ದಕ್ಷಿಣ ಕನ್ನಡ

ತಂದೆಯ ನಿಧನಕ್ಕೆ ರಜೆ ಕೊಡದ ಕಂಪನಿ : ಕ್ಯಾಪ್ಟನ್ ಬ್ರಿಜೇಶ್ ಚೌಟ ತುರ್ತು ಸ್ಪಂದನೆ 

ಮಂಗಳೂರು  : ಸುಳ್ಯ ಮೂಲದ ಯುವಕನ ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಕಚೇರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ […]

ತಂದೆಯ ನಿಧನಕ್ಕೆ ರಜೆ ಕೊಡದ ಕಂಪನಿ : ಕ್ಯಾಪ್ಟನ್ ಬ್ರಿಜೇಶ್ ಚೌಟ ತುರ್ತು ಸ್ಪಂದನೆ  Read More »

ಭೀಕರ ಕಾರು ಅಪಘಾತ | ಉದ್ಯಮಿ ಮೃತ್ಯು

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ನಡೆದ ಭೀಕರ ಕಾರು ಅಪಘಾತದಲ್ಲಿ ಬೆಳ್ತಂಗಡಿ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಇಂದು ನಡೆದಿದೆ. ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕರ ಪುತ್ರ ಪ್ರಜ್ವಲ್ ನಾಯಕ್ (35) ಅಪಘಾತದಿಂದ ಮೃತಪಟ್ಟವರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು-ಗುಜ್ಜಾದರೆ, ಒಂದು ವಿದ್ಯುತ್ ಕಂಬ

ಭೀಕರ ಕಾರು ಅಪಘಾತ | ಉದ್ಯಮಿ ಮೃತ್ಯು Read More »

ಕಾಂಗ್ರೆಸ್‍ ನಿಂದ ವಾಲ್ಮೀಕಿ ನಿಗಮದ ಕೋಟಿಗಟ್ಟಲೆ ಹಣ ಗೋಲ್ ಮಾಲ್ | ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು: ವಾಲ್ಮೀಕಿ ನಿಗಮದಲ್ಲಿ ಸರಕಾರಿ ಹಣದ ಗೋಲ್ ಮಾಲ್ ಮತ್ತು ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂಗಳನ್ನು ತೆಲಂಗಾಣದ ಚುನಾವಣೆ ಖರ್ಚಿಗೆ ವರ್ಗಾಯಿಸಿದ ಶಂಕೆ ಹಾಗೂ ಎಸ್.ಸಿ ಎಸ್.ಟಿ ಸಮಾಜಕ್ಕೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಮಾಡಿದ ದ್ರೋಹ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಈ ಸಂದರ್ಭ ಡಿ.ಸಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ, ಎಸ್.ಟಿ ಮೋರ್ಚ

ಕಾಂಗ್ರೆಸ್‍ ನಿಂದ ವಾಲ್ಮೀಕಿ ನಿಗಮದ ಕೋಟಿಗಟ್ಟಲೆ ಹಣ ಗೋಲ್ ಮಾಲ್ | ಬಿಜೆಪಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ Read More »

ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ಅರಂತೋಡು ಗ್ರಾಮದ ಬಾಜಿನಡ್ಕದ ವ್ಯಕ್ತಿಯೋರ್ವರು ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಾಜಿನಡ್ಕದ ಚನಿಯ(50) ಎಂದು ಗುರುತಿಸಲಾಗಿದೆ. ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಸಮೀಪದ ಹೊಳೆಗೆ ಹೋಗಿದ್ದಾರೆ. ಈ ವೇಳೆ ಹೊಳೆಗೆ ಕಾಲು ಜಾರಿ ಬಿದ್ದಿದ್ದಾರೆ. ಚನಿಯ ಅವರು ಹೊಳೆಗೆ ಬಿದ್ದಿದ್ದನ್ನು ಕಂಡ ಹತ್ತಿರದ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿಬಂದು ನೀರಿಗಿಳಿದು

ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ ಅವಿವಾಹಿತ ಜಯರಾಜ್(45) ಎಂದು ತಿಳಿದುಬಂದಿದೆ. ಬೈಕ್ ಸವಾರ ಜಯರಾಜ್ ರವರು ಬೆಳ್ತಂಗಡಿ ಕಡೆಯಿಂದ ನಡ ಕಚೇರಿಗೆ ತೆರಳುತ್ತಿದ್ದು ಬಸ್ಸು ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜ್ ರವರಿಗೆ ತೀವ್ರ

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು Read More »

ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ

ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿ ಪರ ಕೃಷಿಕ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಗೌಡ ಗಿರಿನಿವಾಸ ಕಟ್ಟತ್ತಿಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಂಟ್ವಾಳ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಶಾಸಕ ರಾಜೇಶ್ ನಾಯ್ಕ್, ಉಳಿಪ್ಪಾಡಿಗುತ್ತು, ತಹಶೀಲ್ದಾರ್ ಅರ್ಚನಾ ಡಿ. ಭಟ್, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಗೌರವ ಸಲಹೆಗಾರ, ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಗೌಡ ಅಳಿಕೆ,

ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ Read More »

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು

ಬೆಳ್ತಂಗಡಿ : ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತಪಟ್ಟ ‍ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು ನಡೆದಿದೆ. ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತಪಟ್ಟ ಯುವತಿ. ಪ್ರತೀಕ್ಷಾ ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿಂದ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಸ್ಥಳದಲ್ಲಿದ್ದ

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು Read More »

ವಿಜಯನಗರದ ವೈಭವವನ್ನು ಬೆಂಗಳೂರಿನಲ್ಲೂ ಸ್ಥಾಪಿಸಬೇಕು ಎಂಬ ಕೆಂಪೇಗೌಡರ ಛಲ ಇಡೀ ದೇಶ ಮೆಚ್ಚುವಂತದ್ದು | ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಸುರೇಶ್ ಬೈಲು | ಎಸ್‍ ಎಸ್‍ ಎಲ್‍ ಸಿ, ಪಿಯುಸಿ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ಗುರುವಾರ ಆಚರಿಸಲಾಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಪ್ರಧಾನ ಭಾಷಣ ಮಾಡಿ, ಬೆಂಗಳೂರಿನ ನಿರ್ಮಾತೃ ನಾಡಪ್ರಭು ತನ್ನ ದೂರದೃಷ್ಟಿತ್ವದಿಂದ ಬೆಂಗಳೂರನ್ನು ಕಟ್ಟಿ ಸುಂದರ ನಗರವನ್ನಾಗಿ ಮಾಡಿದ್ದಾರೆ. ಅವರ ಆಡಳಿತ ಇಂದು ಜನಮಾನಸದಲ್ಲಿ ಪ್ರಸ್ತುತ ಎನಿಸಿದೆ. ಅವರ ಕಂಚಿನ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದ್ದಲ್ಲದೆ,  ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಡಲಾಗಿದೆ.

ವಿಜಯನಗರದ ವೈಭವವನ್ನು ಬೆಂಗಳೂರಿನಲ್ಲೂ ಸ್ಥಾಪಿಸಬೇಕು ಎಂಬ ಕೆಂಪೇಗೌಡರ ಛಲ ಇಡೀ ದೇಶ ಮೆಚ್ಚುವಂತದ್ದು | ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಸುರೇಶ್ ಬೈಲು | ಎಸ್‍ ಎಸ್‍ ಎಲ್‍ ಸಿ, ಪಿಯುಸಿ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ Read More »

ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.28 ರಂದು ರಜೆ ಘೋಷಿಸಲಾಗಿದೆ. ಈ ಕುರಿತು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ Read More »

ಮಂಗಳೂರಿನಲ್ಲಿ ಅದ್ದೂರಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ

ಮಂಗಳೂರು: ದ.ಕ.ಜಿಲ್ಲಾ ಪಂಚಾಯತ್‍ ಹಾಗೂ ದ.ಕ.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಗುರುವಾರ ಮಂಗಳೂರಿನಲ್ಲಿ ನಡೆಯಿತು. ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಜಾನ್‍ ಕುಟಿನ್ಹೊ, ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಮಂಗಳೂರು ತಾಲೂಕು

ಮಂಗಳೂರಿನಲ್ಲಿ ಅದ್ದೂರಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ Read More »

error: Content is protected !!
Scroll to Top