ದಕ್ಷಿಣ ಕನ್ನಡ

ಬಂಟ್ವಾಳ ವಿಹಿಂಪ ಪರಶುರಾಮ ಶಾಖೆಯಿಂದ ರಕ್ತದಾನ ಶಿಬಿರ, ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ

ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳದ ಆಶ್ರಯದಲ್ಲಿ ಕೆ.ಎಸ್‌.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ರೆಡ್ ಕ್ರಾಸ್ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಬಾಲ ಸಂಸ್ಕಾರ ಕೇಂದ್ರದ ಉದ್ಘಾಟನಾ ಸಮಾರಂಭ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಘಟನೆಯ ಕಾರ್ಯಕ್ಕೆ ಮೆಚ್ಚುಗೆ […]

ಬಂಟ್ವಾಳ ವಿಹಿಂಪ ಪರಶುರಾಮ ಶಾಖೆಯಿಂದ ರಕ್ತದಾನ ಶಿಬಿರ, ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ Read More »

ಅನಾರೋಗ್ಯದಿಂದ ಶಿವಪ್ರಕಾಶ್ ನಿಧನ

ಸುಳ್ಯ: ಕುರುಂಜಿಭಾಗ್ ನಲ್ಲಿರುವ ಮಧುವನ ಹೋಟೇಲ್ ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದಿ.ರಾಮಣ್ಣ ಗೌಡರ ಪುತ್ರ ಶಿವಪ್ರಕಾಶ್ (32) ಮೃತಪಟ್ಟ ದುರ್ದೈವಿ. ಮೃತರು ಸಹೋದರರಾದ ಪದ್ಮನಾಭ, ಸುಳ್ಯದಲ್ಲಿ ಹೋಟೆಲ್ ಉದ್ಯಮಿಗಳಾಗಿರುವ ಚಿದಾನಂದ, ಲವಕುಮಾರ್, ಕುಶಾಲಪ್ಪ ಹಾಗೂ ಸಹೋದರಿ ರಜನಿಯವರನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಶಿವಪ್ರಕಾಶ್ ನಿಧನ Read More »

ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರ ಅಶೋಕ್ ಎಲ್‍. ರಾವ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್‍. ರಾವ್ ಅಲ್ಪ ಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಅಶೋಕ್ ರಾವ್ ಅವರು ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರರಾಗಿದ್ದರು. ಮೃತರು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರ ಅಶೋಕ್ ಎಲ್‍. ರಾವ್ ನಿಧನ Read More »

ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ : ಭಾಗೀರಥಿ ಮುರುಳ್ಯ | ಪಾಲ್ತಾಡಿ ಬೂತ್ 70ರಲ್ಲಿ ಮನ್ ಕಿ ಬಾತ್ ವೀಕ್ಷಣೆ

ಸವಣೂರು: ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಬಂಬಿಲ ಯಮುನಾ ಅವರ ಮನೆಯಲ್ಲಿ ನಡೆದ ಸುಳ್ಯ ಮಂಡಲ, ಸವಣೂರು ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 70 (ಪಾಲ್ತಾಡಿ 1) ರಲ್ಲಿ ಜುಲೈ 28ರಂದು ನಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ವೀಕ್ಷಣೆಯ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರವಾಸಿ ಕಾರ್ಯಕರ್ತರಾದ

ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ : ಭಾಗೀರಥಿ ಮುರುಳ್ಯ | ಪಾಲ್ತಾಡಿ ಬೂತ್ 70ರಲ್ಲಿ ಮನ್ ಕಿ ಬಾತ್ ವೀಕ್ಷಣೆ Read More »

ಬೈಕ್‍ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ

ಬೆಳ್ತಂಗಡಿ : ಬೈಕ್‍ ಗೆ ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ತಂದೆ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಮುಂಡಾಜೆಯಲ್ಲಿ ನಡೆದಿದೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಎಂಬವರ ಪುತ್ರಿ  ಅನರ್ಥ್ಯ (9) ಮೃತಪಟ್ಟ ಬಾಲಕಿ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಅವರ ಮಗಳು ಅನರ್ಥ್ಯ ಉಜಿರೆಯಿಂದ ಬೈಕ್‌ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಬೊಲೆರೊ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ವಾಹನವನ್ನು

ಬೈಕ್‍ ಗೆ ಬೊಲೆರೋ ಡಿಕ್ಕಿ | ಪುತ್ರಿ ಮೃತ್ಯು, ತಂದೆಗೆ ಗಂಭೀರ ಗಾಯ Read More »

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ

ಕೊಣಾಜೆ: ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ 2024-25 ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಗಣಿತ, ಭೌತಶಾಸ್ತ್ರ ಕಂಪ್ಯೂಟರ್ ಸಯನ್ಸ್ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾ ವಿಷಯದಲ್ಲಿ ಎಂಎಸ್ಸಿ ಹಾಗೂ ಬಿ.ಇಡಿ ಅರ್ಹತೆಯೊಂದಿಗೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಜುಲೈ 29 ರಂದು ಮುಡಿಪು ನವೋದಯ ವಿದ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಷಿನ ಮಾಹಿತಿಗಾಗಿ 08255-261300 ಪೋನ್ ನಂಬರನ್ನು ಸಂಪರ್ಕಿಸಬಹುದಾಗಿದೆ.

ಜು.29 : ಮುಡಿಪು ನವೋದಯ ವಿದ್ಯಾಲಯದ ಪಿಎಂ ಶ್ರೀ ಸ್ಕೂಲ್ ನಲ್ಲಿ ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ Read More »

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯ

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ಇಂದು ನಡೆದಿದೆ. ಮೂಲತಃ ಕೇರಳ ಕಣ್ಣೂರಿನ ಮುಂಡಯ ಪರಂಬೂರು ನಿವಾಸಿ ವಿಸ್ಮಯ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು.ಮಂಗಳೂರು ಕಡೆಗೆ ತೆರಳುವ ಆಟೋ ರಿಕ್ಷಾವನ್ನು ಚಾಲಕ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಆಟೋ ರಿಕ್ಷಾ ಡಿಕ್ಕಿ : ಗಂಭೀರ ಗಾಯ Read More »

ಬ್ಯಾಂಕ್‍ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ವಂಚನೆ

ಕೊಕ್ಕಡ : ಮಹಿಳೆಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓ.ಟಿ.ಪಿ ಪಡೆದು ಲಕ್ಷಾಂತರ ರೂ ವಂಚಿಸಿದ ಪ್ರಕರಣ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗಾಣಗಿರಿ ಸುಶೀಲ ಅವರು ಅಪರಿಚಿತ ವ್ಯಕ್ತಿಯಿಂದ ವಂಚನೆಗೊಳಗಾಗಿದ್ದು, ತನ್ನ  ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದರು. ಬಳಿಕ ಎಟಿಎಂ ಕಾರ್ಡ್ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲ ಅವರಿಗೆ ಫೋನ್ ಮಾಡಿ ನಾನು ಬ್ಯಾಂಕ್

ಬ್ಯಾಂಕ್‍ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಲಕ್ಷಾಂತರ ವಂಚನೆ Read More »

ಮಣ್ಣು ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ಮಂಗಳೂರು: ಮಣ್ಣು ಜರಿದು ಬಿದ್ದ ಹಿನ್ನಲೆಯಲ್ಲಿ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ರೈಲು ಸಂಪರ್ಕ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದೆ. ಈ ಪರಿಣಾಮ ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಹೊರಟ ಬಿಜಾಪುರ ಎಕ್ಸ್ ಪ್ರೆಸ್ ರೈಲು ವಾಪಾಸ್ಸು ಸುಬ್ರಹ್ಮಣ್ಯ ನಿಲ್ದಾಣಕ್ಕೆ ಬಂದಿದೆ ಎನ್ನಲಾಗಿದ್ದು, ಮಂಗಳೂರು-ಬೆಂಗಳೂರು ರೈಲು ಸೇರಿದಂತೆ ಮಾರ್ಗದ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಮಣ್ಣು ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ Read More »

ಪ್ರಾಮಾಣಿಕವಾಗಿ ದುಡಿಯುವುದು ಕೂಡ ದೇಶಪ್ರೇಮವೇ – ನಿವೃತ್ತ ಯೋಧ ರಮೇಶ್ ರಾವ್ ಮಂಚಿ | ಕನ್ಯಾನ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್

ಕನ್ಯಾನ :  ದೇಶ ಪ್ರೇಮವೆಂದರೆ ಗಡಿಯಲ್ಲಿ ಶಸ್ತ್ರ ಹಿಡಿದು  ಹೋರಾಡುವುದು ಮಾತ್ರ ಅಲ್ಲ. ನಾವು ಮಾಡುವ ಪ್ರತಿಯೊಂದು ಕೆಲಸವನ್ನು ಪ್ರಾಮಾಣಿಕತೆಯನ್ನು ಮಾಡಿದರೆ ಅದು ದೇಶ ಕಟ್ಟುವ ಕೆಲಸ ಎಂದು ನಿವೃತ್ತ ಯೋಧ  ರಮೇಶ್ ರಾವ್ ಮಂಚಿ ಹೇಳಿದರು.  ಕೇಂದ್ರ ಸಮಾನ ಇಲಾಖೆ ಮಂಗಳೂರು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕನ್ಯಾನ ಇವರ  ಜಂಟಿ ಆಶ್ರಯದಲ್ಲಿ ಕನ್ಯಾನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ರಜತ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಪ್ರಾಮಾಣಿಕವಾಗಿ ದುಡಿಯುವುದು ಕೂಡ ದೇಶಪ್ರೇಮವೇ – ನಿವೃತ್ತ ಯೋಧ ರಮೇಶ್ ರಾವ್ ಮಂಚಿ | ಕನ್ಯಾನ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ Read More »

error: Content is protected !!
Scroll to Top