ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ

ಕೆಲವು ಬಸ್‌ಗಳಿಗೆ ಕಲ್ಲುತೂರಾಟ; ಅಂಗಡಿ ಹೋಟೆಲ್‌ಗಳು ಬಂದ್‌ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವುದನ್ನು ಅನುಸರಿಸಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಆದೇಶ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬಂದಿದ್ದು, ಮೇ 6 ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಈ ನಿಷೇಧಾಜ್ಞೆಯನ್ನು ತಕ್ಷಣದಿಂದಲೇ ಜಾರಿಗೆ […]

ಮಂಗಳೂರಿನಲ್ಲಿ ಮೇ 6ರ ತನಕ ನಿಷೇಧಾಜ್ಞೆ : ನಗರ ಸಂಪೂರ್ಣ ಸ್ತಬ್ಧ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ

ಮಂಗಳೂರು: ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಡೆದಿದ್ದು, ಅವರ ಅಂತ್ಯಕ್ರಿಯೆ ಬಂಟ್ವಾಳದಲ್ಲಿ ನಡೆಯಲಿದೆ. ಸುಹಾಸ್ ಶೆಟ್ಟಿ ಅವರ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳ ದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹತ್ಯೆ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ ದ.ಕ.ಜಿಲ್ಲಾದ್ಯಂತ ಬಂದ್‍ ಗೆ ಕರೆ ನೀಡಿದೆ. ಇಂದು ಬೆಳಿಗ್ಗೆ ಬಂದ್‍ ಗೆ ಕರೆ ನೀಡುತ್ತಿದ್ದಂತೆ ಮಂಗಳೂರಿನಲ್ಲಿ ಕೆಲವು ಬಸ್‍ ಗಳಿಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆಯಿತು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ Read More »

ಮಂಗಳೂರಿನಲ್ಲಿ ಅಹಿತಕರ ಘಟನೆ | ಮೇ 5 ರ ತನಕ ದ.ಕ. ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ

ಮಂಗಳೂರು: ಗುರುವಾರ ಸಂಜೆ ಮಂಗಳೂರಿನ ಬಜ್ಪೆ ಪರಿಸರ ಹಾಗೂ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 5 ರ ತನಕ ನಿಷೇದಾಜ್ಞೆ ಜಾರಿ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿರುತ್ತಾರೆ. ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯಾದ ಬೆನ್ನಲ್ಲೆ ಉಳ್ಳಾಲದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿತ್ತು. ಈ ಎರಡು ಪ್ರಕರಣದ ನಡೆದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಾಗಿ ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಲ್ಲಿ ಅಹಿತಕರ ಘಟನೆ | ಮೇ 5 ರ ತನಕ ದ.ಕ. ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ Read More »

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ

ತನಿಖೆಗೆ ವಿಶೇಷ ತಂಡ ರಚನೆ; ಶಾಂತಿ ಕಾಪಾಡಲು ಮನವಿ ಮಂಗಳೂರು: ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ. ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಿಲಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹಿತೇಂದ್ರ ಹೇಳಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಇನ್ನು

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ Read More »

ಮಾರ್ಚ್‌ನಲ್ಲೇ ಸುಹಾಸ್‌ ಶೆಟ್ಟಿ ಹತ್ಯೆಗೆ ಸ್ಕೆಚ್‌ : ಇನ್‌ಸ್ಟಾಗ್ರಾಂ ಪೋಸ್ಟರ್‌ನಿಂದ ಹುಟ್ಟಿದ ಅನುಮಾನ

ಹಂತಕರಿಗೆ ತಪ್ಪಿಸಿಕೊಳ್ಳಲು ಬುರ್ಖಾಧಾರಿ ಮಹಿಳೆಯರ ಸಹಾಯ? ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಹಲವು ಬೆಳವಣಿಗೆಗಳು ನಡೆದಿದ್ದು, ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನಿಶ್’ ಅಂತ ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್ ವೈರಲ್​ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ. ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಸ್ಕೆಚ್‌ ಹಾಕಲಾಗಿತ್ತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ

ಮಾರ್ಚ್‌ನಲ್ಲೇ ಸುಹಾಸ್‌ ಶೆಟ್ಟಿ ಹತ್ಯೆಗೆ ಸ್ಕೆಚ್‌ : ಇನ್‌ಸ್ಟಾಗ್ರಾಂ ಪೋಸ್ಟರ್‌ನಿಂದ ಹುಟ್ಟಿದ ಅನುಮಾನ Read More »

ಮಂಗಳೂರು: ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ

ಉಳ್ಳಾಲ: ನಿನ್ನೆ ರಾತ್ರಿ ಬಜಪೆ ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ಸಾಯಿಸಿದ ಹಿನ್ನೆಲೆಯಲ್ಲಿ ಮಂಗಳೂರು ಧಗಧಗಿಸುತ್ತಿರುವಾಗಲೇ ಸಮೀಪದ ಉಳ್ಳಾಲದಲ್ಲಿ ಇನ್ನೊಂದು ಮರಣಾಂತಿಕ ಹಲ್ಲೆ ಸಂಭವಿಸಿದೆ. ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತನಿಗೆ ಗಂಭೀರವಾದ ಗಾಯವಾಗಿದೆ. ಈ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವನನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ. ಫೈಝಲ್ ಕಲ್ಲಾಪು ಮಾರುಕಟ್ಟೆಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಂಗಳೂರು: ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ Read More »

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

ಸುಹಾಸ್‌ ಶೆಟ್ಟಿ ಕೊಲೆಗೆ ಹಿಂದೂ ಸಂಘಟನೆಗಳಿಂದ ಆಕ್ರೋಶ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಂದ್​​ಗೆ ವಿಶ್ವ ಹಿಂದೂ ಪರಿಷತ್ ಕರೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಮಂಗಳೂರಲ್ಲಿ ವಾಹನ ಸಂಚಾರ ಬಹುತೇಕ ಬಂದ್‌ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಮಂಗಳೂರಿನಲ್ಲಿ ಸಂಚಾರ ಆರಂಭಿಸಿದ ಬಸ್‌ಗೆ ಕಲ್ಲು ತೂರಲಾಗಿದೆ. ಗುಂಪೊಂದು ಹಂಪನಕಟ್ಟೆ ಬಳಿ ಬಸ್‌ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ

ಇಂದು ದ.ಕ ಬಂದ್‌, ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ Read More »

ಸುಹಾಸ್‍ ಶೆಟ್ಟಿ ಹತ್ಯೆ  ಖಂಡನೆ : ಇಂದು ವಿಎಚ್‍ಪಿಯಿಂದ  ದ.ಕ. ಜಿಲ್ಲೆ ಬಂದ್‍ ಗೆ ಕರೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಎಚ್‍ ಪಿ  ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ. ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು.

ಸುಹಾಸ್‍ ಶೆಟ್ಟಿ ಹತ್ಯೆ  ಖಂಡನೆ : ಇಂದು ವಿಎಚ್‍ಪಿಯಿಂದ  ದ.ಕ. ಜಿಲ್ಲೆ ಬಂದ್‍ ಗೆ ಕರೆ Read More »

ರೌಡಿ ಶೀಟರ್ ಸುಹಾಸ್‍ ಶೆಟ್ಟಿ ಬರ್ಬರ ಹತ್ಯೆ

ಮಂಗಳೂರು: ರೌಡಿ ಶೀಟರ್ ಒಬ್ಬನನ್ನು ತಲವಾರಿನಿಂದ ಹತ್ಯೆ ಮಾಡಿದ ಘಟನೆ ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ. ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆಯಾದ ವ್ಯಕ್ತಿ. ಈತ ಸುರತ್ಕಲ್‌ನ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ತಂಡವೊಂದು ಸಾರ್ವಜನಿಕರ ಎದುರಲ್ಲೇ ತಲವಾರಿನಿಂದ ದಾಳಿ ನಡೆಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಸುಹಾಸ್ ಶೆಟ್ಟಿ ವಿರುದ್ಧ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಬಜ್ಪೆ ಪೊಲೀಸ್

ರೌಡಿ ಶೀಟರ್ ಸುಹಾಸ್‍ ಶೆಟ್ಟಿ ಬರ್ಬರ ಹತ್ಯೆ Read More »

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ

ಗುರುವಾರ ರಾತ್ರಿ ಬಜಪೆ ಸಮೀಪ ನಡುರಸ್ತೆಯಲ್ಲಿ ಕಾರು ಅಡ್ಡಗಟ್ಟಿ ತಲವಾರುಗಳಿಂದ ಕೊಚ್ಚಿ ಭೀಕರ ಹತ್ಯೆ ಮಂಗಳೂರು: ಬಜಪೆಯ ಕಿನ್ನಿಪದವುನಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಮೂಲತಃ ಬೆಳ್ತಂಗಡಿಯ ನಿವಾಸಿ ಸುಹಾಸ್ ಶೆಟ್ಟಿ (32) ಎಂಬವನನ್ನು ತಂಡವೊಂದು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಬರ್ಬರ ಘಟನೆ ಹಿನ್ನೆಲೆ ಇಂದು ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸರು ಹೈ ಅಲರ್ಟ್‌ ಘೋಷಿಸಿದ್ದಾರೆ. ಬೆಳಗ್ಗಿನಿಂದಲೇ ಮಂಗಳೂರಿನಲ್ಲಿ ಬಂದ್‌ ಮಾದರಿಯ ವಾತಾವರಣ ಕಂಡುಬರುತ್ತಿದೆ. ಬಸ್‌ಗಳು ಓಡಾಟ ನಡೆಸುತ್ತಿಲ್ಲ. ಕೆಲವೇ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಮಂಗಳೂರಿನಲ್ಲಿ ಹೈ ಅಲರ್ಟ್‌, ಬಂದ್‌ ಪರಿಸ್ಥಿತಿ Read More »

error: Content is protected !!
Scroll to Top