ದಕ್ಷಿಣ ಕನ್ನಡ

ಶಾಲಾ ಬಾಲಕನಿಗೆ ಹೊಡೆದ ಶಿಕ್ಷಕ | ಆಸ್ಪತ್ರೆಗೆ ದಾಖಲು

ಕಡಬ : ಸರ್ಕಾರಿ ಶಾಲಾ ಸಹಶಿಕ್ಷಕನೊಬ್ಬ ಹೊಡೆದ ರಭಸಕ್ಕೆ ಶಾಲಾ ಬಾಲಕನ ತಲೆ ಪಕ್ಕದಲ್ಲಿದ್ದ ಕಪಾಟಿಗೆ ತಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜೂ.6 ರಂದು ಕಡಬದಿಂದ ವರದಿಯಾಗಿದೆ. ಶಿಕ್ಷಕ ಕುಳಿತುಕೊಳ್ಳುವ ಕುರ್ಚಿಯಲ್ಲಿ ಬಟ್ಟೆ ಇದ್ದದ್ದನ್ನು ಗಮನಿಸಿದ ಶಿಕ್ಷಕ ಈ ವಿದ್ಯಾರ್ಥಿಯೇ ಇಟ್ಟಿರುವುದಾಗಿ ಸಂಶಯಿಸಿ ಬೆನ್ನಿಗೆ ಹೊಡೆದಿದ್ದಾರೆನ್ನಲಾಗಿದೆ. ಹೊಡೆತದ ರಭಸಕ್ಕೆ ಬಾಲಕನ ತಲೆ ಪಕ್ಕದಲ್ಲಿದ್ದ ಕಪಾಟಿಗೆ ತಾಗಿ ತಲೆ ಮುಂಭಾಗಕ್ಕೆ ಗಾಯವಾಗಿದೆ . ಬಾಲಕನ ಹೆತ್ತವರು ಶಾಲಾಭಿವೃದ್ಧಿ ಸಮಿತಿಯ ಗಮನಕ್ಕೂ ತಂದು ಬಳಿಕ ಕಡಬ ಸಮುದಾಯ ಆಸ್ಪತ್ರೆಗೆ […]

ಶಾಲಾ ಬಾಲಕನಿಗೆ ಹೊಡೆದ ಶಿಕ್ಷಕ | ಆಸ್ಪತ್ರೆಗೆ ದಾಖಲು Read More »

ಅರಳಿ ನಿಂತಿರುವ ರಾತ್ರಿ ರಾಣಿ ಬ್ರಹ್ಮ ಕಮಲ

ಸುಳ್ಯ: ರಾತ್ರಿಯ ವೇಳೆ ಅರಳಿ ಕಂಪು ಸೂಸುವ ‘ರಾತ್ರಿ ರಾಣಿ’ ಎಂಬ ಹೆಸರು ಗಳಿಸಿರುವ ಬ್ರಹ್ಮ ಕಮಲ ಅರಳಿದ ಹೂ ಪಂಜ , ಕೂತ್ಕೂಂಜ ಗ್ರಾಮದ ಸಂಪ ಶೀನಪ್ಪ ಅವರ ಮನೆಯಲ್ಲಿ ಅರಳಿ ನಿಂತಿದೆ. ಬ್ರಹ್ಮಕಮಲ ಸುಂದರವಾದ ಹೂವಾಗಿದ್ದು, ಹಿಮಾಲಯದ ತಪ್ಪಲಿನಲ್ಲಿ ಕಂಡುಬರುತ್ತದೆ.  ಈ ಪುಷ್ಪಸೂರ್ಯಕಾಂತಿ ಹೂವಿನ ಕುಟುಂಬದ ಸದಸ್ಯ ಎಂದೂ ಹೇಳಲಾಗುತ್ತದೆ. ಇದು ಪೌರಾಣಿಕ ಮತ್ತು ಧಾರ್ಮಿಕ ಮಹತ್ವಗಳನ್ನು ಹೊಂದಿದೆ. ಸೃಷ್ಟಿಯ ದೇವನಾದ ಬ್ರಹ್ಮನು, ಧ್ಯಾನ ಮಾಡುವಾಗ ಈ ಹೂವಿನ ಮೇಲೆ ಕುಳಿತು ಧ್ಯಾನ ಮಾಡುತ್ತಿದ್ದನು

ಅರಳಿ ನಿಂತಿರುವ ರಾತ್ರಿ ರಾಣಿ ಬ್ರಹ್ಮ ಕಮಲ Read More »

ಬೈಕ್ ಕಾರು ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಬೈಕ್‌ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ. 5ರಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ (48) ಎಂದು ಗುರುತಿಸಲಾಗಿದೆ. ಅವರು ಬೈಕ್‌ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿ ಈ ಅಪಘಾತ

ಬೈಕ್ ಕಾರು ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ | ಪ್ರಕರಣ ದಾಖಲು

ಮಂಗಳೂರು : ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ರಿ (39) ಹಲ್ಲೆಗೊಳಗಾದವರು. ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ನಿನ್ನ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು

ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ | ಪ್ರಕರಣ ದಾಖಲು Read More »

ಅಮ್ಮಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ಆಯ ತಪ್ಪಿ ಬಿದ್ದು ಮೃತ್ಯು

ಬಂಟ್ವಾಳ: ಮನೆಯೊಂದರ ಮಹಡಿಯ ಮೇಲೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಿದ್ದು ಗಾಯಗೊಂಡಿದ್ದ ಮೇಸ್ತ್ರಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.  ಅಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ( 45) ಮೃತ ವ್ಯಕ್ತಿ. ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂವರು ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬಿದ್ದ ಪರಿಣಾಮ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ

ಅಮ್ಮಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ಆಯ ತಪ್ಪಿ ಬಿದ್ದು ಮೃತ್ಯು Read More »

 ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಮೇಲೆ ಹಲ್ಲೆ |ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ

ಬೆಳ್ತಂಗಡಿ : ಕಳೆಂಜ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ಜೂ.4ರಂದು ರಾತ್ರಿ ಮಾರಾಕಾಸ್ತ್ರದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

 ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಮೇಲೆ ಹಲ್ಲೆ |ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ Read More »

ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಮೇಲೆ ಹಲ್ಲೆ

ಬೆಳ್ತಂಗಡಿ: ತಾಲೂಕು ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ (33) ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ಕಾಯರ್ತಡ್ಕದಲ್ಲಿ  ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ ದಾಳಿ ನಡೆಸಲಾಗಿದೆ. ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ವಸಂತ್

ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಮೇಲೆ ಹಲ್ಲೆ Read More »

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೆ ಮುಗಿಲನ್ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ Read More »

ದಕ್ಷಿಣ ಜಿಲ್ಲಾ ಸಂಸದರಾಗಿ ಬ್ರಿಜೇಶ್ ಚೌಟ ಆಯ್ಕೆ | 1,49,208 ಅಂತರದಿಂದ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಜಯದ ಪತಾಕೆಯನ್ನು ಹಾರಿಸಿದ್ದಾರೆ. 7,64,132 ಮತಗಳ ಮೂಲಕ ಬ್ರಿಜೇಶ್ ಚೌಟ ಜಯಗಳಿಸಿದ್ದಾರೆ. 1,49,208 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಇದೀಗ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ದಕ್ಷಿಣ ಜಿಲ್ಲಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

ದಕ್ಷಿಣ ಜಿಲ್ಲಾ ಸಂಸದರಾಗಿ ಬ್ರಿಜೇಶ್ ಚೌಟ ಆಯ್ಕೆ | 1,49,208 ಅಂತರದಿಂದ ಗೆಲುವು Read More »

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ

ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 5,91,941 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೆ.  ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 4,57,142 ಮತಗಳನ್ನು ಪಡೆದುಕೊಂಡಿದ್ದಾರೆ. ಅಂತರ 1,34,799 ನೋಟಾ ಮತ 18,179.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ Read More »

error: Content is protected !!
Scroll to Top