ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸುಬ್ರಹ್ಮಣ್ಯ: ಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿದರು. ಸುಬ್ರಹ್ಮಣ್ಯ ನ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರ ಜೊತೆಗಿದ್ದರು.

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೂ.24 ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪನವರನ್ನು ಗೌರವಿಸಿದರು‌. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ Read More »

ಸೌತಡ್ಕ ಶ್ರೀ ಮಹಾಗಣಪತಿ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ,

ಸೌತಡ್ಕ ಶ್ರೀ ಮಹಾಗಣಪತಿ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ Read More »

ಪಾಂಡವ ವನಗಮನ ತಾಳಮದ್ದಲೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ‘ಪಾಂಡವ ವನಗಮನ’ ತಾಳ ಮದ್ದಳೆ  ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಮತ್ತು ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ ಸಹಕರಿಸಿದರು. ಅರ್ಥಧಾರಿಗಳಾಗಿ ಸತೀಶ ಆಚಾರ್ಯ ಮಾಣಿ (ಕೌರವ), ದಿವಾಕರ ಆಚಾರ್ಯ ಗೇರುಕಟ್ಟೆ (ದ್ರೌಪದಿ, ಅರ್ಜುನ), ಜಯರಾಮ ಬಲ್ಯ (ಭೀಮ), ಸಂಜೀವ ಪಾರೆಂಕಿ (ಭೀಷ್ಮ ಮತ್ತು ನಕುಲ),

ಪಾಂಡವ ವನಗಮನ ತಾಳಮದ್ದಲೆ Read More »

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ | ಹಲವರಿಗೆ ಗಾಯ

ಉಪ್ಪಿನಂಗಡಿ : ಸರಣಿ ಅಪಘಾತ ನಡೆದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಟ್ಯಾಂಕರ್ ಲಾರಿಯೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದ ಹಿನ್ನೆಲೆ ಸ್ವಿಫ್ಟ್ ಕಾರು ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಬಜತ್ತೂರಿನ ಮೂವರು ಹಾಗೂ ಸ್ವಿಫ್ಟ್ ಕಾರಿನ ಚಾಲಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ದಿನೇಶ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಲಾರಿ, ರಾಷ್ಟ್ರೀಯ ಹೆದ್ದಾರಿ

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ | ಹಲವರಿಗೆ ಗಾಯ Read More »

ಭಾರೀ ಮಳೆ | ಕಲ್ಲಡ್ಕದಲ್ಲಿ ಆಂತಕ ಸೃಷ್ಠಿ

ಬಂಟ್ವಾಳ  : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅವಾಂತರ ಸೃಷ್ಟಿಯಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಕಲ್ಲಡ್ಕದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ರಸ್ತೆ ಮೇಲೆ ಮಳೆ ನೀರು ಹರಿದು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಲ್ಲಡ್ಕ ಪ್ರದೇಶ ಕಾಮಗಾರಿ ನಡೆಯುತ್ತಿದ್ದು, ಇಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದೆ. ರಸ್ತೆಯಲ್ಲಿ

ಭಾರೀ ಮಳೆ | ಕಲ್ಲಡ್ಕದಲ್ಲಿ ಆಂತಕ ಸೃಷ್ಠಿ Read More »

ಮೋದಿ ಪ್ರೇರಣೆಯಿಂದ ಸಂಸದನಾಗಿದ್ದೇನೆ : ಕ್ಯಾ.ಬ್ರಿಜೇಶ್ ಚೌಟ | ಕಣ್ಣೀರು ಹಾಕದೇ ಧೃತಿಗೆಡದೆ ಸ್ವಂತ ಪರಿಶ್ರಮದಿಂದ ಬೆಳೆದವರು ಬಂಟರು : ಕೋಟಾ ಶ್ರೀನಿವಾಸ ಪೂಜಾರಿ | .ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನ ಕಾರ್ಯಕ್ರಮ

ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಸಾಮಾನ್ಯ ಮಧ್ಯಮ ವರ್ಗದಿಂದ ಬಂದ ನನ್ನನ್ನು ನನ್ನ ಸಮಾಜದ ಜೊತೆಗೆ ಪಕ್ಷ ಬೆಳೆಸಿ ಈ ಹಂತಕ್ಕೆ ಬಂದಿದ್ದೇನೆ ಅದರ ಜೊತೆಗೆ ಮೋದಿಯಿಂದ ಬಹುದೊಡ್ಡ ಬದಲಾವಣೆಯಿಂದಾಗಿದೆ ಅಲ್ಲದೇ ಬಾಲ್ಯದಿಂದಲೇ ದೇಶ ಸೇವೆ ಮಾಡುವ ಆಸೆ ಇತ್ತು ಅದರಂತೆ

ಮೋದಿ ಪ್ರೇರಣೆಯಿಂದ ಸಂಸದನಾಗಿದ್ದೇನೆ : ಕ್ಯಾ.ಬ್ರಿಜೇಶ್ ಚೌಟ | ಕಣ್ಣೀರು ಹಾಕದೇ ಧೃತಿಗೆಡದೆ ಸ್ವಂತ ಪರಿಶ್ರಮದಿಂದ ಬೆಳೆದವರು ಬಂಟರು : ಕೋಟಾ ಶ್ರೀನಿವಾಸ ಪೂಜಾರಿ | .ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನ ಕಾರ್ಯಕ್ರಮ Read More »

ಕಾರು – ಸ್ಕೂಟರ್ ಡಿಕ್ಕಿ

ಪಂಜ : ಕಾರು ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ಪಂಜ ಪೇಟೆಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮಂಜೇಶ್ವರ  ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಪಂಜ ಕಡೆಗೆ ಬರುತ್ತಿದ್ದ ಕಾರು ಮತ್ತು ಕಡಬ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಹಾಗೂ ಸ್ಕೂಟರ್ ಜಖಂಗೊಂಡಿದೆ. ಸ್ಕೂಟರ್ ಸವಾರ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಕಾರು – ಸ್ಕೂಟರ್ ಡಿಕ್ಕಿ Read More »

ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ | ನಗ, ನಗದು ದರೋಡೆ

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಫಾರ್ಮ್ ಹೌಸ್ ಗೆ 9 ಮಂದಿಯ ದರೋಡೆಕೋರರ ತಂಡ ನುಗ್ಗಿ ದರೋಡೆಗೈದ ಘಟನೆ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಎಂಬಲ್ಲಿ ನಡೆದಿದೆ. ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಗೆ ದರೋಡೆಕೋರರ ತಂಡ ನುಗ್ಗಿದ್ದು, ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ 8-9 ಮಂದಿಯಿದ್ದ ತಂಡ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ತಂಡದ ಸದಸ್ಯರು ಚೂರಿ ತೋರಿಸಿ ಮನೆಯವರನ್ನು ಹೆದರಿಸಿದ್ದಾರೆ. ಅಲ್ಲದೆ ಪದ್ಮನಾಭ ಕೋಟ್ಯಾನ್ ಮತ್ತವರ ಕುಟುಂಬದ

ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ | ನಗ, ನಗದು ದರೋಡೆ Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಬಜ್ಪೆ ಠಾಣೆಗೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ Read More »

error: Content is protected !!
Scroll to Top