಕ್

ಬಂಟ್ವಾಳ : ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ, ಚೌತಿ, ಶಾರದೋತ್ಸವದ ವಿವಿಧ ಸಮಿತಿಗಳ ಪ್ರಮುಖರ ಚಿಂತನಾ ಬೈಠಕ್ ಬಿ.ಸಿ.ರೋಡು ಸ್ಪರ್ಶಕಲಾ‌ಮಂದಿರದಲ್ಲಿ ನಡೆಯಿತು. ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಸತ್ಸಂಗ ಪ್ರಮುಖ ಕಶೆಕೋಡಿ ಸೂರ್ಯನಾರಾಯಣ ಭಟ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಧಾರ್ಮಿಕ ಆಚರಣೆಯಲ್ಲಿ ನಾವು ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಚಿಂತನೆ ಕುರಿತು ಚರ್ಚಿಸಿದರು.   ಈ ವಿಶೇಷ ಬೈಠಕ್ ನಲ್ಲಿ ತಾಲೂಕಿನ ವಿವಿಧ […]

ಬಂಟ್ವಾಳ ವಿಹಿಂಪ ಪ್ರಖಂಡದಿಂದ ಧಾರ್ಮಿಕ ಆಚರಣೆ ಕುರಿತು ಚಿಂತನಾ ಬೈಠಕ್ Read More »

ನಾಳೆ (ಜು.2) : ಬಿಜೆಪಿ ಸುಳ್ಯ ಮಂಡಲ, ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ

ಕಡಬ: ಹಾಲಿನ ದರ ಏರಿಕೆ ವಿರುದ್ಧ ಬಿಜೆಪಿ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ಜು.2 ರಂದು ನಡೆಯಲಿದೆ. ಕಡಬ ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10.30 ರಿಂದ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಜು.2) : ಬಿಜೆಪಿ ಸುಳ್ಯ ಮಂಡಲ, ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ Read More »

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿದ್ದಾರೆ. ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಮೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಇಂದು ಸೇವಾ ನಿವೃತ್ತಿಯಾದ ಕೆಎಸ್‍ ಆರ್ ಟಿಸಿ ಪುತ್ತೂರು ವಿಭಾಗದ ಚಾಲಕ ಪಲ್ಲೋಡಿ ನಾರಾಯಣ ಗೌಡ

ಪಂಜ : ಕೆ ಎಸ್ ಆರ್ ಟಿ ಸಿ ಪುತ್ತೂರು ವಿಭಾಗದ ಬಸ್ ಚಾಲಕ ಪಂಜದ ಪಲ್ಲೋಡಿ ನಾರಾಯಣ ಗೌಡ ರವರು ಜೂ.30 ಇಂದು ಸೇವೆಯಿಂದ ನಿವೃತ್ತಿಯಾದರು. ನಾರಾಯಣ ಗೌಡ ಅವರು ಶಿರಸಿ ವಿಭಾಗದಲ್ಲಿ 10 ವರ್ಷ, ಪುತ್ತೂರು ವಿಭಾಗದಲ್ಲಿ 24 ವರ್ಷ ಸೇರಿದಂತೆ ಒಟ್ಟು 34 ವರುಷ ಸೇವೆ ಸಲ್ಲಿಸಿದ್ದಾರೆ. ಅವರ ಪತ್ನಿ ಶೈಲಿಕಾ, ಪುತ್ರ ಪಂಜದ ಪಲ್ಲೋಡಿ ದುರ್ಗಾಪರಮೇಶ್ವರಿ ಫೂಲ್ಸ್ ನ ಮಾಲಕ, ಪಂಜ ಗ್ರಾಮ ಪಂಚಾಯತ್ ಸದಸ್ಯ ಲಿಖಿತ್ ಪಿ.ಎನ್., ಸೊಸೆ ತೃಪ್ತಿ

ಇಂದು ಸೇವಾ ನಿವೃತ್ತಿಯಾದ ಕೆಎಸ್‍ ಆರ್ ಟಿಸಿ ಪುತ್ತೂರು ವಿಭಾಗದ ಚಾಲಕ ಪಲ್ಲೋಡಿ ನಾರಾಯಣ ಗೌಡ Read More »

ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ | ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಉಳ್ಳಾಲ : ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ,ಪರಿಶೀಲನೆ ಮಾಡಿದರು. ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಲಾಯಿತು. ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರುವಂತೆ ವಿನಂತಿ ಹಾಗೂ ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕರಿಗಳಿಗೆ ಸೂಚಿಸಿದ್ದೇನೆ ಹಾಗೂ ಸಾಧ್ಯವಾಗುವ ಎಲ್ಲಾ‌ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ | ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ Read More »

ಪತ್ನಿಗೆ ಚೂರಿಯಿಂದ ಇರಿದ ಪತಿ : ಪ್ರಕರಣ ದಾಖಲು

ಸುಳ್ಯ: ಪತ್ನಿಗೆ ಪತಿಯೇ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಜಾಲ್ಸೂರಿನಿಂದ ವರದಿಯಾಗಿದೆ. ಅಶ್ವಿನಿ ಕೆ ವಿ (25) ಪತಿಯಿಂದ ಚೂರಿ ಇರಿತಕ್ಕೊಳಗಾದವರು ಎಂದು ಗುರುತಿಸಲಾಗಿದೆ. ಆರೋಪಿ ಪತಿ ನವೀನ್ ಕುಮಾರ್ ಮತ್ತು ಅಶ್ವಿನಿ ಅವರು 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಆ ಬಳಿಕ ಆತ ವಿನಃ ಕಾರಣ ಕಿರುಕುಳ ನೀಡುತ್ತಾ ಬಂದಿದ್ದು, ಪತ್ನಿ ಅಶ್ವಿನಿ ಕಳೆದ 4 ವರ್ಷಗಳಿಂದ ತನ್ನ ತವರು ಮನೆಯಾದ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ವಿನೋಭನಗರ ಎಂಬಲ್ಲಿ ವಾಸವಾಗಿದ್ದಾರೆ. ಅಲ್ಲಿಗೂ ಬರುತ್ತಿದ್ದ ಪತಿ

ಪತ್ನಿಗೆ ಚೂರಿಯಿಂದ ಇರಿದ ಪತಿ : ಪ್ರಕರಣ ದಾಖಲು Read More »

ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ಪತ್ತೆ | ಆತ್ಮಹತ್ಯೆ ಶಂಕೆ

ಬೆಳ್ತಂಗಡಿ : ಉಜಿರೆಯ ಆಟೋ ಚಾಲಕ  ನಾಪತ್ತೆಯಾಗಿದ್ದ ಸುಧಾಕ‌ರ್ ಮಾಚಾರ್ (35) ಶವವಾಗಿ ಪತ್ತೆಯಾಗಿದ್ದಾರೆ. ಸುಧಾಕ‌ರ್ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾದಗುಡ್ಡೆ ಎಂಬಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಬೆಳಿಗ್ಗೆ ಮನೆಯಿಂದ ತೆರಳಿದ್ದ ಸುಧಾಕ‌ರ್ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾರೆ.

ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ಪತ್ತೆ | ಆತ್ಮಹತ್ಯೆ ಶಂಕೆ Read More »

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ : ಶಿಬಾಜೆ ಗ್ರಾಮದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಇಂದು ಭೇಟಿ ನೀಡಿದರು. ಮೃತಪಟ್ಟ ಯುವತಿ ಮನೆಯವರಿಗೆ ಸಾಂತ್ವನ ನೀಡಿ ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್‌, ಶಿಬಾಜೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್‌, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ Read More »

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ: ಖಾಸಗಿ ಬಸ್‌ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.29ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬೆಳ್ತಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಅಯ್ಯಪ್ಪಗುಡಿಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಖಾಸಗಿ ಬಸ್‌ ಚಾಲಕ ಗಾಯಗೊಂಡಿದ್ದಾರೆ. ಉಳಿದಂತೆ ಎರಡೂ ಬಸ್‌ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಸಂತೆಕಟ್ಟೆ ಬಳಿಯಿಂದ ಟ್ರಾಫಿಕ್‌ ಜಾಮ್ ಉಂಟಾಗಿದೆ.

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ Read More »

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಉಪ್ಪಿನಂಗಡಿ: ಗಂಡನೊಂದಿಗೆ ಜಗಳವಾಡಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ  ಮಹಿಳೆಯೋರ್ವರನ್ನು ಯುವಕನೋರ್ವ ರಕ್ಷಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬನ್ನಿಂಗಳ ಸಮೀಪದ ನಿವಾಸಿಯೋರ್ವರು ಗುರುವಾರ ರಾತ್ರಿ ಸುಮಾರು 9.30 ರಿಂದ 10ರ ನಡುವೆ ಉಪ್ಪಿನಂಗಡಿಯ ನೇತ್ರಾವತಿ ನದಿ ಸೇತುವೆಯ ಮೇಲೆ ಸಂಶಯ ಬರುವಂತೆ ಆ ಕಡೆ, ಈ ಕಡೆ ನಡೆದಾಡುವುದು ಕಾಣಿಸಿಕೊಂಡಿದ್ದು, ಇದನ್ನು ಕಂಡ ರಿಕ್ಷಾ ಚಾಲಕರೋರ್ವರು ಅಲ್ಲಿಯೇ ಸಮೀಪದ ನಿವಾಸಿ ಸಾಮಾಜಿಕ ಕಾರ್ಯಕರ್ತ ಫಯಾಝ್ ಯು.ಟಿ. ಅವರ ಗಮನಕ್ಕೆ ತಂದಿದ್ದರು. ತಕ್ಷಣವೇ ಕಾರ್ಯಪ್ರವೃತರಾದ ಫಯಾಜ್

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ Read More »

error: Content is protected !!
Scroll to Top